Tagged: mangalorecity

ಪ್ಲಾಸ್ಟಿಕ್ ಮುಕ್ತ ಕುಡ್ಲಕ್ಕೆ ಫ್ಲೆಕ್ಸ್ ಶಾಸಕರ ಕೊಡುಗೆ ಅಪಾರ

ಪ್ಲಾಸ್ಟಿಕ್ ಮುಕ್ತ ಮಂಗಳೂರು ಕಲ್ಪನೆಯ ಬಹಳ ಸುಂದರ ವಿಶೇಷವಾಗಿ ಬೆಳೆಯುತ್ತಿರುವ ಮಂಗಳೂರಿನ ಜನತೆಯಲ್ಲಿ ಇಂತಹ ಜಾಗೃತಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ. ಆದರೆ ಮಂಗಳೂರು ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತರು ಪ್ಲಾಸ್ಟಿಕ್ ಮುಕ್ತ ನಗರದ ಕಲ್ಪನೆಗೆ ಪೂರ್ಣ ಪ್ರಮಾಣದ ವಿರೋಧ ಕಾರ್ಯಗಳನ್ನು ನಿರಂತರವಾಗಿ‌ ಮಾಡಲು ಹೊರಟಿದ್ದಾರೆ.
ನಗರದ ಉರ್ವದ ಸರಕಾರಿ ಕ್ವಾರ್ಟಸ್ ಬಳಿಯ ಒಂದೇ ರಸ್ತೆಯಲ್ಲಿ ನಾಲ್ಕು ಫ್ಲೆಕ್ಸ್ ಗಳನ್ನು ತಮ್ಮ ಆಗಮನದ ಕೆಲಸಕ್ಕೆ ಹಾಕಿಕೊಂಡು ಪರಿಸರ ಪ್ರೇಮವನ್ನು ಮೊಳಗಿಸಿದ್ದಾರೆ. ವಿಶೇಷ ಎಂದರೆ ಶಾಸಕರ ಇಂತಹ‌ ಪ್ರೇಮವೇ ಮಂಗಳೂರಿನ ನಾನಾ ಕಡೆಯಲ್ಲಿ ಇಂತಹ ಫ್ಲೆಕ್ಸ್ ಸಂಸ್ಕೃತಿ ನಿಧಾನವಾಗಿ ತಲೆ ಎತ್ತುತ್ತಿದೆ. ಜನರಿಂದ ಆಯ್ಕೆಯಾದ ಜವಾಬ್ದಾರಿ ಸ್ಥಾನದಲ್ಲಿರುವ ಶಾಸಕರ ಈ ಕೆಲಸ ಬುದ್ದಿವಂತ ಮಂಗಳೂರಿನ ಜನತೆಗೆ ದಕ್ಕೆ ತಂದು ಕೊಡುತ್ತಿದೆ.

ಇಂತಹ ಫ್ಲೆಕ್ಸ್ ಗಳನ್ನು ತೆರವು ಮಾಡಬೇಕಾದ ಮನಪಾ ಅಧಿಕಾರಿಗಳು ಯಾವ ಕೆಲಸಕ್ಕೂ ಮುಂದೆ ಹೋಗದಿರುವುದು ಕುಡ್ಲದ ಜನರಲ್ಲಿ ಸಂದೇಹ ಮೂಡಿಸುವ ಕಾರ್ಯವಾಗುತ್ತಿದೆ. ಶಾಸಕರಿಗೊಂದು ನಿಯಮ ಜನರಿಗೊಂದು ನಿಯಮವೇ ಎಂದು ಕೇಳುವ ಹಂತಕ್ಕೆ ತಲುಪಿದೆ.
ಶಾಸಕರ ಅಭಿವೃದ್ಧಿ ಕಾರ್ಯಗಳು ಜನರಿಗೆ ಒಳ್ಳೆಯದಾಗಬೇಕೆ ಹೊರತು ಜನರಿಗೆ ಸಮಸ್ಯೆ ತಂದು ಹಾಕಕೂಡದು. ಬರೀ ಮಾತಿನ ಕೆಲಸ ಬಿಟ್ಟು ಶಾಸಕರು ತಮ್ಮ ಜವಾಬ್ದಾರಿ ಮೆರೆಯಬೇಕಾದ ಸಮಯವಿದು. ಕ್ಲೀನ್ ಮಂಗಳೂರು ಮಾಡಲು ಶಾಸಕರು ಮೊದಲು ಮನಸ್ಸು ಮಾಡಬೇಕು.

ಕೋಮು ಸಾಮರಸ್ಯ ಅರಳಿಸಿದ ವಸ್ತು ಸೂರೆ!

ಕ್ರೈಸ್ತರು ಬೆಳೆಸಿದ ತರಕಾರಿ, ಮುಸ್ಲಿಂಮರು ಬೆಳೆಸಿದ ಹಣ್ಣು ಹಂಪಲು, ಹಿಂದೂಗಳು ಮಾಡಿದ ಕುರುಕಲು ತಿಂಡಿ ತಿನಸು ಜತೆಗೆ ಅದನ್ನು ಹೆಕ್ಕಿ ತೆಗೆದುಕೊಳ್ಳಲು ಸರಕಾರಿ ಶಾಲೆಯಲ್ಲಿ ಓದುತ್ತಿರುವ ಪುಟಾಣಿಗಳು ಇದೆಲ್ಲ ಚಿತ್ರಣಗಳು ಕಾಣಿಸಿಕೊಂಡದ್ದು ಭಾನುವಾರ ಬೊಕ್ಕಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ವಸ್ತು ಸೂರೆ ಕಾರ‍್ಯಕ್ರಮದಲ್ಲಿ.
ಹೌದು. ಬೋಳೂರಿನ ಶ್ರೀಧರ್ಮಭೂಮಿ ಪ್ರತಿಷ್ಠಾನ ಕಳೆದ 14 ವರ್ಷಗಳಿಂದ ನಿರಂತರವಾಗಿ ಈ ಸಂಘಟನೆ ಇಂತಹ ವಸ್ತುಸೂರೆ ಕಾರ‍್ಯಕ್ರಮದ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಭಾವನೆಯನ್ನು ಅರಳಿಸುವ ಉದಾತ್ತವಾದ ಚಿಂತನೆಯ ಮೂಲಕ ಕಾರ‍್ಯಕ್ರಮವನ್ನು ಸಂಘಟನೆ ಮಾಡುತ್ತಿದೆ. ವಿಶಿಷ್ಟ ಎಂದರೆ ಕುದ್ರೋಳಿ, ಉರ್ವ, ಬೊಕ್ಕಪಟ್ಣ, ಬೆಂಗ್ರೆ, ತಣ್ಣೀರು ಬಾವಿ ಸೇರಿದಂತೆ ಹತ್ತು ಹಲವು ಪ್ರದೇಶದಿಂದ ಈ ಕಾರ‍್ಯಕ್ರಮಕ್ಕೆ ಸರಕಾರಿ ಶಾಲೆಯಲ್ಲಿ ಓದುತ್ತಿರುವ ತೀರಾ ಬಡ ಕುಟುಂಬದ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ವಸ್ತು ಸೂರೆಯಲ್ಲಿ ಸಿಗುವ ವಸ್ತುಗಳನ್ನು ಪಡೆದುಕೊಂಡು ಖುಷಿಯಿಂದ ಮನೆ ಕಡೆಗೆ ಹೆಜ್ಜೆ ಹಾಕುತ್ತಾರೆ.

ಇವರು ವೈದ್ಯರಲ್ಲ ಬಟ್ ಬಡವರ ಪಾಲಿನ ದೇವರು !

ಪುತ್ತೂರಿನ ಡಾ.ಶಿವರಾಮ ಭಟ್ ಅವರ ಕ್ಲಿನಿಕ್‌ನಲ್ಲಿರುವ ಕಂಪೌಂಡರ್ ಭಟ್ಟರು ಪುತ್ತೂರಿನ ಮಂದಿಗೆ ಚಿರಪರಿಚಿತ ಮುಖ. ಯಾವುದೇ ಕಾಯಿಲೆ ಇರಲಿ ಅವರು ನೀಡುವ ಮದ್ದು ರೋಗಿಯ ಕಾಯಿಲೆಗೆ ಗುಣಪಡಿಸುವ ಶಕ್ತಿಯಿದೆ. ಅವರ ನಗು ಮೊಗದ ಮಾತು ರೋಗಿಗೆ ಕಾಯಿಲೆಯಲ್ಲೂ ಹೊಸ ಚೈತನ್ಯ ನೀಡುತ್ತದೆ.
ಅವರ ಮದ್ದಿನ ರೇಟು ಕೂಡ ಬಹಳ ಕಡಿಮೆ. ಕೆಲವೊಂದು ಸಲ ಬಡವರು ಬಂದರೆ ಉಚಿತವಾಗಿ ಮದ್ದು ನೀಡಿದ ಉದಾಹರಣೆಗಳು ಸಾಕಷ್ಟಿದೆ. ಡಾ. ಶಿವರಾಮ ಭಟ್ ಅವರ ಕಾಲದಿಂದಲ್ಲೂ ಪುತ್ತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿರುವ ಡಾ. ಶಿವರಾಮ ಭಟ್ ಕ್ಲಿನಿಕ್‌ನಲ್ಲಿ ಕಂಪೌಂಡರ್ ಆಗಿದ್ದಾರೆ.
ಈಗ ಡಾ.ಶಿವರಾಮ ಭಟ್ಟರು ಇಲ್ಲ ಆದರೆ ಅವರ ಪುತ್ರ ಡಾ. ಶ್ಯಾಮ್ ಭಟ್ ಇದ್ದರೆ ಅವರಿಗೂ ಕಂಪೌಂಡರ್ ಭಟ್ಟರು ಎಂದರೆ ಅದೇ ಪ್ರೀತಿ. ರೋಗಿಗಳಿಗೂ ಅವರು ಎಂದರೆ ವಿಶೇಷ ಗೌರವ ಜತೆಗೆ ಅಪಾರ ಪ್ರೀತಿ.

ಕುಡ್ಲದ ಮಳೆಯಲ್ಲಿ ಮನಸ್ಸು ಗೆದ್ದವರು !

ಕರಾವಳಿಯ ಯಾವುದೇ ಭಾಗದಲ್ಲಿ ನೋಡಿದರೂ ಕೂಡ ಮಳೆ ಅಬ್ಬರ ಕಡಿಮೆಯಾಗುತ್ತಿಲ್ಲ. ನೆರೆ ಜತೆಗೆ ಪರಿಹಾರ ನೀಡುವ ಯುವಕರು, ಸಮಾಜದ ಜಾತಿ ಮತವನ್ನು ಲೆಕ್ಕಿಸದೇ ನೆರವಿಗೆ ಹಸ್ತ ಚಾಚುವ ಮಂದಿಯ ಮುಂದೆ ಈ ಎರಡು ತಂಡಗಳು ವಿಶೇಷವಾಗಿ ಗಮನ ಸೆಳೆದಿದೆ.
ಒಂದು ಎನ್‌ಡಿಆರ್‌ಎಫ್( ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ)ದ ಸಮರ್ಥ ಅಧಿಕಾರಿಗಳು ಹಾಗೂ ಉಳ್ಳಾಲದಲ್ಲಿ ಎಸ್‌ಕೆಎಸ್‌ಎಸ್‌ಎಫ್‌ನ ವಿಖಾಯ ತಂಡದವರು ಮಾಡುತ್ತಿರುವ ಕಾರ‍್ಯಕ್ಕೆ ಎಲ್ಲೆಡೆ ಶ್ಲಾಘನೆಯ ಮಾತುಗಳು ಕೇಳಿ ಬಂದಿದೆ. ಎನ್‌ಡಿಆರ್‌ಎಫ್ ತಂಡದವರು ನಿರಂತರರಾಗಿ ರಾತ್ರಿ ಹಗಲು ಜಿಲ್ಲೆಯ ನಾನಾ ಕಡೆ ಬೋಟಿನಲ್ಲಿ ಹೋಗಿ ನಿರಾಶ್ರಿತರನ್ನು ಕರೆದುಕೊಂಡು ಸುರಕ್ಷಿತ ಸ್ಥಳಕ್ಕೆ ಮುಟ್ಟಿಸುವ ಕೆಲಸ ಕೈಗೊಂಡರೆ ಮತ್ತೊಂದೆಡೆ ಉಳ್ಳಾಲದಲ್ಲಿ ಬಂದ ನೆರೆಗೆ ಎಸ್‌ಕೆಎಸ್‌ಎಸ್‌ಎಫ್‌ನ ವಿಖಾಯ ತಂಡದ ಸದಸ್ಯರು ಆಂಬುಲೆನ್ಸ್ ಜತೆಗೆ ನಿರಾಶ್ರಿತರ ಸೇವೆ ಮಾಡುವ ದೃಶ್ಯಗಳು ಕಾಣಿಸಿಕೊಂಡಿದೆ.

ಕುಡ್ಲದ ಮಳೆಗಾಲದ ಡಿಶ್ ಪತ್ರೊಡೆ

ಕುಡ್ಲ ಅದರಲ್ಲೂ ಕರಾವಳಿಯಲ್ಲಿ ಮಳೆರಾಯನ ಎಂಟ್ರಿಯಾಗುತ್ತಿದ್ದಂತೆ ಕೆಸುವಿನ ಎಲೆಯ ಪತ್ರೊಡೆ ನೆನಪಿಗೆ ಬರುತ್ತದೆ. ಕರಾವಳಿ ಎಲ್ಲರಿಗೂ ಇದನ್ನು ಮಾಡುವ ಹಾಗೂ ತಿನ್ನುವ ವಿಚಾರ ಗೊತ್ತಿದೆ. ಕರಾವಳಿಯ ಒಂದೊಂದು ಊರಿನವರು ಒಂದೊಂದು ರೀತಿಯಲ್ಲಿ ಪತ್ರೊಡೆ ಮಾಡುತ್ತಾರೆ ಎಲ್ಲಕ್ಕೂ ಒಂದೇ ರೀತಿಯ ಟೇಸ್ಟ್ ಮಾರಾಯ್ರೆ. ಮಳೆಗಾಲದ ಎಂಟ್ರಿ ಅಗುತ್ತಾ ಕೆಸುವಿನ ಎಲೆಗಳು ಸಮೃದ್ಧ ವಾಗಿ ಬೆಳೆಯುತ್ತದೆ. ಇದು ಬರೀ ಕರಾವಳಿಯಲ್ಲಿ ಮಾತ್ರವಲ್ಲ ರಾಜ್ಯದ ಮಲೆನಾಡಿನಲ್ಲೂ ಇದನ್ನು ಮಾಡುತ್ತಾರೆ. ಮಂಗಳೂರಿನ ಕೆಲವು ಖ್ಯಾತ ಹೋಟೆಲ್ ಗಳು ಇದನ್ನು ವರ್ಷವಿಡೀ ಮಾಡುವ ಮೂಲಕ ಗ್ರಾಹಕರಿಗೆ ವರ್ಷಪೂರ್ತಿ ಪತ್ರೊಡೆ ತಿನ್ನಿಸುವ ಕೆಲಸ ಮಾಡುತ್ತಿದೆ ಆದರೆ ಮಳೆ ಬಂದಾಗ ಮನೆಯ ಅಡುಗೆ ಕೋಣೆಯಲ್ಲಿ ಸಿದ್ದವಾಗುವ ಪತ್ರೊಡೆ ಮುಂದೆ ಯಾವುದು ಲೆಕ್ಕಕ್ಕೆ ಇಲ್ಲ ಬಿಡಿ.