ಬಿಜೆಪಿ ನಾಯಕಿ ದಿ.ಸುಷ್ಮಾ ಸ್ವರಾಜ್ ಸಾಕಷ್ಟು ಬಾರಿ ಮಂಗಳೂರು ಸೇರಿದಂತೆ ಕರಾವಳಿಯ ಉಡುಪಿಗೂ ಬಂದಿದ್ದಾರೆ. ವಿಶೇಷ ಎಂದರೆ ಪ್ರತಿ ಸಾರಿನೂ ಬರುವಾಗ ಅವರಿಗೆ ಕರಾವಳಿಯ ಅವರ ಅಭಿಮಾನಿಗಳು ಪ್ರೀತಿಯಿಂದ ಮಲ್ಲಿಗೆ ನೀಡಲಾಗುತ್ತಿತ್ತು. ಅವರು ಅಷ್ಟೇ ಪ್ರೀತಿಯಿಂದ ಸ್ವೀಕಾರ ಮಾಡಿ ತಲೆಗೆ ಇಟ್ಟುಬಿಡುತ್ತಿದ್ದರು. ಮಲ್ಲಿಗೆ ಸೂಸುವ ಪರಿಮಳದಿಂದ ಮತ್ತಷ್ಟು ಹುರುಪು ಅವರಲ್ಲಿ ಬಂದು ಬಿಡುತ್ತಿತ್ತು ಎನ್ನುವ ಮಾತನ್ನು ಅವರ ಅಭಿಮಾನಿ ಗಳು ಹೇಳುತ್ತಾರೆ.