ನಮ್ಮ ಕುಡ್ಲ ಸಿಟಿ ಬೆಳೆಯುತ್ತಿದೆ. ಅದರಲ್ಲೂ ಈ ಬೆಳವಣಿಗೆಯ ಜತೆಗೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ದಿನನಿತ್ಯ ಏರಿಕೆಯಾಗುತ್ತಿದೆ. ಆಹಾರದಲ್ಲೂ ಪ್ಲಾಸ್ಟಿಕ್ ಲಕೋಟೆ(ಬ್ಯಾಗ್)ಗಳ ಪ್ರಮಾಣ ಏರಿಕೆಯಾಗುತ್ತಿದೆ.
ಮಂಗಳೂರಿನ ಫುಡ್ ಡೆಲಿವರಿ ಸಿಸ್ಟಂ ಕೂಡ ಅಷ್ಟೇ ವೇಗವಾಗಿ ಓಡುತ್ತಿದೆ. ಇಂತಹ ಸಮಯದಲ್ಲಿ ಫುಡ್ ಡೆಲಿವರಿಯಲ್ಲಿ ಕರಾವಳಿಯಲ್ಲಿ ಹೇರಳವಾಗಿ ಸಿಗುವ ಬಾಳೆ ಎಳೆಯನ್ನು ಬಳಸಿಕೊಳ್ಳುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚುವ ಕಾರ್ಯ ಮಾಡಿದ್ದರು.
ಇದಕ್ಕೆ ಸ್ವಿಗ್ಗಿ ಫುಡ್ ಡೆಲಿವರಿ ಕಂಪನಿ ಕೂಡ ಈ ಕುರಿತು ಪಾಸಿಟಿವ್ ಅಭಿಪ್ರಾಯವನ್ನು ನೀಡುವ ಜತೆಗೆ ಮುಂದಿನ ದಿನಗಳಲ್ಲಿ ತಮ್ಮ ಪಾಲುದಾರ ಹೋಟೆಲ್ಗಳ ಜತೆಗೆ ಕಂಪನಿ ಕೂಡ ಈ ಕುರಿತು ಚಿಂತನೆ ನಡೆಸುತ್ತದೆ ಎನ್ನುವ ಅಭಿಪ್ರಾಯ ತಾಳಿದೆ.
ಶಾಸಕರ ಐಡಿಯಾಕ್ಕೆ ಭೇಶ್ ಎಂದ ಸ್ವಿಗ್ಗಿ
June 20, 2019