Tagged: city

ಹಲಸಿನ ಹಣ್ಣಿನಲ್ಲಿ ಸೋಪ್ ರೆಡಿ

ಕಳೆದ ಕೆಲವು ವರ್ಷಗಳಿಂದೀಚೆಗೆ ಹಲಸು ಪ್ರಿಯರು ದೇಶಾದ್ಯಂತ ಹಲಸಿನ ಮೌಲ್ಯವರ್ಧನೆ ಹಾಗೂ ಸಂರಕ್ಷಣೆಗಾಗಿ ಹೊಸ ಹೊಸ ಆವಿಷ್ಕಾರ ಮಾಡುತ್ತಿದ್ದಾರೆ. ಅದರಲ್ಲಿ ಬಂಟ್ವಾಳ ತಾಲೂಕಿನ ವಿಟ್ಲದವರಾದ ಪ್ರಸ್ತುತ ಚೆನ್ನೈಯಲ್ಲಿ ನೆಲೆಸಿರುವ ಅಪರ್ಣಾ ಹರೀಶ್, ತಾವೇ ಸ್ವತಃ ಹಲಸಿನ ಹಣ್ಣಿನಿಂದ ಸೋಪ್ ತಯಾರಿಸಿ ಎಲ್ಲೆಡೆಯಿಂದ ಭೇಷ್ ಎನ್ನಿಸಿಕೊಂಡಿದ್ದಾರೆ.

ಒಂದು ವರ್ಷದಿಂದ ಪ್ರಯೋಗ ಮಾಡಿಕೊಂಡು ಸೋಪ್ ತಯಾರಿಸಿದ್ದಾರೆ. ಸೋಪ್ ತಯಾರಿಸುವಾಗ ಹಲಸಿನ ಹಣ್ಣು, ಕ್ಯಾಲಮಿನ್ ಪೌಡರ್, ತೆಂಗಿನೆಣ್ಣೆ, ಹರಳೆಣ್ಣೆ ಬಳಸಿದ್ದಾರೆ. ಹಲಸಿನ ಬೀಜ ಬಳಸಿಲ್ಲ. ಈ ಸೋಪ್‌ನಲ್ಲಿ ವಿಟಮಿನ್ ಸಿ ಮತ್ತು ಡಿ ಇದ್ದು, ಸೋರಿಯಾಸಿಸ್ ಅಥವಾ ಚರ್ಮದ ಕಾಯಿಲೆ ವಾಸಿಗೆ ಅತ್ಯುತ್ತಮ ಮದ್ದು ಎನ್ನುವುದು ಅವರ ಮಾತು.

ಹಲಸಿನ ಹಣ್ಣಿನ ಶ್ಯಾಂಪೂ, ಪೌಡರ್ ಮಾಡಬೇಕು ಎಂಬ ಪ್ಲ್ಯಾನ್ ಇಟ್ಟುಕೊಂಡಿರುವ ಅಪರ್ಣಾ, ಚರ್ಮದ ಸೌಂದರ್ಯಕ್ಕಾಗಿ ಕೆಲವೊಂದು ಸೌಂದರ್ಯವರ್ಧಕ ಉತ್ಪನ್ನ ತಯಾರಿಸುವಲ್ಲಿ ನಿರತರಾಗಿದ್ದಾರೆ. ತಾನು ತಯಾರಿಸಿದ ಸೋಪ್‌ಗೆ ‘ಝ್ಯ’ ಎಂದು ಹೆಸರಿಟ್ಟಿದ್ದಾರೆ. ಹಲಸಿನ ಹಣ್ಣಿನ ಶ್ಯಾಂಪೂ ಯಾವ ರೀತಿ ಕೂದಲಿನ ಸೌಂದರ‍್ಯ ಇಮ್ಮಡಿಗೊಳಿಸಲು ನೆರವಾಗುತ್ತದೆ ಎಂಬ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ. ಅದಾದ ಬಳಿಕ ಟಾಲ್ಕಂ ಪೌಡರ್ ಆವಿಷ್ಕಾರ ಮಾಡುವತ್ತ ಮುನ್ನಡೆಯಲಿದ್ದಾರೆ.

ಕುಡ್ಲ ಎಂದರೆ ಬೀಚ್ ಸಿಟಿ

ಕುಡ್ಲ ದಲ್ಲಿ ಒಂದಲ್ಲ ಎರಡಲ್ಲ ಭರ್ತಿ 10 ಕ್ಕೂ ಅಧಿಕ ಬೀಚ್ ಗಳಿವೆ. ಎಲ್ಲವೂ ಒಂದಕ್ಕಿಂತ ಒಂದು ಭಿನ್ನ. ವಿಶೇಷ ಎಂದರೆ ಕರ್ನಾಟಕ ದ ಯಾವುದೇ ಊರಲ್ಲಿ ಇಷ್ಟು ಬೀಚ್ ಗಳಿರುವ ನಗರಗಳಿಲ್ಲ ಅದಕ್ಕೂ ಮುಖ್ಯವಾಗಿ ಇಲ್ಲಿರುವ ಎಲ್ಲ ಬೀಚ್ ಗಳು ಸಿಟಿಯ 20 ಕಿಮೀ ದೂರದಲ್ಲಿದೆ.

ಕುಡ್ಲ ಸಿಟಿಯ ಟ್ರಾಫಿಕ್ ನಿಯಂತ್ರಕ ರವೂಫ್ ಭಾಯಿಗೊಂದು ಸಲಾಂ !

ಅಬ್ದುಲ್ ರವೂಫ್ ಎಂದರೆ ಬಹಳಷ್ಟು ಮಂದಿಗೆ ಗೊತ್ತಿಲ್ಲ. ಟ್ರಾಫಿಕ್‌ನ ರವೂಫ್ ಭಾಯಿ ಎಂದರೆ ತಕ್ಷಣ ಮಂಗಳೂರಿನಲ್ಲಿ ವಾಹನ ಓಡಿಸುವವರಿಗೆ ಗೊತ್ತಿರುವ ಮನುಷ್ಯ.

ಕಳೆದ 26 ವರ್ಷಗಳಿಂದ ಕುಡ್ಲ ಸಿಟಿಯ ಸಂಚಾರ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸುವ ರವೂಫ್ ಈಗ ಹೋಮ್ ಗಾರ್ಡ್‌ನಲ್ಲಿ ನೌಕರಿ ಮಾಡುತ್ತಿದ್ದಾರೆ. ಈಗ ರಂಜಾನ್ ಉಪವಾಸದ ಸಮಯದಲ್ಲಿ ನಮಾಜ್ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ ಹೆಚ್ಚಾಗಿ ಸಂಜೆಯ ಹೊತ್ತು ಮಸೀದಿ ಸುತ್ತಮುತ್ತ ಹೆಚ್ಚು ವಾಹನಗಳ ಜತೆಗೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ.

ಈಗ ರವೂಫ್ ಮಾಡುತ್ತಿರುವ ಮುಖ್ಯ ಕೆಲಸ ಎಂದರೆ ನಗರದ ಪ್ರಮುಖ ನಾಲ್ಕು ಮಸೀದಿಗಳ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಲು ಬೆಳಗ್ಗೆ 8ರಿಂದ ರಾತ್ರಿ 10ರ ವರೆಗೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಸಿಲು, ಮಳೆ ಎನ್ನದೇ ಕಡಿಮೆ ಸಂಬಳದಲ್ಲಿ ದುಡಿಯುವ ಟ್ರಾಫಿಕ್‌ನ ಅಬ್ದುಲ್ ರವೂಫ್ ನಿಜವಾಗಿಯೂ ‘ಕುಡ್ಲ ಸಿಟಿ’ಯ ಹೆಮ್ಮೆಯ ನಾಗರಿಕ ಎನ್ನಬಹುದು.

ನೀರನ್ನು ಹಿಡಿಯುವ ಬಿಷಪ್ ರ ಜಲ ಬಂಧನ್

ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ನೀರಿನ ಕಾಳಜಿಗೆ ಮತ್ತೊಂದು ಹೊಸ ಸೇರ್ಪಡೆ ಯಾಗಿದೆ. ಜಲಬಂಧನ್ ಎನ್ನುವ ಯೋಜನೆ ಯ ಮೂಲಕ ಮಳೆ ನೀರನ್ನು ಹಿಡಿಯುವ ಜತೆಯಲ್ಲಿ ಜಿಲ್ಲೆಯ ಅಂರ್ತಜಲ ವೃದ್ಧಿ ಕಡೆಗೂ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ ಮನಸ್ಸು ಮಾಡಿದೆ.

ಇದರ ಅಡಿಯಲ್ಲಿ ಈಗಾಗಲೇ ನೂರಕ್ಕೂ ಅಧಿಕ ಚರ್ಚ್ ಗಳ ಜತೆಗೆ ಅದರಡಿಯಲ್ಲಿ ಕೆಲಸ ಮಾಡುವ ಸಂಸ್ಥೆ ಗಳಲ್ಲಿ ಮಳೆಗಾಲದಲ್ಲಿ‌ ನೀರನ್ನು ಹಿಡಿಯುವ ಕೆಲಸ ಆರಂಭವಾಗಲಿದೆ. ಇದಕ್ಕೆ ಜಲಯೋಧರ ತಂಡ ಸಾಥ್ ಕೊಡಲಿದೆ.

ನೂರು ದಾಟಿದರೂ ಇವರು ಕುಡ್ಲದ ಟ್ರಾಫಿಕ್ ವಾರ್ಡನ್

ಮಂಗಳೂರು ಸಂಚಾರ ನಿಯಂತ್ರಣ ವ್ಯವಸ್ಥೆಯಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಜತೆಗೆ ಅವರ ಸಿಬ್ಬಂದಿಗಳು ಕೆಲಸ ಮಾಡುವುದನ್ನು ನಾವು ನೋಡಿದ್ದೇವೆ.
ಆದರೆ ಮಂಗಳೂರಿನಲ್ಲಿ ಹಿರಿಯ ಜೀವವೊಂದು ಟ್ರಾಫಿಕ್ ನಿಯಂತ್ರಣ ವ್ಯವಸ್ಥೆಯಲ್ಲಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಹೌದು. 100 ವರ್ಷದಲ್ಲಿರುವ ಜೋಯ್ ಗೊನ್ಸಾಲ್ವೀಸ್ ಅವರು ನಗರದ ಪ್ರಮುಖ ಸರ್ಕಲ್‌ಗಳಾದ ನಂತೂರು, ಕೆಪಿಟಿ ಸರ್ಕಲ್ ಬಳಿಯಲ್ಲಿ ಟ್ರಾಣ ಮಾಡುವ ಕೆಲಸ ಮಾಡುತ್ತಾರೆ.
ಅವರೇ ಟ್ರಾಫಿಕ್ ವಾರ್ಡನ್ ಸ್ಕ್ವಾಡ್ ಹುಟ್ಟುಹಾಕುವಲ್ಲಿ ಕೆಲಸ ಮಾಡಿದವರು. ಅಂದಹಾಗೆ ಜೋಯ್ ಅವರು ಇದು ಸಂಬಳಕ್ಕೆ ಮಾಡುತ್ತಿರುವ ಕೆಲಸವಲ್ಲ ಬದಲಾಗಿ ತಮ್ಮ ಆತ್ಮತೃಪ್ತಿಗಾಗಿ ಕೆಲಸ ಮಾಡುತ್ತಿದ್ದಾರೆ.
ಟ್ರಾಫಿಕ್ ಪೊಲೀಸರಿಗೆ ದಣಿವಾದಾಗ ಜ್ಯೂಸ್ ಸೇರಿದಂತೆ ಇತರ ಉಪಚಾರದಲ್ಲೂ ಜೋಯ್ ಅವರು ಎತ್ತಿದ ಕೈ. ಇವರ ಸೇವೆಯನ್ನು ಇಲಾಖೆ ಕೂಡ ಗಮನಿಸಿಕೊಂಡು ಸನ್ಮಾನಿಸಿದೆ.