Tagged: mangalore

ಬೆಳ್ತಂಗಡಿ ತಹಸೀಲ್ದಾರ್ ರ ಜನ‌ ಮೆಚ್ಚುವ ಕೆಲ್ಸ

ಇವರು ಬೇರೆ ಯಾರು ಅಲ್ಲ. ಬೆಳ್ತಂಗಡಿಯ ತಹಸೀಲ್ದಾರ್ ಗಣಪತಿ ಶಾಸ್ತ್ರಿ. ಇತ್ತೀಚಿಗೆ ಬಂದ ನೆರೆಯಿಂದಾಗಿ ಹಾನಿಗೊಳಗಾದದಂತಹ ಪ್ರದೇಶದಲ್ಲಿ ನೆರೆ ಪರಿಹಾರದ ಕಾರ್ಯದಲ್ಲಿ ನಿರತರಾಗಿರುವ ಬೆಳ್ತಂಗಡಿಯ ತಹಶೀಲ್ದಾರರು ಜನಸಾಮಾನ್ಯರಂತೆ ದಿನನಿತ್ಯದ ವಸ್ತುಗಳನ್ನು ನೆರೆ ಪೀಡಿತ ಪ್ರದೇಶಕ್ಕೆ ಹೊತ್ತುಕೊಂಡು ಹೋಗುತ್ತಿರುವ ದೃಶ್ಯ ಇಂದು ಸೋಮಾರಿತನ ತೋರಿಸುವ ಅಧಿಕಾರಿಗಳಿಗೊಂದು ಪಾಠ.

ಡಿಸಿಗಳಿಗೆ ಒಳಿಯಿತು ಧ್ವಜಾರೋಹಣದ ಚಾನ್ಸ್

ರಾಜ್ಯದಲ್ಲಿ ಸರಕಾರ ಅಸ್ತಿತ್ವದ ಲ್ಲಿದ್ದರೂ ಇದೇ ಮೊದಲ ಬಾರಿಗೆ ಸ್ವಾತಂತ್ರ್ಯೋ ತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ನಿಭಾಯಿಸಲಿದ್ದಾರೆ.
ಈ ಹಿಂದೆ ರಾಜ್ಯ ಪಾಲರ ಆಡಳಿತವಿದ್ದ ಸಂದರ್ಭದಲ್ಲಿ ಮಾತ್ರ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನಡೆಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಿಎಂ ಯಡಿಯೂರಪ್ಪ ಧ್ವಜ ವಂದನೆ ಸಲ್ಲಿಸಲಿದ್ದಾರೆ.
ಉಳಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು, ಉಪವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳು, ತಾಲೂಕು ಕೇಂದ್ರಗಳಲ್ಲಿತಹಶೀಲ್ದಾರರು ಈ ಪ್ರಕ್ರಿಯೆ ನಡೆಸಲಿದ್ದು, ನೆರೆಯ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಲಾಗಿದೆ.
ಈ ಹಿಂದೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವಿತ್ತು. ಈ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮಾತ್ರ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನಡೆಸಿದ್ದಾರೆ.

ದ.ಕದಲ್ಲಿ ಇನ್ನು ಆ.13ಕ್ಕೆ ಶಾಲಾ ಕಾಲೇಜು ಆರಂಭ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಹಾಗೂ ಪ್ರವಾಹ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆ, ಕಾಲೇಜು ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ಆ.10ರಂದು ಕೂಡಾ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್. ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗ್ರತೆ ವಹಿಸಲು ರಜೆ ಘೋಷಿಸಲಾಗಿದೆ. ಇದರ ಜತೆಯಲ್ಲಿ ಆ.11 ಭಾನುವಾರ ಹಾಗೂ ಆ.12ರಂದು ಬಕ್ರೀದ್ ಹಬ್ಬದ ಗೌಜಿ ಇರುವುದರಿಂದ ಎಲ್ಲವೂ ಮಕ್ಕಳಿಗೆ ರಜೆಯಾಗಿ ಪರಿವರ್ತನೆಯಾಗಿದೆ ಈ ಮೂಲಕ ಆ.13ರ ಬಳಿಕ ಸರಿಯಾಗಿ ಮಳೆ ಬಿಟ್ಟರೆ ಶಾಲಾ ಕಾಲೇಜು ಆರಂಭವಾಗುವ ನಿರೀಕ್ಷೆಯಿದೆ.

ಶಾಸಕರೇ ಕ್ಲೀನ್ ಮಂಗಳೂರಿಗೆ ನೀವು ಸಹಕರಿಸಿ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಅನಧಿಕೃತ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ತೆರವುಗೊಳಿಸುವಂತೆ ಹಾಗೂ ತಪ್ಪಿದ್ದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವ ವಿಚಾರದಲ್ಲಿ ಎಂದು ಪಾಲಿಕೆ ಎಚ್ಚರಿಕೆ ನೀಡಿದೆ.
ಆದರೆ ಮಂಗಳೂರಿನ ಉರ್ವಸ್ಟೋರ್ ಸರಕಾರಿ ಕ್ವಾಟ್ರರ್ಸ್ ಬಳಿಯಲ್ಲಿ ಸಾಗಿದಾಗ ಭರ್ತಿ ಮೂರು ಫ್ಲೆಕ್ಸ್‌ಗಳ ಮೂಲಕ ಶಾಸಕ ಡಿ.ವೇದವ್ಯಾಸ ಕಾಮತ್ ರಾರಾಜಿಸುತ್ತಿದ್ದಾರೆ. ಈ ಮೂಲಕ ಸ್ವಚ್ಛತೆಯ ಪಾಠ ಹೇಳುವ ಶಾಸಕರು ಪರೋಕ್ಷ ರೀತಿಯಲ್ಲಿ ಫ್ಲೆಕ್ಸ್ ಸಂಸ್ಕೃತಿಗೆ ಮಣೆ ಹಾಕುವ ಮೂಲಕ ಕ್ಲೀನ್ ಮಂಗಳೂರು ಅಭಿಯಾನಕ್ಕೆ ತಡೆಯಾಗುತ್ತಿದೆ. ದಯವಿಟ್ಟು ಶಾಸಕರೇ ಸ್ವಚ್ಛತೆಯ ಕಡೆಗೆ ನೀವು ಗಮನ ಮೊದಲು ಕೊಡಿ.

ಮಂಗಳೂರಿನ ಚರ್ಚ್ ಗಳಲ್ಲೂ ಅನ್ನದಾನ !

ಮಂಗಳೂರಿಗೆ ಬಂದು ಊಟಕ್ಕೆ ಹಣ ಇಲ್ಲಹೊಟ್ಟೆಯಲ್ಲಿ ಕೂರಬೇಕಿಲ್ಲ. ಮಂಗಳೂರಿನ ಕದ್ರಿ, ಕುದ್ರೋಳಿ, ಕಟೀಲು, ಸುಂಕದಕಟ್ಟೆ ದೇವಳದಲ್ಲಿ ಭಕ್ತಾದಿಗಳಿಗೆ ಮಧ್ಯಾಹ್ನ ಉಚಿತ ಊಟ(ದೇವರ ಪ್ರಸಾದ)ದ ವ್ಯವಸ್ಥೆ ಇರುತ್ತದೆ. ಅದರಲ್ಲೂ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಚರ್ಚ್‌ಗಳಲ್ಲೂ ಇಂತಹ ಅನ್ನದಾನದ ಕಲ್ಪನೆಯನ್ನು ಆಳವಡಿಸಿಕೊಂಡಿದ್ದಾರೆ.

ದಿನನಿತ್ಯದ ಊಟದ ವ್ಯವಸ್ಥೆ ಇಲ್ಲದೇ ಇದ್ದರೂ ಕೂಡ ಕೆಲವೊಂದು ವಿಶೇಷ ದಿನಗಳಲ್ಲಿ ಅನ್ನದಾನದ ವ್ಯವಸ್ಥೆಯಿದೆ. ಮಂಗಳೂರಿನ ಕೆಲವೊಂದು ಕ್ರೈಸ್ತ ಧರ್ಮದ ಪುಣ್ಯಕ್ಷೇತ್ರಗಳಾದ ಮುಡಿಪು ಸಂತ ಜೋಸೆಫ್( ಶುಕ್ರವಾರ), ಪಕ್ಷಿಕೆರೆ ಸಂತ ಜೂದ್(ಮಂಗಳವಾರ) ಬೋಂದೆಲ್ ಸಂತ ಲಾರೆನ್ಸ್ (ಮಂಗಳವಾರ), ಅಲಂಗಾರು ಬಾಲಯೇಸು ಮಂದಿರ( ಶುಕ್ರವಾರ), ಬಿಕರ್ನಕಟ್ಟೆ ಬಾಲಯೇಸು ಮಂದಿರ (ಗುರುವಾರ) ದೇವರ ಪ್ರಸಾದ(ಅನ್ನದಾನ)ದ ವ್ಯವಸ್ಥೆ ಇರುತ್ತದೆ.