Tagged: rain

ಶಾಲೆ,ಕಾಲೇಜಿಗೆ ಮತ್ತೆ ಮಳೆಯ ರಜೆ ಆರಂಭ

ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕುಡ್ಲದಲ್ಲಿ ಸಿಗುವ ಇಂದಿನ ತಾಜಾ ಮಾತು ಎಂಚಿನ ಬರ್ಸಾ ಮಾರಾಯ್ರೆ

ಮಳೆಗಾಲ ಎನ್ನುವ ಮಾತು ಕುಡ್ಲಕ್ಕೆ ಸರಿಯಾಗಿ ಅನ್ವಯವಾಗಲೇ ಇಲ್ಲ. ಆದರೆ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಕುಡ್ಲದ ಜನರಿಗೆ ರಿಯಲ್ ಮಳೆಗಾಲವನ್ನು ನೆನಪಿಸಿತು. ಬಹಳ ದಿನಗಳ ನಂತರ ಕುಡ್ಲದ ಜನರು ಎಂಚಿನ ಬರ್ಸಾ ಮಾರಾಯ್ರೆ ನನಲಾ ಬೋಡು( ಎಂತಹ ಮಳೆ ಮಾರಾಯ್ರೆ ಇನ್ನಷ್ಟು ಬರಲಿ) ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಲು ಸಿಕ್ಕಿದೆ. ಮಳೆರಾಯನ ಅದ್ಭುತ ಆಟ ಕ್ರಿಕೆಟ್, ರಾಜಕೀಯಕ್ಕಿಂತಲ್ಲೂ ವಿಶೇಷ ದಾಖಲೆಯಾಗಿದೆ.

ದೇಶದಲ್ಲಿಯೇ ಅಪೂರ್ವ ಕುಡ್ಲದ ಮಳೆ ರಸ್ತೆ

ದೇಶದ ಯಾವುದೇ ನಗರದಲ್ಲೂ ಮಳೆ ಬಂದಾಗ ನೀರು ರಸ್ತೆಯ ಬದಿಯಲ್ಲಿರುವ ಚರಂಡಿ ಮೂಲಕ ಹರಿದು ಹೋಗುತ್ತದೆ. ಆದರೆ ಮಂಗಳೂರಿನಲ್ಲಿ ಮಾತ್ರ ಮಳೆ ನೀರು ರಸ್ತೆಯಲ್ಲೇ ಸಾಗುತ್ತದೆ. ಸ್ಮಾರ್ಟ್ ಸಿಟಿ ಮಂಗಳೂರು ಮಳೆ ರಸ್ತೆ ನೋಡುವುದು ಚೆಂದ ಸಮಸ್ಯೆಗಳು ಮಾತ್ರ ಬಹಳವಿದೆ.

ಕುಡ್ಲದಲ್ಲಿ ಮಳೆರಾಯನ ಆಟಕ್ಕೆ ರಸ್ತೆಯಲ್ಲ ತೋಡು

ಮಳೆರಾಯನ ಆಗಮನಕ್ಕೆ ಕಾದು ಕೂತಿದ್ದ ಕುಡ್ಲದ ಜನರು ಈಗ ಫುಲ್ ಚಂಡಿ ಮುದ್ದೆ ಆಗಿದ್ದಾರೆ. ಎರಡು ದಿನಗಳಿಂದ ನಿಧಾನವಾಗಿ ಇಳೆಗೆ ಬಂದ ಮಳೆರಾಯ ಪೂರ್ಣ ಪ್ರಮಾಣದಲ್ಲಿ ತನ್ನ ಕೆಲಸ ಆರಂಭ ಮಾಡಿದ್ಸಾನೆ. ವಿಶೇಷ ಎಂದರೆ ಮಳೆರಾಯನ ಆಗಮನದ ನಿರೀಕ್ಷೆ ಇಟ್ಟು ಕೊಳ್ಳ ದ ಸ್ಥಳೀಯ ಆಡಳಿತ ತನ್ನ ಕೆಲಸವನ್ನು ಪೂರ್ಣ ಗೊಳಿಸದೇ ಇರುವುದರಿಂದ ರಸ್ತೆ ಎಲ್ಲವೂ ತೋಡುಗಳಾಗಿ ಬದಲಾಗಿದೆ. ತೋಡುಗಳು ಪೂರ್ಣ ಪ್ರಮಾಣದಲ್ಲಿ ಹೂಳು ತೆಗೆಯದ ಪರಿಣಾಮ ಪೂರ್ತಿ ತುಂಬಿ ನೀರು ರಸ್ತೆಯಲ್ಲಿ ಹರಿದಾಡುತ್ತಿದೆ.

ಇನ್ನು ಸ್ಕೂಲ್ ಗೆ ಹೊರಡುವ ಸಮಯ

ಇಂದಿನಿಂದ ಸರಕಾರ ಶಾಲೆಗಳಲ್ಲಿ ವಿದ್ಯಾರ್ಥಿ ಗಳು ಬರಲಿದ್ದಾರೆ. ಹೌದು. ಇಂದಿನಿಂದ ಶಾಲಾ ಆರಂಭ ನಡೆಯಲಿದೆ.
ಒಂದೆಡೆ ಬಿರು ಬಿಸಿಲು ಜತೆಗೆ ಮಳೆರಾಯ ಕೃಪೆ ತೋರಿಸದ ಪರಿಣಾಮ ಪುಟಾಣಿ ಮಕ್ಕಳು ಶಾಲೆಯ ದಾರಿ ಹಿಡಿಯಲೇ ಬೇಕಾಗುತ್ತದೆ.

ಮುಖ್ಯವಾಗಿ ಕೆಲವೊಂದು ಖಾಸಗಿ ಶಾಲೆಗಳು ಆರಂಭ ಕೊಂಚ ತಡವಾಗುವ ಸಾಧ್ಯತೆಯಿದೆ. ಉಳಿದಂತೆ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಪಠ್ಯ ಪುಸ್ತಕ ಬೇಗನೆ ಬಂದು ತಲುಪಿದೆ.