Tagged: mangalore

ಕುಡ್ಲದ ಹುಡುಗನ ಭರ್ಜರಿ ಸೆಂಚುರಿಯಾಟ

ಮಂಗಳೂರಿನ ಹುಡುಗ ಕಣ್ಣನೂರು ಲೋಕೇಶ್ ರಾಹುಲ್ ವಿಶ್ವ‌ಕಪ್ ಕ್ರಿಕೆಟ್ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 111 ರನ್ ಗಳನ್ನು ಸಿಡಿಸುವ ಮೂಲಕ ವಿಶ್ವ ಕಪ್ ನಲ್ಲಿ ತನ್ನ ಮೊದಲ ಶತಕ ದಾಖಲಿಸಿಕೊಂಡರು. ಅವರು ಬೇಸಿಕಲಿ ಮಂಗಳೂರಿನ ಸುರತ್ಕಲ್ ಎನ್ಐಟಿಕೆಯಲ್ಲಿ ಪ್ರೊಫೆಸರ್ ಆಗಿದ್ದ ಕೆ.ಎನ್. ಲೋಕೇಶ್ ಅವರ ಪುತ್ರ. ಸುರತ್ಕಲ್ ಎನ್ಐ ಟಿಕೆಯ ಕ್ರಿಕೆಟ್ ಮೈದಾನದಲ್ಲಿ ಆಡಿದ ಹುಡುಗ ಕೆ.ಎಲ್.ರಾಹುಲ್ ಶತಕದ ಮೂಲಕ ವಿಶ್ವಕಪ್ ನಲ್ಲಿ ಭಾರತಕ್ಕೆ ಗೆಲುವಿನ ದಡ ಸೇರಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಕುಡ್ಲದಲ್ಲಿರುವ ಆರ್ಮಿ ಫ್ಯಾಮಿಲಿ ಕತೆ

ದೇಶ ಸೇವೆಗೂ ಕುಡ್ಲದ ಮಂದಿಗೂ ಆಗಿ ಬರುವುದಿಲ್ಲ ಎನ್ನುವ ಮಾತೇ ಎಲ್ಲೆಡೆ ಜೋರಾಗಿ ಕೇಳಿ ಬರುತ್ತಿದ್ದಾಗ ಕುಡ್ಲದ ಅರ್ಮಿ ಫ್ಯಾಮಿಲಿಯ ಕತೆ ತುಂಬಾನೇ ವಿಶೇಷವಾಗಿದೆ.
ಒಂದೇ ಫ್ಯಾಮಿಲಿಯ ಎಲ್ಲರೂ ಅರ್ಮಿಯಲ್ಲಿದ್ದಾರೆ. ತಂದೆ, ಮಗ, ಸೊಸೆ, ತಾಯಿ ಎಲ್ಲರೂ ದೇಶಸೇವೆಗೆ ತಮ್ಮ ಭಕ್ತಿಯನ್ನು ಮುಡಿಪಾಗಿಟ್ಟುಕೊಂಡಿದ್ದಾರೆ. ಅದರಲ್ಲಿ ಪುತ್ರ ಯುದ್ದದಲ್ಲಿ ಮೃತಪಡುತ್ತಾನೆ.
ಇದು ಕುಲಶೇಖರದ ಪ್ಲೈಟ್ ಲೆಫ್ಟಿನಂಟ್ ರೊನಾಲ್ಡ್ ಕೇವಿನ್ ಸೆರಾವೋ ಎನ್ನುವ ವೀರ ಯೋಧನ ಕತೆ. ಕುಲಶೇಖರದಲ್ಲಿ ಇವರ ಹೆಸರಿನ ರಸ್ತೆ ಕೂಡ ಇದೆ. ಕೆವಿನ್ ತಂದೆ ಜೋನ್ ಸೆರಾವೋ ಭಾರತೀಯ ಸೇನಾ ಪಡೆಯಲ್ಲಿ ತೋಪು ಪಡೆಯ ಲೆಫ್ಟಿನಂಟ್ ಕರ್ನಲ್ , ಆರ್ಮಿಯಲ್ಲಿ ವೈದ್ಯರಾಗಿ ದುಡಿದ ಡಾ. ಜೆಸ್ಸಿಕಾ ಸೆರಾವೋ, ನಂತರ ಅವರ ಸೊಸೆ ಪ್ಲೈಟ್ ಲೆಫ್ಟಿನಂಟ್ ದೀಪಿಕಾ. ಈ ಕುಟುಂಬದ ಕೇವಿನ್ 2007ರ ಇದೇ ಗಣರಾಜೋತ್ಸವದ ಪೆರೇಟ್‌ನಲ್ಲಿ ಫ್ಲೈ ಪಾಸ್ಟ್ ಏರ್ ಶೋನಲ್ಲಿ ಭಾಗವಹಿಸಲು ಯುದ್ಧ ವಿಮಾನ ಜಾಗ್ವರ್ ನಲ್ಲಿ ಅಭ್ಯಾಸ ನಡೆಸುತ್ತಿದ್ದಾಗ 2007ರಲ್ಲಿ ವೀರಮರಣ ಪಡೆದವರು.

ಕುಡ್ಲದಲ್ಲಿ ಎರಡು ಆರ್ಮಿ ರಸ್ತೆ ! ಭಾರತೀಯ ಸೇನಾ ಪಡೆಯಲ್ಲಿ ವಿಶೇಷವಾದ ಸ್ಥಾನ ಪಡೆದುಕೊಂಡು ಮೃತರಾದ ಎರಡು ಆರ್ಮಿಯ ಆಫೀಸರ್‌ಗಳ ಸವಿನೆನಪಿಗಾಗಿ ಮಂಗಳೂರಿನಲ್ಲಿ ಎರಡು ರಸ್ತೆಗಳನ್ನು ಅವರ ಹೆಸರುಗಳಿಂದ ಕರೆಯಲಾಗುತ್ತಿದೆ.
ಕದ್ರಿಯ ಒಂದು ರಸ್ತೆಯನ್ನು ನೌಕಾ ಪಡೆಯ ಹಿರಿಯ ಅಧಿಕಾರಿ ಮಂಗಳೂರು ಮೂಲದ ಈಗ ದಿವಂಗತ ಜಾನ್ ಮಾರ್ಟಿಸ್ ಅವರ ರಸ್ತೆ ಎಂದು ಕರೆದರೆ, ಕುಲಶೇಖರದ ಕುಚ್ಚಿಕಾಡ್ ರಸ್ತೆಯನ್ನು ಪ್ಲೈಟ್ ಲೆಫ್ಟಿನಂಟ್ ಕೆವಿನ್ ರೋನಾಲ್ಡ್ ಸೆರಾವೋ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ. ಇದು ಕುಡ್ಲದ ಎರಡು ಸೇನಾ ರಸ್ತೆಗಳೆಂದು ಈಗಾಗಲೇ ಮಾತಾಗಿದೆ.

ಕುಡ್ಲದ ಜನರಿಗೆ ಮಾತ್ರ ಗೊತ್ತು ಈ ಎಣ್ಣೆ

ಯಾವುದೇ ಕೈ ಕಾಲು ನೋವು ಇರಲಿ ಕಡೆಂಜಿ ತ್ಯಾಂಪಣ್ಣ ಭಂಡಾರಿ ಅವರ ಎಣ್ಣೆಯನ್ನು ಹಚ್ಚಿ ಸ್ವಲ್ಪ ಹೊತ್ತಿನ ಬಳಿಕ‌ ನಿಧಾನವಾಗಿ ಬಿಸಿ ನೀರಿನ ಶಾಕ ಕೊಡುತ್ತಾ ಹೋದರೆ ಸಾಕು ನೋವು ಮಂಗ ಮಾಯವಾಗಿ ಬಿಡುತ್ತದೆ. ಇದೇ ಕಾರಣದಿಂದ ಈ ಎಣ್ಣೆಯ ಕುರಿತು ಕುಡ್ಲದ ಜನರಿಗೆ ಬಹಳಷ್ಟು ತಿಳಿದಿದಿದೆ.

ಕುಡ್ಲದ ಮಳೆಗಾಲದ ಡಿಶ್ ಪತ್ರೊಡೆ

ಕುಡ್ಲ ಅದರಲ್ಲೂ ಕರಾವಳಿಯಲ್ಲಿ ಮಳೆರಾಯನ ಎಂಟ್ರಿಯಾಗುತ್ತಿದ್ದಂತೆ ಕೆಸುವಿನ ಎಲೆಯ ಪತ್ರೊಡೆ ನೆನಪಿಗೆ ಬರುತ್ತದೆ. ಕರಾವಳಿ ಎಲ್ಲರಿಗೂ ಇದನ್ನು ಮಾಡುವ ಹಾಗೂ ತಿನ್ನುವ ವಿಚಾರ ಗೊತ್ತಿದೆ. ಕರಾವಳಿಯ ಒಂದೊಂದು ಊರಿನವರು ಒಂದೊಂದು ರೀತಿಯಲ್ಲಿ ಪತ್ರೊಡೆ ಮಾಡುತ್ತಾರೆ ಎಲ್ಲಕ್ಕೂ ಒಂದೇ ರೀತಿಯ ಟೇಸ್ಟ್ ಮಾರಾಯ್ರೆ. ಮಳೆಗಾಲದ ಎಂಟ್ರಿ ಅಗುತ್ತಾ ಕೆಸುವಿನ ಎಲೆಗಳು ಸಮೃದ್ಧ ವಾಗಿ ಬೆಳೆಯುತ್ತದೆ. ಇದು ಬರೀ ಕರಾವಳಿಯಲ್ಲಿ ಮಾತ್ರವಲ್ಲ ರಾಜ್ಯದ ಮಲೆನಾಡಿನಲ್ಲೂ ಇದನ್ನು ಮಾಡುತ್ತಾರೆ. ಮಂಗಳೂರಿನ ಕೆಲವು ಖ್ಯಾತ ಹೋಟೆಲ್ ಗಳು ಇದನ್ನು ವರ್ಷವಿಡೀ ಮಾಡುವ ಮೂಲಕ ಗ್ರಾಹಕರಿಗೆ ವರ್ಷಪೂರ್ತಿ ಪತ್ರೊಡೆ ತಿನ್ನಿಸುವ ಕೆಲಸ ಮಾಡುತ್ತಿದೆ ಆದರೆ ಮಳೆ ಬಂದಾಗ ಮನೆಯ ಅಡುಗೆ ಕೋಣೆಯಲ್ಲಿ ಸಿದ್ದವಾಗುವ ಪತ್ರೊಡೆ ಮುಂದೆ ಯಾವುದು ಲೆಕ್ಕಕ್ಕೆ ಇಲ್ಲ ಬಿಡಿ.

20 ದಿನದಲ್ಲಿ 77,475 ಗಿಡ ನೆಟ್ಟವರ ಕತೆಯಿದು !

ಒಂದಲ್ಲ ಎರಡಲ್ಲ ಬರೋಬರಿ 20 ದಿನಗಳಲ್ಲಿ 77,475 ಗಿಡಗಳನ್ನು ನೆಟ್ಟು ಹಸಿರು ಇಳೆಗೆ ಸಾಕ್ಷಿಯಾದರು. ಹೌದು. ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ 124 ಚರ್ಚ್ ಗಳಲ್ಲಿ ನಡೆದ ಕಾರ್ಯಕ್ರಮ ವಿದು.
ಲಾವ್ದಾತೋ ಸಿ ಭಾನುವಾರ ಜೂ.30 ರಂದು ನಡೆಯಿತು. ಅದಕ್ಕೂ ಮೊದಲು ಅಂದರೆ ಜೂ.10 ರಿಂದ ಭಾನುವಾರದ ವರೆಗೆ ಈ ಹಸಿರಿನ ಅಭಿಯಾನ ನಡೆದಿದೆ.