ಕಾವೂರಿನ ಬಿಜಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ಪ್ರವೇಶಾತಿಯನ್ನು ಆರಂಭಿಸಲಾಗಿದೆ. ವಿಜ್ಞಾನ ವಿಚಾರದಲ್ಲಿ ಪಿಸಿಎಂಬಿ, ಪಿಸಿಎಂಸಿ, ಪಿಸಿಎಂಸಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಇಬಿಎಎಸ್, ಇಬಿಎಸಿ ವಿಷಯಗಳು ವಿದ್ಯಾರ್ಥಿಗಳಿಗೆ ಸಿಗಲಿದೆ. ಕಂಪ್ಯೂಟರ್ ಲ್ಯಾಬ್, ಎಲ್ಲ ಸವಲತ್ತುಗಳಿಂದ ಕೂಡಿದ ಉಪನ್ಯಾಸದ ಹಾಲ್, ಡಿಜಿಟಲ್ ಲೈಬ್ರೆರಿಯ ಸವಲತ್ತು, ಜಿಮ್, ವಿದ್ಯಾರ್ಥಿಗಳಿಗೆ (ಪುರುಷ) ಹಾಸ್ಟೆಲ್ ವ್ಯವಸ್ಥೆ ಕೂಡಯಿದೆ.
ಅನುಭವಸ್ಥರಾದ ಉಪನ್ಯಾಸಕ ವರ್ಗ, ರೆಮಿಡಿಯಲ್ ತರಗತಿಗಳ ಜತೆಗೆ ವೈಯಕ್ತಿಕವಾಗಿ ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಪೂರಕವಾಗುವಂತಹ ಕೋಚಿಂಗ್ ಕ್ಲಾಸ್, ಜೆಇಇ ಮೈನ್ ಹಾಗೂ ಅಡ್ವಾನ್ಸ್, ನೀಟ್ ಕುರಿತಾದ ತರಗತಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ರಹದಾರಿಯನ್ನು ತೋರಿಸುತ್ತದೆ. ಬಿಜಿಎಸ್ನ ಹೆಚ್ಚಿನ ಮಾಹಿತಿಗೆ ಇಲ್ಲಿಗೆ ಬನ್ನಿ
http://www.bgsec.net/
Author: Team Kudla City
ಪಿಲಿಕುಳದ ಪ್ರಾಣಿ, ಪಕ್ಷಿಗಳಿಗೆ ಫ್ಯಾನ್ ಟ್ರೀಟ್ಮೆಂಟ್
ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಈಗ ಪ್ರಾಣಿ, ಪಕ್ಷಿಗಳಿಗೆ ಈಗ ಯಾಂತ್ರೀಕೃತ ಫ್ಯಾನ್ಗಳ ಆಹ್ಲಾದಕರ ಗಾಳಿ, ಜತೆಗೆ ಅಲ್ಲಲ್ಲಿ ತಣ್ಣೀರ ಸಿಂಚನದ ಖುಷಿ… ಬಿಸಿಲಿನ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಮನುಷ್ಯರು ಮಾತ್ರವಲ್ಲದೆ ಪ್ರಾಣಿ ಪಕ್ಷಿಗಳಿಗೂ ಸೆಕೆ ತಡೆಯಲಾಗುತ್ತಿಲ್ಲ. ಹೀಗಾಗಿ ಪಿಲಿಕುಳ ಉದಾನವನದಲ್ಲಿರುವ ಪ್ರಾಣಿಗಳಿಗೆ ಬಿಸಿಲಿನ ತಾಪ ತಣಿಸಲು ಫ್ಯಾನ್, ನೀರು ಸಿಂಪಡಣೆ, ಜತೆಯಲ್ಲಿ ಶೀಟ್ಗಳಿಗೆ ಬಿಳಿ ಪೈಂಟ್ ಬಳಿಯುವ ಮೂಲ ಹೊಸ ಪ್ರಯತ್ನವನ್ನು ಮಾಡಲಾಗುತ್ತಿದೆ.
ಉದಾಸೀನತೆಗೆ ದೂಡಿದ ಮಳೆರಾಯನ ಆಟ !
ಕರಾವಳಿಯ ನಾನಾ ಭಾಗದಲ್ಲಿ ಕಳೆದ ಒಂದೆರಡು ದಿನಗಳಲ್ಲಿ ಒಂಚೂರು ಮಳೆ ಬಂದು ಇಳೆಯನ್ನು ತಣ್ಣಗೆ ಮಾಡಿದ ಪ್ರಸಂಗಗಳು ನಡೆದರೆ ಮಂಗಳೂರಿನಲ್ಲಿ ಮಾತ್ರ ಮೋಡ ಕವಿದ ವಾತಾವರಣದ ಜತೆಗೆ ಮಳೆರಾಯನ ಆಟ ಮುಂಜಾನೆ ಎದ್ದು ಆಕಾಶ ನೋಡುವ ಜನರಿಗೆ ಉದಾಸೀನತೆಯ ಭಾವವನ್ನು ಮೂಡಿಸಿದೆ.
ಅಷ್ಟಕ್ಕೂ ಮಂಗಳೂರು ಸಿಟಿ ಲಿಮಿಟ್ನೊಳಗೆ ಕೆಲವು ಕಡೆಯಲ್ಲಿ ಮಳೆಯಾದರೆ ಕುಡ್ಲದ ಪ್ರಮುಖ ಭಾಗದಲ್ಲಿ ಮಳೆಯ ಹನಿಯೇ ಬಿದ್ದಿಲ್ಲ. ಸಿಟಿ ಜನ ಉರಿಬಿಸಿಲಿಗೆ ಬೆವರು ಸುರಿಸುತ್ತಾ ಮಂಗಳೂರಿನಲ್ಲಿ ಭರ್ಜರಿ ಒಂದು ಮಳೆ ಬರಲಿ ಎನ್ನುವ ನಿರೀಕ್ಷೆಯಲ್ಲಿ ಕಾದು ಕೂತಿದ್ದಾರೆ. ದೇವಸ್ಥಾನ, ಚರ್ಚ್ಗಳಲ್ಲಿ ಈಗಾಗಲೇ ಮಳೆಗಾಗಿ ವಿಶೇಷ ಪ್ರಾರ್ಥನೆಗಳು ಆರಂಭವಾಗಿದೆ. ಆದರೂ ಮಳೆರಾಯ ಮುನಿಸಿಕೊಂಡು ಸುಮ್ಮನಾಗಿ ಬಿಟ್ಟಿದ್ದಾನೆ.
ಬಿಜಿಎಸ್ ವಿದ್ಯಾರ್ಥಿಗಳ ಶಿಕ್ಷಣದ ಅಕ್ಷಯ ಪಾತ್ರೆ
ಕಾವೂರಿನ ಬಿಜಿಎಸ್ ಶಿಕ್ಷಣ ಸಂಸ್ಥೆ ಎಂದ್ರೆ ಅದು ವಿದ್ಯಾರ್ಥಿಗಳ ಪಾಲಿನ ಅಕ್ಷಯ ಪಾತ್ರೆ. ಅಲ್ಲಿ ಮೊಂಟೆಸರಿಯಿಂದ ಹಿಡಿದು ಪದವಿ ವರೆಗೆ ಎಲ್ಲ ಶಿಕ್ಷಣ ವ್ಯವಸ್ಥೆ ಒಂದು ಕ್ಯಾಂಪಸ್ನೊಳಗೆ ಇರುವುದರಿಂದ ವಿದ್ಯಾರ್ಥಿಗಳಿಗೆ ಕಲಿಕೆ ಒಂದು ಬಿಟ್ಟರೆ ಬೇರೆ ಯಾವುದೇ ಚಿಂತೆ ಹುಟ್ಟಲು ಸಾಧ್ಯವೇ ಇಲ್ಲ.
ಗುಣಮಟ್ಟದ ಶಿಕ್ಷಣ. ದೀ ಬೆಸ್ಟ್ ಎನ್ನುವ ಉಪನ್ಯಾಸಕರು ಜತೆಗೆ ಪ್ರಶಾಂತ ವಾತಾವರಣ ವಿದ್ಯಾರ್ಥಿಗಳ ಕಲಿಕೆಗೆ ಪೂರಕ. ಶ್ರೀ ಅದಿ ಚುಂಚನಗಿರಿ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಬಿಜಿಎಸ್ನ ಹೆಚ್ಚಿನ ಮಾಹಿತಿಗೆ ಇಲ್ಲಿಗೆ ಬನ್ನಿ http://www.bgsec.net/
ಕದ್ರಿ ಬ್ರಹ್ಮಕಲಶಕ್ಕೆ ರಿಕ್ಷಾ ಚಾಲಕರ ವಿಶಿಷ್ಟ ಸೇವೆ
ವಿಶ್ವಹಿಂದೂ ಪರಿಷತ್ ಬಜರಂಗದಳ ಆಟೋ ಚಾಲಕರ ಮಾಲಕರ ಘಟಕ ವತಿಯಿಂದ ಶ್ರೀ ಕ್ಷೇತ್ರ ಕದ್ರಿ ಬ್ರಹ್ಮಕಲಶದ ಅಂಗವಾಗಿ ಮೇ 9 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಉಚಿತ ಆಟೊರಿಕ್ಷಾ ಸೇವೆ ಸಿಗಲಿದೆ.
ಘಟಕದ ನೂರು ರಿಕ್ಷಾ ಚಾಲಕರು ಕೆಪಿಟಿ ಬಳಿಯಿಂದ, ಬಂಟ್ಸ್ ಹಾಸ್ಟೆಲ್ನಿಂದ, ಮಲ್ಲಿಕಟ್ಟೆಯಿಂದ ದೇವಸ್ಥಾನಕ್ಕೆ ಉಚಿತವಾಗಿ ಕರೆದುಕೊಂಡು ಹೋಗಿ ಬಿಡುವ ಹಾಗೂ ದೇವಸ್ಥಾನದಿಂದ ಸಮೀಪದ ಬಸ್ ನಿಲ್ದಾಣಗಳಿಗೆ ಬಿಡುವ ವ್ಯವಸ್ಥೆ ಮಾಡಲಾಗಿದೆ.
ಈ ಮೂಲಕ ಮಂಗಳೂರಿನ ರಿಕ್ಷಾ ಚಾಲಕರು ಕದ್ರಿ ಶ್ರೀಮಂಜುನಾಥ ದೇವರ ಭಕ್ತರಿಗೆ ಪ್ರೀತಿಯ ಸೇವೆ ನೀಡುವ ಮೂಲಕ ವಿಶೇಷ ಸೇವೆ ಮಾಡುತ್ತಿದ್ದಾರೆ.




