Tagged: Kudla

ಮಂಗಳೂರಿನಲ್ಲಿ ಗಾಂಧೀಜಿ ದೇವರು, ನಿತ್ಯವೂ ಪೂಜೆ

ಗರಡಿಯ ವಿವಿಧ ದೈವಗಳ ಹಾಗೆಯೆ ಗಾಂಧೀಜಿಯವರ ಪ್ರತಿಮೆಗೆ ಆರತಿ ಬೆಳಗಲಾಗುತ್ತದೆ, ಪೂಜೆ ಮಾಡಲಾಗುತ್ತಿದೆ. ದೈವಸ್ಥಾನಕ್ಕೆ ಬಂದ ಭಕ್ತರೂ ಗಾಂಧೀಜಿಯನ್ನು ದೇವರ ಸ್ಥಾನದಲ್ಲಿಯೇ ಇಟ್ಟು ನಮಿಸುತ್ತಾರೆ.

ಸತ್ಯವೇ ದೇವರು ಎಂದ ರಾಷ್ಟ್ರಪಿತ ಗಾಂಧೀಜಿಗೆ ಮಂಗಳೂರಿನ ದೈವಸ್ಥಾನದಲ್ಲಿ ನಿತ್ಯವೂ ತ್ರಿಕಾಲ ಪೂಜೆ ನಡೆಯುತ್ತಿದೆ. ಮಂಗಳೂರಿನ ಕಂಕನಾಡಿಯಲ್ಲಿರುವ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಗಾಂಧೀಜಿಯವರ ಶ್ವೇತ ವರ್ಣದ ವಿಗ್ರಹವನ್ನು 1948ರಲ್ಲಿಯೇ ಸ್ಥಾಪಿಸಲಾಗಿತ್ತು.

ಅಂದಿನಿಂದ ಇಂದಿನ ವರೆಗೆ ಗರಡಿಯ ವಿವಿಧ ದೈವಗಳ ಹಾಗೆಯೆ ಗಾಂಧೀಜಿಯವರ ಪ್ರತಿಮೆಗೆ ಆರತಿ ಬೆಳಗಲಾಗುತ್ತದೆ, ಪೂಜೆ ಮಾಡಲಾಗುತ್ತಿದೆ. ದೈವಸ್ಥಾನಕ್ಕೆ ಬಂದ ಭಕ್ತರೂ ಗಾಂಧೀಜಿಯನ್ನು ದೇವರ ಸ್ಥಾನದಲ್ಲಿಯೇ ಇಟ್ಟು ನಮಿಸುತ್ತಾರೆ. ಅನೇಕ ಯುವಕ ಯುವತಿಯರೂ ಸಹ ಗಾಂಧೀಜಿಯಿಂದ ಪ್ರೇರಣೆ ಪಡೆಯುವ ಸಲುವಾಗಿಯೇ ಆಗಾಗ ಈ ಮೂರ್ತಿಗೆ ನಮಿಸಿ ಹೋಗುತ್ತಾರೆ.

‘ಪಿಲಿ ಚಡ್ಡಿ’ಗೆ ವಿಶ್ವನಾಥರ ಹೊಲಿಗೆ ಶೈನಿಂಗ್ !

ಹುಲಿವೇಷ ಎಂದಾಕ್ಷಣ ಪುಟ್ಟದಾದ ಚಡ್ಡಿ ಜತೆಗೆ ಮೈ ತುಂಬಾ ಹುಲಿ ಬಣ್ಣ ತಲೆಗೊಂದು ಹುಲಿಯ ಟೋಪಿ ಎಲ್ಲವೂ ಇದ್ದರೆ ಮಾತ್ರ ಹುಲಿವೇಷಕ್ಕೊಂದು ಖದರ್. ಅದರಲ್ಲೂ ಮುಖ್ಯವಾಗಿ ಹುಲಿ ವೇಷಧಾರಿಗಳು ಹಾಕುವ ಚಡ್ಡಿ ನಿಜಕ್ಕೂ ವಿಶೇಷ. ಕಾರಣ ಸರಿಯಾದ ಆಳತೆಯ ಚಡ್ಡಿ ಇಲ್ಲದೇ ಹೋದರೆ ಹುಲಿವೇಷಧಾರಿ ಪಾತ್ರದೊಳಗೆ ಇಣುಕಿ ಕುಣಿಯಲಾರ ಹುಲಿವೇಷದ ಘನತೆ ಹೆಚ್ಚಿಸಲಾರ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ.

ಅಂದಹಾಗೆ ಕರಾವಳಿಯಲ್ಲಿ ಅದರಲ್ಲೂ ಮುಖ್ಯವಾಗಿ ಮಂಗಳೂರಿನಲ್ಲಿ ‘ಪಿಲಿತ ಚಡ್ಡಿ’ ಹೊಲಿಯುವ ಮಂದಿ ತೀರಾ ಕಡಿಮೆ. ಇದ್ದರೂ ಕೂಡ ಎರಡು ಮೂರು ಮಂದಿ ಮಾತ್ರ ಅದರಲ್ಲಿ ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ಳುವವರು ವಿಶ್ವನಾಥ ಪೂಜಾರಿ. ಕಳೆದ 20 ವರ್ಷಗಳಲ್ಲಿ ಹುಲಿವೇಷಧಾರಿಗಳಿಗೆ ಅತೀ ಹೆಚ್ಚು ಪ್ರಮಾಣದಲ್ಲಿ ಪಿಲಿತ ಚಡ್ಡಿ ಹೊಲಿದವರು ಮಂಗಳೂರಿನ ಭವಂತಿ ಸ್ಟ್ರೀಟ್‌ನಲ್ಲಿರುವ ವಿಶ್ವನಾಥ ಪೂಜಾರಿ ಅವರು ಎನ್ನುವುದು ರೆಕಾರ್ಡ್‌ನಲ್ಲಿ ದಾಖಲಾಗಿರುವ ವಿಷ್ಯಾ.

ವಿಶ್ವನಾಥ ಪೂಜಾರಿ ಅವರು ತಯಾರಿಸುವ ಪಿಲಿ ಚಡ್ಡಿಯಲ್ಲಿ ಎರಡರಿಂದ ಮೂರು ವಿಧಗಳಿವೆ. ಮುಖ್ಯವಾಗಿ ಪಟ್ಟೆ, ಚಿಟ್ಟೆ, ಗ್ರೀನ್ ಬಣ್ಣದ ಚಡ್ಡಿ ಜತೆಗೆ ಕಪ್ಪು ಬಣ್ಣದ ಚಡ್ಡಿಗಳು ಸೇರಿದಂತೆ ಮತ್ತಷ್ಟೂ ಬಣ್ಣಗಳಲ್ಲಿ ಹುಲಿಗಳಿಗೆ ಚಡ್ಡಿ ಹೊಲಿದು ಕೊಡುತ್ತಾರೆ. ಮುಖ್ಯವಾಗಿ ಮುಂಬಯಿಯಿಂದ ಬರುವ ವೆಲ್‌ವೆಟ್ ಬಟ್ಟೆ ಹಾಗೂ ತಮಿಳುನಾಡಿನಿಂದ ಬರುವ ಕೋರಾ ಬಟ್ಟೆಗಳನ್ನು ಬಳಸಿಕೊಂಡು ಪಿಲಿ ಚಡ್ಡಿಗಳನ್ನು ಮಾಡಲಾಗುತ್ತದೆ.

ಆರಂಭದಲ್ಲಿ ಕೋರಾ ಬಟ್ಟೆಯ ಮೇಲೆ ವೆಲ್‌ಬಟ್ಟೆಯನ್ನು ಹಾಕಲಾಗುತ್ತದೆ. 300 ರೂ.ಗಳಲ್ಲಿ ಒಂದು ಪಿಲಿ ಚಡ್ಡಿ ಸಿದ್ಧವಾಗುತ್ತದೆ. ಹೆಚ್ಚಾಗಿ ಬಟ್ಟೆಯನ್ನು ವೇಷಧಾರಿಗಳು ತಂದರೆ ಅದನ್ನು ಆಳತೆಗೆ ತಕ್ಕಂತೆ ಕಟ್ ಮಾಡಿ ಚಡ್ಡಿಯನ್ನು ಸಿದ್ಧ ಮಾಡಲಾಗುತ್ತದೆ. ವಿಶ್ವನಾಥರು ಹೇಳುವಂತೆ ಈ ಹಿಂದೆ ಹುಲಿವೇಷಧಾರಿಗಳು ಕಡಿಮೆ ಪ್ರಮಾಣದಲ್ಲಿದ್ದರು. ಈಗ ವರ್ಷದಿಂದ ವರ್ಷಕ್ಕೆ ಏರುತ್ತಿದ್ದಾರೆ.

ಹುಲಿವೇಷಧಾರಿಗಳಿಗೆ ಚಡ್ಡಿ ಹೊಲಿದು ಕೊಡುವ ಟೈಲರ್‌ಗಳು ಸಿಗುತ್ತಿಲ್ಲ. ಮಂಗಳೂರಿನಲ್ಲಿ ಒಂದೆರಡು ಮಂದಿ ಇದ್ದಾರೆ. ನಾನು ಈಗ ನಾಲ್ಕೈದು ಮಂದಿಗೆ ಆಳತೆ ಕಟ್ ಮಾಡಿ ನೀಡುವ ಮೂಲಕ ಅವರಿಗೆ ತರಬೇತಿ ನೀಡುತ್ತಿದ್ದೇನೆ. ನಾನು ಈ ಕೆಲಸ ಬಿಡಬೇಕು ಎಂದರೂ ಕೂಡ ಹುಲಿವೇಷಧಾರಿಗಳು ನನ್ನನ್ನು ಬಿಡುತ್ತಿಲ್ಲ. ತುಂಬಾನೇ ಸೂಕ್ಷ್ಮ ಹಾಗೂ ತಾಳ್ಮೆಯ ಕೆಲಸವಿದು ಯಾರು ಕೂಡ ಇಂತಹ ಕೆಲಸಕ್ಕೆ ಮುಂದಾಗುತ್ತಿಲ್ಲ ಎನ್ನುತ್ತಾರೆ ಅವರು. ಒಟ್ಟಾರೆ ಪಿಲಿವೇಷಕ್ಕೆ ಚಡ್ಡಿಯ ಮೂಲಕ ವಿಶ್ವನಾಥ ಪೂಜಾರಿ ಅವರು ಹೊಸ ಮೆರಗು ನೀಡುವ ಕೆಲಸವಂತೂ ಮೆಚ್ಚುಗೆ ಪಡೆಯುತ್ತದೆ.

ನವದೇವತೆ- 4 ಕೂಷ್ಮಾಂಡಾ

ಒಂದು ಸಮಯದಲ್ಲಿ ದುರ್ಗಾಮಾತೆ ಸೂರ್ಯನ ಒಳಗೆ ವಾಸಿಸಲು ಆರಂಭಿಸುತ್ತಾಳೆ. ಆಗ ಸೂರ್ಯನಿಂದ ವಿಶ್ವಕ್ಕೆ ಶಕ್ತಿ ಬಿಡುಗಡೆಯಾಗುತ್ತದೆ. ಸೊರ್ಯನೊಳಗೆ ನೆಲೆಸುವಷ್ಟು ಪ್ರಖರವಾದ ದೇವತೆಯಾಕೆ. ಎಂಟು ಕೈಗಳಿರುವ, ಸಿಂಹದ ಮೇಲೆ ಸಂಚರಿಸುವ ಈಕೆ ತನ್ನ ಭಕ್ತರಿಗೆ ಸಿದ್ಧಿ ಹಾಗೂ ಸಂಪತ್ತನ್ನು ಕರುಣಿಸುತ್ತಾಳೆಂಬ ನಂಬಿಕೆಯಿದೆ. ಕೂಷ್ಮಾಂಡಾ ದೇವಿಯ ಪ್ರಸಿದ್ಧ ದೇವಸ್ಥಾನ ಉತ್ತರ ಪ್ರದೇಶದ ಕಾನ್ಪುರ ನಗರದ ಜಿಲ್ಲೆಯ ಘಟಾಂಪುರದಲ್ಲಿದೆ.

ನವದೇವತೆ 1- ಶೈಲಪುತ್ರಿ

ಶೈಲಪುತ್ರಿ ಎಂದರೆ ಪರ್ವತನ ಪುತ್ರಿ ಪಾರ್ವತಿ. ಪರ್ವತರಾಜನ ಮಗಳಾದ ಈಕೆಗೆ ಸತಿ,ಭವಾನಿ, ಹೇಮಾವತಿ ಎಂದು ಹೆಸರಿದೆ. ಇವರು ಪ್ರಕೃತಿಯ ಮಗಳು. ಎರಡು ಹಸ್ತಗಳನ್ನು ಹೊಂದಿರುವ ಈಕೆಗೆ ಒಂದು ಕೈಲಿ ತ್ರಿಶೂಲವನ್ನು, ಇನ್ನೊಂದು ಕೈಯಲ್ಲಿ ಕಮಲವನ್ನು ಹಿಡಿದುಕೊಂಡಿದ್ದಾರೆ. ನಂದಿ ಆಕೆಯ ವಾಹನ.
ಹಣೆಯಲ್ಲಿ ಚಂದ್ರನಿದ್ದಾನೆ. ಶೈಲಪುತ್ರಿಯ ಪ್ರಸಿದ್ಧ ದೇವಸ್ಥಾನ ವಾರಣಾಸಿಯ ಮರ್ಹಿಯಾ ಘಾಟ್‌ನಲ್ಲಿರುವ ಮಾ ಶೈಲಪುತ್ರಿ ದೇವಸ್ಥಾನ ಹಾಗೂ ಮುಂಬಯಿಯ ವಾಶಿಯಲ್ಲಿರುವ ಹೆಡ್ಡಾವೆ ಮಹಾಲಕ್ಷ್ಮಿ ದೇವಸ್ಥಾನ.
ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.

ರಸ್ತೆ ಸರಿಪಡಿಸಲು ಮೂನ್‌ವಾಕ್ ಮಾಡಿದಳು ಕುಡ್ಲದ ಹುಡುಗಿ

ಮಂಗಳೂರು: ಬೆಂಗಳೂರಿನಲ್ಲಿ ಬಾದಲ್ ನಂಜುಂಡಸ್ವಾಮಿ ಎಂಬ ಕಲಾವಿದ ಗಗನ ಯಾತ್ರಿಯಂತೆ ವೇಷಧರಿಸಿ ಹೊಂಡದಿಂದ ಕೂಡಿದ ರಸ್ತೆಯಲ್ಲಿ ಮೂನ್ ವಾಕ್ ಮಾಡಿದಂತೆ ಮಂಗಳೂರಿನಲ್ಲೂ 6 ತರಗತಿ ವಿದ್ಯಾರ್ಥಿನಿಯೊಬ್ಬಳು ಮೂನ್‌ವಾಕ್ ಮಾಡಿ ಪಾಲಿಕೆ ಗಮನ ಸೆಳೆಯಲು ಪ್ರಯತ್ನಿಸಿದ್ದಾಳೆ.

ನಗರದಲ್ಲಿ ಪ್ರಸಿದ್ಧಿ ಪಡೆದ ಎಂಸಿಸಿ ಸಿವಿಕ್ ಗ್ರೂಪ್ ಮಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಹಲವು ಬಾರಿ ಪಾಲಿಕೆಗೆ ಮನವಿ ಸಲ್ಲಿಸಿತ್ತು. ಆದರೆ, ಪ್ರಯೋಜನವಾಗದ ಹಿನ್ನೆಲೆಯಲ್ಲಿ ಗ್ರೂಪ್‌ನ ಪ್ರಮುಖರಾದ ಅರ್ಜುನ್ ಮಸ್ಕರೇನ್ಹಸ್ ಹಾಗೂ ಅಜೊಯ್ ಡಿಸಿಲ್ವ ಅವರು ಮೂನ್‌ವಾಕ್ ಪ್ರತಿಭಟನೆಗೆ ನಿರ್ಧರಿಸಿದ್ದರು.
ಅದರಂದತೆ ಸೆ. 20 ರಂದು ರಂದು ರಾತ್ರಿ 10 ಗಂಟೆ ವೇಳೆಗೆ 6 ನೇ ತರಗತಿ ವಿದ್ಯಾರ್ಥಿನಿ ಆಡ್ಲಿನ್ ಡಿಸಿಲ್ವ ಅವರು ಬಾಹ್ಯಾಕಾಶದಲ್ಲಿ ನಡೆಯುವಾಗ ಧರಿಸುವ ಬಟ್ಟೆ ಹಾಗೂ ಇತರ ಪರಿಕರಗಳನ್ನು ಧರಿಸಿ, ಮಂಗಳೂರು ಸೆಂಟ್ರಲ್ ಮಾರ್ಕೆಟ್ ಮುಂದಿನ ಹೊಂಡ ಗುಂಡಿಯಿಂದ ಕೂಡಿದ ರಸ್ತೆಯಲ್ಲಿ ಚಂದ್ರನ ಮೇಲೆ ನಡೆದಂತೆ ನಡೆದು ಅದರನ್ನು ವಿಡಿಯೋ ಚಿತ್ರೀಕರಣ ನಡೆಸಿದ್ದರು. ಬಳಿಕ 33 ಸೆಕೆಂಡ್‌ನ ವಿಡಿಯೋವನ್ನು ವಾಟ್ಸಾಪ್-ಫೇಸ್‌ಬುಕ್‌ನಲ್ಲಿ ವೈರಲ್ ಮಾಡಿ ಪಾಲಿಕೆಯ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.