ಕ್ರೈಸ್ತರು ಬೆಳೆಸಿದ ತರಕಾರಿ, ಮುಸ್ಲಿಂಮರು ಬೆಳೆಸಿದ ಹಣ್ಣು ಹಂಪಲು, ಹಿಂದೂಗಳು ಮಾಡಿದ ಕುರುಕಲು ತಿಂಡಿ ತಿನಸು ಜತೆಗೆ ಅದನ್ನು ಹೆಕ್ಕಿ ತೆಗೆದುಕೊಳ್ಳಲು ಸರಕಾರಿ ಶಾಲೆಯಲ್ಲಿ ಓದುತ್ತಿರುವ ಪುಟಾಣಿಗಳು ಇದೆಲ್ಲ ಚಿತ್ರಣಗಳು ಕಾಣಿಸಿಕೊಂಡದ್ದು ಭಾನುವಾರ ಬೊಕ್ಕಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ವಸ್ತು ಸೂರೆ ಕಾರ್ಯಕ್ರಮದಲ್ಲಿ.
ಹೌದು. ಬೋಳೂರಿನ ಶ್ರೀಧರ್ಮಭೂಮಿ ಪ್ರತಿಷ್ಠಾನ ಕಳೆದ 14 ವರ್ಷಗಳಿಂದ ನಿರಂತರವಾಗಿ ಈ ಸಂಘಟನೆ ಇಂತಹ ವಸ್ತುಸೂರೆ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಭಾವನೆಯನ್ನು ಅರಳಿಸುವ ಉದಾತ್ತವಾದ ಚಿಂತನೆಯ ಮೂಲಕ ಕಾರ್ಯಕ್ರಮವನ್ನು ಸಂಘಟನೆ ಮಾಡುತ್ತಿದೆ. ವಿಶಿಷ್ಟ ಎಂದರೆ ಕುದ್ರೋಳಿ, ಉರ್ವ, ಬೊಕ್ಕಪಟ್ಣ, ಬೆಂಗ್ರೆ, ತಣ್ಣೀರು ಬಾವಿ ಸೇರಿದಂತೆ ಹತ್ತು ಹಲವು ಪ್ರದೇಶದಿಂದ ಈ ಕಾರ್ಯಕ್ರಮಕ್ಕೆ ಸರಕಾರಿ ಶಾಲೆಯಲ್ಲಿ ಓದುತ್ತಿರುವ ತೀರಾ ಬಡ ಕುಟುಂಬದ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ವಸ್ತು ಸೂರೆಯಲ್ಲಿ ಸಿಗುವ ವಸ್ತುಗಳನ್ನು ಪಡೆದುಕೊಂಡು ಖುಷಿಯಿಂದ ಮನೆ ಕಡೆಗೆ ಹೆಜ್ಜೆ ಹಾಕುತ್ತಾರೆ.
Tagged: kudlacity
ಇವರು ವೈದ್ಯರಲ್ಲ ಬಟ್ ಬಡವರ ಪಾಲಿನ ದೇವರು !
ಪುತ್ತೂರಿನ ಡಾ.ಶಿವರಾಮ ಭಟ್ ಅವರ ಕ್ಲಿನಿಕ್ನಲ್ಲಿರುವ ಕಂಪೌಂಡರ್ ಭಟ್ಟರು ಪುತ್ತೂರಿನ ಮಂದಿಗೆ ಚಿರಪರಿಚಿತ ಮುಖ. ಯಾವುದೇ ಕಾಯಿಲೆ ಇರಲಿ ಅವರು ನೀಡುವ ಮದ್ದು ರೋಗಿಯ ಕಾಯಿಲೆಗೆ ಗುಣಪಡಿಸುವ ಶಕ್ತಿಯಿದೆ. ಅವರ ನಗು ಮೊಗದ ಮಾತು ರೋಗಿಗೆ ಕಾಯಿಲೆಯಲ್ಲೂ ಹೊಸ ಚೈತನ್ಯ ನೀಡುತ್ತದೆ.
ಅವರ ಮದ್ದಿನ ರೇಟು ಕೂಡ ಬಹಳ ಕಡಿಮೆ. ಕೆಲವೊಂದು ಸಲ ಬಡವರು ಬಂದರೆ ಉಚಿತವಾಗಿ ಮದ್ದು ನೀಡಿದ ಉದಾಹರಣೆಗಳು ಸಾಕಷ್ಟಿದೆ. ಡಾ. ಶಿವರಾಮ ಭಟ್ ಅವರ ಕಾಲದಿಂದಲ್ಲೂ ಪುತ್ತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿರುವ ಡಾ. ಶಿವರಾಮ ಭಟ್ ಕ್ಲಿನಿಕ್ನಲ್ಲಿ ಕಂಪೌಂಡರ್ ಆಗಿದ್ದಾರೆ.
ಈಗ ಡಾ.ಶಿವರಾಮ ಭಟ್ಟರು ಇಲ್ಲ ಆದರೆ ಅವರ ಪುತ್ರ ಡಾ. ಶ್ಯಾಮ್ ಭಟ್ ಇದ್ದರೆ ಅವರಿಗೂ ಕಂಪೌಂಡರ್ ಭಟ್ಟರು ಎಂದರೆ ಅದೇ ಪ್ರೀತಿ. ರೋಗಿಗಳಿಗೂ ಅವರು ಎಂದರೆ ವಿಶೇಷ ಗೌರವ ಜತೆಗೆ ಅಪಾರ ಪ್ರೀತಿ.
ಸಿಟಿ ಲೈಫ್ನವರ ಕೊಬ್ಬು ಕರಗಿಸುವ ಸುಲಭ ವಿಧಾನ
ಕುಡ್ಲ ಮಾತ್ರವಲ್ಲ ದೇಶದ ಯಾವುದೇ ಮೂಲೆಗೆ ಹೋದರೂ ಕೂಡ ಅತ್ತಿಯಾದ ಒತ್ತಡ, ವ್ಯಾಯಾಮ ಕೊರತೆಯ ಜತೆಯಲ್ಲಿ ಮೈಯಲ್ಲಿ ಕೊಲೆಸ್ಟ್ರಾಲ್ ಗೊತ್ತಿಲ್ಲದೇ ಜಾಗ ಪಡೆದುಕೊಂಡು ದುಡೂತಿತನ ಬೆಳೆದುಬಿಡುತ್ತದೆ. ಇಂತಹ ಕೊಲೆಸ್ಟ್ರಾಲ್ವನ್ನು ಸುಲಭದಲ್ಲಿ ತೆಗೆಯಲು ಹಿಜಾಮಾ ದಿ ಬೆಸ್ಟ್ ಟ್ರೀಟ್ಮೆಂಟ್. ಅದನ್ನು ನುರಿತ ವೈದ್ಯರು ಮಾತ್ರ ಮಾಡಿದರೆ ಇದಕ್ಕೆಲ್ಲ ಪರಿಹಾರ ಸಿಗುತ್ತದೆ.
ಕುದ್ರೋಳಿಯ ಆಯುರ್ ಹೆಲ್ತ್ ಕೇರ್ನಲ್ಲಿ ಇಂತಹ ಟ್ರೀಟ್ಮೆಂಟ್ ತಜ್ಞ ವೈದ್ಯರಿಂದ ನಡೆಯುತ್ತದೆ. ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್ನ ಪರಿಣತ ವೈದ್ಯರು ನೀಡುತ್ತಾರೆ.
ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.
ಕುಡ್ಲದ ವಿದ್ಯಾರ್ಥಿಗಳ ಮನಸ್ಸು ಗೆದ್ದ ಡಿಸಿ ಸೆಂಥಿಲ್ !
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಈ ಬಾರಿ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ಮಾಡುವ ಜತೆಯಲ್ಲಿ ಸಂದೇಶ ನೀಡುವ ವಿಶೇಷ ಅವಕಾಶ ಒದಗಿ ಬಂದಿತ್ತು.
ವಿಶೇಷವಾಗಿ ಸಂದೇಶದ ತುಂಬಾ ಕರಾವಳಿಯಲ್ಲಿ ಕಾಣಿಸಿಕೊಂಡ ನೆರೆಗೆ ಜನರು ಸ್ಪಂಧಿಸಿದ ರೀತಿ ಎಲ್ಲವನ್ನು ಮುಕ್ತವಾಗಿ ಹಂಚಿಕೊಳ್ಳುವ ಜತೆಯಲ್ಲಿ ಕರಾವಳಿಯ ಜನರು ಭಯಬೀಳುವ ಅಗತ್ಯವಿಲ್ಲ ಜಿಲ್ಲಾಡಳಿತ ನಿಮ್ಮ ಜತೆಯಲ್ಲಿ ಇದೆ ಎನ್ನುವ ಭರವಸೆ ತುಂಬುವ ಮಾತುಗಳು ಇಡೀ ಜಿಲ್ಲೆಯ ಜನರಿಗೆ ಹೊಸ ವಿಶ್ವಾಸವನ್ನು ತಂದುಕೊಟ್ಟಿದೆ.
ಅವರ ಮಾತಿನಲ್ಲಿ ಹೇಳುವುದಾದರೆ ಒಂದು ಪೀಳಿಗೆ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿ ಇತಿಹಾಸ ಸೃಷ್ಟಿಸಿತು. ಈಗ ನಾವೆಲ್ಲ ಭಾರತವನ್ನು ವಿಶ್ವತ ಅತ್ಯುನ್ನತ ಸ್ಥಾನಕ್ಕೆ ಏರಿಸಲು ನಮ್ಮ ಜೀವನವನ್ನು ತೊಡಗಿಸಿಕೊಂಡು ಇತಿಹಾಸ ಸೃಷ್ಟಿಸೋಣ. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಶಾಂತಿಯಿಂದ ಬಾಳು ಕಟ್ಟಿಕೊಳ್ಳಲು ಶ್ರಮಿಸೋಣ ಎನ್ನುವುದು ಇಡೀ ಸಂದೇಶದ ಸಾರ.
ಅಂದಹಾಗೆ ಡಿಸಿ ಸೆಂಥಿಲ್ ಬರೀ ಕರಾವಳಿಯ ಜನರಿಗೆ ಮಾತ್ರವಲ್ಲ ಇಲ್ಲಿ ಶೈಕ್ಷಣಿಕ ಬದುಕು ಕಟ್ಟಲು ಬಂದವರಿಗೂ ಅವರೆಂದರೆ ಬಹಳ ಇಷ್ಟ. ಮಳೆ ಬಂದಾಗ ಅವರು ಮಕ್ಕಳು ಕುರಿತು ವಹಿಸುವ ಕಾಳಜಿಯಿಂದ ಮಕ್ಕಳ ಪ್ರೀತಿಯ ಡಿಸಿ ಆಗಿದ್ದಾರೆ ಎನ್ನುವುದಕ್ಕೆ ಇಂದಿನ ಕಾರ್ಯಕ್ರಮದಲ್ಲಿ ಸೆಲ್ಫಿ ತೆಗೆದ ವಿದ್ಯಾರ್ಥಿಗಳೇ ಸಾಕ್ಷಿ.
ಕುಡ್ಲದ ಕಾರ್ನಾಡ್ ಸದಾಶಿವ ರಾವ್ ರಸ್ತೆ ಕತೆ…
ಕಾರ್ನಾಡ್ ಸದಾಶಿವ ರಾವ್ ದಕ್ಷಿಣ ಭಾರತದ ಗಾಂಧಿ ಎಂದು ಪ್ರಸಿದ್ಧಿ ಪಡೆದವರಿವರು. ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಕ್ಕೆ ಚಾಲನೆ ಕೊಟ್ಟ ದೇಶಪ್ರೇಮಿ. ಮಂಗಳೂರಿನ ಕಾರ್ನಾಡ್ ಎಂಬಲ್ಲಿ 1881ರಲ್ಲಿ ಜನಿಸಿದ ಸದಾಶಿವರಾವ್ ಕಾರ್ನಾಡ್ ಎಂದೇ ಚಿರಪರಿಚಿತರು. ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದ ಕಾರ್ನಾಡರು ಸುಖದ ಸುಪ್ಪತ್ತಿಗೆಯಲ್ಲಿ ಹಾಯಾಗಿ ಕಾಲ ಕಳೆಯಬಹುದಾಗಿತ್ತು.
ಗಾಂಧೀಜಿಯವರ ಸ್ವಾತಂತ್ರ್ಯ ಸಂಗ್ರಾಮದ ಕರೆಗೆ ಓಗೊಟ್ಟು ಚಳವಳಿಗೆ ಧುಮುಕಿದ ಅವರು, ತಮ್ಮ ಜೀವನದ ಕೊನೆಯವರೆಗೂ ಹೋರಾಟಕ್ಕಾಗಿಯೇ ಬದುಕನ್ನು ಮುಡಿಪಾಗಿಟ್ಟಂತಹ ಮಹಾನುಭಾವ. ಕಾರ್ನಾಡರು ಕೇವಲ ಸ್ವಾತಂತ್ರ್ಯ ಹೋರಾಟಕಷ್ಟೇ ತಮ್ಮ ಬದುಕನ್ನು ಮೀಸಲಾಗಿಟ್ಟಿರಲಿಲ್ಲ. ಹಿಂದುಳಿದ ಜಾತಿಗಳ ಬಗ್ಗೆ, ಮೂಢನಂಬಿಕೆ ವಿರುದ್ಧ, ಸಾಮಾಜಿಕ ಕ್ಷೇತ್ರದಲ್ಲಿನ ಅನಿಷ್ಟ ಪದ್ಧತಿಗಳ ವಿರುದ್ಧ ಸತತವಾಗಿ ಹೋರಾಟ ನಡೆಸಿದ್ದರು. ಪತ್ನಿ ಶಾಂತಾಭಾಯಿ ಕೂಡ ಅವರಿಗೆ ಬೆಂಬಲವಾಗಿ ನಿಂತಿದ್ದರು. ಆಕೆ ಕೂಡ ಮಹಿಳಾ ಸಭಾವನ್ನು ಹುಟ್ಟು ಹಾಕಿ ಬಾಲ ವಿಧವೆಯರಿಗೆ ನೆರವು ನೀಡಿ ಅವರನ್ನು ಸ್ವಾವಲಂಬಿಯನ್ನಾಗಿ ಮಾಡುವಲ್ಲಿ ಪಣತೊಟ್ಟಿದ್ದರು.
1936 ರಲ್ಲಿ ಫೈಜಾಬಾದ್ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದರು. ಅದಾಗಲೇ ಅವರಿಗೆ ಜ್ವರ ವಿಪರೀತವಾಗಿ ಕಂಗೆಡಿಸಿತ್ತು. ಅಲ್ಲಿಂದ ಮುಂಬಯಿಗೆ ವಾಪಸ್ಸಾದ ಕಾರ್ನಾಡರು 1937 ಜನವರಿ 9 ರಂದು ಸಾವನ್ನಪ್ಪಿದ್ದರು. ತನ್ನ ಇಡೀ ಜೀವನವನ್ನೇ ಸ್ವಾತಂತ್ರ್ಯಕ್ಕಾಗಿ ಮೀಸಲಿಟ್ಟ ಕಾರ್ನಾಡರು, ತನ್ನೆಲ್ಲಾ ಸಂಪತ್ತನ್ನು ಬಡವರ, ದೀನ, ದಲಿತರ ಏಳಿಗೆಗಾಗಿ ವಿನಿಯೋಗಿಸಿದ್ದರು. ಅವರು ಸಾವನ್ನಪ್ಪಿದಾಗ ಶವಸಂಸ್ಕಾರಕ್ಕೂ ಹಣವಿರಲಿಲ್ಲವಾಗಿತ್ತು.
ಆ ಕಾರಣಕ್ಕಾಗಿಯೇ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಕಾದಂಬರಿಕಾರ ದಿ.ಡಾ.ಶಿವರಾಮ ಕಾರಂತರು ಕಾರ್ನಾಡರನ್ನು ಧರ್ಮರಾಜ ಅಂತ ಕರೆದಿದ್ದರು. ಅಂದಹಾಗೆ ಅವರ ನೆನಪಿಗಾಗಿ ಕುಡ್ಲದ ಕೆ.ಎಸ್.ರಾವ್ ರಸ್ತೆ ಅವರ ನೆನಪಿಗಾಗಿ ನಾಮಕರಣ ಮಾಡಲಾಗಿದೆ. ಈ ರಸ್ತೆಯಲ್ಲಿ ಬಹಳಷ್ಟು ವ್ಯಾಪಾರ ಕೇಂದ್ರಗಳು, ಬ್ಯಾಂಕ್ಗಳು ಕಾರ್ಯಾಚರಿಸುತ್ತಿದೆ.
pics: Nandan Bhat




