Author: Team Kudla City

ಒಣಮೀನು ಎಂದರೆ ಕುಡ್ಲದ ಬ್ರ್ಯಾಂಡ್

ಒಣಮೀನು ಕುಡ್ಲದ ಭಾಷೆಯಲ್ಲಿ ಹೇಳುವುದಾದರೆ ನುಂಗೆಲ್ ಮೀನ್. ಕುಡ್ಲ ಅರ್ಥಾತ್ ಕರಾವಳಿಯ ಬ್ರ್ಯಾಂಡ್ ಪಟ್ಟಿಯಲ್ಲಿ ಒಂದಾಗಿದೆ. ಕಾರಣ ಮಂಗಳೂರಿನ ಬೆಂಗ್ರೆ, ಹೊಯಿಗೆ ಬಜಾರ್, ಬೊಂಬು ಬಜಾರ್ ಎಲ್ಲವೂ ನುಂಗೇಲ್ ಮೀನಿಗೆ ಫೇಮಸ್ ಸ್ಥಳಗಳು.

ಗುಜರಾತ್ ಹಾಗೂ ಉಡುಪಿಯ ಮಲ್ಪೆಯಿಂದಲೂ ಒಣಮೀನು ಮಂಗಳೂರಿನ ಬೊಂಬು ಬಜಾರ್ ನ ಗೋದಾಮುಗಳಲ್ಲಿ ತುಂಬಿಸಲಾಗುತ್ತದೆ. ಆದರೆ ಎಲ್ಲಿಂದಲ್ಲೂ ಒಣಮೀನು ತಂದರೂ‌ಕೂಡ ಕರಾವಳಿಯ ಒಣಮೀನಿನ ಮುಂದೆ ಯಾವುದು ಇಲ್ಲ ಕಾರಣ ಇಲ್ಲಿನ ಬಿಸಿಲು ಜತೆಗೆ‌ ಕಡಲಿನ ನೀರು ಸೇರುವ ಉಪ್ಪು ಎಲ್ಲವೂ ಒಣಮೀನಿಗೆ ಉತ್ತಮ ವ್ಯಾಲು ತಂದು ಕೊಡುತ್ತದೆ. ಇಲ್ಲಿಂದ ಹೊರರಾಜ್ಯಗಳಿಗೆ ಸೇರಿದಂತೆ ವಿದೇಶಗಳಿಗೂ ಕುಡ್ಲದ ನುಂಗೆಲ್ ಮೀನ್ ರಫ್ತು ಅಗುತ್ತಿದೆ ಎನ್ನುವುದು ಹೆಮ್ಮೆಯ ವಿಚಾರ.

ಕುಡ್ಲ ದಕ್ಕೆಯಲ್ಲಿ ಓಮನ್,ಮದ್ರಾಸ್ ದರ ಗಲಾಟೆ !

ಕುಡ್ಲದ ಮೀನುಗಾರಿಕೆ ದಕ್ಕೆಯಲ್ಲಿ ವಿಶಿಷ್ಟ ರೀತಿಯ ದರ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಇದರ ಪರಿಣಾಮ ಬೂತಾಯಿ ಮೀನು ಕೆಜಿ ಗೆ 80 ರ ಅಸುಪಾಸಿಗೆ ಗ್ರಾಹಕರಿಗೆ ಸಿಗುವಂತಹ ಭಾಗ್ಯ ಭಾನುವಾರ ಲಭ್ಯವಾಗಿದೆ.

ಕಾರಣ ಇಷ್ಟೇ ಮಂಗಳೂರಿನಲ್ಲಿ ಮೀನುಗಾರಿಕೆಗೆ ರಜೆ ಯಾವ ಬೋಟುಗಳು ಮೀನುಗಾರಿಕೆಗೆ ಇಳಿಯುತ್ತಿಲ್ಲ ಓಮನ್ ಹಾಗೂ‌ ಮದ್ರಾಸ್ ಕಡೆಯಿಂದ ಬೂತಾಯಿ ಮೀನು ಸಾಕಷ್ಟು ಪ್ರಮಾಣದಲ್ಲಿ ಬರುವುದರಿಂದ ಬೂತಾಯಿ ದರ ಮೀನುಗಾರಿಕೆ ರಜೆ ಅವಧಿಯಲ್ಲಿ ಮೊದಲ ಬಾರಿಗೆ ರೇಟ್ ಕಡಿಮೆಯಾಗಿದೆ.

ದೇಶದಲ್ಲಿಯೇ ಅಪೂರ್ವ ಕುಡ್ಲದ ಮಳೆ ರಸ್ತೆ

ದೇಶದ ಯಾವುದೇ ನಗರದಲ್ಲೂ ಮಳೆ ಬಂದಾಗ ನೀರು ರಸ್ತೆಯ ಬದಿಯಲ್ಲಿರುವ ಚರಂಡಿ ಮೂಲಕ ಹರಿದು ಹೋಗುತ್ತದೆ. ಆದರೆ ಮಂಗಳೂರಿನಲ್ಲಿ ಮಾತ್ರ ಮಳೆ ನೀರು ರಸ್ತೆಯಲ್ಲೇ ಸಾಗುತ್ತದೆ. ಸ್ಮಾರ್ಟ್ ಸಿಟಿ ಮಂಗಳೂರು ಮಳೆ ರಸ್ತೆ ನೋಡುವುದು ಚೆಂದ ಸಮಸ್ಯೆಗಳು ಮಾತ್ರ ಬಹಳವಿದೆ.

ಕುಡ್ಲದ ಮೊದಲ ಸ್ಟಾರ್ ಹೋಟೆಲ್ ಗೊತ್ತಾ..?

ಕುಡ್ಲದ ಮೊದಲ ಸ್ಟಾರ್ ಹೋಟೆಲ್ ಯಾವುದು ಎಂದು ಹುಡುಕಾಡಿದರೆ ಸಿಗುವ ಮೊದಲ ಹೆಸರು ವುಡ್ ಲ್ಯಾಂಡ್. ಜ್ಯೋತಿ ಯಿಂದ ಇಳಿದು ಕೊಂಚ ಕೆಳಗೆ ಬಂದರೆ ಸಾಕು ವುಡ್ ಲ್ಯಾಂಡ್ ಸಿಗುತ್ತದೆ ಮುಖ್ಯ ವಾಗಿ ಸಿಟಿಯೊಳಗೆ ಇಷ್ಟೊಂದು ಪಾರ್ಕಿಂಗ್ ಗೆ ವ್ಯವಸ್ಥೆ ಇರುವ ಹೋಟೆಲ್ ಯಾವುದು ಇಲ್ಲ. ಇಲ್ಲಿನ ಫುಡ್ ಕುರಿತು ಎರಡು ಮಾತಿಲ್ಲ ದೀ ಬೆಸ್ಟ್ ಎನ್ನುತ್ತಾರೆ ಕುಡ್ಲದ ಜನ. ಹೋಟೆಲ್ ಒಳಗೆ ಹೋಗದೇ ನೀವು ಪಾರ್ಕಿಂಗ್ ನಲ್ಲಿಯೇ ಕೂತು ತಿನ್ನುವ ಕಲ್ಚರ್ ಬೆಳೆಸಿದ ಕುಡ್ಲದ ಮೊದಲ ಹೋಟೆಲ್ ಎನ್ನುವುದು ಗ್ರಾಹಕರ ಅಭಿಪ್ರಾಯ.

ಏಕಾಗ್ರತೆ ಸಾಧಿಸಲು ಯೋಗ ಅಗತ್ಯ

ಪ್ರಾಚೀನ ಕಾಲದಿಂದಲ್ಲೂ ಋಷಿಮುನಿಗಳು ಯೋಗದಿಂದ ಸತ್ಯದರ್ಶನವನ್ನು ಕಂಡುಕೊಂಡು ಬಂದಿದ್ದಾರೆ. ಆರೋಗ್ಯಕ್ಕೂ, ಯೋಗಕ್ಕೂ ಅವಿನಾಭಾವ ಸಂಬಂಧವಿದೆ. ಓಂಕಾರಕ್ಕೆ ಅಗಾಧವಾದ ಶಕ್ತಿಯಿದೆ. ಓಂಕಾರವನ್ನು ನಮ್ಮದಾಗಿಸಿಕೊಂಡರೆ ಏಕಾಗ್ರತೆ ಸಾಧಿಸಲು ಸಾಧ್ಯ. ಯೋಗ ನಿಜವಾದ ಬೆಳಕಿನೆಡೆಗೆ ಕೊಂಡೊಯ್ಯುತ್ತದೆ ಇದರಿಂದ ಬದುಕನ್ನು ಸುಂದರಗೊಳಿಸಲು ಸಾಧ್ಯ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬಿಜಿಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿ, ಯೋಗದ ಅಸ್ಮಿತೆಯನ್ನು ತಾಯಿಯ ಗರ್ಭದಿಂದಲೇ ಗುರುತಿಸಬಹುದು. ಯೋಗ ಎಂದರೆ ದೈಹಿಕ ಮಾನಸಿಕ ಆಚರಣೆಗಳ ಬೋಧನಾ ಶಾಲೆ ಎಂದು ಕರೆಯಬಹುದು. ವ್ಯಕ್ತಿಯು ತನ್ನನ್ನು ತಾನು ಅರ್ಥಮಾಡಿಕೊಂಡು ಅನುಭೂತಿಯನ್ನು ಪಡೆಯಲು ಯೋಗ ಅಗತ್ಯವಾಗಿದೆ. ಜೀವನದೊಂದಿಗೆ ಪರಮಾತ್ಮನನ್ನು ಲೀನವಾಗಿಸುವುದೇ ಯೋಗ, ಮಾನವ ಪ್ರತಿ ದಿನ ಮನೋಗ್ಲಾನಿಯಾಗಿ ಬದುಕುತ್ತಿದ್ದಾನೆ. ಅವನು ತಿನ್ನುವ ಆಹಾರ, ಬದುಕುವ ಪರಿಸರ ಶರೀರವನ್ನು ಜಾಡ್ಯವಾಗಿಸಿದೆ. ಈ ಶಾರೀರಿಕ ಬಾಧೆಯನ್ನು ಮೀರಲು ಯೋಗಸಾಧನಗಳು ಸಹಕಾರಿಯಾಗಿದೆ ಎಂದರು.

ಹೊಸ್ಮಾರು ಬಲ್ಯೊಟ್ಟು ಗುರುಕುಲ ಆಶ್ರಮದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಯೋಗವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದೆ. ಭಗವದ್ಗೀತೆಯ ೧೮ನೇ ಅಧ್ಯಾಯವು ಯೋಗದ ಬಗ್ಗೆ ಮಾತನಾಡುತ್ತದೆ ಎಂದರಲ್ಲದೇ ತಪಸ್ವಿಯಾಗಲು ಯೋಗ ಪ್ರಧಾನವಾದ ಅಸ್ತ್ರ ಎಂದರು. ಕಾರ್ಯಕ್ರಮದಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸುಬ್ಬಕಾರಡ್ಕ, ಬಿಜಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಲತಾ ರಾಜಾರಾಮ್, ಬಿಜಿಎಸ್ ಎಜುಕೇಷನ್ ಸೆಂಟರ್‌ನ ಪ್ರಾಂಶುಪಾಲರಾದ ರೇಷ್ಮಾ ಸಿ ನಾಯರ್, ಬಿಜಿಎಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಶ್ಮಿ ಉಪಸ್ಥಿತರಿದ್ದರು. ನರಸಿಂಹ ಕುಲಕರ್ಣಿ ಹಾಗೂ ಜಗದೀಶ ಮುರ ಅವರು ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರಂಭವನ್ನು ವಿದ್ಯಾರ್ಥಿಗಳಾದ ಸ್ನೇಹ ನಿರೂಪಿಸಿ, ಕಾವ್ಯ ಭಟ್ ಸ್ವಾಗತಿಸಿ ಪ್ರತೀಕ್ಷಾ ಕೆ ವಂದಿಸಿದರು.