ಜೀವನ ಉತ್ಸಾಹ ಅಂದರೆ ಇದೇ ಇರಬೇಕು ಮಾರಾಯ್ರೆ. ಮಂಗಳೂರಿನ ಹ್ಯಾಟ್ ಹಿಲ್ ನಿವಾಸಿ ಮೈಕಲ್ ಡಿಸೋಜ ಅವರಿಗೆ ಈಗ ಜಸ್ಟ್ 104 ವರ್ಷವಷ್ಟೆ ಆದರೆ ಈಗಲೂ ಕಾರು ಬಿಡುತ್ತಾರೆ.
ಶತಮಾನದ ಹೊಸ್ತಿಲು ದಾಟಿದರೂ ತನ್ನ ೮೫ ವರ್ಷಗಳಿಂದ ಚಾಲನೆ ಮಾಡುವ ಪ್ರವೃತ್ತಿಯನ್ನು ಇನ್ನೂ ಬಿಡಲಿಲ್ಲ ….” ನನ್ನನ್ನು ಕರೆದುಕೊಂಡು ಹೋಗಲು ದೇವರು ಗಾಡಿ ತಂದಾಗಲೇ ನಾನು ವಾಹನ ಚಾಲನೆ ಮಾಡುವುದನ್ನು ನಿಲ್ಲಿಸುತ್ತೇನೆ ಎಂದು ನಗುತ್ತಾರೆ. ಇಷ್ಟು ವರ್ಷದ ಚಾಲನೆಯಲ್ಲಿ ಒಂದು ಬಾರಿ ಮಾತ್ರ ಇವ್ರ್ ಮೇಲೆ ಫೈನ್ ಬಿದ್ದಿದೆಯಂತೆ ಊಟಿಯಲ್ಲಿ ಜನಿಸಿದ ಇವರು ನಂತರ ಕೆಲಸ ನಿಮಿತ್ತ ಮಂಗಳೂರು ಬಂದ ಇವರು ಬಳಿಕ ಇಲ್ಲಿಯೇ ನೆಲೆಸಿದರು. ಮೈಕಲ್ ಮಾಮನಿಗೊಂದು ವಿಶ್ ಇರಲಿ.
Tagged: kudlacity
ಗೆದ್ದಲು ನಾಶಕ್ಕೆ ದಡ್ಡಾಲ ಮರದ ತೊಗಡೆಯ ಮೆಡಿಸಿನ್
ಕರಾವಳಿಯ ಬೆಟ್ಟ ಗುಡ್ಡಗಳಲ್ಲಿ ಹೇರಳವಾಗಿ ಬೆಳೆಯುವ ದಡ್ಡಾಲ ಮರದ ತೊಗಟೆಯನ್ನು ಬಳಸಿಕೊಂಡು ಗೆದ್ದಲು ನಾಶಕ ದ್ರಾವಣ ತಯಾರಿಸುವ ಪುತ್ತೂರಿನ ವಿದ್ಯಾರ್ಥಿನಿಯರಿಬ್ಬರ ಸಂಶೋಧನೆ ಅಂತಾರಾಷ್ಟ್ರೀಯ ಮಟ್ಟದ ಜೀನಿಯಸ್ ಒಲಿಂಪಿಯಾಡ್ನಲ್ಲಿ ರಜತ ಪದಕ ಗಳಿಸಿದೆ.
ಪುತ್ತೂರಿನ ಖಾಸಗಿ ಶಾಲೆಯ ವಿದ್ಯಾರ್ಥಿನಿಯರಾದ ಸ್ತುತಿ ಎಂ.ಎಸ್. ಮತ್ತು ಸಂಧ್ಯಾ ಪ್ರಭು ಈ ಸಾಧನೆ ಮಾಡಿದ ವಿದ್ಯಾರ್ಥಿನಿಯರು. ಇವರಿಬ್ಬರೂ ಅಮೆರಿಕಾದ ನ್ಯೂಯಾರ್ಕ್ನ ಓಸ್ವೆಗೊ ಯುನಿವರ್ಸಿಟಿಯಲ್ಲಿ ಜೂನ್ 17 ರಂದು ಜರುಗಿದ ಅಂತಾರಾಷ್ಟ್ರೀಯ ಮಟ್ಟದ ಜೀನಿಯಸ್ ಒಲಿಂಪಿಯಾಡ್ನಲ್ಲಿ ಭಾಗವಹಿಸಿ ತಮ್ಮ ಪ್ರಾಜೆಕ್ಟ್ ಮಂಡಿಸಿ ಜಾಗತಿಕ ಮಟ್ಟದಲ್ಲಿ ಸೈ ಎನಿಸಿಕೊಂಡಿದ್ದಾರೆ.
ಯಾವುದೇ ಕೃತಕ ವಸ್ತುವಾಗಲೀ, ರಾಸಾಯನಿಕವಾಗಲೀ ಬಳಸದೆ ಕೇವಲ ದಡ್ಡಾಲ ಮರದ ತೊಗಟೆಯನ್ನು ಬಳಸಿಕೊಂಡು ಅದರಿಂದ ಈ ಜಲೀಯ ಸಾರ ತಯಾರಿಸಲಾಗಿತ್ತು. ಸಾಮಾನ್ಯವಾಗಿ ಮನೆಯ ಒಳಗೆ, ಹೊರಗೆ ಕಾಣಿಸುವ ಗೆದ್ದಲುಗಳನ್ನು ಈ ಸಾರದ ಮೂಲಕ ಸುಲಭವಾಗಿ ನಿರ್ಮೂಲನೆ ಮಾಡಬಹುದಾಗಿದೆ ಮತ್ತು ಇದರಿಂದ ಪರಿಸರಕ್ಕೆ ಮತ್ತು ಆರೋಗ್ಯಕ್ಕೆ ಹಾನಿಯಿಲ್ಲ ಎಂಬುದನ್ನು ಪ್ರಾಜೆಕ್ಟ್ ಮೂಲಕ ತೋರಿಸಿಕೊಡಲಾಗಿತ್ತು.
ಅಡಕೆ ಹಾಳೆ ಟೋಪಿಯಲ್ಲಿ ಮೆಡಿಸಿನ್ ಪವರ್
ಅಡಕೆ ಹಾಳೆ ಟೋಪಿಗೆ ಅಂತಾರಾಷ್ಟ್ರ ಮಟ್ಟದ ಹೆಸರು ಸಲ್ಲುತ್ತಿದೆ. ಅಡಕೆ ಹಾಳೆ ಟೋಪಿಯಲ್ಲಿ ಔಷಧೀಯ ಗುಣಗಳ ಕುರಿತು ಅಧ್ಯಯನ ನಡೆಸಲು, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಲಂಡನ್ನ ಪ್ರಮುಖ ಪರಿಸರ ವಿಜ್ಞಾನಿ ಗ್ಯಾರಿಡೆ ಲಾ ಪೊಮೆರೊಯಿನ್, ಮಹಾರಾಷ್ಟ್ರದ ಪುಣೆ ನಿವಾಸಿ, ಯುಎಸ್ನಲ್ಲಿರುವ ಸೆನ್ನಿವೆಲ್ ಕಂಪನಿ ಮಾಲೀಕ ಮುಗಧಾಮುಲ್ಲ ಅವರನ್ನು ಒಳಗೊಂಡ ತಂಡ ಜೂ. 29 ರಿಂದ ಜು.1ರ ತನಕ ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಜಾಲ್ಸೂರಿಗೆಆಗಮಿಸಲಿದೆ.
ಪರಿಸರವಾದಿ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಡಾ. ಆರ್.ಕೆ.ನಾಯರ್ ಅವರ ಜಾಲ್ಸೂರಿನಲ್ಲಿರುವ ನಿವಾಸಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ದೇಶದ ೯ ರಾಜ್ಯಗಳಲ್ಲಿ 7 ಲಕ್ಷದಷ್ಟು ಸಸಿಗಳನ್ನು ನೆಟ್ಟು ಗಮನ ಸೆಳೆದಿದ್ದಾರೆ ಡಾ. ಆರ್. ಕೆ.ನಾಯರ್. ಅವರಿಗೆ ನೇಪಾಳದಲ್ಲಿ ನೀಡಿದ ಸ್ವಾಗತ ಕಾರ್ಯಕ್ರಮದಲ್ಲಿ ಗ್ಯಾರಿಡಾ ಲಾ ಪೊಮೆರೊಯಿನ್ ಹಾಗೂ ಮುಗದಮುಲ್ಲಾ ಎಂಬವರ ಪರಿಚಯವಾಗಿದೆ. ಡಾ. ಆರ್.ಕೆ.ನಾಯರ್ ಅವರ ತಲೆಯಲ್ಲಿದ್ದ ಅಡಕೆ ಹಾಳೆಯ ಟೋಪಿಯನ್ನು ಸುಮಾರು 15 ನಿಮಿಷಗಳ ಕಾಲ ತಲೆ ಮೇಲಿಟ್ಟಾಗ ಉಂಟಾದ ಅನುಭವದ ಹಿನ್ನೆಲೆಯಲ್ಲಿ ಸಂಶೋಧನೆ ನಡೆಸಲು ಪ್ರೇರಣೆಯಾಗಿದೆ.
ಹಾಳೆ ಟೋಪಿ ಧರಿಸಿದರೆ ತಲೆನೋವು, ಕಣ್ಣು ನೋವು, ಸಂಧಿ ನೋವು, ಸ್ನಾಯು ಸೆಳೆತ ನಿವಾರಣೆಯಾಗುತ್ತದೆ ಎಂಬುದನ್ನು ಈಗಾಗಲೇ ನಡೆಸಿದ ಸಂಶೋಧನೆಯಿಂದ ತಿಳಿಯಲಾಗಿದೆ. ಮಾತ್ರವಲ್ಲ ಈ ಟೋಪಿ ಧರಿಸಿದರೆ ಒಳ್ಳೆಯ ನಿದ್ರೆ ಮಾಡಲು ಸಹ ಸಹಾಯವಾಗುತ್ತದೆ ಎಂಬುದೂ ಸಹ ಸಂಶೋಧನೆಯ ಮೂಲಕವೇ ಕಂಡುಕೊಳ್ಳಲಾಗಿದೆ. ಅಲ್ಲದೇ, ಮೊಬೈಲ್ ಟವರ್ ಗಳ ವಿಕಿರಣವನ್ನು ತಡೆಯಲುಈ ಹಾಳೆ ಟೋಪಿ ಧರಿಸಿದರೆ ಸಾಧ್ಯವಾಗುತ್ತದೆ ಎಂಬುದುಸಾಬೀತಾಗಿದೆ. ಮೆದುಳಿನ ಕಾರ್ಯಚಟುವಟಿಕೆ ನಿಯಂತ್ರಣದಲ್ಲೂಹಾಳೆಯ ಪರಿಣಾಕಾರಿಯಾಗಿದೆ.
ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಹಾಳೆ ಟೋಪಿಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಬಯಲುಗಳಲ್ಲಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಈಗಲೂ ಬಳಸುತ್ತಿದ್ದಾರೆ. ಕೃಷಿ ಸಂಬಂಧಿತ ನಾನಾ ಕಾರ್ಯಕ್ರಮಗಳಲ್ಲಿ ಈಗಲೂ ವೇದಿಕೆಯಲ್ಲಿ ಅತಿಥಿಗಳು ಹಾಳೆ ಟೋಪಿ ಧರಿಸುತ್ತಾರೆ.
ಕುಡ್ಲ ದಕ್ಕೆಯಲ್ಲಿ ಓಮನ್,ಮದ್ರಾಸ್ ದರ ಗಲಾಟೆ !
ಕುಡ್ಲದ ಮೀನುಗಾರಿಕೆ ದಕ್ಕೆಯಲ್ಲಿ ವಿಶಿಷ್ಟ ರೀತಿಯ ದರ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಇದರ ಪರಿಣಾಮ ಬೂತಾಯಿ ಮೀನು ಕೆಜಿ ಗೆ 80 ರ ಅಸುಪಾಸಿಗೆ ಗ್ರಾಹಕರಿಗೆ ಸಿಗುವಂತಹ ಭಾಗ್ಯ ಭಾನುವಾರ ಲಭ್ಯವಾಗಿದೆ.
ಕಾರಣ ಇಷ್ಟೇ ಮಂಗಳೂರಿನಲ್ಲಿ ಮೀನುಗಾರಿಕೆಗೆ ರಜೆ ಯಾವ ಬೋಟುಗಳು ಮೀನುಗಾರಿಕೆಗೆ ಇಳಿಯುತ್ತಿಲ್ಲ ಓಮನ್ ಹಾಗೂ ಮದ್ರಾಸ್ ಕಡೆಯಿಂದ ಬೂತಾಯಿ ಮೀನು ಸಾಕಷ್ಟು ಪ್ರಮಾಣದಲ್ಲಿ ಬರುವುದರಿಂದ ಬೂತಾಯಿ ದರ ಮೀನುಗಾರಿಕೆ ರಜೆ ಅವಧಿಯಲ್ಲಿ ಮೊದಲ ಬಾರಿಗೆ ರೇಟ್ ಕಡಿಮೆಯಾಗಿದೆ.
ದೇಶದಲ್ಲಿಯೇ ಅಪೂರ್ವ ಕುಡ್ಲದ ಮಳೆ ರಸ್ತೆ
ದೇಶದ ಯಾವುದೇ ನಗರದಲ್ಲೂ ಮಳೆ ಬಂದಾಗ ನೀರು ರಸ್ತೆಯ ಬದಿಯಲ್ಲಿರುವ ಚರಂಡಿ ಮೂಲಕ ಹರಿದು ಹೋಗುತ್ತದೆ. ಆದರೆ ಮಂಗಳೂರಿನಲ್ಲಿ ಮಾತ್ರ ಮಳೆ ನೀರು ರಸ್ತೆಯಲ್ಲೇ ಸಾಗುತ್ತದೆ. ಸ್ಮಾರ್ಟ್ ಸಿಟಿ ಮಂಗಳೂರು ಮಳೆ ರಸ್ತೆ ನೋಡುವುದು ಚೆಂದ ಸಮಸ್ಯೆಗಳು ಮಾತ್ರ ಬಹಳವಿದೆ.




