Tagged: mangalore

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕರಾವಳಿ ಯಾಕೆ ಇಳಿಯಿತು

2019ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಏಳನೇ ಹಾಗೂ ಉಡುಪಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ.

ಕಳೆದ ಸಾಲಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದ ಉಡುಪಿ ನಾಲ್ಕು ಸ್ಥಾನ ಕೆಳಗಿಳಿದಿದೆ. ದಕ್ಷಿಣ ಕನ್ನಡ 2018ರಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು. ಈ ಬಾರಿ ಏಳನೇ ಸ್ಥಾನಕ್ಕೆ ತೃಪ್ತಿ ಪಟ್ಟು ಕೊಳ್ಳುವಂತಾಗಿದೆ.

ಪಿಯುಸಿ ಉತ್ತಮ ಫಲಿತಾಂಶವನ್ನೇ ಪಡೆದುಕೊಂಡಿರುವ ಉಡುಪಿ ಹಾಗೂ ದಕ್ಷಿಣ ಕನ್ನಡ ಪ್ರಥಮ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಮಾತ್ರ ಅಗ್ರಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ಹಾಸನ ಪ್ರಥಮ ಹಾಗೂ ರಾಮನಗರ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಮಂಗಳೂರಿನ ಈ ಶಾಲೆಗೆ ರಾತ್ರಿ ಮಾತ್ರ ವಿದ್ಯಾರ್ಥಿಗಳು ಬರುತ್ತಾರೆ !

ಇದು ದ.ಕ.ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯದಲ್ಲಿಯೇ ಬಹಳ ಅಪರೂಪದ ಶಾಲೆಯಿದು. ಈ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಫೀಸ್ ಕಟ್ಟಲು ಇಲ್ಲ. ಜತೆಯಲ್ಲಿ ಇಲ್ಲಿ ಕಲಿಯುವ ವಿದ್ಯಾರ್ಥಿಗಳೆಲ್ಲರೂ ಕೆಲಸ ಮಾಡಿಕೊಂಡು ಉಳಿದ ರಾತ್ರಿ ಸಮಯದಲ್ಲಿ ವಿದ್ಯಾಭ್ಯಾಸ ಮಾಡಬಹುದು.
ಹೌದು. ಕಳೆದ 76 ವರ್ಷಗಳಿಂದ ನಿರಂತರವಾಗಿ ಮಂಗಳೂರಿನ ಬಿಇಎಂ ಸ್ಕೂಲ್‌ನ ನೇರ ಮುಂಭಾಗದಲ್ಲಿ ಸಾಗುವ ಗಾಯತ್ರಿ ದೇವಸ್ಥಾನದ ರಸ್ತೆಯಲ್ಲಿ ನವಭಾರತ ರಾತ್ರಿ ಹೈಸ್ಕೂಲ್ ನಡೆಯುತ್ತದೆ. ಮುಖ್ಯವಾಗಿ ಇಲ್ಲಿ ಒಂದನೇ ತರಗತಿಯಿಂದ ೧೦ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾರೆ.
ಸಂಜೆ 6ರಿಂದ ಆರಂಭವಾಗುವ ತರಗತಿಗಳು 9ರ ವರೆಗೆ ಸಾಗುತ್ತದೆ. ಮುಖ್ಯವಾಗಿ ಕಲಿಯಲು ಯಾವುದೇ ವಯಸ್ಸು ಬೇಕಾಗಿಲ್ಲ ಎನ್ನುವುದಕ್ಕೆ ಇಲ್ಲಿಗೆ ಬರುವ ವಿದ್ಯಾರ್ಥಿಗಳೇ ಸಾಕ್ಷಿ. ಗುಮಾಸ್ತರು, ಗೃಹಿಣಿಯರು, ರಿಕ್ಷಾ ಚಾಲಕರು, ಹೋಟೆಲ್‌ನಲ್ಲಿ ದುಡಿಯುವ ಸಿಬ್ಬಂದಿಗಳು ಹೀಗೆ ತರೇವಾರಿ ವಿದ್ಯಾರ್ಥಿಗಳಿಂದ ಈ ಶಾಲೆ ನಡೆಯುತ್ತಿದೆ.

ಮಂಗಳೂರು ಮಂದಿಗೆ ಕುಚಲಕ್ಕಿ ಪ್ರೀತಿ ಜಾಸ್ತಿ

ಮಂಗಳೂರಿನವರು ದೇಶದ ಯಾವುದೇ ಮೂಲೆಗೆ ಹೋದರೂ ಕೂಡ ಊಟಕ್ಕೆ ಕುಚಲಕ್ಕಿ (ಬೊಯಿಲ್ಡ್ ರೈಸ್) ಉಂಟಾ ಎಂದೇ ಪ್ರಶ್ನೆ ಕೇಳುತ್ತಾರೆ ಊಟ ಸೇರೋದಿಲ್ಲ. ಇದೇ ಕಾರಣ ಮಂಗಳೂರಿನ ಮಂದಿಗೆ ಕುಚಲಕ್ಕಿ ಮೇಲೆ ಪ್ರೀತಿ ಜಾಸ್ತಿ ಮಾರಾಯ್ರೆ.

ಮಂಗಳೂರು ಮಂದಿಗೆ ಕುಚಲಕ್ಕಿ ಪ್ರೀತಿ ಜಾಸ್ತಿ

ಮಂಗಳೂರಿನವರು ದೇಶದ ಯಾವುದೇ ಮೂಲೆಗೆ ಹೋದರೂ ಕೂಡ ಊಟಕ್ಕೆ ಕುಚಲಕ್ಕಿ (ಬೊಯಿಲ್ಡ್ ರೈಸ್) ಉಂಟಾ ಎಂದೇ ಪ್ರಶ್ನೆ ಕೇಳುತ್ತಾರೆ ಊಟ ಸೇರೋದಿಲ್ಲ. ಇದೇ ಕಾರಣ ಮಂಗಳೂರಿನ ಮಂದಿಗೆ ಕುಚಲಕ್ಕಿ ಮೇಲೆ ಪ್ರೀತಿ ಜಾಸ್ತಿ ಮಾರಾಯ್ರೆ.

ಮಂಗಳೂರಿನ ಮೊದಲ ರಿಕ್ಷಾ ಚಾಲಕ ಮೊಂತು‌

ಇಳಿ ವಯಸ್ಸಲ್ಲೂ ಎಳೆಯರಂತಹ ಉತ್ಸಾಹ. 62 ವರ್ಷಗಳಿಂದ ಆಟೋ ರಿಕ್ಷಾ ಚಾಲಕ. ಈ ವರೆಗೆ ಒಂದೇ ಒಂದು ಪೊಲೀಸ್‌ ಕೇಸ್‌ ಇಲ್ಲದೆ, ಅಪಘಾತ ಎಸಗದೆ ನಿಷ್ಠೆಯಿಂದ ದುಡಿಯುತ್ತಿರುವ ಕಾಯಕಯೋಗಿ. ವಿಶೇಷವೆಂದರೆ ಮಂಗಳೂರಿನಲ್ಲಿ ಪ್ರಪ್ರಥಮವಾಗಿ ಓಡಾಟ ನಡೆಸಿದ ರಿಕ್ಷಾದ ಚಾಲಕ ಮೊಂತು‌ ಲೋಬೊ ಎನ್ನುವುದು ವಿಶೇಷ. ಈಗಲೂ ಮಂಗಳೂರಿನ ಪಡೀಲ್, ನಾಗುರಿ, ಕಂಕನಾಡಿ ಅಸುಪಾಸಿನ ರಿಕ್ಷಾ ನಿಲ್ದಾಣ ದಲ್ಲಿ ಅವರ ರಿಕ್ಷಾ ಕಾಣ ಸಿಗುತ್ತದೆ.