ಮಲ್ಲಿಗೆ ತುಳುನಾಡಿನ ಮಣ್ಣಿಂದ ಮಿಂದೆದ್ದ ಸುಗಂಧವತಿ. ಇಲ್ಲಿ ಮಲ್ಲಿಗೆ ಇಲ್ಲದೆ ಯಾವುದೇ ಮಂಗಳ ಕಾರ್ಯ ನಡೆಯುವುದಿಲ್ಲ.
ಭೌಗೋಳಿಕ ಚಿಹ್ನೆಯ ಮಾನ್ಯತೆ ಪಡೆದ ಉಡುಪಿ ಮಲ್ಲಿಗೆ ವಹಿವಾಟಿನಲ್ಲಿ ಮುಂಚೂಣಿಯಲ್ಲಿದ್ದರೆ, ಸಾಂಪ್ರದಾಯಿಕ ಹಿನ್ನೆಲೆ ಹಾಗೂ ಘಮಘಮಿಸುವ ಪರಿಮಳದಿಂದ ಮಂಗಳೂರು ಮಲ್ಲಿಗೆ ಇಂದಿಗೂ ತನ್ನದೇ ಆದ ವಿಶೇಷತೆ ಉಳಿಸಿಕೊಂಡಿದೆ.
ಮಂಗಳೂರು ಮಲ್ಲಿಗೆ ಉಡುಪಿ ಮಲ್ಲಿಗೆಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದು. ಮೊಗ್ಗಿನ ತುದಿ ಮೊನಚಾಗಿರುತ್ತದೆ. ಉಡುಪಿ ಮಲ್ಲಿಗೆ ಮೊಗ್ಗು ತುದಿ ಸ್ವಲ್ಪ ಮೊಂಡು.
ಮಧುಮಗಳ ಸಿಂಗಾರಕ್ಕೆ ಎರಡು ಚೆಂಡಾದರೂ ಮಂಗಳೂರು ಮಲ್ಲಿಗೆ ಬೇಕು ಎನ್ನುವ ನಂಬಿಕೆಯನ್ನು ಈ ಭಾಗದ ಹೆಚ್ಚಿನ ಜನರು ಬೆಳೆಸಿಕೊಂಡಿದ್ದಾರೆ. ಹಿಂದುಗಳ ಎಲ್ಲ ಮಂಗಳ ಕಾರ್ಯಕ್ರಮಗಳಿಗೆ ಈ ಹೂವು ಬೇಕೇಬೇಕು.
ಬ್ರಾಹ್ಮಣರು, ಬಂಟರು, ಜಿಎಸ್ಬಿ ಸಮುದಾಯದವರು ಹೆಚ್ಚಿನ ಪ್ರಮಾಣದಲ್ಲಿ ಉಪಯೋಗಿಸುತ್ತಾರೆ.ಉಡುಪಿ ಮಲ್ಲಿಗೆ, ಶಂಕರಪುರ ಮಲ್ಲಿಗೆ, ಭಟ್ಕಳ ಮಲ್ಲಿಗೆ, ಮಂಗಳೂರು ಮಲ್ಲಿಗೆ ಹೀಗೆ ವಿವಿಧ ಹೆಸರುಗಳ ಮಲ್ಲಿಗೆ ಕರಾವಳಿ ಮಾರುಕಟ್ಟೆಯಲ್ಲಿ ದೊರೆಯುತ್ತದೆ.
ಮಂಗಳೂರು ಮಲ್ಲಿಗೆಗೆ ಮನಸೋಲದವರಿಲ್ಲ
April 26, 2019