Author: Team Kudla City

ರೊಜಾರಿಯೋ ಕೆಥೆಡ್ರಲ್‌ನಲ್ಲಿ ಮಾಸ್ ಮ್ಯಾರೇಜ್

ನಗರದ ರೊಜಾರಿಯೋ ಕೆಥೆಡ್ರಲ್‌ನಲ್ಲಿ 45ನೇ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮೇ 5ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.
ಕೆಥೆಡ್ರಲ್‌ನ ಸಮಾಜ ಸೇವಾ ಘಟಕ ಸಂತ ವಿನ್ಸೆಂಟ್ ಪಾವ್ಲ್(ಎಸ್‌ವಿಪಿ) ಸಭಾ ಆಶ್ರಯದಲ್ಲಿ ನಡೆಯುವ ಕಾರ‍್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಮತ್ತು ಕರ್ನಾಟಕದ ವಿವಿಧ ಭಾಗಗಳ 14 ಜೋಡಿಗಳು ಭಾಗವಹಿಸಲಿವೆ. ಕಳೆದ ನಾಲ್ಕೂವರೆ ದಶಕಗಳಿಂದ ಇಲ್ಲಿ ಸಾಮೂಹಿಕ ವಿವಾಹ ಸಮಾರಂಭ ನಡೆಯುತ್ತಿದ್ದು, ಇದುವರೆಗೆ 980 ಜೋಡಿಗಳು ಭಾಗವಹಿಸಿ ಸಾಂಸಾರಿಕ ಜೀವನಕ್ಕೆ ಕಾಲಿರಿಸಿವೆ.

ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನಾ ವರು ನವ ವಧು ವರರ ವಿವಾಹ ಸಮಾರಂಭದ ಬಲಿಪೂಜೆಯ ನೇತೃತ್ವ ವಹಿಸುವರು. ಬಳಿಕ ಜರುಗುವ ಸಮಾರಂಭದಲ್ಲಿ ಅನಿವಾಸಿ ಉದ್ಯಮಿ ಐವನ್ ಎ. ಫರ್ನಾಂಡೀಸ್, ರೊಜಾರಿಯೋ ಕೆಥೆಡ್ರಲ್‌ನ ರೆಕ್ಟರ್ ಫಾ. ಜೆ.ಬಿ. ಕ್ರಾಸ್ತಾ ಭಾಗವಹಿಸಲಿದ್ದಾರೆ.

ಕರಾವಳಿಯ ದೇವಸ್ಥಾನಕ್ಕೆ ಗರ್ಭಗುಡಿಯೇ ಇಲ್ಲ !

ಈ ದೇವಸ್ಥಾನದ ವಿಶೇಷತೆ ಎಂದರೆ ಇತರ ದೇವಸ್ಥಾನಗಳಂತೆ ಈ ದೇವಸ್ಥಾನಕ್ಕೆ ಯಾವುದೇ ಕಟ್ಟಡವಿಲ್ಲ, ಗರ್ಭಗುಡಿಯಿಲ್ಲ, ಗೋಪುರವಿಲ್ಲ.

ಬದಲಾಗಿ ಇದೊಂದು ಬಯಲು ಗಣಪತಿ. ತೆರೆದ ಸ್ಥಳದಲ್ಲಿರುವ ಗಣಪತಿ. ಹರಕೆ ಹೊತ್ತು ಈ ಸ್ಥಳಕ್ಕೆ ಬಂದು ಗಣಪನಲ್ಲಿ ಪ್ರಾರ್ಥಿಸಿದರೆ 2 ತಿಂಗಳೊಳಗಾಗಿ ಅವರ ಬೇಡಿಕೆ ಈಡೇರುತ್ತದಂತೆ. ಅದರ ಮರುದಿನವೇ ಈ ಕ್ಷೇತ್ರಕ್ಕೆ ಬಂದು ಗಂಟೆ ಕಟ್ಟುತ್ತಾರೆ. ಹಾಗಾಗಿ ಇಲ್ಲಿ ಸಾವಿರಾರು ಗಂಟೆಗಳನ್ನು ಕಾಣಬಹುದು.

ಹೌದು ಇದು ಬೆಳ್ತಂಗಡಿ ಕೊಕ್ಕಡದ ಸೌತಡ್ಕ ಗಣಪತಿ ದೇವಳದ ವಿಶೇಷತೆ. ಇದು ಬರೀ ದೇವಳ ಮಾತ್ರವಲ್ಲ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದೆ.

ಎಸ್ಸೆಸ್ಸೆಲ್ಸಿ ತುಳು ಭಾಷೆಯಲ್ಲಿ 100 ರಿಸಲ್ಟ್

ಎಸ್ಸೆಸ್ಸೆಲ್ಸಿ ಫಲಿತಾಂಶ ಈಗಾಗಲೇ ಹೊರಬಿದಿದ್ದು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ತುಳು ಭಾಷೆಯಲ್ಲಿ ಶೇ. 100 ಫಲಿತಾಂಶ ಪಡೆದಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತುಳು ಭಾಷೆಯನ್ನು ಐಚ್ಚಿಕ ವಿಷಯವಾಗಿ ಬೋಧಿಸಲಾಗುತ್ತಿದ್ದು ಈ ಬಾರಿ ಎಸ್.ಎಲ್.ಎಲ್.ಸಿ. ಪರೀಕ್ಷೆಯಲ್ಲಿ ಒಟ್ಟು 617 ವಿದ್ಯಾರ್ಥಿಗಳು ತುಳು ಭಾಷೆ ಪರೀಕ್ಷೆ ಬರೆದಿದ್ದಾರೆ.

ಅದರಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ. 100 ಫಲಿತಾಶ ದಾಖಲಾಗಿದೆ. ಅದರಲ್ಲಿಯೂ 63 ವಿದ್ಯಾರ್ಥಿಗಳು ನೂರಕ್ಕೆ100 ಅಂಕ ಪಡೆದಿದ್ದಾರೆ.ಉಭಯ ಜಿಲ್ಲೆಗಳ ಒಟ್ಟು 41 ಶಾಲೆಗಳಲ್ಲಿ ತುಳು ಪಠ್ಯ ಬೋಧನೆ ನಡೆಯುತ್ತಿದೆ. ತುಳುವಿನಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಜಿಲ್ಲೆಯ ಒಟ್ಟು ಫಲಿತಾಶದಲ್ಲಿ ಏರಿಕೆ ಕಂಡುಬಂದಿದೆ.

ಹಂಪನಕಟ್ಟೆಯ ಇತಿಹಾಸ ನೆನಪಿಸಿದ ಕದ್ರಿ ರಾಕ್ಸ್

ಮಂಗಳೂರಿನ ಹಂಪನಕಟ್ಟೆ ಎನ್ನುವ ಹೆಸರು ಬಹಳಷ್ಟು ಮಂದಿಗೆ ಗೊತ್ತಿರಬಹುದು. ಆದರೆ ಇದರ ಹಿಂದಿರುವ ಇತಿಹಾಸ ಕೂಡ ಬಹಳಷ್ಟು ಸೊಗಸು.
ಅಲ್ಲಿ ಅಪ್ಪಣ್ಣ ಎನ್ನುವ ಪರೋಪರಿ ವ್ಯಕ್ತಿಯೊಬ್ಬರು ಯಾರಾದರೂ ಬಿಸಿಲಿನಲ್ಲಿ ದಣಿದು ಬಂದವರಿಗೆ ಬೀದಿಯಲ್ಲಿ ನಿಂತು ನೀರು ಹಾಗೂ ಬೆಲ್ಲವನ್ನು ನೀಡಿ ಕಳುಹಿಸುತ್ತಿದ್ದರು. ಇದು ಪರಿಪಾಟ ಮತ್ತೆ ಮಂಗಳೂರಿನಲ್ಲಿ ಮುಂದುವರಿದಿದೆ.
ಕದ್ರಿಯಲ್ಲಿರುವ ಕದ್ರಿ ರಾಕ್ಸ್ ಆರ್ಟ್ ಗ್ಯಾಲರಿಗೆ ಭೇಟಿ ನೀಡಿದಾಗ ಅಲ್ಲಿ ಮೊದಲು ಇದೇ ಮಣ್ಣಿನ ಮಡಕೆಯಲ್ಲಿರುವ ತಂಪು ನೀರು ಹಾಗೂ ಬೆಲ್ಲವನ್ನು ನೀಡಿ ಸ್ವಾಗತಿಸುವ ಪರಿಪಾಟವನ್ನು ಬೆಳೆಸಿಕೊಂಡಿದ್ದಾರೆ.
ತೀರಾ ಇತ್ತೀಚೆಗೆ ಉದ್ಘಾಟನೆಯಾದ ಕದ್ರಿ ರಾಕ್ಸ್ ಆರ್ಟ್ ಗ್ಯಾಲರಿ ಮಾಲೀಕ ಹರ್ಷ ಡಿಸೋಜ ಅವರು ಈ ಹೊಸ ಕಲ್ಪನೆಯನ್ನು ಹುಟ್ಟು ಹಾಕಿ ಗಮನಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಬೊಕ್ಕಪಟ್ಣದಲ್ಲಿ ಬಾಟಲ್‌ಗೊಂದು ಆರ್ಟ್ ಕ್ಯಾಂಪ್

ಮನೆ, ಹೋಟೆಲ್, ಬಾರ್, ಅಂಗಡಿ ಮಳಿಗೆ ಗಳಲ್ಲಿ ದ್ರವ್ಯ ಪದಾರ್ಥಗಳನ್ನು ಖರೀದಿಸಿ ಉಪಯೋಗ ಆದ ನಂತರ ಅದೇ ಬಾಟಲ್‌ಗಳನ್ನು ತ್ಯಾಜ್ಯ ಎಂದು ಬೀದಿ, ನದಿ, ಸಮುದ್ರಕ್ಕೆ ಎಸೆದು ಮಾಲಿನ್ಯ ಗೊಳಿಸುವ ಪ್ರವೃತ್ತಿ ಈಗ ಹೆಚ್ಚಾಗುತ್ತಿದೆ. ಈ ಬಾಟಲ್ ಗಳು ಅಂತರ್ಜಲ ಮತ್ತು ಜಲಚರ ಜೀವಿಗಳ ನೆಮ್ಮದಿಗೆ ಸಮಸ್ಯೆ ಆಗುತ್ತಿವೆ.

ಮಂಗಳೂರಿನ ಬೊಕ್ಕ ಪಟ್ಣದ ಕಲಾವಿದೆ ಮೇಘ ಮೆಂಡನ್ ಈ ತರದ ತ್ಯಾಜ್ಯ ಬಾಟಲಿಗಳಲ್ಲಿ ಚಿತ್ರ ಬರೆದು ಅದಕ್ಕೆ ವಿದ್ಯುತ್ ಸಂಪರ್ಕ ನೀಡಿ ಅದರ ಮೇಲೆ ಹೂ ಇಟ್ಟು ಅದು ಮನೆಯ ಅಂದ ಹೆಚ್ಚಾಗುವ ರೀತಿಯಲ್ಲಿ ಹೊಸ ಒಂದು ಕಲಾ ಆವಿಷ್ಕಾರ ಮಾಡುತ್ತಾರೆ.
ಸ್ವಚ್ಛ ಭಾರತದ ಒಂದು ಪಾತ್ರವಾಗಿ ಮನೆ, ಮನೆಯ ಬಾಟಲ್ ತ್ಯಾಜ್ಯಗಳು ಮನೆ, ಮನೆಯಲ್ಲೇ ಉಪಯೋಗ ಆದರೆ ಬೀದಿ, ನದಿ, ಸಾಗರಕ್ಕೆ ಸೇರುವ ತ್ಯಾಜ್ಯ ಕಡಿಮೆ ಆಗಿ ಪರಿಸರಕ್ಕೆ ನೀಡುವ ಅಮೂಲ್ಯ ಕೊಡುಗೆ ನೀಡಿದಂತಾಗುತ್ತದೆ ಎಂಬ ಹಿತ ದೃಷ್ಟಿಯಲ್ಲಿ ಇದೀಗ ಈ ಬಾಟಲ್ ಚಿತ್ರ ಕಲೆಯ ಶಿಬಿರವನ್ನು ಬೊಕ್ಕ ಪಟ್ಣದ ಫಲ್ಗುಣಿ ನದೀ ಕಿನಾರೆಯಲ್ಲಿ ಆರಂಭಿಸಿದ್ದಾರೆ. ಮೇ 5, 12, 19, 20 ರಂದು ಬೆಳಗ್ಗೆಯಿಂದ ಮಧ್ಯಾನ ತನಕ ಈ ಶಿಬಿರ ಜರುಗಲಿದೆ.