Tagged: citynews

ಕುಡ್ಲದಲ್ಲಿರುವ ಆರ್ಮಿ ಫ್ಯಾಮಿಲಿ ಕತೆ

ದೇಶ ಸೇವೆಗೂ ಕುಡ್ಲದ ಮಂದಿಗೂ ಆಗಿ ಬರುವುದಿಲ್ಲ ಎನ್ನುವ ಮಾತೇ ಎಲ್ಲೆಡೆ ಜೋರಾಗಿ ಕೇಳಿ ಬರುತ್ತಿದ್ದಾಗ ಕುಡ್ಲದ ಅರ್ಮಿ ಫ್ಯಾಮಿಲಿಯ ಕತೆ ತುಂಬಾನೇ ವಿಶೇಷವಾಗಿದೆ.
ಒಂದೇ ಫ್ಯಾಮಿಲಿಯ ಎಲ್ಲರೂ ಅರ್ಮಿಯಲ್ಲಿದ್ದಾರೆ. ತಂದೆ, ಮಗ, ಸೊಸೆ, ತಾಯಿ ಎಲ್ಲರೂ ದೇಶಸೇವೆಗೆ ತಮ್ಮ ಭಕ್ತಿಯನ್ನು ಮುಡಿಪಾಗಿಟ್ಟುಕೊಂಡಿದ್ದಾರೆ. ಅದರಲ್ಲಿ ಪುತ್ರ ಯುದ್ದದಲ್ಲಿ ಮೃತಪಡುತ್ತಾನೆ.
ಇದು ಕುಲಶೇಖರದ ಪ್ಲೈಟ್ ಲೆಫ್ಟಿನಂಟ್ ರೊನಾಲ್ಡ್ ಕೇವಿನ್ ಸೆರಾವೋ ಎನ್ನುವ ವೀರ ಯೋಧನ ಕತೆ. ಕುಲಶೇಖರದಲ್ಲಿ ಇವರ ಹೆಸರಿನ ರಸ್ತೆ ಕೂಡ ಇದೆ. ಕೆವಿನ್ ತಂದೆ ಜೋನ್ ಸೆರಾವೋ ಭಾರತೀಯ ಸೇನಾ ಪಡೆಯಲ್ಲಿ ತೋಪು ಪಡೆಯ ಲೆಫ್ಟಿನಂಟ್ ಕರ್ನಲ್ , ಆರ್ಮಿಯಲ್ಲಿ ವೈದ್ಯರಾಗಿ ದುಡಿದ ಡಾ. ಜೆಸ್ಸಿಕಾ ಸೆರಾವೋ, ನಂತರ ಅವರ ಸೊಸೆ ಪ್ಲೈಟ್ ಲೆಫ್ಟಿನಂಟ್ ದೀಪಿಕಾ. ಈ ಕುಟುಂಬದ ಕೇವಿನ್ 2007ರ ಇದೇ ಗಣರಾಜೋತ್ಸವದ ಪೆರೇಟ್‌ನಲ್ಲಿ ಫ್ಲೈ ಪಾಸ್ಟ್ ಏರ್ ಶೋನಲ್ಲಿ ಭಾಗವಹಿಸಲು ಯುದ್ಧ ವಿಮಾನ ಜಾಗ್ವರ್ ನಲ್ಲಿ ಅಭ್ಯಾಸ ನಡೆಸುತ್ತಿದ್ದಾಗ 2007ರಲ್ಲಿ ವೀರಮರಣ ಪಡೆದವರು.

ಕುಡ್ಲದಲ್ಲಿ ಎರಡು ಆರ್ಮಿ ರಸ್ತೆ ! ಭಾರತೀಯ ಸೇನಾ ಪಡೆಯಲ್ಲಿ ವಿಶೇಷವಾದ ಸ್ಥಾನ ಪಡೆದುಕೊಂಡು ಮೃತರಾದ ಎರಡು ಆರ್ಮಿಯ ಆಫೀಸರ್‌ಗಳ ಸವಿನೆನಪಿಗಾಗಿ ಮಂಗಳೂರಿನಲ್ಲಿ ಎರಡು ರಸ್ತೆಗಳನ್ನು ಅವರ ಹೆಸರುಗಳಿಂದ ಕರೆಯಲಾಗುತ್ತಿದೆ.
ಕದ್ರಿಯ ಒಂದು ರಸ್ತೆಯನ್ನು ನೌಕಾ ಪಡೆಯ ಹಿರಿಯ ಅಧಿಕಾರಿ ಮಂಗಳೂರು ಮೂಲದ ಈಗ ದಿವಂಗತ ಜಾನ್ ಮಾರ್ಟಿಸ್ ಅವರ ರಸ್ತೆ ಎಂದು ಕರೆದರೆ, ಕುಲಶೇಖರದ ಕುಚ್ಚಿಕಾಡ್ ರಸ್ತೆಯನ್ನು ಪ್ಲೈಟ್ ಲೆಫ್ಟಿನಂಟ್ ಕೆವಿನ್ ರೋನಾಲ್ಡ್ ಸೆರಾವೋ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ. ಇದು ಕುಡ್ಲದ ಎರಡು ಸೇನಾ ರಸ್ತೆಗಳೆಂದು ಈಗಾಗಲೇ ಮಾತಾಗಿದೆ.

ಕುಡ್ಲದ ಜನರಿಗೆ ಮಾತ್ರ ಗೊತ್ತು ಈ ಎಣ್ಣೆ

ಯಾವುದೇ ಕೈ ಕಾಲು ನೋವು ಇರಲಿ ಕಡೆಂಜಿ ತ್ಯಾಂಪಣ್ಣ ಭಂಡಾರಿ ಅವರ ಎಣ್ಣೆಯನ್ನು ಹಚ್ಚಿ ಸ್ವಲ್ಪ ಹೊತ್ತಿನ ಬಳಿಕ‌ ನಿಧಾನವಾಗಿ ಬಿಸಿ ನೀರಿನ ಶಾಕ ಕೊಡುತ್ತಾ ಹೋದರೆ ಸಾಕು ನೋವು ಮಂಗ ಮಾಯವಾಗಿ ಬಿಡುತ್ತದೆ. ಇದೇ ಕಾರಣದಿಂದ ಈ ಎಣ್ಣೆಯ ಕುರಿತು ಕುಡ್ಲದ ಜನರಿಗೆ ಬಹಳಷ್ಟು ತಿಳಿದಿದಿದೆ.

ಗೆದ್ದಲು ನಾಶಕ್ಕೆ ದಡ್ಡಾಲ ಮರದ ತೊಗಡೆಯ ಮೆಡಿಸಿನ್

ಕರಾವಳಿಯ ಬೆಟ್ಟ ಗುಡ್ಡಗಳಲ್ಲಿ ಹೇರಳವಾಗಿ ಬೆಳೆಯುವ ದಡ್ಡಾಲ ಮರದ ತೊಗಟೆಯನ್ನು ಬಳಸಿಕೊಂಡು ಗೆದ್ದಲು ನಾಶಕ ದ್ರಾವಣ ತಯಾರಿಸುವ ಪುತ್ತೂರಿನ ವಿದ್ಯಾರ್ಥಿನಿಯರಿಬ್ಬರ ಸಂಶೋಧನೆ ಅಂತಾರಾಷ್ಟ್ರೀಯ ಮಟ್ಟದ ಜೀನಿಯಸ್ ಒಲಿಂಪಿಯಾಡ್‌ನಲ್ಲಿ ರಜತ ಪದಕ ಗಳಿಸಿದೆ.

ಪುತ್ತೂರಿನ ಖಾಸಗಿ ಶಾಲೆಯ ವಿದ್ಯಾರ್ಥಿನಿಯರಾದ ಸ್ತುತಿ ಎಂ.ಎಸ್. ಮತ್ತು ಸಂಧ್ಯಾ ಪ್ರಭು ಈ ಸಾಧನೆ ಮಾಡಿದ ವಿದ್ಯಾರ್ಥಿನಿಯರು. ಇವರಿಬ್ಬರೂ ಅಮೆರಿಕಾದ ನ್ಯೂಯಾರ್ಕ್‌ನ ಓಸ್‌ವೆಗೊ ಯುನಿವರ್ಸಿಟಿಯಲ್ಲಿ ಜೂನ್ 17 ರಂದು ಜರುಗಿದ ಅಂತಾರಾಷ್ಟ್ರೀಯ ಮಟ್ಟದ ಜೀನಿಯಸ್ ಒಲಿಂಪಿಯಾಡ್‌ನಲ್ಲಿ ಭಾಗವಹಿಸಿ ತಮ್ಮ ಪ್ರಾಜೆಕ್ಟ್ ಮಂಡಿಸಿ ಜಾಗತಿಕ ಮಟ್ಟದಲ್ಲಿ ಸೈ ಎನಿಸಿಕೊಂಡಿದ್ದಾರೆ.

ಯಾವುದೇ ಕೃತಕ ವಸ್ತುವಾಗಲೀ, ರಾಸಾಯನಿಕವಾಗಲೀ ಬಳಸದೆ ಕೇವಲ ದಡ್ಡಾಲ ಮರದ ತೊಗಟೆಯನ್ನು ಬಳಸಿಕೊಂಡು ಅದರಿಂದ ಈ ಜಲೀಯ ಸಾರ ತಯಾರಿಸಲಾಗಿತ್ತು. ಸಾಮಾನ್ಯವಾಗಿ ಮನೆಯ ಒಳಗೆ, ಹೊರಗೆ ಕಾಣಿಸುವ ಗೆದ್ದಲುಗಳನ್ನು ಈ ಸಾರದ ಮೂಲಕ ಸುಲಭವಾಗಿ ನಿರ್ಮೂಲನೆ ಮಾಡಬಹುದಾಗಿದೆ ಮತ್ತು ಇದರಿಂದ ಪರಿಸರಕ್ಕೆ ಮತ್ತು ಆರೋಗ್ಯಕ್ಕೆ ಹಾನಿಯಿಲ್ಲ ಎಂಬುದನ್ನು ಪ್ರಾಜೆಕ್ಟ್ ಮೂಲಕ ತೋರಿಸಿಕೊಡಲಾಗಿತ್ತು.

ಅಡಕೆ ಹಾಳೆ ಟೋಪಿಯಲ್ಲಿ ಮೆಡಿಸಿನ್ ಪವರ್

ಅಡಕೆ ಹಾಳೆ ಟೋಪಿಗೆ ಅಂತಾರಾಷ್ಟ್ರ ಮಟ್ಟದ ಹೆಸರು ಸಲ್ಲುತ್ತಿದೆ. ಅಡಕೆ ಹಾಳೆ ಟೋಪಿಯಲ್ಲಿ ಔಷಧೀಯ ಗುಣಗಳ ಕುರಿತು ಅಧ್ಯಯನ ನಡೆಸಲು, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಲಂಡನ್‌ನ ಪ್ರಮುಖ ಪರಿಸರ ವಿಜ್ಞಾನಿ ಗ್ಯಾರಿಡೆ ಲಾ ಪೊಮೆರೊಯಿನ್, ಮಹಾರಾಷ್ಟ್ರದ ಪುಣೆ ನಿವಾಸಿ, ಯುಎಸ್‌ನಲ್ಲಿರುವ ಸೆನ್ನಿವೆಲ್ ಕಂಪನಿ ಮಾಲೀಕ ಮುಗಧಾಮುಲ್ಲ ಅವರನ್ನು ಒಳಗೊಂಡ ತಂಡ ಜೂ. 29 ರಿಂದ ಜು.1ರ ತನಕ ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಜಾಲ್ಸೂರಿಗೆಆಗಮಿಸಲಿದೆ.

ಪರಿಸರವಾದಿ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಡಾ. ಆರ್.ಕೆ.ನಾಯರ್ ಅವರ ಜಾಲ್ಸೂರಿನಲ್ಲಿರುವ ನಿವಾಸಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ದೇಶದ ೯ ರಾಜ್ಯಗಳಲ್ಲಿ 7 ಲಕ್ಷದಷ್ಟು ಸಸಿಗಳನ್ನು ನೆಟ್ಟು ಗಮನ ಸೆಳೆದಿದ್ದಾರೆ ಡಾ. ಆರ್. ಕೆ.ನಾಯರ್. ಅವರಿಗೆ ನೇಪಾಳದಲ್ಲಿ ನೀಡಿದ ಸ್ವಾಗತ ಕಾರ‍್ಯಕ್ರಮದಲ್ಲಿ ಗ್ಯಾರಿಡಾ ಲಾ ಪೊಮೆರೊಯಿನ್ ಹಾಗೂ ಮುಗದಮುಲ್ಲಾ ಎಂಬವರ ಪರಿಚಯವಾಗಿದೆ. ಡಾ. ಆರ್.ಕೆ.ನಾಯರ್ ಅವರ ತಲೆಯಲ್ಲಿದ್ದ ಅಡಕೆ ಹಾಳೆಯ ಟೋಪಿಯನ್ನು ಸುಮಾರು 15 ನಿಮಿಷಗಳ ಕಾಲ ತಲೆ ಮೇಲಿಟ್ಟಾಗ ಉಂಟಾದ ಅನುಭವದ ಹಿನ್ನೆಲೆಯಲ್ಲಿ ಸಂಶೋಧನೆ ನಡೆಸಲು ಪ್ರೇರಣೆಯಾಗಿದೆ.

ಹಾಳೆ ಟೋಪಿ ಧರಿಸಿದರೆ ತಲೆನೋವು, ಕಣ್ಣು ನೋವು, ಸಂಧಿ ನೋವು, ಸ್ನಾಯು ಸೆಳೆತ ನಿವಾರಣೆಯಾಗುತ್ತದೆ ಎಂಬುದನ್ನು ಈಗಾಗಲೇ ನಡೆಸಿದ ಸಂಶೋಧನೆಯಿಂದ ತಿಳಿಯಲಾಗಿದೆ. ಮಾತ್ರವಲ್ಲ ಈ ಟೋಪಿ ಧರಿಸಿದರೆ ಒಳ್ಳೆಯ ನಿದ್ರೆ ಮಾಡಲು ಸಹ ಸಹಾಯವಾಗುತ್ತದೆ ಎಂಬುದೂ ಸಹ ಸಂಶೋಧನೆಯ ಮೂಲಕವೇ ಕಂಡುಕೊಳ್ಳಲಾಗಿದೆ. ಅಲ್ಲದೇ, ಮೊಬೈಲ್ ಟವರ್ ಗಳ ವಿಕಿರಣವನ್ನು ತಡೆಯಲುಈ ಹಾಳೆ ಟೋಪಿ ಧರಿಸಿದರೆ ಸಾಧ್ಯವಾಗುತ್ತದೆ ಎಂಬುದುಸಾಬೀತಾಗಿದೆ. ಮೆದುಳಿನ ಕಾರ‍್ಯಚಟುವಟಿಕೆ ನಿಯಂತ್ರಣದಲ್ಲೂಹಾಳೆಯ ಪರಿಣಾಕಾರಿಯಾಗಿದೆ.

ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಹಾಳೆ ಟೋಪಿಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಬಯಲುಗಳಲ್ಲಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಈಗಲೂ ಬಳಸುತ್ತಿದ್ದಾರೆ. ಕೃಷಿ ಸಂಬಂಧಿತ ನಾನಾ ಕಾರ‍್ಯಕ್ರಮಗಳಲ್ಲಿ ಈಗಲೂ ವೇದಿಕೆಯಲ್ಲಿ ಅತಿಥಿಗಳು ಹಾಳೆ ಟೋಪಿ ಧರಿಸುತ್ತಾರೆ.

ಪವಾಡ ಪುರುಷ ಸಂತ ಅಂತೋನಿ ಹಬ್ಬದ ಸಂಭ್ರಮ

ಕ್ರೈಸ್ತ ಸಮುದಾಯದ ಧಾರ್ಮಿಕ ನಂಬಿಕೆಯಲ್ಲಿ ವಿಶಿಷ್ಟ ಸ್ಥಾನದಲ್ಲಿರುವ ಸಂತರ ಪಟ್ಟಿಯಲ್ಲಿ ಸಂತ ಅಂತೋನಿ ಅವರ ಹೆಸರು ಮೊದಲ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತದೆ.
ವಿಶೇಷ ಎಂದರೆ ಮಂಗಳೂರು ಧರ್ಮಪ್ರಾಂತ್ಯದ ಬನ್ನೂರು, ಅಲ್ಲಿಪಾದೆ, ನಾರಾವಿ, ಉಜಿರೆ, ಕೂಳೂರು, ಪೆರ್ಮಾಯಿ ಚರ್ಚ್‌ಗಳ ಜತೆಗೆ ಮಿಲಾಗ್ರಿಸ್‌ನಲ್ಲೂ ಇವರ ಪುಣ್ಯ ಕ್ಷೇತ್ರವಿದೆ. ಜೆಪ್ಪುವಿನಲ್ಲಿ ಚಾರಿಟಿ ಹೋಮ್ ಕೂಡ ಪವಾಡ ಪುರುಷ ಸಂತ ಅಂತೋನಿ ಅವರ ಭಕ್ತಿಗೆ ಪೂರಕವಾದ ಸಾಕ್ಷ್ಯಗಳು.
ವಿಶೇಷ ಎಂದರೆ ಸಂತ ಅಂತೋನಿ ಅವರ ಹಬ್ಬ ಪ್ರತಿ ವರ್ಷನೂ ಮಳೆಗಾಲದಲ್ಲಿಯೇ ಬರುತ್ತದೆ. ಈ ಹಬ್ಬದ ಆಚರಣೆಯ ಸಮಯದಲ್ಲಿ ಉತ್ತಮ ಮಳೆಯಾಗುತ್ತದೆ ಎನ್ನುವ ನಂಬಿಕೆ ಬಹಳಷ್ಟು ಮಂದಿಯಲ್ಲಿ ಇರುತ್ತದೆ.
ಪವಾಡ ಪುರುಷನ ಕೃಪೆಗೆ ಪಾತ್ರರಾದರೆ ಎಲ್ಲ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ ಎನ್ನುವ ಭಕ್ತ ಸಮೂಹ ಹಬ್ಬವನ್ನು ಜೂ.೧೩ರಂದು ಆಚರಿಸುತ್ತಾರೆ.