ಮಂಗಳೂರಿನಲ್ಲಿ ಗಾಂಧೀಜಿ ದೇವರು, ನಿತ್ಯವೂ ಪೂಜೆ

ಗರಡಿಯ ವಿವಿಧ ದೈವಗಳ ಹಾಗೆಯೆ ಗಾಂಧೀಜಿಯವರ ಪ್ರತಿಮೆಗೆ ಆರತಿ ಬೆಳಗಲಾಗುತ್ತದೆ, ಪೂಜೆ ಮಾಡಲಾಗುತ್ತಿದೆ. ದೈವಸ್ಥಾನಕ್ಕೆ ಬಂದ ಭಕ್ತರೂ ಗಾಂಧೀಜಿಯನ್ನು ದೇವರ ಸ್ಥಾನದಲ್ಲಿಯೇ ಇಟ್ಟು ನಮಿಸುತ್ತಾರೆ.

ಸತ್ಯವೇ ದೇವರು ಎಂದ ರಾಷ್ಟ್ರಪಿತ ಗಾಂಧೀಜಿಗೆ ಮಂಗಳೂರಿನ ದೈವಸ್ಥಾನದಲ್ಲಿ ನಿತ್ಯವೂ ತ್ರಿಕಾಲ ಪೂಜೆ ನಡೆಯುತ್ತಿದೆ. ಮಂಗಳೂರಿನ ಕಂಕನಾಡಿಯಲ್ಲಿರುವ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಗಾಂಧೀಜಿಯವರ ಶ್ವೇತ ವರ್ಣದ ವಿಗ್ರಹವನ್ನು 1948ರಲ್ಲಿಯೇ ಸ್ಥಾಪಿಸಲಾಗಿತ್ತು.

ಅಂದಿನಿಂದ ಇಂದಿನ ವರೆಗೆ ಗರಡಿಯ ವಿವಿಧ ದೈವಗಳ ಹಾಗೆಯೆ ಗಾಂಧೀಜಿಯವರ ಪ್ರತಿಮೆಗೆ ಆರತಿ ಬೆಳಗಲಾಗುತ್ತದೆ, ಪೂಜೆ ಮಾಡಲಾಗುತ್ತಿದೆ. ದೈವಸ್ಥಾನಕ್ಕೆ ಬಂದ ಭಕ್ತರೂ ಗಾಂಧೀಜಿಯನ್ನು ದೇವರ ಸ್ಥಾನದಲ್ಲಿಯೇ ಇಟ್ಟು ನಮಿಸುತ್ತಾರೆ. ಅನೇಕ ಯುವಕ ಯುವತಿಯರೂ ಸಹ ಗಾಂಧೀಜಿಯಿಂದ ಪ್ರೇರಣೆ ಪಡೆಯುವ ಸಲುವಾಗಿಯೇ ಆಗಾಗ ಈ ಮೂರ್ತಿಗೆ ನಮಿಸಿ ಹೋಗುತ್ತಾರೆ.

Share