Tagged: school

ಬಿಜಿಎಸ್ ಶಿಕ್ಷಣ ಸಂಸ್ಥೆ ಪರಿಸರ ಸ್ನೇಹಿ

ಕಾವೂರಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯ ವಿಶೇಷ ಎಂದರೆ ಅಲ್ಲಿ ಶಿಕ್ಷಣ, ಮಾನವೀಯ ಮೌಲ್ಯಗಳನ್ನು ಕಲಿಸುವ ಕೆಲಸವನ್ನು ಮಾತ್ರ ಮಾಡುತ್ತಿಲ್ಲ. ಬದಲಾಗಿ ಇಡೀ ಬಿಜಿಎಸ್ ಶಿಕ್ಷಣ ಸಂಸ್ಥೆ ಪರಿಸರದ ಕುರಿತು ಕಾಳಜಿಯನ್ನು ಇಟ್ಟುಕೊಂಡಿದೆ. ಮರ, ಗಿಡಗಳ ಜತೆಗೆ ಪರಿಸರ ಪೂರಕ ವಾತಾವರಣ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಪೂರಕವಾಗಿದೆ.

ವಿಶೇಷವಾಗಿ ಬಿಜಿಎಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಹೇಳುವಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಗಿಡ- ಮರ ಬೆಳೆಸುವ ಕಾರ್ಯ ಪ್ರತಿಯೊಬ್ಬರ ಮನೆಯಂಗಳದಿಂದ ಪ್ರಾರಂಭವಾಗಬೇಕು. ಪ್ರಕೃತಿಯು ದೇವರಿಗೆ ಸಮಾನ, ಇದನ್ನು ಕಾಪಾಡಿದರೆ ದೇವರ ಅನುಗ್ರಹ ಲಭಿಸುತ್ತದೆ. ಹೇಗೆ ಮರ, ನದಿ, ಪ್ರಾಣಿ ಪಕ್ಷಿಗಳು ಪರರಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಳ್ಳುತ್ತವೆಯೋ ಹಾಗೆ ಮನುಷ್ಯನಾಗಿ ಹುಟ್ಟಿದ ಮೇಲೆ ಸ್ವಾರ್ಥವನ್ನು ಬಿಟ್ಟು ಮರಗಿಡಗಳನ್ನು ಬೆಳೆಸಬೇಕು.

ಜಗತ್ತಿನಾದ್ಯಂತ ಪರಿಸರ ಮಲೀನವಾಗುತ್ತಿದೆ. ಇದರ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಮಕ್ಕಳ ಹುಟ್ಟುಹಬ್ಬದ ದಿನದಂದು ಒಂದೊಂದು ಗಿಡ ನೆಟ್ಟು ಬೆಳಸಬೇಕು ಎನ್ನುವುದು ಅವರ ಮಾತು. ವಿಶೇಷವಾಗಿ ಪರಿಸರದ ದಿನಾಚರಣೆಯ ಅಂಗವಾಗಿ ಈಗಾಗಲೇ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಪರಿಸರ ಜಾಗೃತಿ, ಮಾಹಿತಿ ನೀಡುವ ಕಾರ‍್ಯ ಸಾಗುತ್ತಿದೆ.

ಇನ್ನು ಸ್ಕೂಲ್ ಗೆ ಹೊರಡುವ ಸಮಯ

ಇಂದಿನಿಂದ ಸರಕಾರ ಶಾಲೆಗಳಲ್ಲಿ ವಿದ್ಯಾರ್ಥಿ ಗಳು ಬರಲಿದ್ದಾರೆ. ಹೌದು. ಇಂದಿನಿಂದ ಶಾಲಾ ಆರಂಭ ನಡೆಯಲಿದೆ.
ಒಂದೆಡೆ ಬಿರು ಬಿಸಿಲು ಜತೆಗೆ ಮಳೆರಾಯ ಕೃಪೆ ತೋರಿಸದ ಪರಿಣಾಮ ಪುಟಾಣಿ ಮಕ್ಕಳು ಶಾಲೆಯ ದಾರಿ ಹಿಡಿಯಲೇ ಬೇಕಾಗುತ್ತದೆ.

ಮುಖ್ಯವಾಗಿ ಕೆಲವೊಂದು ಖಾಸಗಿ ಶಾಲೆಗಳು ಆರಂಭ ಕೊಂಚ ತಡವಾಗುವ ಸಾಧ್ಯತೆಯಿದೆ. ಉಳಿದಂತೆ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಪಠ್ಯ ಪುಸ್ತಕ ಬೇಗನೆ ಬಂದು ತಲುಪಿದೆ.

ಕುಡ್ಲದ ಬ್ಲಡ್ ಬ್ಯಾಂಕ್ ನಲ್ಲಿ ರಕ್ತಕ್ಕೂ ಬರ

ಒಂದೆಡೆ ಶಾಲಾ ಕಾಲೇಜುಗಳಿಗೆ ರಜೆ ಮತ್ತೊಂದು ಕಡೆ ಮುಸ್ಲಿಮರ ಉಪವಾಸ ಎರಡು ಜತೆಯಾದ ಪರಿಣಾಮ ಮಂಗಳೂರಿನ ಪ್ರಮುಖ ಆಸ್ಪತ್ರೆ ಸೇರಿದಂತೆ ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದ ಕೊರತೆ ಕಾಣಿಸಿಕೊಂಡಿದೆ.

ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಶಿಬಿರಗಳ ಮೂಲಕ ರಕ್ತ‌ನೀಡುತ್ತಿದ್ದರು. ಮುಸ್ಲಿಂ ಸಂಘಟನೆ ಗಳು ಕೂಡ ಇದೇ ರೀತಿಯ ಕೆಲ್ಸ ಮಾಡುತ್ತಿದ್ದರು. ಆದರೆ ಇಬ್ಬರು ಈ ಸಲ ರಕ್ತ ನೀಡದ‌ ಪರಿಣಾಮ ಬ್ಲಡ್ ಬ್ಯಾಂಕ್ ಗಳಲ್ಲಿ ತೀವ್ರ ರಕ್ತದ ಕೊರತೆ ಕಾಣಿಸಿಕೊಂಡಿದೆ.