ಚಾರ್ಮಾಡಿಯಲ್ಲಿ ಒಂದು ತಿಂಗಳು ಹೋಗಲೇ ಬೇಡಿ ಮಾರಾಯ್ರೆ

ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ಸೆಕ್ಷನ್‌ನಲ್ಲಿ ಅಪಾರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಸಂಚಾರ ಪೂರ್ಣವಾಗಿ ಒಂದು ತಿಂಗಳ ಕಾಲ ಎಲ್ಲ ವಾಹನಗಳ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. ಆ.14 ರಂದು ಮಧ್ಯ ರಾತ್ರಿ 12ಗಂಟೆಯಿಂದ ಸೆಪ್ಟೆಂಬರ್ 14ರ ಮಧ್ಯ ರಾತ್ರಿ 12 ವರೆಗೆ ಸಂಚಾರ ಸ್ಥಗಿತಗೊಂಡಿದೆ.
ಇದರ ಬದಲು ಉಜಿರೆ- ಧರ್ಮಸ್ಥಳ- ಕೊಕ್ಕಡ-ಗುಂಡ್ಯ- ಶಿರಾಡಿ ಮೂಲಕ ಸಂಚಾರ ಮಾಡಬೇಕು. ಮೂಡಿಗೆರೆ ಹ್ಯಾಂಡ್ ಪೋಸ್ಟ್ ಜನ್ನಾಪುರ- ಆನೆಮಹಲ್- ಶಿರಾಡಿ- ಗುಂಡ್ಯ ಮೂಲಕ ಸಂಚರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ.

Share