ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯೋದು ಹಳೇ ಕಾಲದ ಪದ್ಧತಿ. ಆಯುರ್ವೇದದಲ್ಲೂ ಇದರ ಉಲ್ಲೇಖವಿದೆ. ಈ ಹಳೆ ಕಾಲದ ಪದ್ಧತಿಯಿಂದಲೇ ಬೆರಗಾಗುವಂಥ ಆರೋಗ್ಯಕರ ಪರಿಣಾಮಗಳಿವೆ.
ತಾಮ್ರದ ಪಾತ್ರೆಯಲ್ಲಿ ನೀರನ್ನು ಹಾಕಿ 8 ಗಂಟೆಗಳ ಬಳಿಕ ಕುಡಿಯಬೇಕು. ಇದರಿಂದ ವಾತ, ಕಫ, ಪಿತ್ತ ನಿವಾರಣೆಯಾಗುತ್ತದೆ. ಸೋಂಕು ನಿವಾರಕವಾಗಿ ಕೆಲಸ ಮಾಡುತ್ತದೆ. ಅತಿಸಾರ, ಭೇದಿ, ಕಾಮಾಲೆ ವಿರುದ್ಧವೂ ಹೋರಾಡುತ್ತದೆ.ತಾಮ್ರ ಜೀರ್ಣಕ್ರಿಯೆಗೆ ಸಹಕಾರಿ. ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
ತಾಮ್ರ ಕ್ಯಾನ್ಸರ್ ಹಾಗೂ ಅಧಿಕ ರಕ್ತದೊತ್ತಡ ತಡೆಗೂ ಉತ್ತಮ.ತಾಮ್ರ ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ. ಇದರಿಂದ ವಯಸ್ಸಾದಂತೆ ಕಾಣುವುದನ್ನು ತಡೆಯಬಹುದು.ತಾಮ್ರದ ಪಾತ್ರೆಯಲ್ಲಿನ ನೀರನ್ನು ದಿನವೂ ಕುಡಿದಲ್ಲಿ ಇದು ಥೈರಾಯ್ಡ್ ಗ್ರಂಥಿಯನ್ನು ನಿಯಂತ್ರಿಸುತ್ತದೆ.
ತಾಮ್ರ ರಕ್ತಹೀನತೆಯನ್ನೂ ತಡೆಯುತ್ತದೆ.ದೇಹದಲ್ಲಿನ ಕೊಬ್ಬನ್ನು ಕರಗಿಸಲೂ ತಾಮ್ರ ಸಹಕಾರಿ. ಹೀಗಾಗಿ ತಾಮ್ರ ಉಪಯೋಗಿಸುವಿಕೆಯಿಂದ ತೂಕವೂ ಇಳಿಯುತ್ತದೆ. ತಾಮ್ರದಲ್ಲಿ ನಂಜುನಿರೋಧಕ ಗುಣಗಳಿದ್ದು ಇದು ಗಾಯಗಳನ್ನು ಗುಣಪಡಿಸುವಲ್ಲಿ ಸಹಕಾರಿ.
Tagged: Kudla
ಶಂಕರಪುರ ಮಲ್ಲಿಗೆ ರೇಟ್ ಭರ್ಜರಿ !
ಸುಗಂಧಯುಕ್ತ ಶ್ವೇತಪುಷ್ಪ ಶಂಕರಪುರ ಮಲ್ಲಿಗೆಗೆ ಈಗ ಚಿನ್ನದ ಬೆಲೆ ಬಂದಿದೆ. ಕಳೆದ 6 ದಿನಗಳಲ್ಲಿ 4 ಬಾರಿ ಕಟ್ಟೆಯ ಗರಿಷ್ಠ ಬೆಲೆ 1250 ರೂ. ತಲುಪಿದೆ.ವಾಡಿಕೆಗಿಂತ ಅತಿಯಾಗಿ ಸುರಿದ ನಿರಂತರ ಮಳೆಯಿಂದಾಗಿಮಲ್ಲಿಗೆ ಇಳುವರಿಯಲ್ಲಾದ ಕೊರತೆಯಿಂದ ಬೇಡಿಕೆಯಿದ್ದಷ್ಟುಹೂ ಸಿಗದ ಕಾರಣಮಾರುಕಟ್ಟೆಯಲ್ಲಿ ದರ ಏರುತ್ತಿದೆ.
ಆದರೆ ಮಾರುಕಟ್ಟೆಯಲ್ಲಿ ಹೂವಿಗೆ ಎಷ್ಟೇ ಬೇಡಿಕೆಹೆಚ್ಚಾದರೂ ಬೆಳೆಗಾರರಿಗೆ ಮಾತ್ರ 1250 ರೂ.ಗಿಂತ ಹೆಚ್ಚುಬೆಲೆ ಸಿಗುವುದಿಲ್ಲ. ಪೂರೈಕೆಗಿಂತ ಬೇಡಿಕೆ ಹೆಚ್ಚಾಗಿ ದರಏರಿಕೆಯಾದಾಗ ಇದರ ಲಾಭ ಬೆಳೆಗಾರರಿಗಿಂತ ಹೆಚ್ಚಾಗಿವ್ಯಾಪಾರಿಗಳಿಗೆ ಹೋಗುತ್ತದೆ.ಕಳೆದ ಒಂದು ತಿಂಗಳಲ್ಲಿ ಕಟ್ಟೆಯಲ್ಲಿ 12 ಬಾರಿ ಮಲ್ಲಿಗೆಬೆಲೆ ನಾಲ್ಕಂಕಿ ತಲುಪಿದ್ದು 6 ಬಾರಿ ಬೆಳೆಗಾರರಿಗೆ ಗರಿಷ್ಠ ದರ 1250 ರೂ. ಸಿಕ್ಕಿದೆ. ಈ ಅವಧಿಯಲ್ಲಿ ಕನಿಷ್ಠ ದರ 280 ರೂ. ಆಗಿತ್ತು. ಕಳೆದ 30 ದಿನಗಳಲ್ಲಿ ಬೆಳೆಗಾರರಿಗೆ ಸರಾಸರಿಅಟ್ಟೆಗೆ 818ರೂ. ಬೆಲೆ ಸಿಕ್ಕಿದೆ.
ಚಂದ್ರನ ಅಂಗಳದ ಸಾಹಸದಲ್ಲಿ ಕಾರ್ಲದ ವಿಜ್ಞಾನಿ
ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಡರ್ ನ ಸಾಹಸದಲ್ಲಿ ಇಸ್ರೋದ ವಿಜ್ಞಾನಿಗಳ ಸಾಲಿನಲ್ಲಿ ಕಾರ್ಲದ ಮೂಲದ ವಿಜ್ಞಾನಿ ವೈ.ದೇವದಾಸ್ ಶೆಣೈ ಕೂಡ ಒಬ್ಬರು. ಅವರು ಸರಕಾರಿ ಶಾಲೆಯಲ್ಲಿ ಓದಿದವರು. ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿಕೊಂಡು ಈಗ ಇಸ್ರೋದ ವಿಜ್ಞಾನಿಗಳ ಸಾಲಿನಲ್ಲಿ ನಿಂತಿರೋದು ಹೆಮ್ಮೆಯ ವಿಚಾರ.
ಕುಡ್ಲದ ಫಸ್ಟ್ ಜೈವಿಕ ಇಂಧನದ ಸಿಟಿ ಬಸ್ !
ಕುಡ್ಲದ ಫಸ್ಟ್ ಜೈವಿಕ ಇಂಧನದ ಸಿಟಿ ಬಸ್ ! ಬೆಂಗಳೂರಿನ ಬಿಎಂಟಿಸಿ ಬಸ್ಗಳಲ್ಲಿ ಈಗಾಗಲೇ ಜೈವಿಕ ಇಂಧನದ ಬಸ್ಗಳು ಓಡಾಡುತ್ತಿದೆ. ಆದರೆ ಮೊದಲ ಬಾರಿಗೆ ಮಂಗಳೂರಿನ ಸಿಟಿ ಬಸ್ನಲ್ಲಿ ಜೈವಿಕ ಇಂಧನದ ಬಳಕೆಯ ಮೂಲಕ ಮಾಲಿನ್ಯತೆ, ಇಂಧನ ಉಳಿಕೆ ಹಾಗೂ ಹಣದ ಉಳಿತಾಯಕ್ಕೂ ಇದು ಸಹಕಾರಿಯಾಗಲಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್- ಮಂಗಳಾದೇವಿ ಕಡೆಗೆ ಓಡುವ ಸಿಟಿ ಬಸ್ನಲ್ಲಿ ಶೇ.೮೦ ಡಿಸೇಲ್ ಜತೆಗೆ ಶೇ.೨೦ ಜೈವಿಕ ಈಂಧನ ಬಳಕೆ ಮಾಡಲಾಗುತ್ತಿದೆ. ಮುಂದೆ ಇದರ ಪ್ರಮಾಣ ಜಾಸ್ತಿಯಾಗಲಿದೆ ಎನ್ನುವುದು ಮಂಗಳೂರು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಹೇಳುತ್ತಾರೆ. ಜೈವಿಕ ಇಂಧನಗಳೆಂದರೆ ಜೈವಿಕ ಎಥೆನಾಲ ಹಾಗೂ ಬಯೋ ಡೀಸೆಲ. ಎಥೆನಾಲ್ನ್ನು ಪೆಟ್ರೋಲ್ ನೊಂದಿಗೆ ಬೆರೆಸಿದರೆ, ಬಯೋ ಡೀಸೆಲ್ನ್ನು ಡೀಸೆಲ್ನೊಂದಿಗೆ ಮಿಶ್ರಣ ಮಾಡಲಾಗುತ್ತದೆ. ಎಥೆನಾಲ್ ವಾಹನ ಇಂಧನಕ್ಕೆ ಪೂರಕವಾಗಿ ಬಳಸಬಹುದಾದ ಇಂಧನವಾದರೆ, ಬಯೋ ಡೀಸೆಲ ಪೆಟ್ರೋಲಿಯಂಗೆ ಪರ್ಯಾಯವಾಗಿ ಬಳಸಬಹುದಾದ ಇಂಧನ. ಬಯೋ ಎಥೆನಾಲ ಯುಎಸ್ಎ ಮತ್ತು ಬ್ರೆಜಿಲ್ನಲ್ಲಿ ಹೆಚ್ಚು ಬಳಕೆಯಾಗುತ್ತದೆ. ಸಕ್ಕರೆ ಅಂಶವಿರುವ ಸಸ್ಯೋತ್ಪನ್ನ ಕಬ್ಬು, ಕಬ್ಬಿನ ತ್ಯಾಜ್ಯವಾದ ಕಾಕಂಬಿ, ಜೋಳ, ಬೀಟ್ರೂಟ್, ಮೆಕ್ಕೆ ಜೋಳ, ತಾಳೆ ಮೊದಲಾದವುಗಳಿಂದ ಎಥೆನಾಲ್ ಉತ್ಪಾದನೆ ಮಾಡಬಹುದಾಗಿದೆ. ನಗರದ ಸಿಟಿ ಬಸ್ಗಳಿಗೆ ಉಪಯೋಗಿಸುವ ಬಯೋ ಡೀಸೆಲ್ ಹೋಟೆಲ್ ಗಳಲ್ಲಿ ಬಳಕೆ ಮಾಡಿದ ಅಡುಗೆ ಅನಿಲದಿಂದ ತಯಾರಿಸಲಾಗುತ್ತಿದೆ. ನಿಟ್ಟೆಯ ಎನ್ಎಂಎಎಂಐಟಿ ಸಂಸ್ಥೆಯು ಬಿಆರ್ಐಡಿಸಿ ವಿಭಾಗದಲ್ಲಿ ಬಯೋ ಡೀಸೆಲ್ ತಯಾರಿಸುತ್ತಿದೆ. ಈ ಯುನಿಟ್ನಲ್ಲಿ ತಿಂಗಳಿಗೆ 600 ರಿಂದ 700 ಲೀ. ಬಯೋ ಡೀಸೆಲ್ ತಯಾರಿಸಲಾಗುತ್ತಿದೆ.
ಪೋಲಿಸ್ ಠಾಣೆಯಲ್ಲಿ ನಡೆಯಿತು ಸೀಮಂತ !
ತುಳುನಾಡ ಕಟ್ಟು ಕಟ್ಟಳೆಗಳಲ್ಲಿ ಸೀಮಂತ ಕೂಡಾ ಒಂದು. ಮದುವೆಯಾದ ಹೆಣ್ಮಗಳು ಗರ್ಭಿಣಿಯಾದ ಏಳನೇ ತಿಂಗಳಲ್ಲಿ ಸೀಮಂತ ಹಾಕುವ ಕ್ರಮವಿದೆ.
ಇಂತಹುದೇ ಒಂದು ಸೀಮಂತ ವಿಟ್ಲ ಪೊಲೀಸ್ ಠಾಣೆಯಲ್ಲಿ ಅದ್ಧೂರಿಯಾಗಿಯೇ ನಡೆಯಿತು. ಅಂದ ಹಾಗೆ ಸೀಮಂತದ ನಾಯಕಿ ಬೇರಾರೂ ಅಲ್ಲ..! ವಿಟ್ಲ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷದಿಂದ ಹೋಮ್ ಗಾರ್ಡ್ ಸಿಬ್ಬಂದಿ ಆಗಿರುವ ಪ್ರಸ್ತುತ ತುಂಬು ಗರ್ಬಿಣಿ ಶ್ರೀಮತಿ ಮಲ್ಲಿಕಾ ಅವರು.
ಕೊಡಂಗಾಯಿ ಪಳ್ಳಿಗದ್ದೆ ಕೊರಗಪ್ಪ ಗೌಡ ಇಂದಿರಾ ದಂಪತಿ ಪುತ್ರಿಯಾಗಿರುವ ಮಲ್ಲಿಕಾ ಅವರನ್ನು ಪುತ್ತೂರು ಕೆಮ್ಮಾಯಿಯ ಕೇಶವರಿಗೆ ವಿವಾಹ ಮಾಡಿಕೊಡಲಾಗಿತ್ತು. ಗಂಡನ ಮನೆಯಲ್ಲಿ ಕಳೆದ ತಿಂಗಳೇ ಸೀಮಂತವಾಗಿತ್ತು. ಆದರೆ ವಿಟ್ಲ ಪೊಲೀಸರು ತುಂಬು ಗರ್ಬಿಣಿ ಮಲ್ಲಿಕಾರಿಗೆ ಠಾಣೆಯಲ್ಲೇ ಸೀಮಂತ ಮಾಡುವ ಮೂಲಕ ವೈಶಿಷ್ಟ್ಯತೆ ಮೆರೆದಿದ್ದಾರೆ.
ವಿಟ್ಲ ಠಾಣಾಧಿಕಾರಿ ಯಲ್ಲಪ್ಪ ಹಾಗೂ ಸಿಬ್ಬಂದಿಗಳು ಮಲ್ಲಿಕಾ ಅವರಿಗೆ ಅದ್ದೂರಿ ಸೀಮಂತ ಮಾಡಿಸಿದರು. ಮಹಿಳಾ ಪೊಲೀಸರು ಹಣೆಗೆ ಕುಂಕುಮದ ತಿಲಕವಿಟ್ಟು ತಲೆಗೆ ಚೆಂಡು ಮಲ್ಲಿಗೆ ತೊಡಿಸಿದರು. ಹೂವು ಸೀರೆ ಕೊಟ್ಟರು. ಎಲೆ ಅಡಿಕೆಯನ್ನು ಕೈಗೆ ನೀಡಿದರು. ಸಿಹಿ ವಿತರಿಸಿದರು. ಗೌಜಿಯ ಸೀಮಂತಕ್ಕೆ ಠಾಣೆ ಸಾಕ್ಷಿಯಾಯಿತು.
ಚಿತ್ರ,ಮಾಹಿತಿ: ರಶೀದ್ ವಿಟ್ಲ