ನವ ಮಂಗಳೂರಿನ ರೂವಾರಿ ಉಳ್ಳಾಲ ಶ್ರೀನಿವಾಸ್ ಮಲ್ಯರು

ಉಳ್ಳಾಲ ಶ್ರೀನಿವಾಸ್ ಮಲ್ಯ ಆಧುನಿಕ ದಕ್ಷಿಣ ಕನ್ನಡ ಜಿಲ್ಲೆಯ ನಿರ್ಮಾಣದ ರೂವಾರಿ. 18 ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ಮೂರು ಬಾರಿ ಸಂಸದರಾಗಿದ್ದರು. 1951,1957 ಹಾಗೂ 1962 ಸಂಸದರಾಗಿ ಅವರು ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಮಾಡಿದ ಕೆಲಸವಂತೂ ಶ್ಲಾಘನೀಯ.

ಎನ್‍ಐಟಿಕೆ, ನವಮಂಗಳೂರು ಬಂದರು, ಮಂಗಳೂರು ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ 66, ಉಳ್ಳಾಲ ಸೇತುವೆ ಅವರ ಕಾಲದಲ್ಲಿ ಮಾಡಿದ ಕಾರ್ಯಗಳನ್ನು ಇಂದಿನ ದಕ್ಷಿಣ ಕನ್ನಡ ಜಿಲ್ಲೆ ಜನರು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಇಂದು( ನ.21)ರಂದು ಅವರ 117ನೇ ಹುಟ್ಟುಹಬ್ಬ. ಮಂಗಳೂರಿನ ನಂಬರ್ ವನ್ ಸಂಸದ ಉಳ್ಳಾಲ ಶ್ರೀನಿವಾಸ್ ಮಲ್ಯ ಎನ್ನುವುದರಲ್ಲಿ ಯಾವುದೇ ಸಂದೇಹ ಮಂಗಳೂರಿನ ಜನತೆಗೆ ಇಲ್ಲ.

Share