ಕುಡ್ಲದಲ್ಲಿ ಶ್ರೀಮಂತ ಮಾತ್ರವಲ್ಲ ಸಾಮಾನ್ಯ ಬಡವ ಕೂಡ ಪ್ರಧಾನಿ ನರೇಂದ್ರ ಮೋದಿಯಾಗಬೇಕು ಎಂದು ಕನಸ್ಸು ಕಾಣುತ್ತಾನೆ ಎನ್ನುವ ಮಾತಿಗೆ ಮತ್ತಷ್ಟು ಉದಾಹರಣೆ ಕಾಣಸಿಗುತ್ತಿದೆ.
ಹೌದು. ಕುಡ್ಲದ ಸಿಟಿ ಸೆಂಟರ್ ಮುಂಭಾಗದಲ್ಲಿರುವ ಲಲಿತ್ ಮಹಲ್ ಹೋಟೆಲ್ ಪಕ್ಕದಲ್ಲಿ ಹೂ ಮಾರಾಟ ಮಾಡುವ ಪಕೀರಬ್ಬ ಬೇಸಿಕಲಿ ದೊಡ್ಡ ಶ್ರೀಮಂತ ರಲ್ಲ ಹೂ ವ್ಯಾಪಾರ ಮಾಡುತ್ತಾ ಬದುಕು ಕಟ್ಟುವ ಮನುಷ್ಯ ಆದರೆ ಮೋದಿ ಪ್ರಧಾನಿ ಯಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದಾಕ್ಷಣ ತಾನು ಕೂಡ ಸೇವೆ ಮಾಡಲು ಇಳಿದು ಬಿಡುತ್ತಾರೆ.
ಗುರುವಾರ ಸಂಜೆ ಯಿಂದ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡುವ ತನಕ ಬರೋಬರಿ 500 ಚೆಂಡು ಮಲ್ಲಿಗೆಯನ್ನು ಉಚಿತವಾಗಿ ಮಹಿಳೆಯರಿಗೆ ನೀಡುವ ಕೆಲಸ ಮಾಡಿದ್ದಾರೆ. ಈ ಸೇವೆಗೆ ಹೆಚ್ಚು ಕಡಿಮೆ 50 ಸಾವಿರ ದಷ್ಟು ಖರ್ಚು ತಗಲಬಹುದು ಮೋದಿ ದೇಶದ ಉದ್ದಾರಕ್ಕೆ ಸಾಕಷ್ಟು ಮಾಡಿದ್ದಾರೆ ನಾನು ಕೊಂಚ ಸೇವೆ ಮಾಡಬೇಕು ಎನ್ನುವ ಮೂಲಕ ಪಕೀರಬ್ಬ ಅಭಿಮಾನಿ ತೋರಿಸುತ್ತಾರೆ. ಅಂದಹಾಗೆ ಇವರು ಬೆಳ್ತಂಗಡಿಯವರು ಈಗ ಮಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಜಾನ್ ವೃತದಲ್ಲಿರವ ಪಕೀರಬ್ಬರಿಗೆ ಮೋದಿ ಮೇಲೆ ಅಪಾರ ನಂಬಿಕೆ.