ಕುಡ್ಲದ ಫಸ್ಟ್ ಜೈವಿಕ ಇಂಧನದ ಸಿಟಿ ಬಸ್ ! ಬೆಂಗಳೂರಿನ ಬಿಎಂಟಿಸಿ ಬಸ್ಗಳಲ್ಲಿ ಈಗಾಗಲೇ ಜೈವಿಕ ಇಂಧನದ ಬಸ್ಗಳು ಓಡಾಡುತ್ತಿದೆ. ಆದರೆ ಮೊದಲ ಬಾರಿಗೆ ಮಂಗಳೂರಿನ ಸಿಟಿ ಬಸ್ನಲ್ಲಿ ಜೈವಿಕ ಇಂಧನದ ಬಳಕೆಯ ಮೂಲಕ ಮಾಲಿನ್ಯತೆ, ಇಂಧನ ಉಳಿಕೆ ಹಾಗೂ ಹಣದ ಉಳಿತಾಯಕ್ಕೂ ಇದು ಸಹಕಾರಿಯಾಗಲಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್- ಮಂಗಳಾದೇವಿ ಕಡೆಗೆ ಓಡುವ ಸಿಟಿ ಬಸ್ನಲ್ಲಿ ಶೇ.೮೦ ಡಿಸೇಲ್ ಜತೆಗೆ ಶೇ.೨೦ ಜೈವಿಕ ಈಂಧನ ಬಳಕೆ ಮಾಡಲಾಗುತ್ತಿದೆ. ಮುಂದೆ ಇದರ ಪ್ರಮಾಣ ಜಾಸ್ತಿಯಾಗಲಿದೆ ಎನ್ನುವುದು ಮಂಗಳೂರು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಹೇಳುತ್ತಾರೆ. ಜೈವಿಕ ಇಂಧನಗಳೆಂದರೆ ಜೈವಿಕ ಎಥೆನಾಲ ಹಾಗೂ ಬಯೋ ಡೀಸೆಲ. ಎಥೆನಾಲ್ನ್ನು ಪೆಟ್ರೋಲ್ ನೊಂದಿಗೆ ಬೆರೆಸಿದರೆ, ಬಯೋ ಡೀಸೆಲ್ನ್ನು ಡೀಸೆಲ್ನೊಂದಿಗೆ ಮಿಶ್ರಣ ಮಾಡಲಾಗುತ್ತದೆ. ಎಥೆನಾಲ್ ವಾಹನ ಇಂಧನಕ್ಕೆ ಪೂರಕವಾಗಿ ಬಳಸಬಹುದಾದ ಇಂಧನವಾದರೆ, ಬಯೋ ಡೀಸೆಲ ಪೆಟ್ರೋಲಿಯಂಗೆ ಪರ್ಯಾಯವಾಗಿ ಬಳಸಬಹುದಾದ ಇಂಧನ. ಬಯೋ ಎಥೆನಾಲ ಯುಎಸ್ಎ ಮತ್ತು ಬ್ರೆಜಿಲ್ನಲ್ಲಿ ಹೆಚ್ಚು ಬಳಕೆಯಾಗುತ್ತದೆ. ಸಕ್ಕರೆ ಅಂಶವಿರುವ ಸಸ್ಯೋತ್ಪನ್ನ ಕಬ್ಬು, ಕಬ್ಬಿನ ತ್ಯಾಜ್ಯವಾದ ಕಾಕಂಬಿ, ಜೋಳ, ಬೀಟ್ರೂಟ್, ಮೆಕ್ಕೆ ಜೋಳ, ತಾಳೆ ಮೊದಲಾದವುಗಳಿಂದ ಎಥೆನಾಲ್ ಉತ್ಪಾದನೆ ಮಾಡಬಹುದಾಗಿದೆ. ನಗರದ ಸಿಟಿ ಬಸ್ಗಳಿಗೆ ಉಪಯೋಗಿಸುವ ಬಯೋ ಡೀಸೆಲ್ ಹೋಟೆಲ್ ಗಳಲ್ಲಿ ಬಳಕೆ ಮಾಡಿದ ಅಡುಗೆ ಅನಿಲದಿಂದ ತಯಾರಿಸಲಾಗುತ್ತಿದೆ. ನಿಟ್ಟೆಯ ಎನ್ಎಂಎಎಂಐಟಿ ಸಂಸ್ಥೆಯು ಬಿಆರ್ಐಡಿಸಿ ವಿಭಾಗದಲ್ಲಿ ಬಯೋ ಡೀಸೆಲ್ ತಯಾರಿಸುತ್ತಿದೆ. ಈ ಯುನಿಟ್ನಲ್ಲಿ ತಿಂಗಳಿಗೆ 600 ರಿಂದ 700 ಲೀ. ಬಯೋ ಡೀಸೆಲ್ ತಯಾರಿಸಲಾಗುತ್ತಿದೆ.
Tagged: mangalorecity
ವಿಶ್ವ ಚಾಂಪಿಯನ್ ಶಿಪ್ ತಂಡದಲ್ಲಿ ಕುಡ್ಲದ ಪೊಣ್ಣು !
ದೋಹಾದಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಭಾರತ ತಂಡದ 25 ಸದಸ್ಯರಲ್ಲಿ ಕುಡ್ಲದ ಓಟಗಾರ್ತಿ ಎಂ.ಆರ್.ಪೂವಮ್ಮ ಆಯ್ಕೆಯಾಗಿದ್ದಾರೆ. ಈಗಾಗಲೇ ಹಲವು ಕ್ರೀಡಾಕೂಟದಲ್ಲಿ ಪದಕ ಗೆದ್ದಿರುವ ಪೂವಮ್ಮ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾ ಬದುಕು ಆರಂಭಿಸಿದವರು.
ತುಳುನಾಡಿನ ಓಲೆ ಬೆಲ್ಲ ಸಿಹಿಯಲ್ಲೂ ಪೂರ್ಣ ಆರೋಗ್ಯ
ಜಗತ್ತಿನ ಬಹುತೇಕ ಹಣ್ಣುಗಳ ರಸ, ಸುವಾಸನೆ ಗಳನ್ನು ಕೃತಕವಾಗಿ ತಯಾರಿಸಬಹುದು. ಆದರೆ, ಓಲೆ ಬೆಲ್ಲ ಮಾತ್ರ ಯಾವುದೇ ಕೃತಕ ವಿಧಾನಗಳಿಂದಲೂ ಸೃಷ್ಟಿಸಲಾಗದ ಅಪ್ಪಟ ದೇಸೀ ಉತ್ಪನ್ನ. ಅಚ್ಚುಬೆಲ್ಲ ಮತ್ತು ನೀರು ನೀಡಿ ಅತಿಥಿಗಳನ್ನು ಸ್ವಾಗತಿಸುವುದು ತುಳುನಾಡಿನ ಜನರ ಸಂಪ್ರದಾಯದ ಒಂದು ಭಾಗವಾದರೆ ಓಲೆಬೆಲ್ಲ ಶಾರೀರಿಕ ಆರೋಗ್ಯದ ವಿಚಾರದಲ್ಲಿ ವಿಶೇಷ ಮಹತ್ವ, ಸ್ಥಾನಮಾನ ಪಡೆದುಕೊಂಡಿದೆ. ಹೆರಿಗೆಯ ಬಳಿಕ ನಡೆಸಬೇಕಾದ ಬಾಣಂತನದಲ್ಲಂತೂ ಓಲೆ ಬೆಲ್ಲವೇ ಪ್ರಧಾನ.
ಅದೂ ಆಧುನಿಕತೆಯ ಈ ಕಾಲದಲ್ಲಯೂ ಸಹ ಉಳಿದುಕೊಂಡಿದೆ. ಕ್ಯಾಲ್ಸಿಯಂ ಹೇರಳವಾಗಿರುವ ಓಲೆಬೆಲ್ಲ ದೇಹದ ಹಲವಾರು ಸಮಸ್ಯೆಗಳಿಗೆ ನಾಟಿ ಹಾಗೂ ಆಯುರ್ವೇದ ಔಷಧಿಯ ರೂಪದಲ್ಲಿ ಬಳಸಲ್ಪಡುತ್ತದೆ. ಬಾಯಿ ಸಿಹಿ ಮಾಡಿಕೊಂಡೇ ಆರೋಗ್ಯ ನೀಡುವ ಓಲೆಬೆಲ್ಲ ನಮಗೆ ಅವಶ್ಯಕವೆನಿಸಿದೆ.
ಪರಿಸರ ಸ್ನೇಹಿ ಗಣಪನಿಗೆ ಮೊದಲ ವಂದನೆ
ಇತ್ತೀಚಿನ ಕೆಲ ವರ್ಷಗಳಿಂದ ಪರಿಸರ ಸ್ನೇಹಿ ಗಣಪನ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದ್ದು, ಇದಕ್ಕೆ ಪೂರಕವಾಗಿ ಇಂತಹ ಗಣೇಶ ವಿಗ್ರಹಗಳಲ್ಲೂ ವೈವಿಧ್ಯತೆ ಕಾಣ ಸಿಗುತ್ತದೆ.
ಮಂಗಳೂರಿನ ಪಕ್ಷಿಕೆರೆಯ ನಿತಿನ್ ವಾಸ್ ಪರಿಸರ ಪೂರಕ ಗಣಪತಿ ಮೂರ್ತಿಯನ್ನು ರಚಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅವರು ಗಣಪತಿ ಮೂರ್ತಿ ರಚನೆಗೆ ಬಳಸುವುದು ಪರಿಸರ ಸ್ನೇಹಿ ಕಾಗದದ ತಿರುಳು ಮತ್ತು ಬೀಜಗಳನ್ನು. ಇವು ನೀರಿನಲ್ಲಿ ಸುಲಭವಾಗಿ ಕರಗಿ ಹೋಗುತ್ತವೆ, ಹೊರತು ಪ್ರಕೃತಿಗೆ ಮಾರಕವಲ್ಲ.
ಈ ಮೂರ್ತಿಗಳ ರಚನೆಗೆ ನಾನು ಪರಿಸರಕ್ಕೆ ಮಾರಕವಾದ ಯಾವುದೇ ವಸ್ತುಗಳನ್ನು ಬಳಸುವುದಿಲ್ಲ. ಈ ಮೂರ್ತಿಗಳನ್ನು ವಿಸರ್ಜಿಸಿದ ಬಳಿಕ ಬಳಸಲಾಗಿರುವ ಬೀಜಗಳು , ಗಿಡವಾಗಿ ಬೆಳೆಯಬಲ್ಲವು ಎನ್ನುತ್ತಾರೆ ನಿತಿನ್. ಕೇವಲ ಗಣೇಶ ವಿಗ್ರಹ ಅಷ್ಟೇ ಅಲ್ಲ, ಪರಿಸರ ಪ್ರೇಮಿ ನಿತಿನ್ ಗಿಡವಾಗಿ ಅರಳುವ ತ್ರಿವರ್ಣ ಧ್ವಜ, ಪೆನ್ಸಿಲ್, ಪೇಪರ್ ಪೆನ್ಗಳನ್ನು ತಯಾರಿಸಿ ಕೂಡ ಗಮನ ಸೆಳೆದಿದ್ದಾರೆ.
ಕುಡ್ಲ ಸಿಟಿ ಇಂಪ್ಯಾಕ್ಟ್: ‘ಫ್ಲೆಕ್ಸ್’ ಶಾಸಕರ ಅಭಿಮಾನಿಗಳಿಂದ ತೆರವು
ಕುಡ್ಲ ಸಿಟಿಯಲ್ಲಿ ಆ.19ರಂದು ‘ಫ್ಲಾಸ್ಟಿಕ್ ಮುಕ್ತ ಕುಡ್ಲಕ್ಕೆ ಫ್ಲೆಕ್ಸ್ ಶಾಸಕರ ಕೊಡುಗೆ ಅಪಾರ’ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿರುವ ಜತೆಯಲ್ಲಿ ಪರ-ವಿರೋಧಗಳ ಅಲೆಗಳಿಂದ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಪರವಾಗಿ ನಗರದ ಉರ್ವ ಸೇರಿದಂತೆ ಕೆಲವು ಭಾಗದಲ್ಲಿ ಹಾಕಲಾಗಿರುವ ಫ್ಲೆಕ್ಸ್ವನ್ನು ಆ. 20 ರಂದು ಪೂರ್ಣ ಪ್ರಮಾಣದಲ್ಲಿ ತೆರವಿನ ಮೂಲಕ ನಗರ ಸ್ವಚ್ಛತೆಯಲ್ಲಿ ತಮ್ಮ ಜವಾಬ್ದಾರಿ ಏನೂ ಎನ್ನುವ ಮಾತನ್ನು ಶಾಸಕರ ಜತೆಗೆ ಅಭಿಮಾನಿಗಳು ಕಲಿತುಕೊಂಡಿದ್ದಾರೆ ಎನ್ನುವ ಮಾತು ಈ ತೆರವಿನ ಮೂಲಕ ರುಜುವಾತು ಆಗಿದೆ.
ಜನರಿಂದ ಆಯ್ಕೆಯಾದ ಮಂಗಳೂರಿನ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಇತರರಿಗೆ ಮಾದರಿಯಾಗಬೇಕು ಎನ್ನುವ ಸಂದೇಶ ನೀಡಲು ಹೊರಟ ಕುಡ್ಲಸಿಟಿಯ ಕಾಳಜಿ ಗೆದ್ದಿದೆ ಎನ್ನುವುದು ಇದರಿಂದ ಸಾಬೀತಾಗಿದೆ. ಇದರ ಜತೆಯಲ್ಲಿ ನಗರದ ಕೆಲವು ಭಾಗದಲ್ಲಿ ಹಬ್ಬಕ್ಕೆ, ಸಾವಿಗೂ ಫ್ಲೆಕ್ಸ್ ಹಾಕಿ ಗಮನ ಸೆಳೆಯುವ ಕಾರ್ಯಕ್ಕೆ ಶಾಸಕರು ಬುನಾದಿ ಹಾಕುವ ಮೂಲಕ ಮತ್ತಷ್ಟು ಸಮಸ್ಯೆಗೆ ಕಾಮತ್ ಅವರ ಅಭಿಮಾನಿಗಳು ಕಾರಣವಾಗುತ್ತಿರುವುದು ಬುದ್ದಿವಂತ ಕುಡ್ಲದ ಜನರಿಗೆ ಸಮಸ್ಯೆಯಾಗಿದೆ.
ಈ ಕುರಿತು ಈಗಾಗಲೇ ಮಹಾನಗರ ಪಾಲಿಕೆಯ ಜತೆಯಲ್ಲಿ ಇತರ ಅಧಿಕಾರಿ, ಇಲಾಖೆಗಳು ಎಚ್ಚರಗೊಳ್ಳದೇ ಹೋದರೆ ಕುಡ್ಲ ಸಿಟಿಯಲ್ಲಿ ಮತ್ತೆ ಫ್ಲೆಕ್ಸ್ ಸಂಸ್ಕೃತಿ ಗೆಲ್ಲುವ ಸಾಧ್ಯತೆಯಿದೆ.