Author: Team Kudla City

ಪಿಜಿ, ಹೋಮ್‌ಸ್ಟೇಗೆ ಸರಕಾರದ ಹೊಸ ರೂಲ್ಸ್ !

ರಾಜ್ಯದ ನಗರ ಪ್ರದೇಶದಲ್ಲಿರುವ ಪೇಯಿಂಗ್ ಗೆಸ್ಟ್(ಪಿಜಿ) ಮತ್ತು ಹೋಮ್ ಸ್ಟೇಗಳಿಗೆ ಏಕರೂಪದ ಹೊಸ ಪಾಲಿಸಿಯನ್ನು ತರುವ ಕುರಿತು ಈಗಾಗಲೇ ಕರಡು ಸಿದ್ಧವಾಗಿದೆ. ರಾಜ್ಯ ಸರಕಾರ ಅದನ್ನು ಶೀಘ್ರದಲ್ಲಿಯೇ ಜಾರಿಗೆ ತರುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ನಗರ ಪ್ರದೇಶದಲ್ಲಿ ಸಾಕಷ್ಟು ಪಿಜಿಗಳು ನಡೆಯುತ್ತಿದೆ. ಆದರೆ ಅದಕ್ಕೆ ಯಾವುದೇ ರೀತಿಯ ನೀತಿ-ನಿಯಮಗಳು ಇಲ್ಲ. ಭದ್ರತೆ ವಿಚಾರದಲ್ಲೂ ಅಷ್ಟೇ ಈ ಕಾರಣದಿಂದ ಪಿಜಿ ಹಾಗೂ ಹೋಮ್ ಸ್ಟೇಗೆ ಸೂಕ್ತವಾದ ನೀತಿ- ನಿಯಮಗಳನ್ನು ತರುವ ಕುರಿತು ಪಾಲಿಸಿ ಮಾಡಲಾಗುತ್ತದೆ. ಈ ಮೂಲಕ ಅಲ್ಲಿನವರಿಗೆ ಭದ್ರತೆ, ಕನಿಷ್ಟ ಮೂಲಭೂತ ಸವಲತ್ತು ನೀಡುವ ಕುರಿತು ಅದರಲ್ಲಿ ಉಲ್ಲೇಖವಾಗುತ್ತದೆ.

ನಗರದ ಪ್ರದೇಶ ವ್ಯಾಪ್ತಿಯಲ್ಲಿ ಮಾದರಿ ಪಾಲಿಸಿಯನ್ನು ತರುವ ಮೂಲಕ ಭದ್ರತೆ, ಸ್ಥಳೀಯ ಸಂಸ್ಥೆಗಳಿಗೆ ಅದರ ಮಾಹಿತಿ, ಎಷ್ಟು ಪಿಜಿಗಳಿವೆ, ಮಹಿಳಾ ಪಿಜಿಗಳಿಗೆ ಇರುವ ಭದ್ರತೆ, ರೋಡ್ ಸೈಡ್‌ನಿಂದ ಎಷ್ಟು ಒಳಭಾಗದಲ್ಲಿದೆ. ಯಾವ ಪ್ರದೇಶದಲ್ಲಿ ಪಿಜಿಗಳು ಇರಕೂಡದು, ಆರೋಗ್ಯ ವಿಚಾರ, ಪಿಜಿ ಮಾಡುವವರಿಗೆ ಇತರರ ನೀಡುವ ಕಿರುಕುಳಕ್ಕೆ ಕ್ರಮ ಹೀಗೆ ಹತ್ತಾರು ವಿಚಾರಗಳು ಇದರಲ್ಲಿ ಅಡಕವಾಗಿರುತ್ತದೆ.

13 ವರ್ಷ ಭರ್ತಿ 1 ಲಕ್ಷ ಗಿಡ ನೆಟ್ಟ ಜೀತ್ !

ಒಂದಲ್ಲ ಎರಡಲ್ಲ ಭರ್ತಿ 13 ವರ್ಷದಲ್ಲಿ ಜೀತ್ ಮಿಲಾನ್ ರೋಚ್ ನೆಟ್ಟ ಗಿಡಗಳ ಸಂಖ್ಯೆ ಭರ್ತಿ 1 ಲಕ್ಷಕ್ಕೂ ಮಿಕ್ಕಿದೆ. ಇದೆಲ್ಲವೂ ಅವರೇ ತಮ್ಮ ಸ್ವಂತ ಖರ್ಚಿನಲ್ಲಿ ನೆಟ್ಟ ಗಿಡಗಳು.

ಮುಖ್ಯವಾಗಿ ರಸ್ತೆ ಬದಿ, ಸಶ್ಮಾನ ಹೀಗೆ ಮಂಗಳೂರಿನಲ್ಲಿ ಎಲ್ಲಿ ಖಾಲಿ ಜಾಗವಿದೆಯೋ ಅಲ್ಲಿ ಅವರು ಗಿಡ ನೆಡುವ ಕೆಲಸ ಮಾಡುತ್ತಾರೆ.

ಎಲ್ಲರಿಗೂ ಇತರ ವೃತ್ತಿ ಯ ನಡುವೆ ಗಿಡ ನೆಡುವ ಹವ್ಯಾಸ ಇದ್ದರೆ ಇವರಿಗೆ ಇದೇ ಫುಲ್ ಟೈಮ್ ಕಾಯಕ. ಪರಿಸರ ದಿನದ ಅಂಗವಾಗಿ ಕುಡ್ಲ ಸಿಟಿ ಯ ಹೆಮ್ಮೆಯ ಇಂತಹ ಕತೆಗಳನ್ನು ನಿಮ್ಮ ಮುಂದೆ ಇಡುತ್ತಿದೆ.

ಬಿಜಿಎಸ್ ಶಿಕ್ಷಣ ಸಂಸ್ಥೆ ಪರಿಸರ ಸ್ನೇಹಿ

ಕಾವೂರಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯ ವಿಶೇಷ ಎಂದರೆ ಅಲ್ಲಿ ಶಿಕ್ಷಣ, ಮಾನವೀಯ ಮೌಲ್ಯಗಳನ್ನು ಕಲಿಸುವ ಕೆಲಸವನ್ನು ಮಾತ್ರ ಮಾಡುತ್ತಿಲ್ಲ. ಬದಲಾಗಿ ಇಡೀ ಬಿಜಿಎಸ್ ಶಿಕ್ಷಣ ಸಂಸ್ಥೆ ಪರಿಸರದ ಕುರಿತು ಕಾಳಜಿಯನ್ನು ಇಟ್ಟುಕೊಂಡಿದೆ. ಮರ, ಗಿಡಗಳ ಜತೆಗೆ ಪರಿಸರ ಪೂರಕ ವಾತಾವರಣ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಪೂರಕವಾಗಿದೆ.

ವಿಶೇಷವಾಗಿ ಬಿಜಿಎಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಹೇಳುವಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಗಿಡ- ಮರ ಬೆಳೆಸುವ ಕಾರ್ಯ ಪ್ರತಿಯೊಬ್ಬರ ಮನೆಯಂಗಳದಿಂದ ಪ್ರಾರಂಭವಾಗಬೇಕು. ಪ್ರಕೃತಿಯು ದೇವರಿಗೆ ಸಮಾನ, ಇದನ್ನು ಕಾಪಾಡಿದರೆ ದೇವರ ಅನುಗ್ರಹ ಲಭಿಸುತ್ತದೆ. ಹೇಗೆ ಮರ, ನದಿ, ಪ್ರಾಣಿ ಪಕ್ಷಿಗಳು ಪರರಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಳ್ಳುತ್ತವೆಯೋ ಹಾಗೆ ಮನುಷ್ಯನಾಗಿ ಹುಟ್ಟಿದ ಮೇಲೆ ಸ್ವಾರ್ಥವನ್ನು ಬಿಟ್ಟು ಮರಗಿಡಗಳನ್ನು ಬೆಳೆಸಬೇಕು.

ಜಗತ್ತಿನಾದ್ಯಂತ ಪರಿಸರ ಮಲೀನವಾಗುತ್ತಿದೆ. ಇದರ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಮಕ್ಕಳ ಹುಟ್ಟುಹಬ್ಬದ ದಿನದಂದು ಒಂದೊಂದು ಗಿಡ ನೆಟ್ಟು ಬೆಳಸಬೇಕು ಎನ್ನುವುದು ಅವರ ಮಾತು. ವಿಶೇಷವಾಗಿ ಪರಿಸರದ ದಿನಾಚರಣೆಯ ಅಂಗವಾಗಿ ಈಗಾಗಲೇ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಪರಿಸರ ಜಾಗೃತಿ, ಮಾಹಿತಿ ನೀಡುವ ಕಾರ‍್ಯ ಸಾಗುತ್ತಿದೆ.

ಕೂಳೂರು ಸೇತುವೆ ಕಮಾನು ಶಿಥಿಲ: ಘನ ವಾಹನ ಫುಲ್ ಸ್ಟಾಪ್

ಮಂಗಳೂರಿನ ಕೂಳೂರು ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಮಾನು ಸೇತುವೆ ತುಂಬಾ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವುದರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯುವವರೆಗೆ ತಾತ್ಕಾಲಿಕವಾಗಿ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗವಾಗಿ ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುವ ಮತ್ತು ಬೆಂಗಳೂರಿನಿಂದ ಎಂಆರ್‌ಪಿಎಲ್ ಉಡುಪಿ ಕಡೆಗೆ ಬರುವ ಬುಲೆಟ್ ಟ್ಯಾಂಕರ್‌ಗಳನ್ನು ಪಡುಬಿದ್ರೆ, ಕಾರ್ಕಳ- ಗುರುವಾಯನ ಕೆರೆ- ಧರ್ಮಸ್ಥಳ ಕೊಕ್ಕಡ-ಪೆರಿಯಶಾಂತಿ ಮೂಲಕ ಸಂಚರಿಸುವುದು.

ಕೇರಳ ರಾಜ್ಯದಿಂದ ಉಡುಪಿ ಕಡೆಗೆ ಬರುವ ಬುಲೆಟ್ ಟ್ಯಾಂಕರ್‌ಗಳು ಕೆಪಿಟಿ ಯಿಂದ ಕಾವೂರು ಬಜಪೆ ಕಾನ ಸುರತ್ಕಲ್ ಮೂಲಕ ಸಂಚರಿಸುವುದು. ಘನ ವಾಹನಗಳಾದ ಲಾರಿ ಬಸ್ ಟ್ಯಾಂಕರ್‌ಗಳಿಗೆ ಕೂಳೂರು ಹೊಸ ಸೇತುವೆಯ ಮೂಲಕ ದ್ವಿಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಲಘು ವಾಹನಗಳಾದ ಕಾರು ಜೀಪು, ಟೆಂಪೊ, ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನಗಳನ್ನು ಹಳೆಯ ಕಮಾನು ಸೇತುವೆಯ ಮೂಲಕ ದ್ವಿಮುಖವಾಗಿ ಸಂಚರಿಸುವ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ರಸ್ತೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯ ಬಗ್ಗೆ ಅವಶ್ಯವಿರುವ ಸೂಚನಾ ಫಲಕ ಅಳವಡಿಸಿ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಯೋಜನಾ ನಿರ್ದೇಶಕರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಅವರಿಗೆ ಸೂಚಿಸಲಾಗಿದೆ. ಸಂಚಾರ ನಿಯಂತ್ರಣ ಸಿಬ್ಬಂದಿಗಳನ್ನು ನೇಮಕಗೊಳಿಸಲು ಪೊಲೀಸ್ ಆಯುಕ್ತರು, ಮಂಗಳೂರು ನಗರ ಅವರು ಮತ್ತು ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಅವರು ತಮ್ಮ ವ್ಯಾಪ್ತಿಯಲ್ಲಿ ಮೋಟಾರ್ ವಾಹನ ಕಾಯಿದೆ ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಾವಳಿ ಪ್ರಕಾರ ಅಧಿಕಾರವುಳ್ಳವರಾಗಿರುತ್ತಾರೆ.

ಕ್ರಿಶ್ಚಿಯನ್ ಮದುವೆಯಲ್ಲಿ ಎರಡು ಫುಡ್ ಗ್ಯಾರಂಟಿ

ಕ್ರಿಶ್ಚಿಯನ್ ಅದರಲ್ಲೂ ಮಂಗಳೂರಿನ ಕ್ರೈಸ್ತ ರ ಮದುವೆ ಸಮಾರಂಭ ದಲ್ಲಿ ಎರಡು ರೀತಿಯ ಫುಡ್ ಗಳು ಸಿಕ್ಕೇ ಸಿಗುತ್ತದೆ. ಒಂದು ವೆಜ್ ಹಾಗೂ ಇನ್ನೊಂದು ನಾನ್ ವೆಜ್. ಇತರ ಯಾವುದೇ ಮಂಗಳೂರಿನ ಸಮುದಾಯದ ಮದುವೆಯಲ್ಲಿ ಇಂತಹ ಸಂಸ್ಕೃತಿ ಕಾಣುವುದು ಕಷ್ಟ.

ಹಿಂದೂಗಳಲ್ಲಿ ಧಾರ್ಮಿಕ ವಿಧಿವಿಧಾನಗಳು ಇದ್ದಾಗ ಅಲ್ಲಿ ವೆಜ್ ಮುಖ್ಯ. ಆದರೆ ಧಾರ್ಮಿಕ ಕಾರ್ಯ ಮುಗಿದ ಬಳಿಕ ನಾನ್ ವೆಜ್ ನೀಡುವ ಪರಂಪರೆ ಅಲ್ಲಿದೆ. ಮುಸ್ಲಿಂ ಸಮುದಾಯದಲ್ಲಿ ಜಾಸ್ತಿ ನಾನ್ ವೆಜ್ ಇರುತ್ತದೆ. ವೆಜ್ ಗೆ ಕೆಲವೊಂದು ಸಲ ಅಸ್ಪಧ ನೀಡಲಾಗುತ್ತದೆ.

ಆದರೆ ಕ್ರೈಸ್ತ ರ ಯಾವುದೇ ಮದುವೆ ಸಮಾರಂಭಗಳಿರಲಿ ಅಲ್ಲಿ ವೆಜ್, ನಾನ್ ವೆಜ್ ಎನ್ನುವ ಪ್ರತ್ಯೇಕ ಫುಡ್ ಕೌಂಟರ್ ಇರುತ್ತದೆ. ಜತೆಗೆ ವೈನ್, ಡ್ಯಾನ್ಸ್ ,ಎಂಸಿ ಬೇಕೇ ಬೇಕು.