Category: ಹೊಸ ಸುದ್ದಿ

ಬಿಜಿಎಸ್‌ನಲ್ಲಿ ಗಮನ ಸೆಳೆಯುವ ಬೆಳದಿಂಗಳ ಚಿಂತನ ಚಾವಡಿ

ಜನ್ಮಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದುದು ಇಂತಹ ಪುಣ್ಯಭೂಮಿ ಭಾರತದಲ್ಲಿ ಜನ್ಮ ತಾಳಿರುವುದು ನಮ್ಮ ಸುಕೃತದ ಫಲ. ಪೂರ್ವಿಕರು, ಋಷಿಮುನಿ, ಸಂತರು ಹಾಕಿ ಕೊಟ್ಟ ಶ್ರೇಷ್ಠ ಪರಂಪರೆ ನಮ್ಮ ಭರತಖಂಡವನ್ನು ಇತರೆಲ್ಲರಿಗಿಂತ ವಿಶಿಷ್ಟವಾಗಿಸಿ, ವಿಶ್ವಗುರು ಸ್ಥಾನದಲ್ಲಿರುವಂತೆ ಮಾಡಿದೆ. ಇದಕ್ಕೆ ನಮ್ಮ ಸಂಸ್ಕಾರ, ಸಂಸ್ಕೃತಿಯೇ ಮೂಲ ಕಾರಣ ಎಂದು ಶ್ರೀಆದಿಚುಂಚನ ಗಿರಿ ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.

ಅವರು ಶಾಖಾಮಠದಲ್ಲಿ ನಡೆದ ಬೆಳದಿಂಗಳ ಚಿಂತನ ಚಾವಡಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿ, ಜನ್ಮದಿಂದ ಮರಣದವರೆಗೂ ಆಚರಿಸಲ್ಪಡುವ ನಮ್ಮ ಆಚಾರಗಳು ವಿಶ್ವದಲ್ಲೆಲ್ಲೂ ಕಾಣ ಸಿಗದು. ಇಂತಹ ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ ಬೆಳೆಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹೆತ್ತವರು ಗುರುಗಳು, ಅತಿಥಿಗಳನ್ನು ದೇವರೆಂದು ಪೂಜಿಸಿದ ಈ ದೇಶದಲ್ಲಿ ಇಂದು ಆಗುತ್ತಿರುವ ಬದಲಾವಣೆಗಳು ಶುಭ ಸಂಕೇತವಲ್ಲ. ಹೆತ್ತವರನ್ನು ವೃದ್ದಾಶ್ರಮಕ್ಕೆ ಸೇರಿಸುವುದು ಭಾರತೀಯ ಸಂಸ್ಕೃತಿ ಅಲ್ಲ ಎಂಬುದನ್ನು ಯುವ ಪೀಳಿಗೆ ಮನಗಾಣಬೇಕು. ಈ ತಪೋ ಭೂಮಿಯ ಭವ್ಯ ಸಂಸ್ಕೃತಿಯನ್ನು ಉಳಿಸಲು ನಾವೆಲ್ಲರು ಪಣತೊಡಬೇಕು ಎಂದರು.
ವಿದ್ವಾಂಸ ಮುನಿರಾಜ ರೆಂಜಾಳ ಅವರು ಭಾರತೀಯ ಸಾಂಸ್ಕೃತಿಕ ಪರಂಪರೆ ಬಗ್ಗೆ ಉಪನ್ಯಾಸ ನೀಡಿದರು. ಕಾವೂರು ಬಂಟರ ಭಜನಾ ತಂಡದವರು ಭಜನಾ ಕಾರ್ಯಕ್ರಮ ನಡೆಸಿ ಕೊಟ್ಟರು. ಪ್ರಾಧ್ಯಾಪಕ ಸುಬ್ರಹ್ಮಣ್ಯ ಸ್ವಾಗತಿಸಿದರು. ಸಂಸ್ಥೆಯ ಮ್ಯಾನೇಜರ್ ಸುಬ್ಬಕಾರಡ್ಕ ವಂದಿಸಿದರು. ನರಸಿಂಹ ಕುಲಕರ್ಣಿ ನಿರೂಪಿಸಿದರು.

ಮಂಗಳೂರು ವಿವಿ: ಗಡಿನಾಡ ವಿದ್ಯಾರ್ಥಿಗಳಿಗೆ ವಿಶೇಷ ಮೀಸಲಾತಿ

ಹೊರ ರಾಜ್ಯದಲ್ಲಿ1ರಿಂದ 10ರವರೆಗೆ ಪ್ರೌಢ ಶಿಕ್ಷಣ ವನ್ನು ಪಡೆದಿರುವ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಶೇ.೫ಮೀಸಲಾತಿ ನೀಡಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಗಡಿನಾಡು ಮತ್ತು ರಾಜ್ಯದ ಹೊರಗೆ ಕನ್ನಡ ಮಾಧ್ಯಮ ದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೇ 5 ರಷ್ಟು ಸೀಟುಗಳನ್ನು ಕಾಯ್ದಿರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾ ರದ ಸುತ್ತೋಲೆಯ ಪ್ರಕಾರ ಶೈಕ್ಷಣಿಕ ಮಂಡಳಿ ಅನುಮೋದನೆ ನೀಡಲು ನಿರ್ಧರಿ ಸಲು ತೀರ್ಮಾನಿಸಿದೆ ಎಂದು ಕುಲಪತಿ ಪಿ.ಎಸ್. ಯಡ ಪಡಿತ್ತಾಯ ತಿಳಿಸಿದ್ದಾರೆ.

ಕೂಳೂರು ಹಳೇ ಸೇತುವೆ ಸಂಚಾರಕ್ಕಿಲ್ಲ ಸಧ್ಯ ತಡೆ

ಒಂದಲ್ಲ ಎರಡಲ್ಲ ಬರೋಬರಿ 66 ವರ್ಷಕ್ಕಿಂತ ಹಳೆಯ ಕೂಳೂರು ಸೇತುವೆ ಸಂಚಾರಕ್ಕೆ ಸಧ್ಯಕ್ಕೆ ನಿರ್ಬಂಧ ಹೇರುವ ಸಾಧ್ಯತೆ ಕಡಿಮೆ. ಕಾರಣ ದ.ಕ.ಜಿಲ್ಲಾಧಿಕಾರಿ ಅವರು ಮಂಗಳೂರು ಎಸಿ ಅವರ ಸಮಿತಿ ಗೆ ನೀಡಿದ ಅವಧಿ ಮುಗಿದಿದೆ.

ಎನ್ಎಚ್ ಅಧಿಕಾರಿಗಳು ಸರಿಯಾದ ವರದಿ ನೀಡದ ಪರಿಣಾಮ ಈ ಸಂಚಾರ ನಿರ್ಬಂಧ ಕಾರ್ಯ ಮುಂದೆ ಸಾಗೋದು ಗ್ಯಾರಂಟಿ ಯಾಗಿದೆ.

ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಪಿಯು, ಪದವಿಗೆ ಉಜ್ವಲ ಭವಿಷ್ಯ

ಕಾವೂರಿನ ಬಿಜಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಪ್ರವೇಶಾತಿ ನಡೆಯುತ್ತಿದೆ. ವಿಜ್ಞಾನ ವಿಚಾರದಲ್ಲಿ ಪಿಸಿಎಂಬಿ, ಪಿಸಿಎಂಸಿ, ಪಿಸಿಎಂಸಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಇಬಿಎಎಸ್, ಇಬಿಎಸಿ ವಿಷಯಗಳು ವಿದ್ಯಾರ್ಥಿಗಳಿಗೆ ಸಿಗಲಿದೆ. ಕಂಪ್ಯೂಟರ್ ಲ್ಯಾಬ್, ಡಿಜಿಟಲ್ ಲೈಬ್ರೆರಿಯ ಸವಲತ್ತು, ಜಿಮ್, ವಿದ್ಯಾರ್ಥಿಗಳಿಗೆ (ಪುರುಷ) ಹಾಸ್ಟೆಲ್ ವ್ಯವಸ್ಥೆ ಕೂಡಯಿದೆ.
ಅನುಭವಸ್ಥರಾದ ಉಪನ್ಯಾಸಕ ವರ್ಗ, ರೆಮಿಡಿಯಲ್ ತರಗತಿಗಳ ಜತೆಗೆ ವೈಯಕ್ತಿಕವಾಗಿ ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಪೂರಕವಾಗುವಂತಹ ಕೋಚಿಂಗ್ ಕ್ಲಾಸ್, ಜೆಇಇ ಮೈನ್ ಹಾಗೂ ಅಡ್ವಾನ್ಸ್, ನೀಟ್ ಕುರಿತಾದ ತರಗತಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ರಹದಾರಿಯನ್ನು ತೋರಿಸುತ್ತದೆ. ಬಿಜಿಎಸ್‌ನ ಹೆಚ್ಚಿನ ಮಾಹಿತಿಗೆ ಇಲ್ಲಿಗೆ ಬನ್ನಿ
http://www.bgsec.net/

ಎಂಕ್ಲೆಗ್ ಸೆಂಚುರಿ ಬೋಡು?

ಭಾರತ- ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ವೇಳೆ ಮ್ಯಾಂಚೆಸ್ಟರ್ ಸ್ಟೇಡಿಯಂನಲ್ಲಿ ತುಳು ಡೈಲಾಗ್ ಕೇಳಿ ಬಂದಿದೆ. ಪಂದ್ಯ ನೋಡಲು ಬಂದ ಮಂಗ ಳೂರಿನ ಇಬ್ಬರು ಗ್ಯಾಲರಿಯಲ್ಲಿ ಕೂತು ರಾಹುಲ್ ಅವರನ್ನು ಉಲ್ಲೇ ಖೀಸಿ ತುಳುವಿನಲ್ಲೇ ಮಾತನಾಡಿ ಸಂಭ್ರಮಿಸಿದ್ದಾರೆ.

ಮಲೇಶ್ಯದಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಮಂಗಳೂರಿನ ಕದ್ರಿಯ ರೋಹನ್ ಶೆಟ್ಟಿ ಮತ್ತು ಉರ್ವಾದ ಸುಶಾಂತ್ ಅವರು ಕ್ರಿಕೆಟ್ ವೀಕ್ಷಣೆಗೆ ಮ್ಯಾಂಚೆಸ್ಟರ್‌ಗೆ ತೆರಳಿದ್ದರು. ಡೀಪ್ ಸ್ಕೆ ರ್‌ಲೆಗ್ ಸ್ಟಾಂಡ್‌ನಲ್ಲಿ ಕ್ರಿಕೆಟ್ ವೀಕ್ಷಿಸುವಾಗ ಅಲ್ಲೇ ಕೂಗಳತೆ ದೂರದಲ್ಲಿ ರಾಹುಲ್ ಅವರು ಕ್ಷೇತ್ರರಕ್ಷಣೆ ಮಾಡುತ್ತಿದ್ದರು. ರಾಹುಲ್ ಕೂಡ ಮಂಗಳೂರಿನವರಾದ್ದರಿಂದ ಅವರನ್ನು ಉಲ್ಲೇಖೀಸಿ ತುಳು ಭಾಷೆಯಲ್ಲಿ ಮಾತನಾಡಿದ್ದಾರೆ.

ರಾಹುಲ್ ಎಂಚ ಉಲ್ಲರ್ .. ರಾಹುಲ್ ಎಂಕ್ಲೆಗ್ ಸೆಂಚುರಿ ಬೋಡು .. ಎಂಕ್ಲ್ ಕುಡ್ಲಡ್ದ್ ಬೈದ’ (ರಾಹುಲ್ ಹೇಗಿದ್ದೀರಿ, ರಾಹುಲ್ ನಮಗೆ ನಿಮ್ಮ ಶತಕ ನೋಡಬೇಕು .. ನಾವು ಮಂಗಳೂರಿನಿಂದ ಬಂದಿದ್ದೇವೆ) ಎಂದು ರೋಹನ್ ಶೆಟ್ಟಿ ಅವರು ರಾಹುಲ್ ಅವರಿಗೆ ಕೇಳುವಂತೆ ಹೇಳಿದ್ದಾರೆ. ಸುಶಾಂತ್ ಅವರು ವೀಡಿಯೊ ಮಾಡಿದ್ದಾರೆ. ಇವರ ಮಾತು ಕೇಳಿದ ರಾಹುಲ್ ಇವರತ್ತ ಕೈ ಬೀಸಿದ್ದಾರೆ.