ಧರ್ಮಪಾಲನಾಥ ಸ್ವಾಮೀಜಿ ಅವರ `ಚಿಂತನ ಗಂಗಾ’ ಕೃತಿ ಬಿಡುಗಡೆ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶನಿವಾರ ನಡೆದ ಪದ್ಮಭೂಷಣ ಪುರಸ್ಕøತ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 75ನೇ ಜಯಂತ್ಯುತ್ಸವದ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರ ವಿಜಯ ಕರ್ನಾಟಕದ ಬೋಧಿವೃಕ್ಷದಲ್ಲಿ ಬರೆದ ಅಂಕಣ ಬರಹಗಳನ್ನು ಒಳಗೊಂಡ `ಚಿಂತನ ಗಂಗಾ’ ಕೃತಿಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಸ್ವಾಮೀಜಿಗಳು, ಬೆಂಗಳೂರು ಬೇಲಿಮಠದ ಶ್ರೀ ಶಿವರುದ್ರ ಮಹಾ ಸ್ವಾಮೀಜಿ, ಪತ್ರಕರ್ತ ರವಿ ಹೆಗಡೆ, ಶಾಸಕರಾದ ಪುಟ್ಟರಾಜು, ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Share