Tagged: mangalore

ಕುಡುಪು, ಕುಕ್ಕೆ, ಮಂಜೇಶ್ವರ ದೇವಳದಲ್ಲಿ ನಾಗರ ಪಂಚಮಿಗೆ ಯಾಕೆ ವಿಶೇಷ?

ಮಂಗಳೂರಿನ ಕುಡುಪು ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಇದರ ಜತೆಯಲ್ಲಿ ಮಂಜೇಶ್ವರದ ಅನಂತೇಶ್ವರ ದೇವಸ್ಥಾನ ಮೂರು ದೇವಳದಲ್ಲಿ ನಾಗರ ಪಂಚಮಿ ಎಂದಾಕ್ಷಣ ಬಹಳಷ್ಟು ವಿಶೇಷತೆಗಳಿರುತ್ತದೆ. ಈ ಮೂರು ದೇವಳಗಳು ಕೂಡ ನಾಗನಿಗೆ ವಿಶಿಷ್ಟವಾದ ಸ್ಥಾನಮಾನವಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಎಂಬ ಗ್ರಾಮದಲ್ಲಿ ಈ ಪ್ರಸಿದ್ಧ ದೇವಾಲಯ ನೆಲೆಸಿದೆ. ಸರ್ಪ ದೋಷ ನಿವಾರಣೆಗಾಗಿ ಈ ದೇವಾಲಯ ದೇಶದಲ್ಲೆ ಪ್ರಖ್ಯಾತವಾಗಿದೆ. ದೇಶದ ನಾನಾ ಮೂಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಸರ್ಪ ದೋಷದಿಂದ ಮುಕ್ತಿ ಪಡೆಯಲು ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿ ಸರ್ಪಗಳ ದೇವರಾಗಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯನ್ನು ಮುಖ್ಯ ದೇವತೆಯಾಗಿ ಪೂಜಿಸಲಾಗುತ್ತದೆ. ಸರ್ಪ ದೇವತೆಗಳಾದ ವಾಸುಕಿ ಮತ್ತು ಶೇಷ ನಾಗ ಪ್ರಮುಖ.

ಕುಡುಪು ಶ್ರೀ ಅನಂತ ಪದ್ಮನಾಭ ದೇವಳ ಸರ್ಪ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ. ಈ ದೇವಸ್ಥಾನವು ಕರಾವಳಿಯ ಪ್ರಮುಖ ನಾಗ ಕ್ಷೇತ್ರಗಳಲ್ಲಿ ಒಂದಾಗಿದೆ. ನಾಗರ ಪಂಚಮಿಯಂದು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಸೇವೆಗಳೆಲ್ಲವನ್ನೂ ಮಂಜೇಶ್ವರ ಶ್ರಿಮದ್‌ ಅನಂತೇಶ್ವರ ದೇವಸ್ಥಾನದಲ್ಲಿ ನಡೆಸಲಾಗುತ್ತಿದೆ. ಇಲ್ಲಿ ವಿಷ್ಣು, ಈಶ್ವರ ಹಾಗೂ ನಾಗ ದೇವರ ಸಾನಿಧ್ಯವಿದೆ. ನಾಗರ ಪಂಚಮಿ ಹಾಗೂ ಷಷ್ಠಿ ಮಹೋತ್ಸವ ಇಲ್ಲಿನ ಪ್ರಧಾನ ಆಚರಣೆಗಳು.

ಸಾಮಾನ್ಯ ಜ್ವರಕ್ಕೆ ಪರಿಪೂರ್ಣ ಮದ್ದು !

ಕರಾವಳಿಯಲ್ಲಿ ಒಂದೆಡೆ ಮಲೇರಿಯಾ ಜತೆಗೆ ಡೆಂಗೆಯ ಗುದ್ದಾಟದ ನಡುವೆ ಕೂಡ ಸಾಮಾನ್ಯ ಜ್ವರಕ್ಕೂ ಈಗ ಜನರಲ್ಲಿ ಭಯ ಹುಟ್ಟಿಕೊಂಡಿದೆ. ಆಗಾಗ ಬರುವ ಮಳೆಗೆ ಕುಟುಂಬದ ಸದಸ್ಯರು ಜ್ವರಕ್ಕೆ ಗುರಿಯಾಗುತ್ತಿದ್ದಾರೆ ಎನ್ನುವ ಮಾತುಗಳು ಪದೇ ಪದೇ ಕುಡ್ಲದ ಜನರಿಂದ ಕೇಳಿ ಬರುತ್ತಿದೆ.

ಯಾವ ವಿಧಾನದ ಚಿಕಿತ್ಸಾ ಕ್ರಮ ಇದಕ್ಕೆ ಸೂಕ್ತ ಎನ್ನುವ ಗೊಂದಲದಲ್ಲಿ ಇರುವವರಿಗೆ ಇಲ್ಲೊಂದು ಮಾರ್ಗದರ್ಶನವಿದೆ. ಕುದ್ರೋಳಿಯಲ್ಲಿರುವ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ನಿಮ್ಮ ಸಾಮಾನ್ಯ ಜ್ವರಕ್ಕೆ ಪರಿಪೂರ್ಣ ಔಷಧ ಜತೆಗೆ ನಿಮ್ಮ ದೇಹ ಪ್ರಕೃತಿಗೆ ತಕ್ಕಂತ ಚಿಕಿತ್ಸೆ ಸಿಗುತ್ತದೆ.

ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.

ತುಳುವರು ಆಟಿ ಕಷಾಯ ಯಾಕೆ ಕುಡಿಯುತ್ತಾರಾ ಗೊತ್ತಾ?

ತುಳುನಾಡಿನ ಜನಕ್ಕೆ ಆಟಿ ಅಮವಾಸ್ಯೆ ಒಂದು ವಿಶೇಷ ಹಬ್ಬ. ಅಂದು ಹಾಲೆ ಮರದ ತೊಗಟೆಯ ರಸ ತೆಗೆದು ಕುಡಿಯುವ ಪದ್ಧತಿ ಪುರಾತನ ಕಾಲದಿಂದ ಹಿಡಿದು ಇಂದಿನವರೆಗೂ ಬೆಳೆದು ಬಂದಿದೆ. ಅಗಸ್ಟ್ 1 ರಂದು ಆಟಿ ಅಮವಾಸ್ಯೆ. ಈ ಅಮವಾಸ್ಯೆಯ ಮದ್ದು ಕುಡಿದರೆ ಆರೋಗ್ಯ ವೃದ್ಧಿಯಾಗುತ್ತದೆ ಎಂದು ವೈದ್ಯಲೋಕ ಹೇಳುತ್ತದೆ.

ದೇಹದೊಳಗಿನ ನಂಜಿನ ಅಂಶಗಳನ್ನು ತೆಗೆಯುವ ಶಕ್ತಿ ಹಾಲೆಮರದ ರಸಕ್ಕಿದೆ. ಇದು ಕಿಡ್ನಿ ಉತ್ತಮವಾಗಿ ಕೆಲಸ ನಿರ್ವಹಿಸುವಂತೆ ಮಾಡುತ್ತದೆ. ಆಟಿ ಅಮವಾಸ್ಯೆಯಂದು ಔಷಧೀಯ ಗುಣ ಪೂರ್ಣ ಪ್ರಮಾಣದಲ್ಲಿರುತ್ತದೆ. ಹಾಲೆ ಮರದ ರಸ ಕುಡಿದ ನಂತರ ಮೆಂತೆಯ ಗಂಜಿ ಮಾಡುವ ಕ್ರಮ ಇದೆ. ಮರ ರಸದಿಂದ ದೇಹಕ್ಕಾಗುವ ಉಷ್ಣಬಾದೆಯನ್ನು ಸರಿಪಡಿಸುತ್ತದೆ.

ಹಾಲೆ ಮರದ ಔಷಧಗಳೊಂದಿಗೆ ಮಂತ್ರ, ತಂತ್ರ ಔಷಧ ಪರಿಕಲ್ಪನೆಗಳು ಸೇರಿ ಹೋಗಿವೆ. ಔಷಧೀಯ ಗುಣದ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟರೂ ಅದನ್ನು ಬೆಳಕು ಹರಿಯುವ ಮೊದಲೇ ಸಂಗ್ರಹಿಸಬೇಕು. ಹಾಲೆ ಮರದ ತೊಗಟೆಯನ್ನು ಕೂಡ ಹೊತ್ತಿನಲ್ಲಿ ತಂದರೆ ಅದರಲ್ಲಿರುವ ಔಷಧೀಯ ಗುಣ ಪೂರ್ತಿಯಾಗಿ ದೊರೆಯುತ್ತದೆ. ಇದರ ಜತೆಯಲ್ಲಿ ಇಂದಿನ ಜನಕ್ಕೆ ಹಾಲೆ ಮರದ ಪರಿಚಯ ಕೂಡಾ ಕಡಿಮೆ ಈ ಕಾರಣದಿಂದ ಹಾಲೆ‌‌ಮರ‌ ಎಂದು ದೃಢಪಟ್ಟ ಬಳಿಕವಷ್ಟೇ ಅದರ ಕೆತ್ತೆಯ ರಸ ಕುಡಿದರೆ ಒಳ್ಳೆಯದು ಎನ್ನುವುದು ಕುಡ್ಲ ಸಿಟಿಯ ಕಾಳಜಿಯ ಮಾತು.

ಕುಡ್ಲಕ್ಕೆ ಬಂತು ಫ್ರೆಶ್ ಫಿಶ್ ಮಾರಾಯ್ರೆ !

ಕುಡ್ಲದ ಮೀನು ಮಾರುಕಟ್ಟೆ ಗೆ ಕಳೆದ ನಾಲ್ಕೈದು ದಿನಗಳಿಂದ ತಾಜಾ ಮೀನುಗಳು ಬರುತ್ತಿದೆ. ಬಿಳಿ ಸಿಗಡಿ, ಅಡೆಮೀನ್, ಬೊಳ್ಳೆಂಜೀರ್ ಹೀಗೆ ಮೀನುಗಳ ಮೇಲೆ ಫ್ರೆಶ್ ಫಿಶ್ ಮೀನು ಮಾರುಕಟ್ಟೆ ಗೆ ದಾಂಗುಡಿ ಇಡುತ್ತಿದೆ.

ಮುಖ್ಯವಾಗಿ ರಾಣಿ ಬಲೆ ಹಾಗೂ ಪಟ್ಟೆಬಲೆಯ ನಾಡದೋಣಿಗಳು ಉತ್ತಮ ಮೀನುಗಾರಿಕೆ ಯನ್ನು ಮಾಡುತ್ತಿದೆ. ಕಳೆದ ಒಂದೂವರೆ ತಿಂಗಳಿನಿಂದ ಮದ್ರಾಸ್, ಓಮನ್ ಸೇರಿದಂತೆ ಫ್ರಿಜರ್ ಮೀನುಗಳ ನ್ನು ತಿಂದ ಕರಾವಳಿಯ ಮೀನು ಪ್ರಿಯರಿಗಂತೂ ಇದೊಂದು ಖುಷಿಯ ವಿಚಾರ.

ಪಿಲಿವೇಷ ಎಂದರೆ ಅದು ಕುಡ್ಲದವರಿಗೆ ಮಾತ್ರ ಗೊತ್ತು

ಯಾರೇ ಏನೇ ಹೇಳಿದ್ರು ಪಿಲಿವೇಷ ವಿಚಾರದಲ್ಲಿ ಕುಡ್ಲದ ಮಂದಿಯನ್ನು ಮೀರಿಸುವವವರಿಲ್ಲ ಹುಲಿವೇಷ ಎಂದಾಗ ಕರಾವಳಿ ಜನರ ಜೀವ ಕಲೆ ಎಂದೇ ಕರೆಯಲಾಗುತ್ತದೆ. ಇದೇ ಕಾರಣದಿಂದ ಮಂಗಳೂರಿನ ಪಿಲಿ ಕುಲ ಎನ್ನುವ ಪ್ರದೇಶಕ್ಕೆ ಹುಲಿಗಳಿಂದಾಗಿ ಹೆಸರು ಬಂತು.

ಬಹಳ ಹಳೆಯ ಕಾಲದಲ್ಲಿ ಪಿಲಿ ಎಂದರೆ ತುಳುವಿನಲ್ಲಿ ಹುಲಿ ಕುಲ ಎಂದರೆ ಕೆರೆ ಎಂದು ಅರ್ಥ ಕೊಡುತ್ತದೆ ಈ ಹಿಂದೆ ಹುಲಿಗಳು ನೀರು ಕುಡಿಯಲು ಕೊಳ ಅಥವಾ ಕೆರೆ ಕಡೆಗೆ‌ ಬರುವುದರಿಂದ ಇದಕ್ಕೆ ಪಿಲಿ ಕುಳ ಎಂದು ತುಳು ಜನರು ಹೆಸರು ಕೊಟ್ಟರು ಈಗ ಪಿಲಿ ಕುಳ ಎಂದರೆ ನಿಸರ್ಗ ಧಾಮವಾಗಿ ಬದಲಾಗಿದೆ. ಅಂದಹಾಗೆ ಜುಲೈ 29 ವಿಶ್ವ ಹುಲಿಗಳ ದಿನ. ಹುಲಿ ಸಂತತಿ ನಾಶದತ್ತ ಸಾಗುತ್ತಿದ್ದರೂ ಕರಾವಳಿಯಲ್ಲಿ ಹುಲಿವೇಷದ ರಂಗು ಪ್ರತಿ ಸಲನೂ ಏರುತ್ತಿದೆ.