Tagged: school

ಶಾಲೆ,ಕಾಲೇಜಿಗೆ ಮತ್ತೆ ಮಳೆಯ ರಜೆ ಆರಂಭ

ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಆ.7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಾಲೆ,ಕಾಲೇಜಿಗೆ ಮತ್ತೆ ಮಳೆಯ ರಜೆ ಆರಂಭ

ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕುಡ್ಲದಲ್ಲಿ ಡೆಂಗೆ ಜ್ವರಕ್ಕೆ ಇಬ್ಬರು ವಿದ್ಯಾರ್ಥಿಗಳು ಬಲಿ

ಕುಡ್ಲದಲ್ಲಿ ಡೆಂಗೆಯ ಡಂಗುರ ಜೋರಾಗಿದೆ. ಕಳೆದ ಒಂದು ತಿಂಗಳ ಒಳಗಡೆ 320 ಕ್ಕೂ ಡೆಂಗೆ ಪಾಸಿಟಿವ್ ಪ್ರಕರಣ ಬರೀ ಕುಡ್ಲದಲ್ಲಿ ಕಾಣಿಸಿಕೊಂಡಿದೆ. ಇದರ ಜತೆಯಲ್ಲಿ ಕುಡ್ಲದಲ್ಲಿ ಯೇ ಈಗಾಗಲೇ ಮೂರು ಮಂದಿಯನ್ನು ಬಲಿ ಪಡೆದಿರುವ ಡೆಂಗೆ ಈ ಬಾರಿ ರಾಜ್ಯದಲ್ಲಿ ಯೇ ಅತೀ ಹೆಚ್ಚು ಪ್ರಕರಣ ಗಳು ಬರೀ ದಕ್ಷಿಣ ಕನ್ನಡ ಮಂಗಳೂರಿನಲ್ಲಿ ಕಾಣಿಸಿಕೊಂಡಿದೆ.
ವಿಶೇಷವಾಗಿ ಮಂಗಳೂರಿನ ಶಾಲೆಯೊಂದರಲ್ಲಿ ಮೂರನೇ ತರಗತಿ ಓದುವ ವಿದ್ಯಾರ್ಥಿ ಯೊಬ್ಬರು ಬುಧವಾರ ಮೃತಪಟ್ಟರೆ ಗುರುವಾರ ಏಳನೇ ತರಗತಿ ಓದುವ ವಿದ್ಯಾರ್ಥಿನಿ ಯೊಬ್ಬರು ಮೃತ ರಾಗಿದ್ದಾರೆ. ಆರೋಗ್ಯ ಇಲಾಖೆ ಪೂರ್ಣ ಪ್ರಮಾಣದಲ್ಲಿ ಕೆಲಸಕ್ಕೆ ಇಳಿಯದೇ ಇರುವುದರ ಜತೆಗೆ ಜನರಲ್ಲಿ ಆರೋಗ್ಯ ಕಾಳಜಿ ಇಲ್ಲದೇ ಇರುವುದು ಇದಕ್ಕೆ ಬಹುಮುಖ್ಯ ಕಾರಣವಾಗಿದೆ.

ಏಕಾಗ್ರತೆ ಸಾಧಿಸಲು ಯೋಗ ಅಗತ್ಯ

ಪ್ರಾಚೀನ ಕಾಲದಿಂದಲ್ಲೂ ಋಷಿಮುನಿಗಳು ಯೋಗದಿಂದ ಸತ್ಯದರ್ಶನವನ್ನು ಕಂಡುಕೊಂಡು ಬಂದಿದ್ದಾರೆ. ಆರೋಗ್ಯಕ್ಕೂ, ಯೋಗಕ್ಕೂ ಅವಿನಾಭಾವ ಸಂಬಂಧವಿದೆ. ಓಂಕಾರಕ್ಕೆ ಅಗಾಧವಾದ ಶಕ್ತಿಯಿದೆ. ಓಂಕಾರವನ್ನು ನಮ್ಮದಾಗಿಸಿಕೊಂಡರೆ ಏಕಾಗ್ರತೆ ಸಾಧಿಸಲು ಸಾಧ್ಯ. ಯೋಗ ನಿಜವಾದ ಬೆಳಕಿನೆಡೆಗೆ ಕೊಂಡೊಯ್ಯುತ್ತದೆ ಇದರಿಂದ ಬದುಕನ್ನು ಸುಂದರಗೊಳಿಸಲು ಸಾಧ್ಯ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬಿಜಿಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿ, ಯೋಗದ ಅಸ್ಮಿತೆಯನ್ನು ತಾಯಿಯ ಗರ್ಭದಿಂದಲೇ ಗುರುತಿಸಬಹುದು. ಯೋಗ ಎಂದರೆ ದೈಹಿಕ ಮಾನಸಿಕ ಆಚರಣೆಗಳ ಬೋಧನಾ ಶಾಲೆ ಎಂದು ಕರೆಯಬಹುದು. ವ್ಯಕ್ತಿಯು ತನ್ನನ್ನು ತಾನು ಅರ್ಥಮಾಡಿಕೊಂಡು ಅನುಭೂತಿಯನ್ನು ಪಡೆಯಲು ಯೋಗ ಅಗತ್ಯವಾಗಿದೆ. ಜೀವನದೊಂದಿಗೆ ಪರಮಾತ್ಮನನ್ನು ಲೀನವಾಗಿಸುವುದೇ ಯೋಗ, ಮಾನವ ಪ್ರತಿ ದಿನ ಮನೋಗ್ಲಾನಿಯಾಗಿ ಬದುಕುತ್ತಿದ್ದಾನೆ. ಅವನು ತಿನ್ನುವ ಆಹಾರ, ಬದುಕುವ ಪರಿಸರ ಶರೀರವನ್ನು ಜಾಡ್ಯವಾಗಿಸಿದೆ. ಈ ಶಾರೀರಿಕ ಬಾಧೆಯನ್ನು ಮೀರಲು ಯೋಗಸಾಧನಗಳು ಸಹಕಾರಿಯಾಗಿದೆ ಎಂದರು.

ಹೊಸ್ಮಾರು ಬಲ್ಯೊಟ್ಟು ಗುರುಕುಲ ಆಶ್ರಮದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಯೋಗವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದೆ. ಭಗವದ್ಗೀತೆಯ ೧೮ನೇ ಅಧ್ಯಾಯವು ಯೋಗದ ಬಗ್ಗೆ ಮಾತನಾಡುತ್ತದೆ ಎಂದರಲ್ಲದೇ ತಪಸ್ವಿಯಾಗಲು ಯೋಗ ಪ್ರಧಾನವಾದ ಅಸ್ತ್ರ ಎಂದರು. ಕಾರ್ಯಕ್ರಮದಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸುಬ್ಬಕಾರಡ್ಕ, ಬಿಜಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಲತಾ ರಾಜಾರಾಮ್, ಬಿಜಿಎಸ್ ಎಜುಕೇಷನ್ ಸೆಂಟರ್‌ನ ಪ್ರಾಂಶುಪಾಲರಾದ ರೇಷ್ಮಾ ಸಿ ನಾಯರ್, ಬಿಜಿಎಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಶ್ಮಿ ಉಪಸ್ಥಿತರಿದ್ದರು. ನರಸಿಂಹ ಕುಲಕರ್ಣಿ ಹಾಗೂ ಜಗದೀಶ ಮುರ ಅವರು ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರಂಭವನ್ನು ವಿದ್ಯಾರ್ಥಿಗಳಾದ ಸ್ನೇಹ ನಿರೂಪಿಸಿ, ಕಾವ್ಯ ಭಟ್ ಸ್ವಾಗತಿಸಿ ಪ್ರತೀಕ್ಷಾ ಕೆ ವಂದಿಸಿದರು.

ಏಕಾಗ್ರತೆ ಸಾಧಿಸಲು ಯೋಗ ಅಗತ್ಯ

ಪ್ರಾಚೀನ ಕಾಲದಿಂದಲ್ಲೂ ಋಷಿಮುನಿಗಳು ಯೋಗದಿಂದ ಸತ್ಯದರ್ಶನವನ್ನು ಕಂಡುಕೊಂಡು ಬಂದಿದ್ದಾರೆ. ಆರೋಗ್ಯಕ್ಕೂ, ಯೋಗಕ್ಕೂ ಅವಿನಾಭಾವ ಸಂಬಂಧವಿದೆ. ಓಂಕಾರಕ್ಕೆ ಅಗಾಧವಾದ ಶಕ್ತಿಯಿದೆ. ಓಂಕಾರವನ್ನು ನಮ್ಮದಾಗಿಸಿಕೊಂಡರೆ ಏಕಾಗ್ರತೆ ಸಾಧಿಸಲು ಸಾಧ್ಯ. ಯೋಗ ನಿಜವಾದ ಬೆಳಕಿನೆಡೆಗೆ ಕೊಂಡೊಯ್ಯುತ್ತದೆ ಇದರಿಂದ ಬದುಕನ್ನು ಸುಂದರಗೊಳಿಸಲು ಸಾಧ್ಯ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬಿಜಿಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿ, ಯೋಗದ ಅಸ್ಮಿತೆಯನ್ನು ತಾಯಿಯ ಗರ್ಭದಿಂದಲೇ ಗುರುತಿಸಬಹುದು. ಯೋಗ ಎಂದರೆ ದೈಹಿಕ ಮಾನಸಿಕ ಆಚರಣೆಗಳ ಬೋಧನಾ ಶಾಲೆ ಎಂದು ಕರೆಯಬಹುದು. ವ್ಯಕ್ತಿಯು ತನ್ನನ್ನು ತಾನು ಅರ್ಥಮಾಡಿಕೊಂಡು ಅನುಭೂತಿಯನ್ನು ಪಡೆಯಲು ಯೋಗ ಅಗತ್ಯವಾಗಿದೆ. ಜೀವನದೊಂದಿಗೆ ಪರಮಾತ್ಮನನ್ನು ಲೀನವಾಗಿಸುವುದೇ ಯೋಗ, ಮಾನವ ಪ್ರತಿ ದಿನ ಮನೋಗ್ಲಾನಿಯಾಗಿ ಬದುಕುತ್ತಿದ್ದಾನೆ. ಅವನು ತಿನ್ನುವ ಆಹಾರ, ಬದುಕುವ ಪರಿಸರ ಶರೀರವನ್ನು ಜಾಡ್ಯವಾಗಿಸಿದೆ. ಈ ಶಾರೀರಿಕ ಬಾಧೆಯನ್ನು ಮೀರಲು ಯೋಗಸಾಧನಗಳು ಸಹಕಾರಿಯಾಗಿದೆ ಎಂದರು.

ಹೊಸ್ಮಾರು ಬಲ್ಯೊಟ್ಟು ಗುರುಕುಲ ಆಶ್ರಮದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಯೋಗವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದೆ. ಭಗವದ್ಗೀತೆಯ ೧೮ನೇ ಅಧ್ಯಾಯವು ಯೋಗದ ಬಗ್ಗೆ ಮಾತನಾಡುತ್ತದೆ ಎಂದರಲ್ಲದೇ ತಪಸ್ವಿಯಾಗಲು ಯೋಗ ಪ್ರಧಾನವಾದ ಅಸ್ತ್ರ ಎಂದರು. ಕಾರ್ಯಕ್ರಮದಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸುಬ್ಬಕಾರಡ್ಕ, ಬಿಜಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಲತಾ ರಾಜಾರಾಮ್, ಬಿಜಿಎಸ್ ಎಜುಕೇಷನ್ ಸೆಂಟರ್‌ನ ಪ್ರಾಂಶುಪಾಲರಾದ ರೇಷ್ಮಾ ಸಿ ನಾಯರ್, ಬಿಜಿಎಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಶ್ಮಿ ಉಪಸ್ಥಿತರಿದ್ದರು. ನರಸಿಂಹ ಕುಲಕರ್ಣಿ ಹಾಗೂ ಜಗದೀಶ ಮುರ ಅವರು ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರಂಭವನ್ನು ವಿದ್ಯಾರ್ಥಿಗಳಾದ ಸ್ನೇಹ ನಿರೂಪಿಸಿ, ಕಾವ್ಯ ಭಟ್ ಸ್ವಾಗತಿಸಿ ಪ್ರತೀಕ್ಷಾ ಕೆ ವಂದಿಸಿದರು.