Tagged: kudlacity

ಚಂದ್ರನ ಅಂಗಳದ ಸಾಹಸದಲ್ಲಿ ಕಾರ್ಲದ ವಿಜ್ಞಾನಿ

ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಡರ್ ನ ಸಾಹಸದಲ್ಲಿ‌ ಇಸ್ರೋದ ವಿಜ್ಞಾನಿಗಳ ಸಾಲಿನಲ್ಲಿ ಕಾರ್ಲದ ಮೂಲದ ವಿಜ್ಞಾನಿ ವೈ.ದೇವದಾಸ್ ಶೆಣೈ ಕೂಡ ಒಬ್ಬರು. ಅವರು ಸರಕಾರಿ ಶಾಲೆಯಲ್ಲಿ ಓದಿದವರು. ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿಕೊಂಡು ಈಗ ಇಸ್ರೋದ ವಿಜ್ಞಾನಿಗಳ ಸಾಲಿನಲ್ಲಿ ನಿಂತಿರೋದು ಹೆಮ್ಮೆಯ ವಿಚಾರ.

ಪೋಲಿಸ್ ಠಾಣೆಯಲ್ಲಿ ನಡೆಯಿತು ಸೀಮಂತ !

ತುಳುನಾಡ ಕಟ್ಟು ಕಟ್ಟಳೆಗಳಲ್ಲಿ ಸೀಮಂತ ಕೂಡಾ ಒಂದು. ಮದುವೆಯಾದ ಹೆಣ್ಮಗಳು ಗರ್ಭಿಣಿಯಾದ ಏಳನೇ ತಿಂಗಳಲ್ಲಿ ಸೀಮಂತ ಹಾಕುವ ಕ್ರಮವಿದೆ.

ಇಂತಹುದೇ ಒಂದು ಸೀಮಂತ ವಿಟ್ಲ ಪೊಲೀಸ್ ಠಾಣೆಯಲ್ಲಿ ಅದ್ಧೂರಿಯಾಗಿಯೇ ನಡೆಯಿತು. ಅಂದ ಹಾಗೆ ಸೀಮಂತದ ನಾಯಕಿ ಬೇರಾರೂ ಅಲ್ಲ..! ವಿಟ್ಲ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷದಿಂದ ಹೋಮ್ ಗಾರ್ಡ್ ಸಿಬ್ಬಂದಿ ಆಗಿರುವ ಪ್ರಸ್ತುತ ತುಂಬು ಗರ್ಬಿಣಿ ಶ್ರೀಮತಿ ಮಲ್ಲಿಕಾ ಅವರು.

ಕೊಡಂಗಾಯಿ ಪಳ್ಳಿಗದ್ದೆ ಕೊರಗಪ್ಪ ಗೌಡ ಇಂದಿರಾ ದಂಪತಿ ಪುತ್ರಿಯಾಗಿರುವ ಮಲ್ಲಿಕಾ ಅವರನ್ನು ಪುತ್ತೂರು ಕೆಮ್ಮಾಯಿಯ ಕೇಶವರಿಗೆ ವಿವಾಹ ಮಾಡಿಕೊಡಲಾಗಿತ್ತು. ಗಂಡನ ಮನೆಯಲ್ಲಿ ಕಳೆದ ತಿಂಗಳೇ ಸೀಮಂತವಾಗಿತ್ತು. ಆದರೆ ವಿಟ್ಲ ಪೊಲೀಸರು ತುಂಬು ಗರ್ಬಿಣಿ ಮಲ್ಲಿಕಾರಿಗೆ ಠಾಣೆಯಲ್ಲೇ ಸೀಮಂತ ಮಾಡುವ ಮೂಲಕ ವೈಶಿಷ್ಟ್ಯತೆ ಮೆರೆದಿದ್ದಾರೆ.

ವಿಟ್ಲ ಠಾಣಾಧಿಕಾರಿ ಯಲ್ಲಪ್ಪ ಹಾಗೂ ಸಿಬ್ಬಂದಿಗಳು ಮಲ್ಲಿಕಾ ಅವರಿಗೆ ಅದ್ದೂರಿ ಸೀಮಂತ ಮಾಡಿಸಿದರು. ಮಹಿಳಾ ಪೊಲೀಸರು ಹಣೆಗೆ ಕುಂಕುಮದ ತಿಲಕವಿಟ್ಟು ತಲೆಗೆ ಚೆಂಡು ಮಲ್ಲಿಗೆ ತೊಡಿಸಿದರು. ಹೂವು ಸೀರೆ ಕೊಟ್ಟರು. ಎಲೆ ಅಡಿಕೆಯನ್ನು ಕೈಗೆ ನೀಡಿದರು. ಸಿಹಿ ವಿತರಿಸಿದರು. ಗೌಜಿಯ ಸೀಮಂತಕ್ಕೆ ಠಾಣೆ ಸಾಕ್ಷಿಯಾಯಿತು.

ಚಿತ್ರ,ಮಾಹಿತಿ: ರಶೀದ್ ವಿಟ್ಲ

ವಿಶ್ವ ಚಾಂಪಿಯನ್ ಶಿಪ್ ತಂಡದಲ್ಲಿ ಕುಡ್ಲದ ಪೊಣ್ಣು !

ದೋಹಾದಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಭಾರತ ತಂಡದ 25 ಸದಸ್ಯರಲ್ಲಿ ಕುಡ್ಲದ ಓಟಗಾರ್ತಿ ಎಂ.ಆರ್.ಪೂವಮ್ಮ ಆಯ್ಕೆಯಾಗಿದ್ದಾರೆ. ಈಗಾಗಲೇ ಹಲವು ಕ್ರೀಡಾಕೂಟದಲ್ಲಿ ಪದಕ ಗೆದ್ದಿರುವ ಪೂವಮ್ಮ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾ ಬದುಕು ಆರಂಭಿಸಿದವರು.

ತುಳುನಾಡಿನ ಓಲೆ ಬೆಲ್ಲ ಸಿಹಿಯಲ್ಲೂ ಪೂರ್ಣ ಆರೋಗ್ಯ

ಜಗತ್ತಿನ ಬಹುತೇಕ ಹಣ್ಣುಗಳ ರಸ, ಸುವಾಸನೆ ಗಳನ್ನು ಕೃತಕವಾಗಿ ತಯಾರಿಸಬಹುದು. ಆದರೆ, ಓಲೆ ಬೆಲ್ಲ ಮಾತ್ರ ಯಾವುದೇ ಕೃತಕ ವಿಧಾನಗಳಿಂದಲೂ ಸೃಷ್ಟಿಸಲಾಗದ ಅಪ್ಪಟ ದೇಸೀ ಉತ್ಪನ್ನ. ಅಚ್ಚುಬೆಲ್ಲ ಮತ್ತು ನೀರು ನೀಡಿ ಅತಿಥಿಗಳನ್ನು ಸ್ವಾಗತಿಸುವುದು ತುಳುನಾಡಿನ ಜನರ ಸಂಪ್ರದಾಯದ ಒಂದು ಭಾಗವಾದರೆ ಓಲೆಬೆಲ್ಲ ಶಾರೀರಿಕ ಆರೋಗ್ಯದ ವಿಚಾರದಲ್ಲಿ ವಿಶೇಷ ಮಹತ್ವ, ಸ್ಥಾನಮಾನ ಪಡೆದುಕೊಂಡಿದೆ. ಹೆರಿಗೆಯ ಬಳಿಕ ನಡೆಸಬೇಕಾದ ಬಾಣಂತನದಲ್ಲಂತೂ ಓಲೆ ಬೆಲ್ಲವೇ ಪ್ರಧಾನ.
ಅದೂ ಆಧುನಿಕತೆಯ ಈ ಕಾಲದಲ್ಲಯೂ ಸಹ ಉಳಿದುಕೊಂಡಿದೆ. ಕ್ಯಾಲ್ಸಿಯಂ ಹೇರಳವಾಗಿರುವ ಓಲೆಬೆಲ್ಲ ದೇಹದ ಹಲವಾರು ಸಮಸ್ಯೆಗಳಿಗೆ ನಾಟಿ ಹಾಗೂ ಆಯುರ್ವೇದ ಔಷಧಿಯ ರೂಪದಲ್ಲಿ ಬಳಸಲ್ಪಡುತ್ತದೆ. ಬಾಯಿ ಸಿಹಿ ಮಾಡಿಕೊಂಡೇ ಆರೋಗ್ಯ ನೀಡುವ ಓಲೆಬೆಲ್ಲ ನಮಗೆ ಅವಶ್ಯಕವೆನಿಸಿದೆ.

ಪಿಲಿಕುಳದ ‘ರಾಣಿ’ಗೆ ಐದು ಮರಿಗಳು !

ಪಿಲಿಕುಳದ ‘ರಾಣಿ’ಗೆ ಐದು ಮರಿಗಳು ! ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿರುವ ೮ ವರ್ಷದ ರಾಣಿ ಎನ್ನುವ ಹೆಣ್ಣು ಹುಲಿ ಮುದ್ದಾದ 3 ಹೆಣ್ಣು ಹಾಗೂ 2 ಗಂಡು ಮರಿಗಳಿಗೆ ಜನ್ಮ ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ರಾಣಿ ಮರಿ ಹಾಕಿದ್ದು, ಎಲ್ಲ ಮರಿಗಳು ಆರೋಗ್ಯವಾಗಿವೆ. ಅವುಗಳಿಗೆ ಸೋಂಕು ಉಂಟಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದ್ದು, ತಾಯಿ-ಮರಿಗಳನ್ನು ಬೋನಿನಲ್ಲಿಡಲಾಗಿದೆ. ಸದ್ಯ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಇರುವುದಿಲ್ಲ. 2-3 ತಿಂಗಳ ಬಳಿಕ ಅವುಗಳಿಗೆ ಚುಚ್ಚು ಮದ್ದು- ಲಸಿಕೆ ನೀಡಿ ಆರೋಗ್ಯ ಪರಿಶೀಲಿಸಿದ ಬೋನಿನಿಂದ ಹೊರ ಬಿಡಲಾಗುವುದು ಎಂದು ಪಿಲಿಕುಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಣಿಯನ್ನು ಮೂರು ವರ್ಷಗಳ ಹಿಂದೆ ಬನ್ನೇರುಘಟ್ಟದಿಂದ ತರಲಾಗಿತ್ತು. ಸದ್ಯ ಮರಿಗಳು ತಾಯಿಯ ಹಾಲನ್ನಷ್ಟೇ ಸೇವಿಸುತ್ತಿದ್ದು, ಕೆಲವೇ ದಿನಗಳಲ್ಲಿ ಮಾಂಸಾಹಾರ ನೀಡಲಾ ಗುತ್ತದೆ. 3 ವರ್ಷಗಳ ಬಳಿಕ ಮರಿಗಳನ್ನು ಬೇರೆ ಮೃಗಾಲಯಗಳಿಗೆ ಕಳು ಹಿಸುವ ಯೋಚನೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.