ಮಂಗಳೂರು ಸಂಚಾರ ನಿಯಂತ್ರಣ ವ್ಯವಸ್ಥೆಯಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಜತೆಗೆ ಅವರ ಸಿಬ್ಬಂದಿಗಳು ಕೆಲಸ ಮಾಡುವುದನ್ನು ನಾವು ನೋಡಿದ್ದೇವೆ.
ಆದರೆ ಮಂಗಳೂರಿನಲ್ಲಿ ಹಿರಿಯ ಜೀವವೊಂದು ಟ್ರಾಫಿಕ್ ನಿಯಂತ್ರಣ ವ್ಯವಸ್ಥೆಯಲ್ಲಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಹೌದು. 100 ವರ್ಷದಲ್ಲಿರುವ ಜೋಯ್ ಗೊನ್ಸಾಲ್ವೀಸ್ ಅವರು ನಗರದ ಪ್ರಮುಖ ಸರ್ಕಲ್ಗಳಾದ ನಂತೂರು, ಕೆಪಿಟಿ ಸರ್ಕಲ್ ಬಳಿಯಲ್ಲಿ ಟ್ರಾಣ ಮಾಡುವ ಕೆಲಸ ಮಾಡುತ್ತಾರೆ.
ಅವರೇ ಟ್ರಾಫಿಕ್ ವಾರ್ಡನ್ ಸ್ಕ್ವಾಡ್ ಹುಟ್ಟುಹಾಕುವಲ್ಲಿ ಕೆಲಸ ಮಾಡಿದವರು. ಅಂದಹಾಗೆ ಜೋಯ್ ಅವರು ಇದು ಸಂಬಳಕ್ಕೆ ಮಾಡುತ್ತಿರುವ ಕೆಲಸವಲ್ಲ ಬದಲಾಗಿ ತಮ್ಮ ಆತ್ಮತೃಪ್ತಿಗಾಗಿ ಕೆಲಸ ಮಾಡುತ್ತಿದ್ದಾರೆ.
ಟ್ರಾಫಿಕ್ ಪೊಲೀಸರಿಗೆ ದಣಿವಾದಾಗ ಜ್ಯೂಸ್ ಸೇರಿದಂತೆ ಇತರ ಉಪಚಾರದಲ್ಲೂ ಜೋಯ್ ಅವರು ಎತ್ತಿದ ಕೈ. ಇವರ ಸೇವೆಯನ್ನು ಇಲಾಖೆ ಕೂಡ ಗಮನಿಸಿಕೊಂಡು ಸನ್ಮಾನಿಸಿದೆ.
Author: Team Kudla City
ಮಂಗಳೂರಿಗೆ ಇರುವಷ್ಟು ಹೆಸರು ಬೇರೆ ಎಲ್ಲೂ ಇಲ್ಲ!
ಇಡೀ ದೇಶದ ಲೆಕ್ಕಚಾರ ತೆಗೆದು ನೋಡಿದರೆ ಮಂಗಳೂರಿಗೆ ಇರುವಷ್ಟು ಹೆಸರು ಬೇರೆ ಯಾರಿಗೂ ಇಲ್ಲ.
ಒಂದು ಊರಿಗೆ ಅತೀ ಹೆಚ್ಚು ಹೆಸರು ಇರೋದು ಮಂಗಳೂರಿಗೆ ಮಾತ್ರವಂತೆ. ತುಳು ಭಾಷೆಯಲ್ಲಿ ‘ಕುಡ್ಲ’, ಕನ್ನಡದಲ್ಲಿ ‘ಮಂಗಳೂರು‘, ಇಂಗ್ಲೀಷ್ನಲ್ಲಿ ‘ಮ್ಯಂಗಳೂರು’, ಮಲಯಾಳಂನಲ್ಲಿ ‘ಮಂಗಳಾಪುರಂ’, ಹವ್ಯಕ ಭಾಷೆಯಲ್ಲಿ ‘ಕೊಡಿಯಾಲ’,ಕೊಂಕಣಿ ಭಾಷೆಯಲ್ಲಿ ‘ಕೊಡಿಯಲ್’, ಬ್ಯಾರಿ ಭಾಷೆಯಲ್ಲಿ ‘ಮೈಕಾಲ’, ಸಂಸ್ಕೃತದಲ್ಲಿ ‘ಮಂಜುರನ್’ ಹಾಗೂ ಉರ್ದು ಭಾಷೆಯಲ್ಲಿ ಕುಡಲ್. ಇದರ ಜತೆಗೆ ಜಲಾಲಾಬಾದ್ ಎನ್ನುವ ಹೆಸರಿನಿಂದಲೂ ಕರೆಯುತ್ತಾರೆ ಎನ್ನುವ ಇತಿಹಾಸ ಪುಟಗಳು ವಿವರಣೆ ನೀಡುತ್ತದೆ.
47 ವರ್ಷದಲ್ಲಿ 12,260 ಜೋಡಿಗಳಿಗೆ ಮದುವೆ !
ಇದು ಎಲ್ಲರಿಂದ ಸಾಧ್ಯವಿಲ್ಲದ ಮಾತು. ಆದರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾತ್ರ ಸಾಧ್ಯ. ಕಳೆದ 47 ವರ್ಷದ ಧರ್ಮಸ್ಥಳದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭರ್ತಿ 12,260 ಮಂದಿ ಜೋಡಿಗಳು ಮದುವೆಯಾಗುವ ಮೂಲಕ ಸತಿ ಪತಿಗಳಾಗಿದ್ದಾರೆ.
ಈ ಬಾರಿ 48 ನೇ ವರ್ಷದ ಸಾಮೂಹಿಕ ವಿವಾಹ ನಡೆಯುತ್ತಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಮೇ 1ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮುಹೂರ್ತ ದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, 102 ಜೋಡಿ ಹಸೆಮಣೆ ಏರಲಿದ್ದಾರೆ.
ವಿವಾಹ ಸರಳವಾಗಿ, ವರದಕ್ಷಿಣೆ ಇಲ್ಲದೆ ನಡೆದು ಕುಟುಂಬದಲ್ಲಿ ಸುಖ- ಶಾಂತಿ ಕಾಣಬೇಕು ಎಂಬ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಸಾಮೂಹಿಕ ಉಚಿತ ವಿವಾಹವನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪ್ರಾರಂಭಿಸಿ ದರು. ಸಮಾಜದ ಹಿತಕ್ಕಾಗಿ ಶ್ರೀಕ್ಷೇತ್ರದ ಮೂಲಕ ಹತ್ತು ಹಲವಾರು ಕಾರ್ಯಕ್ರಮಗಳು ಅನುಷ್ಠಾನಗೊಂಡು ಯಶಸ್ಸು ಕಂಡು ರಾಜ್ಯ, ರಾಷ್ಟ್ರದಲ್ಲಿ ಮಾದರಿ ಎನಿಸಿವೆ.
1972 ರ ಮಾ.29ರಂದು ನಡೆದ ಮೊದಲ ವಿವಾಹ ಕಾರ್ಯಕ್ರಮದಲ್ಲಿ 88 ಜೋಡಿ ವಿವಾಹವಾದರು. ಮೇ 1ರಂದು ನಡೆಯುವ 48ನೇ ವರ್ಷದ ಸಾಮೂಹಿಕ ಉಚಿತ ವಿವಾಹ ಕಾರ್ಯಕ್ರಮದಲ್ಲಿ ಸುಮಾರು 102 ಕ್ಕೂ ಹೆಚ್ಚು ಜೋಡಿಗಳು ಹಸೆಮಣೆ ಏರಲಿದ್ದಾರೆ. ಕಳೆದ 47 ವರ್ಷ ಗಳಲ್ಲಿ ಕ್ಷೇತ್ರದಲ್ಲಿ ನಡೆದ ವಿವಾಹಗಳಲ್ಲಿ 12,260 ಜೋಡಿಗಳು ಸತಿಪತಿಗಳಾಗಿ ಸುಖೀ ದಾಂಪತ್ಯ ಜೀವನ ಹೊಂದಿದ್ದಾರೆ.
ಮಂಗಳೂರಿನಲ್ಲಿ ಕಾಣಸಿಗಲಿದೆ ವಾಟರ್ ಪಾಲಿಟಿಕ್ಸ್
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆಯಾಗುವ ತುಂಬೆ ಡ್ಯಾಮ್ನಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇದನ್ನು ಗಮನಿಸಿ ಜಿಲ್ಲಾಡಳಿತ ರೇಶನಿಂಗ್ ಮೂಲಕ ನೀರು ಪೂರೈಕೆ ಆರಂಭಿಸಿತ್ತು.
ಇಲ್ಲಿಯ ಜನಪ್ರತಿನಿಧಿಗಳು ಡ್ಯಾಮ್ ವೀಕ್ಷಿಸಿ, ತುಂಬಾ ನೀರಿದೆ ಎಂದು ಹೇಳಿ, ರೇಶನಿಂಗ್ ನಿಲ್ಲಿಸಲು ಒತ್ತಡ ತಂದರು. ನೀರಿನ ಸೋರಿಕೆ, ಪೋಲು, ದುರ್ಬಳಕೆ ತಡೆದು, ಮಿತ ವ್ಯಯ ಮಾಡಲು ಹೇಳಿ, ಬದಲಿ ವ್ಯವಸ್ಥೆಗೆ ಸಲಹೆ ಮಾಡಬೇಕಾದ ಜನಪ್ರತಿನಿಧಿಗಳು ಪ್ರತಿಪಕ್ಷದವರ ಮಾದರಿಯಲ್ಲಿ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.
ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಲಕ್ಷಣ ಕಾ ಣಿಸುತ್ತಿಲ್ಲ. ನಗರ ಮಾತ್ರವಲ್ಲ, ಗ್ರಾಮೀಣ ಪ್ರದೇಶಗಳಲ್ಲೂ ನೀರಿನ ತೀವ್ರ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತೆ ರೇಶನಿಂಗ್ ಆರಂಭಿಸಿದೆ.
ಮತ್ತೆ ರೇಶನಿಂಗ್: ಮೇ 1ರ ಬೆಳಗ್ಗೆ 6 ಗಂಟೆಯಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗಿನ 48 ತಾಸುಗಳ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 3ರ ಬೆಳಗ್ಗೆ 6 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆ ವರೆಗಿನ 96 ಗಂಟೆ ನೀರು ಸರಬರಾಜು ನಡೆಯಲಿದೆ. ಮೇ 7ರ ಬೆಳಗ್ಗೆ 6ರಿಂದ ಮೇ 9ರ ತನಕ ಬೆಳಗ್ಗೆ 6ರ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 9ರ ಬೆಳಗ್ಗೆ 6ರಿಂದ ಮೇ 13ರ ಬೆಳಗ್ಗೆ 6ರ ತನಕ 96 ಗಂಟೆ ಕಾಲ ನೀರು ಪೂರೈಕೆ ನಡೆಯಲಿದೆ. ಮೇ 13ರ ಬೆಳಗ್ಗೆ 6ರಿಂದ ಮೇ 15ರ ಬೆಳಗ್ಗೆ 6ರ ತನಕ 48 ಗಂಟೆ ಕಾಲ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಮೇ 15ರ ಬೆಳಗ್ಗೆ 6ರಿಂದ ಮೇ 19ರ ಬೆಳಗ್ಗೆ 6 ಗಂಟೆ ತನಕ 96 ಗಂಟೆ ನೀರು ಪೂರೈಕೆ ನಡೆಯಲಿದೆ. ಮೇ 19ರ ಬೆಳಗ್ಗೆ 6ರಿಂದ ಮೇ 21ರ ಬೆಳಗ್ಗೆ 6 ಗಂಟೆ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮಂಗಳೂರು ಹೆಸರಿನ ಹಿಂದಿನ ಆದಿಶಕ್ತಿ ಈ ದೇವತೆ !
ಮಂಗಳೂರು ಎನ್ನುವ ಹೆಸರಿನ ಹಿಂದೆ ಈ ಅಧಿದೇವತೆ ಯ ಶಕ್ತಿಯಿದೆ.
ಹೌದು. ಮಂಗಳಾದೇವಿ ದೇವಸ್ಥಾನ, ಮಂಗಳೂರಿನ ಬೋಳಾರಿನಲ್ಲಿ ನೆಲೆಸಿದ್ದು ಮಂಗಳೂರಿನ ಮಧ್ಯಪ್ರದೇಶದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿದೆ.
ಮಂಗಳಾದೇವಿ ದೇವಸ್ಥಾನದ ಪ್ರಧಾನ ದೇವತೆಯಾದ “ಮಂಗಳಾಂಬೆ”ಯಿಂದಲೆ ಈ ಪ್ರದೇಶಕ್ಕೆ ಮಂಗಳೂರು ಎಂಬ ಹೆಸರು ಬಂದಿದೆ ಎನ್ನುವುದು ಕುಡ್ಲದ ಇತಿಹಾಸ ಪುಟ ಹೇಳುತ್ತಿದೆ.




