Tagged: Kudla

ನಟಿ ಸೋನಾಲ್ ಹಿಂದಿರುವ ಶಕ್ತಿ !

ಕುಡ್ಲದ ಸೋನಾಲ್ ಮೊಂತೆರೋ ತುಳು ಸಿನಿಮಾದ ಮೂಲಕ ಪರಿಚಯವಾಗಿ ಈಗ ಕನ್ನಡದಲ್ಲಿ ಬ್ಯುಸಿ ಇರುವ ನಟಿಮಣಿ.
ತುಳುವಿನ ನಿರ್ದೇಶಕ ಸೂರಜ್ ಶೆಟ್ಟಿ ನಿರ್ದೇಶನದ ಎಕ್ಕಸಕ ಹಾಗೂ ಪಿಲಿಬೈಲ್ ಯಮುನಕ್ಕ ಜತೆಗೆ ಜೈ ತುಳುನಾಡ್ ಸಿನಿಮಾದ ಮೂಲಕ ತುಳುವರಿಗೆ ಪರಿಚಯವಾದ ಸೋನಾಲ್ ಹಿಂದಿರುವ ಶಕ್ತಿ ಅವರ ಅಮ್ಮ ಲೀಟಾ ಮೊಂತೆರೋ.
ಬಣ್ಣದ ಬದುಕಿಗೆ ಅವರ ತಾಯಿ ನೀಡಿದ ಪ್ರೇರಣೆ, ಪ್ರೋತ್ಸಾಹ ಜತೆಗೆ ಸಹಕಾರದ ಮನೋಭಾವವೇ ಇಂದು ಸೋನಾಲ್ ತುಳು ಮಾತ್ರವಲ್ಲ ಕನ್ನಡದ ಸಿನಿಮಾ ಅಭಿಮಾನಿಗಳಿಗೂ ಪ್ರೀತಿಯ ಹುಡುಗಿಯಾಗಿದ್ದಾರೆ.

ತರಕಾರಿ ಕೆಡದಂತೆ ಕೋಟಿಂಗ್ ಪ್ಲ್ಯಾನ್ !

ತರಕಾರಿಯೊಂದನ್ನು ನಾಲ್ಕೈದು ದಿನಕ್ಕಿಂತ ಹೆಚ್ಚು ಕಾಲ ಕೆಡದಂತೆ ಸಂರಕ್ಷಿಸುವುದು ಕಷ್ಟ ಆದರೆ ಪುತ್ತೂರಿನ 15 ರ ಹರೆಯದ ಅಮೋಘ ನಾರಾಯಣ ವೆಜಿಟೇಬಲ್ ಕೋಟಿಂಗ್‌ಗೆ ನೈಸರ್ಗಿಕ ವಿಧಾನದ ಯಶಸ್ವಿ ಪ್ರಯೋಗ ಮಾಡಿದ್ದು, ಅದಕ್ಕೀಗ ಪೇಟೆಂಟ್ ಪಡೆಯಲು ನಿರ್ಧರಿಸಿದ್ದಾರೆ. ಮೂಡುಬಿದಿರೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.

ಅಮೋಘ ಬದನೆ ಕಾಯಿಗೆ ಬೀಂಪುಳಿ ಎಂಬ ಮರದ ಎಲೆಯನ್ನು (ಬಿಲಿಂಬಿ ಲೀವ್ಸ್) ಬಳಸಿಕೊಂಡು ಅದರ ನಿರ್ದಿಷ್ಟ ಅಂಶವನ್ನು ಪಡೆದುಕೊಂಡು ತಯಾರಿಸಿದ ದ್ರಾವಣದಲ್ಲಿ ಬದನೆಯನ್ನು ಒಂದು ಗಂಟೆ ಮುಳುಗಿಸಿಡಲಾಯಿತು.
ಈ ಪರಿಸರ ಸ್ನೇಹಿ ಕ್ರಿಯೆಗೆ ಒಳಪಟ್ಟ ಬದನೆ 12 ದಿನಗಳ ಕಾಲ ಕೆಡದಂತೆ, ಹಣ್ಣಾಗದಂತೆ ಸ್ಥಿತಪ್ರಜ್ಞವಾಗಿತ್ತು. ಎನ್‌ಐಟಿಕೆ ಸೇರಿದಂತೆ ನಾನಾ ಕಡೆ ಈ ಪ್ರಯೋಗದ ವೈಜ್ಞಾನಿಕ ಪರೀಕ್ಷೆ ನಡೆಸಿ ಯಶಸ್ವಿ ಫಲಿತಾಂಶ ಪಡೆಯಲಾಯಿತು.

ಅಮೆರಿಕದಲ್ಲಿ ಜೂ.17ರಿಂದ 22 ರತನಕ ನಡೆಯಲಿರುವ ’ಜೀನಿಯಸ್ ಒಲಿಂಪಿಯಾಡ್’ ಅಂತಾರಾಷ್ಟ್ರೀಯ ವಿಜ್ಞಾನ ಮೇಳಕ್ಕೆ ಆಯ್ಕೆಯಾಗಿರುವ ಅಮೋಘ ನಾರಾಯಣ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ನೀಡುವ ಯುವ ವಿಜ್ಞಾನಿ ತರಬೇತಿ ಕಾರ್ಯಕ್ರಮ ‘ಯುವಿಕಾ: 2019’ಕ್ಕೆ ಕೂಡ ಆಯ್ಕೆಯಾಗಿದ್ದಾರೆ.

ಕುಡ್ಲದ ಬ್ಯೂಟೆಸ್ಟ್ ಬೀಚ್ ತಣ್ಣೀರು ಬಾವಿ ಯಾಕೆ ?

ಮಂಗಳೂರಿನ ಎಲ್ಲ ಬೀಚ್‌ಗಳು ಸುಂದರ ಎನ್ನುವ ಮಾತಿನಿಂದ ಆರಂಭಿಸುವುದಾದರೆ ತಣ್ಣೀರು ಬಾವಿ ಬೀಚ್ ಎಲ್ಲಕ್ಕಿಂತ ಹೆಚ್ಚು ಸುಂದರ ಎನ್ನುವುದು ಲೋಕಲ್ ಜತೆಗೆ ವಿದೇಶಿ ಪ್ರವಾಸಿಗರ ಮಾತು.
ಇಲ್ಲಿನ ಸೌಂದರ್ಯತೆಗೆ ಬಹುಮುಖ್ಯವಾದ ಕಾರಣಕ್ಕೆ ನಿರ್ದಿಷ್ಟವಾದ ಉತ್ತರ ಇಲ್ಲದೇ ಹೋದರೂ ಪ್ರೇಮಿಗಳಿಂದ ಹಿಡಿದು ಕುಟುಂಬ ವರ್ಗಕ್ಕೂ ಈ ಬೀಚ್ ಇಷ್ಟವಾಗುವಂತಿದೆ.
ತಣ್ಣನೆಯ ಗಾಳಿ ಅಲೆಗಳ ಅಬ್ಬರದೊಳಗೆ ಮುಳುಗುವ ಸೂರ್ಯನ ಬಿಂಬವನ್ನು ಕಾಣಬೇಕಾದರೆ ತಣ್ಣೀರು ಬಾವಿ ಬೀಚ್‌ಗೆ ಭೇಟಿ ನೀಡಿ. ವಿಶೇಷವಾಗಿ ಬಸ್‌ಗಳ ಸೌಕರ್ಯ ಹೆಚ್ಚಿನ ಪ್ರಮಾಣದಲ್ಲಿ ಇಲ್ಲದೇ ಹೋದರೂ ಕೂಡ ಸುಲ್ತಾನ್ ಬತ್ತೇರಿಯ ಮೂಲಕ ಪ್ರಯಾಣಿಕರ ಹಡಗಿನ ಮೂಲಕ ಹೋಗಬಹುದು. ಸ್ವಂತ ವಾಹನ ಇದ್ದರೆ ಕೂಳೂರು ಕಡೆಯಿಂದ ತಣ್ಣೀರು ಬಾವಿ ಬೀಚ್‌ಗೆ ಪ್ರಯಾಣ ಬೆಳೆಸಬಹುದು.

ಕುಡ್ಲದ ರಿಕ್ಷಾ ಚಾಲಕರ ಸಿಟಿ ಇನ್ಪೋ ಟ್ಯಾಬ್ !

ಕುಡ್ಲದ ರಿಕ್ಷಾ ಚಾಲಕರು ಡಿಜಿಟಲ್ ವಿಚಾರದಲ್ಲೂ ಸಾಕಷ್ಟು ಸ್ಮಾರ್ಟ್ ಆಗಿರುವುದು ಗೊತ್ತಿರುವ ವಿಚಾರ. ಈ ಹಿಂದೆ ರಿಕ್ಷಾಗಳಿಗೆ ಪೇಟಿಎಂ ಮಾಡುವ ಮೂಲಕ ಮಾದರಿಯಾದ ಕುಡ್ಲದ ರಿಕ್ಷಾ ಚಾಲಕರು ಟ್ಯಾಬ್ ಅಳವಡಿಸುವ ಕೆಲಸದಿಂದಲ್ಲೂ ದೇಶದಲ್ಲಿ ಮೊದಲ ಟ್ಯಾಬ್ ಅಳವಡಿಸಿದ ಕೆಲಸಕ್ಕೆ ಭಾಜನರಾಗಿದ್ದಾರೆ. ಕುಡ್ಲದ ಕೆಲವು ರಿಕ್ಷಾಗಳು ಈಗಾಗಲೇ ಟ್ಯಾಬ್ ಆಳವಡಿಸಿಕೊಂಡಿದ್ದಾರೆ.
ರಿಕ್ಷಾದಲ್ಲಿ ಅಳವಡಿಸಿಕೊಂಡಿರುವ ಟ್ಯಾಬ್‌ನಲ್ಲಿ ಕರಾವಳಿಯ ದೇವಸ್ಥಾನ, ಮಸೀದಿ, ಚರ್ಚ್, ಹೋಟೆಲ್‌ಗಳ ವಿವರ, ಮಾಲ್, ಪ್ರವಾಸಿ ತಾಣಗಳು ಸೇರಿದಂತೆ ಸಂಪೂರ್ಣ ಮಾಹಿತಿಗಳು ಸಿಗಲಿದೆ. ದೇವಸ್ಥಾನ ಕ್ಲಿಕ್ ಮಾಡಿದಾಕ್ಷಣ ದೇವಸ್ಥಾನದ ಇತಿಹಾಸ, ಪ್ರಯಾಣದ ವಿವರ, ತಂಗಲು ಇರುವ ವ್ಯವಸ್ಥೆ, ಪೂಜಾ ಸಮಯದ ಟೈಮ್ ಟೇಬಲ್ ಇತ್ಯಾದಿಗಳನ್ನು ನೀಡಲಾಗಿದೆ.

ಪಿಲಿಕುಳದ ಪ್ರಾಣಿ, ಪಕ್ಷಿಗಳಿಗೆ ಫ್ಯಾನ್ ಟ್ರೀಟ್‌ಮೆಂಟ್

ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಈಗ ಪ್ರಾಣಿ, ಪಕ್ಷಿಗಳಿಗೆ ಈಗ ಯಾಂತ್ರೀಕೃತ ಫ್ಯಾನ್‌ಗಳ ಆಹ್ಲಾದಕರ ಗಾಳಿ, ಜತೆಗೆ ಅಲ್ಲಲ್ಲಿ ತಣ್ಣೀರ ಸಿಂಚನದ ಖುಷಿ… ಬಿಸಿಲಿನ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮನುಷ್ಯರು ಮಾತ್ರವಲ್ಲದೆ ಪ್ರಾಣಿ ಪಕ್ಷಿಗಳಿಗೂ ಸೆಕೆ ತಡೆಯಲಾಗುತ್ತಿಲ್ಲ. ಹೀಗಾಗಿ ಪಿಲಿಕುಳ ಉದಾನವನದಲ್ಲಿರುವ ಪ್ರಾಣಿಗಳಿಗೆ ಬಿಸಿಲಿನ ತಾಪ ತಣಿಸಲು ಫ್ಯಾನ್, ನೀರು ಸಿಂಪಡಣೆ, ಜತೆಯಲ್ಲಿ ಶೀಟ್‌ಗಳಿಗೆ ಬಿಳಿ ಪೈಂಟ್ ಬಳಿಯುವ ಮೂಲ ಹೊಸ ಪ್ರಯತ್ನವನ್ನು ಮಾಡಲಾಗುತ್ತಿದೆ.