ಮಂಗಳೂರಿನ ಯಾವುದೇ ಮೂಲೆಗೆ ಹೋದರೂ ಕೂಡ ಗುಣಮಟ್ಟದ ಜಿನಸಿ ಅದರಲ್ಲೂ ಬಹಳ ನ್ಯಾಯಯುತ ಬೆಲೆಯಲ್ಲಿ ಗ್ರಾಹಕರಿಗೆ ಜಿನಸು ಒದಗಿಸುವ ಮಳಿಗೆ ಎಂದರೆ ಅದು ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ನಲ್ಲಿರುವ ಫಾತಿಮಾ ಸ್ಟೋರ್. ಮಂಗಳೂರಿನ ವ್ಯಾಪ್ತಿಯಲ್ಲಿ ಬಹಳ ಹಳೆಯ ಮಳಿಗೆ ಇದಾಗಿದ್ದು, ಇಲ್ಲಿನ ಸಿಬ್ಬಂದಿಗಳ ಅವಿರತ ನಗುಮೊಗದ ಸೇವೆ ಗ್ರಾಹಕರಿಗೆ ಬಹಳಷ್ಟು ಖುಷಿಕೊಡುತ್ತಿದೆ.
Tagged: mangalore
ವಿಶ್ವದಲ್ಲಿಯೇ ಕುಡ್ಲ ಸೇಫ್ ಸಿಟಿ
ಅಮೆರಿಕದ ಚಿಕಾಗೊ ಮೂಲದ ’ಟ್ರಿಬ್ಯೂನ್’ ಪತ್ರಿಕೆಯ ಸೋದರ ಸಂಸ್ಥೆ ‘ದಿ ಡೈಲಿ ಮೇಲ್’ ಎಂಬ ಪ್ರವಾಸ ಹಾಗೂ ಆಹಾರ ಕುರಿತ ವೆಬ್ಸೈಟ್ 2018ರ ಅಕ್ಟೋಬರ್ನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ವಿಶ್ವದಲ್ಲಿ ಮಂಗಳೂರು 31ನೇ ಸ್ಥಾನ ಪಡೆದಿದೆ. ವೆಬ್ಸೈಟ್ ಪ್ರಕಾರ ಸುರಕ್ಷತೆಯ ವಿಷಯದಲ್ಲಿ ಕಡಲ ನಗರಿ ಮಂಗಳೂರು ಎಂದಿಗೂ ಸೇಫ್ ಸಿಟಿ ಎನ್ನುವ ಖ್ಯಾತಿ ಪಡೆದುಕೊಂಡಿದೆ. ವಿಶೇಷವಾಗಿ ವಿಶ್ವದ 50 ಪಟ್ಟಿಯಲ್ಲಿ ಮಂಗಳೂರು ಬಂದಿರೋದು ಇಲ್ಲಿನ ಮಂದಿಗೆ ಹೆಮ್ಮೆಯ ವಿಚಾರ ಎನ್ನಬಹುದು.
ಕುಡ್ಲದ ಹುಡುಗಿ ಪ್ರಿಯಾರ ಮುಡಿಗೆ ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ ಕಿರೀಟ
ಆಸೀಸ್ ನೆಲದಲ್ಲಿ ಕುಡ್ಲದ ಹುಡುಗಿಯೊಬ್ಬರು ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ ಕಿರೀಟವನ್ನು ಗೆದ್ದುಕೊಳ್ಳುವುದೇ ಹೆಮ್ಮೆಯ ವಿಚಾರ. ಆಸ್ಟ್ರೇಲಿಯಾದ ವಿಕ್ಟೋರಿಯಾ ಕಾನೂನು ಕಾಲೇಜಿನಲ್ಲಿ ಪದವಿ ಪಡೆದ ಕಾರ್ಕಳ ಬೇಸಿಕಲಿ ಬೆಳ್ಮಣ್ಣುವಿನ ಪ್ರಿಯಾ ಅವರು ಪ್ರಶಸ್ತಿ ಗೆದ್ದು ಬಂದಿದ್ದಾರೆ. ಅವರು ಹುಟ್ಟಿದ್ದು ಬೆಳ್ಮಣ್ಣು ಪ್ರದೇಶ ಓದು, ಬೆಳವಣಿಗೆ ಎಲ್ಲವೂ ಮಸ್ಕತ್, ಮೆಲ್ಬೋರ್ನ್ನಲ್ಲಿ ನಡೆದಿದೆ. ತಂದೆ, ತಾಯಿ ಇಬ್ಬರು ಕುಡ್ಲದವರು.
104 ವರ್ಷವಾದರೂ ಅವರು ಇನ್ನು ಕಾರ್ ಬಿಡ್ತಾರೆ !
ಜೀವನ ಉತ್ಸಾಹ ಅಂದರೆ ಇದೇ ಇರಬೇಕು ಮಾರಾಯ್ರೆ. ಮಂಗಳೂರಿನ ಹ್ಯಾಟ್ ಹಿಲ್ ನಿವಾಸಿ ಮೈಕಲ್ ಡಿಸೋಜ ಅವರಿಗೆ ಈಗ ಜಸ್ಟ್ 104 ವರ್ಷವಷ್ಟೆ ಆದರೆ ಈಗಲೂ ಕಾರು ಬಿಡುತ್ತಾರೆ.
ಶತಮಾನದ ಹೊಸ್ತಿಲು ದಾಟಿದರೂ ತನ್ನ ೮೫ ವರ್ಷಗಳಿಂದ ಚಾಲನೆ ಮಾಡುವ ಪ್ರವೃತ್ತಿಯನ್ನು ಇನ್ನೂ ಬಿಡಲಿಲ್ಲ ….” ನನ್ನನ್ನು ಕರೆದುಕೊಂಡು ಹೋಗಲು ದೇವರು ಗಾಡಿ ತಂದಾಗಲೇ ನಾನು ವಾಹನ ಚಾಲನೆ ಮಾಡುವುದನ್ನು ನಿಲ್ಲಿಸುತ್ತೇನೆ ಎಂದು ನಗುತ್ತಾರೆ. ಇಷ್ಟು ವರ್ಷದ ಚಾಲನೆಯಲ್ಲಿ ಒಂದು ಬಾರಿ ಮಾತ್ರ ಇವ್ರ್ ಮೇಲೆ ಫೈನ್ ಬಿದ್ದಿದೆಯಂತೆ ಊಟಿಯಲ್ಲಿ ಜನಿಸಿದ ಇವರು ನಂತರ ಕೆಲಸ ನಿಮಿತ್ತ ಮಂಗಳೂರು ಬಂದ ಇವರು ಬಳಿಕ ಇಲ್ಲಿಯೇ ನೆಲೆಸಿದರು. ಮೈಕಲ್ ಮಾಮನಿಗೊಂದು ವಿಶ್ ಇರಲಿ.
ಅಡಕೆ ಹಾಳೆ ಟೋಪಿಯಲ್ಲಿ ಮೆಡಿಸಿನ್ ಪವರ್
ಅಡಕೆ ಹಾಳೆ ಟೋಪಿಗೆ ಅಂತಾರಾಷ್ಟ್ರ ಮಟ್ಟದ ಹೆಸರು ಸಲ್ಲುತ್ತಿದೆ. ಅಡಕೆ ಹಾಳೆ ಟೋಪಿಯಲ್ಲಿ ಔಷಧೀಯ ಗುಣಗಳ ಕುರಿತು ಅಧ್ಯಯನ ನಡೆಸಲು, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಲಂಡನ್ನ ಪ್ರಮುಖ ಪರಿಸರ ವಿಜ್ಞಾನಿ ಗ್ಯಾರಿಡೆ ಲಾ ಪೊಮೆರೊಯಿನ್, ಮಹಾರಾಷ್ಟ್ರದ ಪುಣೆ ನಿವಾಸಿ, ಯುಎಸ್ನಲ್ಲಿರುವ ಸೆನ್ನಿವೆಲ್ ಕಂಪನಿ ಮಾಲೀಕ ಮುಗಧಾಮುಲ್ಲ ಅವರನ್ನು ಒಳಗೊಂಡ ತಂಡ ಜೂ. 29 ರಿಂದ ಜು.1ರ ತನಕ ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಜಾಲ್ಸೂರಿಗೆಆಗಮಿಸಲಿದೆ.
ಪರಿಸರವಾದಿ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಡಾ. ಆರ್.ಕೆ.ನಾಯರ್ ಅವರ ಜಾಲ್ಸೂರಿನಲ್ಲಿರುವ ನಿವಾಸಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ದೇಶದ ೯ ರಾಜ್ಯಗಳಲ್ಲಿ 7 ಲಕ್ಷದಷ್ಟು ಸಸಿಗಳನ್ನು ನೆಟ್ಟು ಗಮನ ಸೆಳೆದಿದ್ದಾರೆ ಡಾ. ಆರ್. ಕೆ.ನಾಯರ್. ಅವರಿಗೆ ನೇಪಾಳದಲ್ಲಿ ನೀಡಿದ ಸ್ವಾಗತ ಕಾರ್ಯಕ್ರಮದಲ್ಲಿ ಗ್ಯಾರಿಡಾ ಲಾ ಪೊಮೆರೊಯಿನ್ ಹಾಗೂ ಮುಗದಮುಲ್ಲಾ ಎಂಬವರ ಪರಿಚಯವಾಗಿದೆ. ಡಾ. ಆರ್.ಕೆ.ನಾಯರ್ ಅವರ ತಲೆಯಲ್ಲಿದ್ದ ಅಡಕೆ ಹಾಳೆಯ ಟೋಪಿಯನ್ನು ಸುಮಾರು 15 ನಿಮಿಷಗಳ ಕಾಲ ತಲೆ ಮೇಲಿಟ್ಟಾಗ ಉಂಟಾದ ಅನುಭವದ ಹಿನ್ನೆಲೆಯಲ್ಲಿ ಸಂಶೋಧನೆ ನಡೆಸಲು ಪ್ರೇರಣೆಯಾಗಿದೆ.
ಹಾಳೆ ಟೋಪಿ ಧರಿಸಿದರೆ ತಲೆನೋವು, ಕಣ್ಣು ನೋವು, ಸಂಧಿ ನೋವು, ಸ್ನಾಯು ಸೆಳೆತ ನಿವಾರಣೆಯಾಗುತ್ತದೆ ಎಂಬುದನ್ನು ಈಗಾಗಲೇ ನಡೆಸಿದ ಸಂಶೋಧನೆಯಿಂದ ತಿಳಿಯಲಾಗಿದೆ. ಮಾತ್ರವಲ್ಲ ಈ ಟೋಪಿ ಧರಿಸಿದರೆ ಒಳ್ಳೆಯ ನಿದ್ರೆ ಮಾಡಲು ಸಹ ಸಹಾಯವಾಗುತ್ತದೆ ಎಂಬುದೂ ಸಹ ಸಂಶೋಧನೆಯ ಮೂಲಕವೇ ಕಂಡುಕೊಳ್ಳಲಾಗಿದೆ. ಅಲ್ಲದೇ, ಮೊಬೈಲ್ ಟವರ್ ಗಳ ವಿಕಿರಣವನ್ನು ತಡೆಯಲುಈ ಹಾಳೆ ಟೋಪಿ ಧರಿಸಿದರೆ ಸಾಧ್ಯವಾಗುತ್ತದೆ ಎಂಬುದುಸಾಬೀತಾಗಿದೆ. ಮೆದುಳಿನ ಕಾರ್ಯಚಟುವಟಿಕೆ ನಿಯಂತ್ರಣದಲ್ಲೂಹಾಳೆಯ ಪರಿಣಾಕಾರಿಯಾಗಿದೆ.
ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಹಾಳೆ ಟೋಪಿಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಬಯಲುಗಳಲ್ಲಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಈಗಲೂ ಬಳಸುತ್ತಿದ್ದಾರೆ. ಕೃಷಿ ಸಂಬಂಧಿತ ನಾನಾ ಕಾರ್ಯಕ್ರಮಗಳಲ್ಲಿ ಈಗಲೂ ವೇದಿಕೆಯಲ್ಲಿ ಅತಿಥಿಗಳು ಹಾಳೆ ಟೋಪಿ ಧರಿಸುತ್ತಾರೆ.




