Tagged: kudlacity

ಸಿಇಟಿಯಲ್ಲಿ ಕುಡ್ಲದ ವಿದ್ಯಾರ್ಥಿಗಳು ಹೇಗೆ ರ‍್ಯಾಂಕ್ ಪಡೆಯುತ್ತಾರೆ?

ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಟಾಪ್ 10 ನಲ್ಲಿ ಒಟ್ಟು 9 ರ‍್ಯಾಂಕ್‌ಗಳು ಬಂದಿವೆ. ಇದರಲ್ಲಿ ಮಂಗಳೂರಿನ ಎಕ್ಸ್‌ಫರ್ಟ್ ಕಾಲೇಜಿಗೆ 8 ರ‍್ಯಾಂಕ್ ಮತ್ತು ಮೂಡುಬಿದರೆ ಆಳ್ವಾಸ್ ಕಾಲೇಜಿಗೆ ಒಂದು ರ‍್ಯಾಂಕ್ ಬಂದಿದೆ.

ಎಕ್ಸ್‌ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳಾದ ಆರ್.ಚಿನ್ಮಯ್ ಎಂಜಿನಿಯರಿಂಗ್ 2ನೇ ಮತ್ತು ಫಾರ್ಮಸಿಯಲ್ಲಿ 3ನೇ ರ‍್ಯಾಂಕ್ ಗಳಿಸಿದ್ದಾರೆ. ಭುವನ್ ವಿ.ಬಿ. ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 3ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ನಲ್ಲಿ 6ನೇ ರ‍್ಯಾಂಕ್ ಪಡೆದಿದ್ದಾರೆ.

ಸಮರ್ಥ್ ಮಯ್ಯ ಎಂಜಿನಿಯರಿಂಗ್‌ನಲ್ಲಿ 5ನೇ ರ‍್ಯಾಂಕ್, ಆಶಯ್ ಜೈನ್ ಸಿ.ಎ. ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ನಲ್ಲಿ 7ನೇ ರ‍್ಯಾಂಕ್, ಸುದೇಶ್ ಗೌಡ ಜೆ. ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 7ನೇ ರ‍್ಯಾಂಕ್, ಯಶ್ ಬನ್ನೂರು ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 9ನೇ ರ‍್ಯಾಂಕ್ ಪಡೆದಿದ್ದಾರೆ. ಆಳ್ವಾಸ್ ಪಿಯು ಕಾಲೇಜಿನ ಎಸ್.ದರ್ಶನ್ ಸಮರ್ಥ ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 10ನೇ ರ‍್ಯಾಂಕ್ ಗಳಿಸಿದ್ದಾರೆ.

ಕುಡ್ಲದಲ್ಲಿ ಮಳೆರಾಯನ ಕೆಲಸ ಆರಂಭ

ಒಂದೆಡೆ ಸಿಡಿಲು ಜತೆಗೆ ಕಾಣಿಸುವ ಗುಡುಗು ಇವುಗಳ ಜತೆಯಲ್ಲಿ ಗಾಳಿ ಜತೆಗೆ ಹನಿಯ ಲೀಲೆಗಳ ಜತೆಗೆ ಆರಂಭವಾದ ಮಳೆ ರಾತ್ರಿಯ ಸೆಕೆಯನ್ನು ತಣ್ಣಗೆ ಮಾಡುತ್ತಾ ಮಲಗುವ ಮಂದಿಯ ನಿದ್ರೆಗೆ ಜಾಗ ನೀಡಿದ ಅನುಭವ ಶನಿವಾರ ಮುಂಜಾನೆ ಹೊತ್ತಿಗೆ ನಡೆದಿದೆ.

ಹೌದು. ಕುಡ ಸಿಟಿಯೊಳಗೆ ಮಳೆರಾಯ ಭರ್ಜರಿ ಯಾಗಿ ಮಳೆ ಸುರಿಸಿ ಇಡೀ ಸಿಟಿಯನ್ನು ತಣ್ಣಗೆ ಮಾಡಿ ಹೋಗಿದ್ದಾನೆ.

ಮಂಗಳೂರು ಸಂಸದರಾಗಿ ನಳಿನ್ ಭರ್ಜರಿ ಆಯ್ಕೆ

ಮಂಗಳೂರು ಸಂಸದರಾಗಿ ನಳಿನ್ ಕುಮಾರ್ ಕಟೀಲ್ ಆಯ್ಕೆ ಯಾಗುವ ಮೂಲಕ ಮೂರು ಬಾರಿ ಸಂಸದರಾಗಿ ದಾಖಲೆ‌ ನಿರ್ಮಿಸಿದ್ದಾರೆ. ಇದು ನಳಿನ್ ರ ಹ್ಯಾಟ್ರಿಕ್ ಗೆಲುವು ಎನ್ನುವುದು ವಿಶೇಷ. ಪ್ರತಿ ಹಂತದ ಮತ ಎಣಿಕೆಯಲ್ಲೂ ಲೀಡ್ ಉಳಿಸಿಕೊಂಡು ಜಿಲ್ಲೆಯ ಜನತೆ ಮೋದಿ ಅಭಿವೃದ್ಧಿ ಯ ಮಂತ್ರಕ್ಕೆ ಪೂರ್ಣ ಅಂಕ ನೀಡಿದ್ದಾರೆ ಎನ್ನುವುದು ಮತದಾರರ ಅಭಿಪ್ರಾಯ.

ಕುಡ್ಲ ಸಿಟಿ ಕೂಲ್ ಜತೆಗೆ ಮತ ಎಣಿಕೆಯ ಬಿಸಿ !

ಕುಡ್ಲ ಸಿಟಿ ಮತ್ತೆ ಕೂಲ್ ಆಗಿದೆ. ಒಂದೆಡೆ ರಾತ್ರಿ ಸುರಿದ ಮಳೆಗೆ ಇಳೆ ತುಂಬಾನೇ ತಣ್ಣಗಾಗಿ ತಂಪು ಬೀರುತ್ತಿದೆ.
ಇನ್ನೊಂದೆಡೆ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ‍್ಯ ಕೂಡ ಚುರುಕಿನಿಂದ ನಡೆಯುತ್ತಿರುವ ಜತೆಯಲ್ಲಿ ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದ ನಳಿನ್ ಕುಮಾರ್ ಕಟೀಲ್ ಈ ಬಾರಿನೂ ಗೆಲುವ ಎಲ್ಲ ಸೂಚನೆಗಳು ರವಾನೆಯಾಗುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸುವುದು ಖಾತ್ರಿಯಾಗಿದೆ.

ನೇರಳೆ ಹಣ್ಣು ಮಾರುವ ಷಣ್ಮುಗ ಬಿಸಿನೆಸ್ ಟೆಕ್ನಿಕ್

ಕುಡ್ಲ ಸಿಟಿಯೊಳಗೆ ನೇರಳೆ ಹಣ್ಣು ಎಂಟ್ರಿಯಾಗಿದೆ. ಸೆಂಟ್ರಲ್ ಮಾರ್ಕೆಟ್ ಹೊರಭಾಗದಲ್ಲಿ ನೇರಳೆಹಣ್ಣು ಮಾರುವ ಮೂರು ನಾಲ್ಕು ಮಂದಿಗಳಲ್ಲಿ ವಿಶೇಷವಾಗಿ ಗಮನ ಸೆಳೆಯುವ ವ್ಯಕ್ತಿ ಷಣ್ಮುಗ.

ವರ್ಷ 70 ದಾಟಿದರೂ ಕೂಡ ಬಿಸಿಲಿಗೆ ಕೂತು ನೇರಳೆಹಣ್ಣು ಮಾರುವ ಇವರು ಮಂಗಳೂರಿನ ಕಾರ್‌ಸ್ಟ್ರೀಟ್ ಕಡೆಯವರು ಅವರು 40 ವರ್ಷಗಳಿಂದ ಇಂತಹ ಹಣ್ಣುಗಳನ್ನು ಮಾರಾಟ ಮಾಡುವುದೇ ವ್ಯಾಪಾರ.

ಬರೀ ಒಂದು ತಿಂಗಳ ಕಾಲ ಮಾತ್ರ ಅವರು ನೇರಳೆ ಹಣ್ಣು ಮಾರುತ್ತಾರೆ. ಉಳಿದ ತಿಂಗಳುಗಳ ಕಾಲ ಉಳಿದ ಚಾಕಲೇಟ್ ಸೇರಿದಂತೆ ನಾನಾ ವ್ಯಾಪಾರ ಮಾಡುತ್ತಾರೆ. ತಿಂಗಳಿಗೊಂದು ವ್ಯಾಪಾರ ಷಣ್ಮುಗ ಅವರ ಬಿಸಿನೆಸ್ ಟೆಕ್ನಿಕ್.

ಈಗ ನೇರಳ ಹಣ್ಣಿನ ಸೀಸನ್ ಕಾಲು ಕೆಜಿಗೆ 7೦ ರೂನಂತೆ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಅವರಿಗೆ ಹುಬ್ಬಳ್ಳಿ, ತಿರುಪತಿಯಿಂದ ಈ ಹಣ್ಣುಗಳು ಬರುತ್ತದೆ. ಕರಾವಳಿಯಲ್ಲಿ ನೇರಳೆ ಹಣ್ಣು ದೊಡ್ಡ ಪ್ರಮಾಣದ್ಲಿ ಸಿಗುವುದಿಲ್ಲವಂತೆ ಕಳೆದ ಆರು ವರ್ಷಗಳಿಂದ ಕರಾವಳಿ ನೇರಳೆಹಣ್ಣು ಮಾರುಕಟ್ಟೆಗೆ ಬಂದಿಲ್ಲ ಎನ್ನುವುದು ಅವರ ಮಾತು.

ಅಂದಹಾಗೆ ನೇರಳೆಹಣ್ಣಿನ ಮಾರಾಟ ಸಮಯದಲ್ಲಿ ಷಣ್ಮುಗ ಅವರು ಹೇಳುವ ಒಂದೇ ಮಾತು ನೇರಳೆಹಣ್ಣು ಔಷಧೀಯ ಗುಣವನ್ನು ಹೊಂದಿದೆ ಎಂದು ಟಿವಿಯಲ್ಲಿ ಬರ‍್ತಾ ಇರುತ್ತದೆ ಎನ್ನುವುದು ಅವರ ಮಾತು.

ಅವರು ಹೇಳುವಂತೆ ನೇರಳೆಹಣ್ಣು ಸಕ್ಕರೆ ಕಾಯಿಲೆಗೆ, ರಕ್ತ ಹೀನತೆ, ರಕ್ತದ ಶುದ್ಧಿಕರಣ, ರಕ್ತದ ಒತ್ತಡ ತಗ್ಗಿಸುವುದು, ಹೊಟ್ಟೆ ಸಂಬಂಧಿಸಿದ ಕಾಯಿಲೆ ಸೇರಿದಂತೆ ಹತ್ತಾರು ರೋಗಗಳಿಗೆ ಇದು ದಿವ್ಯ ಔಷಧವಾಗಿದೆ.