ಇದು ದ.ಕ.ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯದಲ್ಲಿಯೇ ಬಹಳ ಅಪರೂಪದ ಶಾಲೆಯಿದು. ಈ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಫೀಸ್ ಕಟ್ಟಲು ಇಲ್ಲ. ಜತೆಯಲ್ಲಿ ಇಲ್ಲಿ ಕಲಿಯುವ ವಿದ್ಯಾರ್ಥಿಗಳೆಲ್ಲರೂ ಕೆಲಸ ಮಾಡಿಕೊಂಡು ಉಳಿದ ರಾತ್ರಿ ಸಮಯದಲ್ಲಿ ವಿದ್ಯಾಭ್ಯಾಸ ಮಾಡಬಹುದು.
ಹೌದು. ಕಳೆದ 76 ವರ್ಷಗಳಿಂದ ನಿರಂತರವಾಗಿ ಮಂಗಳೂರಿನ ಬಿಇಎಂ ಸ್ಕೂಲ್ನ ನೇರ ಮುಂಭಾಗದಲ್ಲಿ ಸಾಗುವ ಗಾಯತ್ರಿ ದೇವಸ್ಥಾನದ ರಸ್ತೆಯಲ್ಲಿ ನವಭಾರತ ರಾತ್ರಿ ಹೈಸ್ಕೂಲ್ ನಡೆಯುತ್ತದೆ. ಮುಖ್ಯವಾಗಿ ಇಲ್ಲಿ ಒಂದನೇ ತರಗತಿಯಿಂದ ೧೦ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾರೆ.
ಸಂಜೆ 6ರಿಂದ ಆರಂಭವಾಗುವ ತರಗತಿಗಳು 9ರ ವರೆಗೆ ಸಾಗುತ್ತದೆ. ಮುಖ್ಯವಾಗಿ ಕಲಿಯಲು ಯಾವುದೇ ವಯಸ್ಸು ಬೇಕಾಗಿಲ್ಲ ಎನ್ನುವುದಕ್ಕೆ ಇಲ್ಲಿಗೆ ಬರುವ ವಿದ್ಯಾರ್ಥಿಗಳೇ ಸಾಕ್ಷಿ. ಗುಮಾಸ್ತರು, ಗೃಹಿಣಿಯರು, ರಿಕ್ಷಾ ಚಾಲಕರು, ಹೋಟೆಲ್ನಲ್ಲಿ ದುಡಿಯುವ ಸಿಬ್ಬಂದಿಗಳು ಹೀಗೆ ತರೇವಾರಿ ವಿದ್ಯಾರ್ಥಿಗಳಿಂದ ಈ ಶಾಲೆ ನಡೆಯುತ್ತಿದೆ.
Tagged: kudlacity
ಮಂಗಳೂರು ಮಂದಿಗೆ ಕುಚಲಕ್ಕಿ ಪ್ರೀತಿ ಜಾಸ್ತಿ
ಮಂಗಳೂರಿನವರು ದೇಶದ ಯಾವುದೇ ಮೂಲೆಗೆ ಹೋದರೂ ಕೂಡ ಊಟಕ್ಕೆ ಕುಚಲಕ್ಕಿ (ಬೊಯಿಲ್ಡ್ ರೈಸ್) ಉಂಟಾ ಎಂದೇ ಪ್ರಶ್ನೆ ಕೇಳುತ್ತಾರೆ ಊಟ ಸೇರೋದಿಲ್ಲ. ಇದೇ ಕಾರಣ ಮಂಗಳೂರಿನ ಮಂದಿಗೆ ಕುಚಲಕ್ಕಿ ಮೇಲೆ ಪ್ರೀತಿ ಜಾಸ್ತಿ ಮಾರಾಯ್ರೆ.
ಮಂಗಳೂರು ಮಂದಿಗೆ ಕುಚಲಕ್ಕಿ ಪ್ರೀತಿ ಜಾಸ್ತಿ
ಮಂಗಳೂರಿನವರು ದೇಶದ ಯಾವುದೇ ಮೂಲೆಗೆ ಹೋದರೂ ಕೂಡ ಊಟಕ್ಕೆ ಕುಚಲಕ್ಕಿ (ಬೊಯಿಲ್ಡ್ ರೈಸ್) ಉಂಟಾ ಎಂದೇ ಪ್ರಶ್ನೆ ಕೇಳುತ್ತಾರೆ ಊಟ ಸೇರೋದಿಲ್ಲ. ಇದೇ ಕಾರಣ ಮಂಗಳೂರಿನ ಮಂದಿಗೆ ಕುಚಲಕ್ಕಿ ಮೇಲೆ ಪ್ರೀತಿ ಜಾಸ್ತಿ ಮಾರಾಯ್ರೆ.
ಮಂಗಳೂರಿನ ಮೊದಲ ರಿಕ್ಷಾ ಚಾಲಕ ಮೊಂತು
ಇಳಿ ವಯಸ್ಸಲ್ಲೂ ಎಳೆಯರಂತಹ ಉತ್ಸಾಹ. 62 ವರ್ಷಗಳಿಂದ ಆಟೋ ರಿಕ್ಷಾ ಚಾಲಕ. ಈ ವರೆಗೆ ಒಂದೇ ಒಂದು ಪೊಲೀಸ್ ಕೇಸ್ ಇಲ್ಲದೆ, ಅಪಘಾತ ಎಸಗದೆ ನಿಷ್ಠೆಯಿಂದ ದುಡಿಯುತ್ತಿರುವ ಕಾಯಕಯೋಗಿ. ವಿಶೇಷವೆಂದರೆ ಮಂಗಳೂರಿನಲ್ಲಿ ಪ್ರಪ್ರಥಮವಾಗಿ ಓಡಾಟ ನಡೆಸಿದ ರಿಕ್ಷಾದ ಚಾಲಕ ಮೊಂತು ಲೋಬೊ ಎನ್ನುವುದು ವಿಶೇಷ. ಈಗಲೂ ಮಂಗಳೂರಿನ ಪಡೀಲ್, ನಾಗುರಿ, ಕಂಕನಾಡಿ ಅಸುಪಾಸಿನ ರಿಕ್ಷಾ ನಿಲ್ದಾಣ ದಲ್ಲಿ ಅವರ ರಿಕ್ಷಾ ಕಾಣ ಸಿಗುತ್ತದೆ.
ಸಿಇಟಿ ಪರೀಕ್ಷಾ ಸೆಂಟರ್ ದ.ಕವೇ ರಾಜ್ಯಕ್ಕೆ ಸೆಕೆಂಡ್ !
ಇಂದು ರಾಜ್ಯವ್ಯಾಪಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ. ರಾಜ್ಯದ ಬೆಂಗಳೂರಿನಲ್ಲಿ ಈ ಬಾರಿ 84 ಸಿಇಟಿ ಪರೀಕ್ಷಾ ಸೆಂಟರ್ಗಳಿದ್ದರೆ ಅದರ ನಂತರದ ಸ್ಥಾನ ಮಂಗಳೂರಿನಲ್ಲಿ 26 ಸಿಇಟಿ ಪರೀಕ್ಷಾ ಸೆಂಟರ್ಗಳನ್ನು ಹೊಂದುವ ಮೂಲಕ ರಾಜ್ಯದಲ್ಲಿ ಎರಡನೇ ಅತೀ ದೊಡ್ಡ ಪರೀಕ್ಷಾ ಸೆಂಟರ್ಗಳನ್ನು ಹೊಂದಿರುವ ಜಿಲ್ಲೆ ಎನ್ನುವ ಖ್ಯಾತಿಗೆ ಭಾಜನವಾಗಿದೆ.
ಅದರಲ್ಲೂ ಮುಖ್ಯವಾಗಿ ಮಂಗಳೂರು ತಾಲೂಕು ವ್ಯಾಪ್ತಿಯಲ್ಲೇ ಭರ್ತಿ 13 ಪರೀಕ್ಷಾ ಕೇಂದ್ರಗಳು ಇವೆ. ಮೂಡುಬಿದಿರೆಯಲ್ಲಿ 8, ಬೆಳ್ತಂಗಡಿಯಲ್ಲಿ 2, ಪುತ್ತೂರಿನ 3 ಕೇಂದ್ರಗಳು ಸೇರಿದಂತೆ ಒಟ್ಟು 26 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಸರಿಸುಮಾರು 13,290ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ 771 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಜಿಲ್ಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸೆಂಟರ್ ಆಗಿ ಗುರುತಿಸಿಕೊಂಡಿದೆ.




