Kudla City

ಮಂಗಳೂರಿನಲ್ಲಿ ಕಾಣಸಿಗಲಿದೆ ವಾಟರ್ ಪಾಲಿಟಿಕ್ಸ್

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆಯಾಗುವ ತುಂಬೆ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇದನ್ನು ಗಮನಿಸಿ ಜಿಲ್ಲಾಡಳಿತ ರೇಶನಿಂಗ್ ಮೂಲಕ ನೀರು ಪೂರೈಕೆ ಆರಂಭಿಸಿತ್ತು.

ಇಲ್ಲಿಯ ಜನಪ್ರತಿನಿಧಿಗಳು ಡ್ಯಾಮ್ ವೀಕ್ಷಿಸಿ, ತುಂಬಾ ನೀರಿದೆ ಎಂದು ಹೇಳಿ, ರೇಶನಿಂಗ್ ನಿಲ್ಲಿಸಲು ಒತ್ತಡ ತಂದರು. ನೀರಿನ ಸೋರಿಕೆ, ಪೋಲು, ದುರ್ಬಳಕೆ ತಡೆದು, ಮಿತ ವ್ಯಯ ಮಾಡಲು ಹೇಳಿ, ಬದಲಿ ವ್ಯವಸ್ಥೆಗೆ ಸಲಹೆ ಮಾಡಬೇಕಾದ ಜನಪ್ರತಿನಿಧಿಗಳು ಪ್ರತಿಪಕ್ಷದವರ ಮಾದರಿಯಲ್ಲಿ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಲಕ್ಷಣ ಕಾ ಣಿಸುತ್ತಿಲ್ಲ. ನಗರ ಮಾತ್ರವಲ್ಲ, ಗ್ರಾಮೀಣ ಪ್ರದೇಶಗಳಲ್ಲೂ ನೀರಿನ ತೀವ್ರ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತೆ ರೇಶನಿಂಗ್ ಆರಂಭಿಸಿದೆ.

ಮತ್ತೆ ರೇಶನಿಂಗ್: ಮೇ 1ರ ಬೆಳಗ್ಗೆ 6 ಗಂಟೆಯಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗಿನ 48 ತಾಸುಗಳ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 3ರ ಬೆಳಗ್ಗೆ 6 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆ ವರೆಗಿನ 96 ಗಂಟೆ ನೀರು ಸರಬರಾಜು ನಡೆಯಲಿದೆ. ಮೇ 7ರ ಬೆಳಗ್ಗೆ 6ರಿಂದ ಮೇ 9ರ ತನಕ ಬೆಳಗ್ಗೆ 6ರ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 9ರ ಬೆಳಗ್ಗೆ 6ರಿಂದ ಮೇ 13ರ ಬೆಳಗ್ಗೆ 6ರ ತನಕ 96 ಗಂಟೆ ಕಾಲ ನೀರು ಪೂರೈಕೆ ನಡೆಯಲಿದೆ. ಮೇ 13ರ ಬೆಳಗ್ಗೆ 6ರಿಂದ ಮೇ 15ರ ಬೆಳಗ್ಗೆ 6ರ ತನಕ 48 ಗಂಟೆ ಕಾಲ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಮೇ 15ರ ಬೆಳಗ್ಗೆ 6ರಿಂದ ಮೇ 19ರ ಬೆಳಗ್ಗೆ 6 ಗಂಟೆ ತನಕ 96 ಗಂಟೆ ನೀರು ಪೂರೈಕೆ ನಡೆಯಲಿದೆ. ಮೇ 19ರ ಬೆಳಗ್ಗೆ 6ರಿಂದ ಮೇ 21ರ ಬೆಳಗ್ಗೆ 6 ಗಂಟೆ ತನಕ 48 ಗಂಟೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.

ಮಂಗಳೂರು ಹೆಸರಿನ ಹಿಂದಿನ ಆದಿಶಕ್ತಿ ಈ ದೇವತೆ !

ಮಂಗಳೂರು ಎನ್ನುವ ಹೆಸರಿನ ಹಿಂದೆ ಈ ಅಧಿದೇವತೆ ಯ ಶಕ್ತಿಯಿದೆ.
ಹೌದು. ಮಂಗಳಾದೇವಿ ದೇವಸ್ಥಾನ, ಮಂಗಳೂರಿನ ಬೋಳಾರಿನಲ್ಲಿ ನೆಲೆಸಿದ್ದು ಮಂಗಳೂರಿನ ಮಧ್ಯಪ್ರದೇಶದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿದೆ.
ಮಂಗಳಾದೇವಿ ದೇವಸ್ಥಾನದ ಪ್ರಧಾನ ದೇವತೆಯಾದ “ಮಂಗಳಾಂಬೆ”ಯಿಂದಲೆ ಈ ಪ್ರದೇಶಕ್ಕೆ ಮಂಗಳೂರು ಎಂಬ ಹೆಸರು ಬಂದಿದೆ ಎನ್ನುವುದು ಕುಡ್ಲದ ಇತಿಹಾಸ ಪುಟ ಹೇಳುತ್ತಿದೆ.

6 ಕಿಮೀ ನಡೆದು ಶಾಲೆಗೆ ಹೋಗಿ ಗೆದ್ದು ಬಂದಳು

22 ಕಿ. ಮೀ ದೂರ ಶಾಲೆ. ದಿನಾ ಆರು ಕಿ.ಮೀ ನಡಿಗೆ. ಆಗಾಗ ಕೈಕೊಡುವ ವಿದ್ಯುತ್. ಇಂತಹ ಪರಿಸ್ಥಿತಿಯಲ್ಲೂ ಛಲದಿಂದ ಓದಿ ಪರೀಕ್ಷೆಯಲ್ಲಿ 624 ಅಂಕ ಗಳಿಸಿದ ಸುಬ್ರಹ್ಮಣ್ಯ ಸಮೀಪದ ಕೇನ್ಯದ ಕೃಪಾ ಕೆ. ಆರ್. ಅವರ ಸಾಧನೆ ಸಿಟಿಯಲ್ಲಿ ಓದುವ ಮಕ್ಕಳಿಗೆ ಮಾದರಿಯಾಗಿದ್ದಾರೆ. ಸಿಟಿಯಲ್ಲಿ ಶಾಲೆಗೆ ಬಸ್, ರಿಕ್ಷಾದಲ್ಲಿ ಕರೆದುಕೊಂಡು ಹೋದರೂ ಇಂತಹ ಮಾರ್ಕ್ಸ್ ಪಡೆದುಕೊಂಡಿಲ್ಲ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕರಾವಳಿ ಯಾಕೆ ಇಳಿಯಿತು

2019ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಏಳನೇ ಹಾಗೂ ಉಡುಪಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ.

ಕಳೆದ ಸಾಲಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದ ಉಡುಪಿ ನಾಲ್ಕು ಸ್ಥಾನ ಕೆಳಗಿಳಿದಿದೆ. ದಕ್ಷಿಣ ಕನ್ನಡ 2018ರಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು. ಈ ಬಾರಿ ಏಳನೇ ಸ್ಥಾನಕ್ಕೆ ತೃಪ್ತಿ ಪಟ್ಟು ಕೊಳ್ಳುವಂತಾಗಿದೆ.

ಪಿಯುಸಿ ಉತ್ತಮ ಫಲಿತಾಂಶವನ್ನೇ ಪಡೆದುಕೊಂಡಿರುವ ಉಡುಪಿ ಹಾಗೂ ದಕ್ಷಿಣ ಕನ್ನಡ ಪ್ರಥಮ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಮಾತ್ರ ಅಗ್ರಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ಹಾಸನ ಪ್ರಥಮ ಹಾಗೂ ರಾಮನಗರ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಕುಡ್ಲದ ಮಹಿಳೆಯರ ಭದ್ರತೆಗೆ ಅಬ್ಬಕ್ಕ ಪೊಲೀಸ್ ಪಡೆ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ೪೦ ಮಹಿಳಾ ಪೊಲೀಸರನ್ನೊಳಗೊಂಡ ‘ಅಬ್ಬಕ್ಕ ಪಡೆ’ ರಚನೆಯಾಗಿದೆ.
ಮಹಿಳಾ ಪೊಲೀಸರನ್ನೊಳಗೊಂಡ ಈ ತಂಡದಲ್ಲಿ ಒಬ್ಬರು ಎಸ್‌ಐ ದರ್ಜೆ ಮಹಿಳಾ ಅಧಿಕಾರಿ ನಿರ್ವಹಣೆ ಮಾಡಲಿದ್ದಾರೆ. ನಗರದಲ್ಲಿರುವ ಜನನಿಬಿಡ ಪ್ರದೇಶಗಳಾದ ಸಿಟಿಸೆಂಟರ್, ಪೋರಂ ಮಾಲ್, ಬಿಗ್‌ಬಝಾರ್, ಕದ್ರಿ ಪಾರ್ಕ್, ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್, ರೈಲ್ವೆ ನಿಲ್ದಾಣ, ಸೆಂಟ್ರಲ್ ಮಾರ್ಕೆಟ್ ಸೇರಿ ದಂತೆ ಕೆಲವು ಪ್ರಮುಖ ಪ್ರದೇಶದಲ್ಲಿ ಈ ಪಡೆಯ ಸಿಬ್ಬಂದಿ ನಿಯೋಜಿಸಲಾಗುತ್ತದೆ. ಒಂದೊಂದು ಪ್ರದೇಶದಲ್ಲಿ 4 ಮಂದಿಯ ತಂಡ ಕಾರ್ಯನಿರ್ವ ಹಿಸಲಿದ್ದು, ಒಟ್ಟು 10 ತಂಡಗಳನ್ನು ರಚನೆ ಮಾಡಲಾಗುತ್ತದೆ.
ಪೊಲೀಸ್ ಬಸ್‌ನಲ್ಲೇ ಈ ಸಿಬ್ಬಂದಿಯನ್ನು ಸಂಬಂಧಪಟ್ಟ ಪ್ರದೇಶಕ್ಕೆ ಬೆಳಗ್ಗೆ ಕರೆದೊಯ್ದು, ರಾತ್ರಿ ವೇಳೆ ಪಿಕಪ್ ಮಾಡ ಲಾಗುವುದು. ನಗರದಲ್ಲಿರುವ ಶಾಲಾ ಕಾಲೇಜು ಬಳಿ ಅಸಭ್ಯ ವರ್ತನೆ, ಚುಡಾವಣೆ, ಮಹಿಳಾ ದೌರ್ಜನ್ಯ, ನೈತಿಕ ಪೊಲೀಸ್‌ಗಿರಿ, ಸರಗಳ್ಳತನ, ಚುಡಾವಣೆ ಸೇರಿದಂತೆ ಮತ್ತಿತರ ಪ್ರಕರಣಗಳನ್ನು ಹತ್ತಿಕ್ಕಲು ಈ ಪಡೆ ಕಾರ್ಯ ನಿರ್ವಹಿಸಲಿದೆ. ನಿಗದಿತ ಜಾಗದಲ್ಲಿ ಅಬ್ಬಕ್ಕ ರಾಣಿ ಪಡೆ ಸಿಬ್ಬಂದಿ ಕರ್ತವ್ಯನಿರ್ವಹಿಸಲಿದ್ದು ಯುವತಿಯರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಯಾವುದೇ ತೊಂದರೆ ಕೂಡಲೇ ಸ್ಪಂದಿಸಲಿ ದ್ದಾರೆ.
ಯಾವುದೇ ದೊಡ್ಡ ಮಟ್ಟದ ಘಟನೆಗಳು ಆದಲ್ಲಿ ಪಿಎಸ್ ಅಥವಾ ಆಯಾಯ ಠಾಣೆಯ ಮುಖ್ಯಸ್ಥರು, ಅದಕ್ಕಿಂತ ಮೇಲಟ್ಟದ ಅಧಿಕಾರಿಗಳಿಗೆ ತಿಳಿಸಬೇಕು. ಅಪರಾಧ ಸಂಬಂಧಿತ ಪ್ರಕರಣಗಳು ನಡೆದಾಗ ಆಯಾಯ ಪೊಲೀಸ್ ಠಾಣಾ ವ್ಯಾಪ್ತಿಗೆ ಈ ಪ್ರಕರಣಗಳು ಬರಲಿದೆ.
tgas: Abbakka, woman, police, patrol, kudla, kudlacity, kudlanews, Rani Abbakka, force, cases, harassment, womens, school children