Author: Team Kudla City

ಹಣಕಾಸು ಸಚಿವರಿಂದ ಪದಕ ಪಡೆದ ಕುಡ್ಲದ ಮಿಶೆಲ್ !

ಕುಡ್ಲದ ನೀರುಡೆ ಕಲ್ಲಮುಂಡ್ಕೂರಿನ ಮಿಶೆಲ್ ಕ್ವೀನಿ ಡಿಕೋಸ್ತಾ ಅವರ ಕೆಲಸವನ್ನು ನೋಡಿ ಕೇಂದ್ರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಪದಕ ನೀಡಿ ಗೌರವಿಸಿದ್ದಾರೆ.

ಅರೇ ಯಾರಿದು ಮಿಶೆಲ್ ಎನ್ನುತ್ತೀರಾ..? ಮಿಶೆಲ್ ನೀರುಡೆಯ ಕಲ್ಲಮುಂಡ್ಕೂರಿನ ಲಾಜರಸ್ ಡಿ ಕೋಸ್ತಾ ಮತ್ತು ನ್ಯಾನ್ಸಿ ಡಿ ಕೋಸ್ತಾ ದಂಪತಿಗಳ ಎರಡನೇ ಮಗಳು. ಮೂಲತಃ ಕೃಷಿ ಕುಟುಂಬದಿಂದ ಬೆಳೆದು ಬಂದ ಹುಡುಗಿ ಮಿಶೆಲ್ 2015ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ 387ನೇ ರ‍್ಯಾಂಕ್‌ಗಳಿಸಿಕೊಂಡು ನಾಗರಿಕ ಸೇವೆಯಲ್ಲಿ ಐಆರ್‌ಎಸ್ ಮಾಡುತ್ತಿದ್ದಾರೆ.

ಇದರ ಪಾಸಿಂಗ್ ಔಟ್ ಕಾರ‍್ಯಕ್ರಮದಲ್ಲಿ ವಿಶೇಸ ಸಾಧನೆ ಮಾಡಿದ ಮಿಶೆಲ್‌ಗೆ ಖುದ್ದು ಹಣಕಾಸು ಸಚಿವರು ಪದಕ ನೀಡಿ ಗೌರವಿಸಿದ್ದಾರೆ. ಇದು ಕುಡ್ಲದ ಪ್ರತಿಯೊಬ್ಬ ಹೆಣ್ಣು ಮಗಳು ಸಾಧನೆಗೆ ಸಂದ ಗೆಲುವು ಎನ್ನಬೇಕು. ಮಿಶೆಲ್ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ ಮುಗಿಸಿದವರು.

ಆನ್‌ಲೈನ್‌ನ ಸೆಕೆಂಡ್ ಸೇಲ್‌ನಲ್ಲಿ ಹಣ ಮಂಗಮಾಯ

ಆನ್‌ಲೈನ್‌ನಲ್ಲಿ ಸೆಕೆಂಡ್ ಸೇಲ್ ಪೀಠೋಪಕರಣಗಳನ್ನು ಮಾರಾಟ ಮಾಡುವುದಾಗಿ ಕುಡ್ಲದ ವ್ಯಕ್ತಿಯೊಬ್ಬರು ಬ್ರೋಕರ್ ಮುಖೇನ ಜಾಹೀರಾತು ಹಾಕಿದ್ದರು. ಇದಕ್ಕೆ ತಮಗೆ ಬೇಕು ಎಂದು ವ್ಯಕ್ತಿಯೊಬ್ಬರು ಕರೆ ಮಾಡಿ ಸಾಮಗ್ರಿಯನ್ನು ಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದರು.

ಪೀಠೋಪಕರಣ ಖರೀದಿ ಮೊತ್ತವನ್ನು ಆನ್‌ಲೈನ್ ಮೂಲಕ ಕಳುಹಿಸುವುದಾಗಿ ಹೇಳಿ ಲಿಂಕ್ ಕಳುಹಿಸಿದ್ದ. ಅದರಂತೆ ಪಿರ್ಯಾದಿದಾರರು ಲಿಂಕ್ ಒತ್ತಿದ್ದು, ತಕ್ಷಣ ಕ್ರಮವಾಗಿ ಅವರ ಖಾತೆಯಿಂದ 80 ಸಾವಿರಕ್ಕೂ ಅಧಿಕ ಮೊತ್ತವನ್ನು ಪೀಠೋಪಕರಣ ಸೇಲ್ ಮಾಡುವ ವ್ಯಕ್ತಿ ಕಳೆದುಕೊಂಡು ಮೂರು ನಾಮಹಾಕಿದ ಘಟನೆಯೊಂದು ವರದಿಯಾಗಿದೆ.

ಗುರುಪುರ ಸೇತುವೆ ಪ್ರಯಾಣ 7ರಂದು ಬಂದ್

ಮಂಗಳೂರು- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಗುರುಪುರ ಹಳೆ ಸೇತುವೆ ರಸ್ತೆ ತೀರಾ ಹಾಳಾಗಿದ್ದು, ದುರಸ್ತಿ ಪ್ರಯುಕ್ತ ನ.7ರಂದು ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆ ತನಕ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.

ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುವವರು ಕೈಕಂಬ- ಬಜಪೆ- ಮರವೂರು ಸೇತುವೆ ರಸ್ತೆ ಮೂಲಕ ತಲುಪಬೇಕು. ಕೈಕಂಬ- ಪೊಳಲಿ- ಬಿ.ಸಿ.ರೋಡ್ ಮೂಲಕವೂ ಮಂಗಳೂರಿಗೆ ತಲುಪಬಹುದು. ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ತೆರಳುವವರು ಮಂಗಳೂರಿನಿಂದ ಮರವೂರು ಸೇತುವೆ- ಬಜಪೆ- ಕೈಕಂಬ- ಮೂಡುಬಿದಿರೆ ರಸ್ತೆ ಮೂಲಕ ತಲುಪಬೇಕು.

Tags : gurupura ,river ,bridge,repair,Mangalore, Kudlacity, Kudla

ಕುಡ್ಲದ ರಿಕ್ಷಾವನ್ನು ಇಷ್ಟಪಟ್ಟ ಜರ್ಮನಿಗರು !

ಎಲ್ಲಿಯ ಕುಡ್ಲ ಎಲ್ಲಿಯ ಜರ್ಮನಿ ಮಾರಾಯ್ರೆ. ವಿಶ್ವ ಪರ್ಯಟನೆ ಅಂಗವಾಗಿ ಜರ್ಮನಿಯಿಂದ ಮಂಗಳೂರಿಗೆ ಆಗಮಿಸಿದ ವಿದೇಶಿ ಪ್ರವಾಸಿಗರ ಐಷಾರಾಮಿ ಹಡಗು ಐಡಾ ವೀಟಾದಲ್ಲಿ ಬಂದ ಬಹುತೇಕ ಪ್ರವಾಸಿಗರು ಕುಡ್ಲದ ರಿಕ್ಷಾದಲ್ಲಿಯೇ ಊರೂರು ಸುತ್ತುವ ಕೆಲಸಕ್ಕೆ ಮುಂದಾಗಿದ್ದಾರೆ.

ನಗರದ ದರ್ಶನ ಮಾಡಿಸಲು ಇದಕ್ಕಾಗಿ 63 ಆಟೋ ರಿಕ್ಷಾಗಳ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಲೋಟಸ್ ಟೂರಿಸ್ಟ್ ಸಂಸ್ಥೆ ಮೂಲಕ ಆಟೊಗಳನ್ನು ಬಂದರಿನ ಒಳಗೆ ಆಗಮಿಸಲು ಅವಕಾಶ ಕಲ್ಪಿಸಲಾಗಿತ್ತು. ಆಟೊಗಳನ್ನು ಸಾಲಾಗಿ ನಂಬರ್ ಹಾಕಿ ನಿಲ್ಲಿಸಲಾಗಿತ್ತು. ಒಟ್ಟು 1,154 ಪ್ರವಾಸಿಗರಲ್ಲಿ 1೦೦ಕ್ಕೂ ಹೆಚ್ಚು ಪ್ರವಾಸಿಗರು ಆಟೊಗಳನ್ನೇ ಆಯ್ಕೆ ಮಾಡಿಕೊಂಡು, ನಗರದ ಪ್ರವಾಸಿ ತಾಣಗಳ ದರ್ಶನ ಮಾಡಿದರು.

ಉರ್ವಾದ ರೈಸ್ ಮಿಲ್, ಬೈಕಂಪಾಡಿಯ ಗೇರುಬೀಜ ಕಾರ್ಖಾನೆ, ಸೆಂಟ್ರಲ್ ಮಾರುಕಟ್ಟೆ, ಮೀನು ಮಾರುಕಟ್ಟೆ, ಹೋಟೆಲ್ ತಾಜ್ ಗೇಟ್‌ವೇಯಲ್ಲಿ ಊಟ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಹೀಗೆ ಮಂಗಳೂರಿನ ನಾನಾ ಕಡೆಯಲ್ಲಿ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಿಂದ ಕುಡ್ಲದ ರಿಕ್ಷಾ ಡ್ರೈವರ್‌ಗಳಿಗೆ ಈ ಬಾರಿ ಡಾಲರ್ ಕರೆನ್ಸಿಯ ನೋಟುಗಳು ಟಿಪ್ಸ್‌ಗಳಾಗಿ ಸಿಗುವ ಸಾಧ್ಯತೆಯಿದೆ.

ರಸ್ತೆಯ ಹೊಂಡ ಮುಚ್ಚಿದ ಟ್ರಾಫಿಕ್ ಪೊಲೀಸ್ ಪುಟ್ಟರಾಮ

ಕರಾವಳಿಯ ಯಾವ ರಸ್ತೆಯನ್ನು ನೋಡಿದರೂ ಕೂಡ ಅಲ್ಲಿ ಹೊಂಡಗಳೇ ಕಾಣಿಸಿಕೊಳ್ಳುತ್ತಿದೆ. ಸವಾರರಂತೂ ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಸಾಗಬೇಕಾದ ಸ್ಥಿತಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ವಿಶೇಷ ಎಂದರೆ ಈ ರಸ್ತೆಯಲ್ಲಿ ಹೊಂಡಗಳು ಸ್ಮಾರ್ಟ್ ಸಿಟಿ ಕುಡ್ಲದಲ್ಲೂ ಭರ್ಜರಿಯಾಗಿದೆ.

ಮಂಗಳೂರಿನ ಬಂಟ್ಸ್‌ಹಾಸ್ಟೆಲ್ ಸರ್ಕಲ್ ಸಮೀಪ ರಸ್ತೆಯಂಚಿನಲ್ಲಿದ್ದ ಗುಂಡಿಯೊಂದು ದ್ವಿಚಕ್ರ ಸವಾರರಾಗಿ ಕಂಟಕವಾಗಿದ್ದು ಈ ಬಗ್ಗೆ ಮನಪಾ ಅಧಿಕಾರಿಗಳ ಗಮನಕ್ಕೆ ತಂದರೂ ಸುಧಾರಣೆಯಾಗದಿರುವುದರಿಂದ ಬೇಸತ್ತ ಪೂರ್ವ ಸಂಚಾರಿ ಠಾಣೆ (ಕದ್ರಿ) ಯ ಸಿಬ್ಬಂದಿ ಪುಟ್ಟರಾಮ ತಾನೇ ಕಲ್ಲು, ಮಣ್ಣು ಹಾಕಿಕೊಂಡು ಮುಚ್ಚುವ ಮೂಲಕ ವಿಶೇಷವಾದ ಕೆಲಸವನ್ನು ಮಾಡಿ ವಾಹನ ಸವಾರರ ಮನಸ್ಸು ಗೆದ್ದುಬಿಟ್ಟಿದ್ದಾರೆ.