ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಹಾಗೂ ಪ್ರವಾಹ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆ, ಕಾಲೇಜು ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ಆ.9ರಂದು ಕೂಡಾ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್. ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗ್ರತೆ ವಹಿಸಲು ರಜೆ ಘೋಷಿಸಲಾಗಿದೆ.
Tagged: mangalore
ಕುಡ್ಲದಲ್ಲಿ ವಿಶಿಷ್ಟ ಮದ್ಮಲ್ ಫಿಶ್ !
ಮದ್ಮಲ್ ಎಂದರೆ ಮದುಮಗಳು ಎನ್ನುವ ಅರ್ಥ ತುಳು ಭಾಷೆಯಲ್ಲಿ ಹೇಳಲಾಗುತ್ತದೆ. ಇದು ಕುಡ್ಲದಲ್ಲಿ ಈ ಸೀಸನ್ ನಲ್ಲಿ ಕಾಣ ಸಿಗುವ ವಿಶಿಷ್ಟವಾದ ಮೀನು.
ಈಗ ಯಾವುದೇ ಹೋಟೆಲ್ ನಲ್ಲಿ ಫಿಶ್ ಪ್ರೈ ಕೇಳಿದ್ರೆ ಇದೇ ಮದ್ಮಲ್ ವಿಚಾರವನ್ನು ಹೇಳುತ್ತಾರೆ. ಕೊಂಚ ಸಿಹಿ ಜತೆಗೆ ಸುಂದರವಾದ ಮೀನು ಇದು ಅದಕ್ಕೂ ಮುಖ್ಯ ತುಳುವರು ಶೋಧನೆ ಮಾಡಿದ ಮೀನು ಎನ್ನುವ ಹೆಗ್ಗಳಿಕೆ ಜತೆಗಿದೆ.
ಸುಷ್ಮಾ ಸ್ವರಾಜ್ ಮತ್ತು ಕುಡ್ಲದ ಮಲ್ಲಿಗೆ !
ಬಿಜೆಪಿ ನಾಯಕಿ ದಿ.ಸುಷ್ಮಾ ಸ್ವರಾಜ್ ಸಾಕಷ್ಟು ಬಾರಿ ಮಂಗಳೂರು ಸೇರಿದಂತೆ ಕರಾವಳಿಯ ಉಡುಪಿಗೂ ಬಂದಿದ್ದಾರೆ. ವಿಶೇಷ ಎಂದರೆ ಪ್ರತಿ ಸಾರಿನೂ ಬರುವಾಗ ಅವರಿಗೆ ಕರಾವಳಿಯ ಅವರ ಅಭಿಮಾನಿಗಳು ಪ್ರೀತಿಯಿಂದ ಮಲ್ಲಿಗೆ ನೀಡಲಾಗುತ್ತಿತ್ತು. ಅವರು ಅಷ್ಟೇ ಪ್ರೀತಿಯಿಂದ ಸ್ವೀಕಾರ ಮಾಡಿ ತಲೆಗೆ ಇಟ್ಟುಬಿಡುತ್ತಿದ್ದರು. ಮಲ್ಲಿಗೆ ಸೂಸುವ ಪರಿಮಳದಿಂದ ಮತ್ತಷ್ಟು ಹುರುಪು ಅವರಲ್ಲಿ ಬಂದು ಬಿಡುತ್ತಿತ್ತು ಎನ್ನುವ ಮಾತನ್ನು ಅವರ ಅಭಿಮಾನಿ ಗಳು ಹೇಳುತ್ತಾರೆ.
ಕುಡ್ಲದ ಮಳೆಗೆ ಮತ್ತೆ ಶಾಲೆ,ಕಾಲೇಜಿಗೆ ರಜೆ
ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಆ.8ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಾಲೆ,ಕಾಲೇಜಿಗೆ ಮತ್ತೆ ಮಳೆಯ ರಜೆ ಆರಂಭ
ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಆ.7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.




