ಸ್ವಾಮಿ ದಯಮಾಡಿ ಧರ್ಮಸ್ಥಳಕ್ಕೆ ಸಧ್ಯಕ್ಕೆ ಬರಬೇಡಿ. ಇಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ನಿಮ್ಮ ಪ್ರವಾಸ ಮುಂದಕ್ಕೆ ಹಾಕಿಬಿಡಿ ಎನ್ನುವ ಮೂಲಕ ಧಾರ್ಮಿಕ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಯನ್ನು ಪತ್ರದ ಮೂಲಕ ಬಿಚ್ಚಿಟ್ಟವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಈ ಮೂಲಕ ಕುಡ್ಲ ಮಾತ್ರವಲ್ಲದೆ ಗ್ರಾಮಾಂತರ ಪ್ರದೇಶದಲ್ಲೂ ಸಮಸ್ಯೆ ಯ ಚಿತ್ರಣ ಈ ಪತ್ರದ ಮೂಲಕ ಅನಾವರಣ ಗೊಂಡಿತು.