ಕಾವೂರಿನ ಬಿಜಿಎಸ್ ವಿದ್ಯಾ ಸಂಸ್ಥೆಯ ಪ್ರತಿಯೊಂದು ಭಾರತೀಯ ಹಬ್ಬಗಳನ್ನು ತುಂಬಾ ಸಂಭ್ರಮದಿಂದ ಆಚರಣೆ ಮಾಡುತ್ತಿದೆ. ಅದರಲ್ಲೂ ನಾಗರಪಂಚಮಿ, ರಕ್ತಬಂಧನ ಈಗ ಕೃಷ್ಣ ಜನ್ಮಾಷ್ಟಮಿಯನ್ನು ಕೂಡ ವಿಶೇಷವಾಗಿ ಆಚರಣೆ ಮಾಡಲಾಗಿದೆ.
ಬಿಜಿಎಸ್ ಶಿಕ್ಷಣ ಸಂಸ್ಥೆಯ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಲೀಲೆಗಳ ಪ್ರದರ್ಶನದ ಮೂಲಕ ಸಂಸ್ಥೆಯ ಆವರಣವನ್ನು ನಂದಗೋಕುಲ ಮಾಡಿದ್ದಾರೆ. ಕಾವೂರು ಗಾಂಧಿನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಉಸ್ತುವಾರಿ ಹೊತ್ತಿರುವ ಶ್ರೀಧರ್ಮಪಾಲನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಸಂಸ್ಥೆ ಉತ್ತಮ ಶೈಕ್ಷಣಿಕ ಸಂಸ್ಥೆಯ ಜತೆಯಲ್ಲಿ ವಿದ್ಯಾರ್ಥಿಗಳಲ್ಲಿ ದೇಶಿಯ ಮೌಲ್ಯವನ್ನು ಬಿತ್ತುವ ಕಾರ್ಯವನ್ನು ಮಾಡುತ್ತಿದೆ.
ಬಿಜಿಎಸ್ನಲ್ಲಿ ಕೃಷ್ಣ ಲೀಲೆಗಳ ನಂದ ಗೋಕುಲ
August 21, 2019