Tagged: Kudla

ಸಿಇಟಿಯಲ್ಲಿ ಕುಡ್ಲದ ವಿದ್ಯಾರ್ಥಿಗಳು ಹೇಗೆ ರ‍್ಯಾಂಕ್ ಪಡೆಯುತ್ತಾರೆ?

ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಟಾಪ್ 10 ನಲ್ಲಿ ಒಟ್ಟು 9 ರ‍್ಯಾಂಕ್‌ಗಳು ಬಂದಿವೆ. ಇದರಲ್ಲಿ ಮಂಗಳೂರಿನ ಎಕ್ಸ್‌ಫರ್ಟ್ ಕಾಲೇಜಿಗೆ 8 ರ‍್ಯಾಂಕ್ ಮತ್ತು ಮೂಡುಬಿದರೆ ಆಳ್ವಾಸ್ ಕಾಲೇಜಿಗೆ ಒಂದು ರ‍್ಯಾಂಕ್ ಬಂದಿದೆ.

ಎಕ್ಸ್‌ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳಾದ ಆರ್.ಚಿನ್ಮಯ್ ಎಂಜಿನಿಯರಿಂಗ್ 2ನೇ ಮತ್ತು ಫಾರ್ಮಸಿಯಲ್ಲಿ 3ನೇ ರ‍್ಯಾಂಕ್ ಗಳಿಸಿದ್ದಾರೆ. ಭುವನ್ ವಿ.ಬಿ. ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 3ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ನಲ್ಲಿ 6ನೇ ರ‍್ಯಾಂಕ್ ಪಡೆದಿದ್ದಾರೆ.

ಸಮರ್ಥ್ ಮಯ್ಯ ಎಂಜಿನಿಯರಿಂಗ್‌ನಲ್ಲಿ 5ನೇ ರ‍್ಯಾಂಕ್, ಆಶಯ್ ಜೈನ್ ಸಿ.ಎ. ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ನಲ್ಲಿ 7ನೇ ರ‍್ಯಾಂಕ್, ಸುದೇಶ್ ಗೌಡ ಜೆ. ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 7ನೇ ರ‍್ಯಾಂಕ್, ಯಶ್ ಬನ್ನೂರು ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 9ನೇ ರ‍್ಯಾಂಕ್ ಪಡೆದಿದ್ದಾರೆ. ಆಳ್ವಾಸ್ ಪಿಯು ಕಾಲೇಜಿನ ಎಸ್.ದರ್ಶನ್ ಸಮರ್ಥ ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 10ನೇ ರ‍್ಯಾಂಕ್ ಗಳಿಸಿದ್ದಾರೆ.

ಕುಡ್ಲದಲ್ಲಿ ಮಳೆರಾಯನ ಕೆಲಸ ಆರಂಭ

ಒಂದೆಡೆ ಸಿಡಿಲು ಜತೆಗೆ ಕಾಣಿಸುವ ಗುಡುಗು ಇವುಗಳ ಜತೆಯಲ್ಲಿ ಗಾಳಿ ಜತೆಗೆ ಹನಿಯ ಲೀಲೆಗಳ ಜತೆಗೆ ಆರಂಭವಾದ ಮಳೆ ರಾತ್ರಿಯ ಸೆಕೆಯನ್ನು ತಣ್ಣಗೆ ಮಾಡುತ್ತಾ ಮಲಗುವ ಮಂದಿಯ ನಿದ್ರೆಗೆ ಜಾಗ ನೀಡಿದ ಅನುಭವ ಶನಿವಾರ ಮುಂಜಾನೆ ಹೊತ್ತಿಗೆ ನಡೆದಿದೆ.

ಹೌದು. ಕುಡ ಸಿಟಿಯೊಳಗೆ ಮಳೆರಾಯ ಭರ್ಜರಿ ಯಾಗಿ ಮಳೆ ಸುರಿಸಿ ಇಡೀ ಸಿಟಿಯನ್ನು ತಣ್ಣಗೆ ಮಾಡಿ ಹೋಗಿದ್ದಾನೆ.

ಮಾವು ತಿನ್ನಲು ಕದ್ರಿ ಪಾರ್ಕ್‌ಗೆ ಬನ್ನಿ

ಈಗ ಎಲ್ಲೆಡೆ ಮಾವಿನ ಸೀಸನ್. ಮಾರುಕಟ್ಟೆಯೊಳಗಂತೂ ತರೇವಾರಿ ಮಾವಿನ ಹಣ್ಣುಗಳು ಈಗಾಗಲೇ ಬಂದು ಬಿದ್ದಿದೆ. ಆದರೆ ಅಲ್ಲಿ ಎಲ್ಲವೂ ಉತ್ತಮವಾದ ಮಾವಿನ ಹಣ್ಣುಗಳು ಸಿಗೋದಿಲ್ಲ. ಕೆಮಿಕಲ್, ಕಾರ್ಬೈಡ್ ಹಾಕಿ ಮಾಗಿಸಿದ ಮಾವಿನ ಹಣ್ಣುಗಳೇ ಈಗ ಸಿಗುವಂತದ್ದು ಎನ್ನುವುದು ಕುಡ್ಲ ಸಿಟಿಯ ಮಂದಿಗೆ ಗೊತ್ತು.

ಆದರೆ ಒಂದಲ್ಲ ಎರಡಲ್ಲ ಬರೋಬರಿ ಹತ್ತರಿಂದ ಹದಿನೈದರಷ್ಟು ಹೆಚ್ಚಿನ ನಾನಾ ತಳಿಗಳ ಮಾವು ಕದ್ರಿ ಪಾರ್ಕ್‌ನ ಉದ್ಯಾನವನದ ಮಾವು ಪ್ರದರ್ಶನದಲ್ಲಿ ಕಾಣಿಸಿಕೊಂಡಿದೆ. ಮೂರು ದಿನಗಳ ಕಾಲ ನಡೆಯುವ ಈ ಮಾವು ಪ್ರದರ್ಶನ ಮಾರಾಟದಲ್ಲಿ ರೈತರಿಂದ ನೇರವಾಗಿ ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಮಾವು ಪ್ರಿಯರಿಗೆ ನಾನಾ ಮಾವು ತಳಿಗಳನ್ನು ಬೆಳೆಯುವ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲೆಗಳಿಂದ ರೈತರು ನೇರವಾಗಿ ಮಾರಾಟ ಮಾಡಲು ಮಾವು ಮೇಳದಲ್ಲಿ ಮಾರಾಟ ಕಲ್ಪಿಸಲಾಗಿದೆ. ವಿಶೇಷವಾಗಿ ಅಲ್ಪೋನ್ಸಾ, ಮಲ್ಲಿಕಾ, ರಸಪೂರಿ, ಮಲಗೋವಾ, ದಸೇರಿ, ಸೆಂದೂರು, ತೋತಾಪುರಿ, ಬೆಗನ್ ಪಲ್ಲಿ, ಶುಗರ್ ಬೇಬಿ ಸೇರಿದಂತೆ ಹಿಮಾಯತ್ ಮಾವುಗಳ ಮಾರಾಟ ನಡೆಯಲಿದೆ.

ಮಂಗಳೂರು ಸಂಸದರಾಗಿ ನಳಿನ್ ಭರ್ಜರಿ ಆಯ್ಕೆ

ಮಂಗಳೂರು ಸಂಸದರಾಗಿ ನಳಿನ್ ಕುಮಾರ್ ಕಟೀಲ್ ಆಯ್ಕೆ ಯಾಗುವ ಮೂಲಕ ಮೂರು ಬಾರಿ ಸಂಸದರಾಗಿ ದಾಖಲೆ‌ ನಿರ್ಮಿಸಿದ್ದಾರೆ. ಇದು ನಳಿನ್ ರ ಹ್ಯಾಟ್ರಿಕ್ ಗೆಲುವು ಎನ್ನುವುದು ವಿಶೇಷ. ಪ್ರತಿ ಹಂತದ ಮತ ಎಣಿಕೆಯಲ್ಲೂ ಲೀಡ್ ಉಳಿಸಿಕೊಂಡು ಜಿಲ್ಲೆಯ ಜನತೆ ಮೋದಿ ಅಭಿವೃದ್ಧಿ ಯ ಮಂತ್ರಕ್ಕೆ ಪೂರ್ಣ ಅಂಕ ನೀಡಿದ್ದಾರೆ ಎನ್ನುವುದು ಮತದಾರರ ಅಭಿಪ್ರಾಯ.

ಕುಡ್ಲ ಸಿಟಿ ಕೂಲ್ ಜತೆಗೆ ಮತ ಎಣಿಕೆಯ ಬಿಸಿ !

ಕುಡ್ಲ ಸಿಟಿ ಮತ್ತೆ ಕೂಲ್ ಆಗಿದೆ. ಒಂದೆಡೆ ರಾತ್ರಿ ಸುರಿದ ಮಳೆಗೆ ಇಳೆ ತುಂಬಾನೇ ತಣ್ಣಗಾಗಿ ತಂಪು ಬೀರುತ್ತಿದೆ.
ಇನ್ನೊಂದೆಡೆ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ‍್ಯ ಕೂಡ ಚುರುಕಿನಿಂದ ನಡೆಯುತ್ತಿರುವ ಜತೆಯಲ್ಲಿ ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದ ನಳಿನ್ ಕುಮಾರ್ ಕಟೀಲ್ ಈ ಬಾರಿನೂ ಗೆಲುವ ಎಲ್ಲ ಸೂಚನೆಗಳು ರವಾನೆಯಾಗುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸುವುದು ಖಾತ್ರಿಯಾಗಿದೆ.