Tagged: mangalore

ನವದೇವತೆ 1- ಶೈಲಪುತ್ರಿ

ಶೈಲಪುತ್ರಿ ಎಂದರೆ ಪರ್ವತನ ಪುತ್ರಿ ಪಾರ್ವತಿ. ಪರ್ವತರಾಜನ ಮಗಳಾದ ಈಕೆಗೆ ಸತಿ,ಭವಾನಿ, ಹೇಮಾವತಿ ಎಂದು ಹೆಸರಿದೆ. ಇವರು ಪ್ರಕೃತಿಯ ಮಗಳು. ಎರಡು ಹಸ್ತಗಳನ್ನು ಹೊಂದಿರುವ ಈಕೆಗೆ ಒಂದು ಕೈಲಿ ತ್ರಿಶೂಲವನ್ನು, ಇನ್ನೊಂದು ಕೈಯಲ್ಲಿ ಕಮಲವನ್ನು ಹಿಡಿದುಕೊಂಡಿದ್ದಾರೆ. ನಂದಿ ಆಕೆಯ ವಾಹನ.
ಹಣೆಯಲ್ಲಿ ಚಂದ್ರನಿದ್ದಾನೆ. ಶೈಲಪುತ್ರಿಯ ಪ್ರಸಿದ್ಧ ದೇವಸ್ಥಾನ ವಾರಣಾಸಿಯ ಮರ್ಹಿಯಾ ಘಾಟ್‌ನಲ್ಲಿರುವ ಮಾ ಶೈಲಪುತ್ರಿ ದೇವಸ್ಥಾನ ಹಾಗೂ ಮುಂಬಯಿಯ ವಾಶಿಯಲ್ಲಿರುವ ಹೆಡ್ಡಾವೆ ಮಹಾಲಕ್ಷ್ಮಿ ದೇವಸ್ಥಾನ.
ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.

ಕುಡ್ಲ ಸಿಟಿ ದಸರಾ ಮೊಬೈಲ್ ಫೋಟೊ ಗ್ರಾಫರ್ ಕಾಂಟೆಸ್ಟ್

ದಸರಾ ಹಬ್ಬದ ಸಂಭ್ರಮ ಎಂದರೆ ಬರೀ ರಾಜ್ಯಕ್ಕೆ ಮಾತ್ರವಲ್ಲ ಕರಾವಳಿಗೂ ಅದೇ ಸಡಗರ ಇರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಮುಂಚೂಣಿಯ ಸ್ಥಾನಗಿಟ್ಟಿಸಿಕೊಂಡಿರುವ ಕುಡ್ಲ ಸಿಟಿ ಫೇಸ್ ಬುಕ್ ಪೇಜ್ ಈ ಬಾರಿ ಕುಡ್ಲ ಸಿಟಿ ದಸರಾ ಮೊಬೈಲ್ ಫೋಟೋಗ್ರಫಿ ಎನ್ನುವ ವಿಶಿಷ್ಟ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್‌ಫೋನ್ಸ್ ಇರುವುದರಿಂದ ಈ ಸ್ಪರ್ಧೆಗೆ ಸ್ಪರ್ಧಿಸುವುದು ಎಲ್ಲರಿಗೂ ಬಹಳ ಸುಲಭ. ನವರಾತ್ರಿ,ದಸರಾ ಸಮಯದಲ್ಲಿ ತಮಗೆ ತೋಚುವ ಯಾವುದೇ ವೇಷಗಳು,ಆಹಾರ-ವಿಚಾರಗಳು, ಬಣ್ಣದ ಬೆಳಕು, ಸಂಸ್ಕೃತಿ, ದೇವಸ್ಥಾನ, ಉಡುಗೆ- ತೊಡುಗೆ, ಅಲಂಕಾರ ಹೀಗೆ ನಿಮ್ಮ ಆಯ್ಕೆಯ ಯಾವುದೇ ವಸ್ತುಗಳಿರಲಿ ಅದನ್ನು ಮೊಬೈಲ್‌ನಲ್ಲಿ ತೆಗೆದು ಕಳುಹಿಸಿಕೊಡಬಹುದು. ಸ್ಪರ್ಧೆಯ ನಿಯಮಗಳು: * ಮೊಬೈಲ್‌ನಲ್ಲಿ ತೆಗೆದ ಚಿತ್ರಗಳನ್ನು ಮಾತ್ರ ಪರಿಗಣಿಸಲಾಗುವುದು. *ಒಬ್ಬರು 5 ಚಿತ್ರಗಳನ್ನು ನಾನಾ ವಿಚಾರಗಳ ಮೇಲೆ ತೆಗೆದು ಒಂದೇ ಬಾರಿಗೆ ಕಳುಹಿಸಬೇಕು. ಬೇರೆ ಬೇರೆಯಾಗಿ ಕಳುಹಿಸಿದರೆ ಪರಿಗಣಿಸಲಾಗುವುದಿಲ್ಲ. * ಕಳುಹಿಸುವ ಮಂದಿ ತಮ್ಮ ಫೇಸ್‌ಬುಕ್ ಐಡಿ, ಇನ್‌ಸ್ಟ್ರಾಗ್ರಾಮ್ ಐಡಿ(ಇದ್ದರೆ ಮಾತ್ರ), ವಿಳಾಸ, ಮೊಬೈಲ್ ಸಂಖ್ಯೆಯನ್ನು ಪೂರ್ಣವಾಗಿ ಚಿತ್ರ ಕಳುಹಿಸುವ ಸಂದರ್ಭದಲ್ಲಿ ಬೇಕು. * ಚಿತ್ರಗಳನ್ನು ಅಕ್ಟೋಬರ್ 8,2019 ರೊಳಗೆ ಕಳುಹಿಸಬೇಕು. *ಕಳುಹಿಸಿದ ಚಿತ್ರಗಳಲ್ಲಿ ಉತ್ತಮವಾದ ಚಿತ್ರಗಳನ್ನು ಆಯ್ಕೆ ಮಾಡಿಕೊಂಡು ಕುಡ್ಲ ಸಿಟಿಯಲ್ಲಿ ಪ್ರಕಟ ಮಾಡಲಾಗುತ್ತದೆ. ಹೀಗೆ ಪ್ರಕಟವಾದ ಚಿತ್ರಗಳನ್ನು ಒಂದು ವಾರದ ಕಾಲ ಅವಕಾಶ ನೀಡಲಾಗುತ್ತದೆ. * ಕಳುಹಿಸಿದವರು ಕುಡ್ಲ ಸಿಟಿ ಪೇಜ್‌ವನ್ನು ಲೈಕ್ ಮಾಡಬೇಕು. * ನಿಮ್ಮ ಚಿತ್ರಗಳನ್ನು ಫೇಸ್‌ಬುಕ್ ಹಾಗೂ ಇನ್ಸ್‌ಸ್ಟ್ರಾಗ್ರಾಮ್ ಐಡಿಗೆ ಟ್ಯಾಗ್ ಮಾಡಲಾಗುತ್ತದೆ. ಅತೀ ಹೆಚ್ಚು ಲೈಕ್, ಶೇರ್ ಪಡೆದ ಚಿತ್ರಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಸಿಗಲಿದೆ. * ಕಳುಹಿಸಬೇಕಾದ ವ್ಯಾಟ್ಸಾಫ್ ನಂಬರ್ : 8073630041

ಪ್ಲಾಸ್ಟಿಕ್ ಬ್ರಿಕ್ಸ್ ಬೆಂಚ್ ಕುಡ್ಲಕ್ಕೆ ಜರ್ಮನ್ ಐಡಿಯಾ !

ಕಡಲಿನ ಊರು ಕುಡ್ಲಕ್ಕೂ ದೂರದ ಜರ್ಮನಿ ದೇಶಕ್ಕೂ ಎಲ್ಲಿಯ ಎಲ್ಲಿಯ ಸಂಬಂಧ ಮಾರಾಯ್ರೆ. ಪ್ಲಾಸ್ಟಿಕ್ ಎನ್ನುವ ಬ್ರಹ್ಮ ರಾಕ್ಷಸನನ್ನು ಮುಗಿಸಲು ಜರ್ಮನಿಯ ಮಂದಿ ಮಾಡಿರುವ ಪ್ಲ್ಯಾನ್ ಮಂಗಳೂರಿನಲ್ಲೂ ವರ್ಕ್ ಔಟ್ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಬ್ರಿಕ್ಸ್‌ಗಳನ್ನು ಮಾಡಿಕೊಂಡು ಬೆಂಚು, ಕುರ್ಚಿ, ಹೂವಿನ ಚಟ್ಟಿ, ಆವರಣ ಗೋಡೆಗಳು ಕುಡ್ಲದಲ್ಲಿ ನಿರ್ಮಾಣ ಮಾಡುವ ಯೋಜನೆಯೊಂದು ರೂಪುಗೊಳ್ಳುತ್ತಿದೆ.
ಈಗಾಗಲೇ ಪ್ಲಾಸ್ಟಿಕ್ ಬ್ರಿಕ್ ಬೆಂಚುಗಳ ಕಲ್ಪನೆಗೆ ಪಜೀರು ಚರ್ಚ್‌ನ ಮೈದಾನದಲ್ಲಿ ಎರಡು ಪ್ಲಾಸ್ಟಿಕ್ ಬ್ರಿಕ್ಸ್ ಬೆಂಚುಗಳನ್ನು ನಿರ್ಮಾಣ ಮಾಡಲಾಗಿದೆ. ಮಂಗಳೂರಿನ ಸಿಒಡಿಪಿ ಸಂಸ್ಥೆಯ ಮುಂಭಾಗದಲ್ಲೂ ಇಂತಹ ಒಂದು ಬೆಂಚು ನಿರ್ಮಾಣವಾಗಿದೆ.
ಮಂಗಳೂರಿನ ಕ್ರೈಸ್ತಧರ್ಮ ಪ್ರಾಂತ್ಯದ ಅಧೀನದಲ್ಲಿರುವ ಸಿಒಡಿಪಿ ಸಂಸ್ಥೆಯ ಪ್ರತಿ ವರ್ಷನೂ ಜರ್ಮನಿ ಕಡೆಯಿಂದ ಇಬ್ಬರು ವಿದ್ಯಾರ್ಥಿಗಳು ಎರಡು ತಿಂಗಳ ಕಾಲ ಅಧ್ಯಯನಕ್ಕಾಗಿ ಬರುತ್ತಾರೆ. ಎರಡು ವರ್ಷಗಳ ಹಿಂದೆ ಜರ್ಮನಿಯಿಂದ ಬಂದ ಹೀಡಾ ಹಾಗೂ ಕಳೆದ ವರ್ಷ ಬಂದ ಜರ್ಮನಿಯ ಸೋಪಿಯಾ ಎಲ್‌ತಾಲ್ ಹಾಗೂ ಲಿಯೋನಿ ಅಲ್‌ವೆಲ್ ಜರ್ಮನಿ ದೇಶದಲ್ಲಿ ಪ್ಲಾಸ್ಟಿಕ್ ನಿಯಂತ್ರಣದ ಜತೆಗೆ ಅದರ ಬಳಕೆಯ ಕುರಿತಾಗಿ ಅಲ್ಲಿ ಮಾಡುತ್ತಿದ್ದ ಐಡಿಯಾವನ್ನು ಮಂಗಳೂರಿನ ಸಿಒಡಿಪಿ ಸಂಸ್ಥೆಯ ಮುಖ್ಯಸ್ಥರಿಗೆ ಮನವರಿಕೆ ಮಾಡಿಕೊಟ್ಟರು ಇದರ ಜತೆಯಲ್ಲಿ ಇಂತಹ ಪ್ರಾತ್ಯಕ್ಷಿಕೆಯನ್ನು ಮಾಡಿ ತೋರಿಸಿದ ಬಳಿಕ ಇಲ್ಲೂ ಇಂತಹ ವ್ಯವಸ್ಥೆಯನ್ನು ಮಾಡಬಹುದು ಎನ್ನುವ ಕಲ್ಪನೆ ಹುಟ್ಟಿಕೊಂಡಿತು .
ಸಾಮಾನ್ಯವಾಗಿ ತಂಪು ಪಾನೀಯದ ಬಾಟಲಿಗಳನ್ನು ಬಳಸಿಕೊಂಡು ಈ ಪ್ಲಾಸ್ಟಿಕ್ ಬ್ರಿಕ್ಸ್ ಬೆಂಚುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಮುಖ್ಯವಾಗಿ ಈ ಬಾಟಲಿಗಳ ಒಳಗಡೆ ಪ್ಲಾಸ್ಟಿಕ್‌ಗಳನ್ನು ಚಿಕ್ಕ ಚಿಕ್ಕ ಚೂರುಗಳಾಗಿ ತುರುಕಿಸಲಾಗುತ್ತದೆ. ಒಂದೂವರೆ ಲೀಟರ್‌ನ ಒಂದು ಬಾಟಲಿ ತುಂಬಿಸಲು ಭರ್ತಿ 8 ರಿಂದ 10 ಗಂಟೆಗಳ ಅವಧಿ ಬೇಕಾಗುತ್ತದೆ. ಪೂರ್ಣವಾಗಿ ತುಂಬಿಸಿದ ಬಳಿಕ ಈ ಬಾಟಲ್‌ಗಳು ಕಲ್ಲಿನಷ್ಟು ಗಟ್ಟಿಯಾಗುತ್ತದೆ. ಜರ್ಮನಿ ದೇಶದಲ್ಲಿ ಇದನ್ನು ಜಾಸ್ತಿಯಾಗಿ ಬಳಕೆ ಮಾಡಲಾಗುತ್ತಿದೆ .
ಆರಂಭದಲ್ಲಿ ಬೆಂಚು ಮಾಡಲು ಸಿಮೆಂಟ್‌ನ ತಳಪಾಯ ಮಾಡಬೇಕು ಇದರ ಬಳಿಕ ಪ್ಲಾಸ್ಟಿಕ್ ಚೂರು ತುಂಬಿಸಿದ ಬಾಟಲಿಗಳನ್ನು ಬೇಕಾದ ರೀತಿಯ ವಿನ್ಯಾಸಕ್ಕೆ ಹೊಂದಿಕೆಯಾಗುವಂತೆ ನಿಲ್ಲಿಸಬೇಕು. ಈ ಸಮಯದಲ್ಲಿ ಆವೆ ಮಣ್ಣಿನ ನೆರವು ಅಗತ್ಯ ಇರುತ್ತದೆ. ಎಲ್ಲ ಪ್ಲಾಸ್ಟಿಕ್ ಬಾಟಲಿಗಳನ್ನು ಇಟ್ಟ ಬಳಿಕ ಅದರ ಮೇಲ್ಭಾಗದಲ್ಲಿ ಸಿಮೆಂಟ್‌ನಿಂದ ಗಾರೆ ಮಾಡಿದರೆ ಸಾಕು. ಪ್ಲಾಸ್ಟಿಕ್ ಹೇಗೆ 450 ವರ್ಷಗಳ ಕಾಲ ಉಳಿಯುತ್ತದೆ ಅದೇ ಮಾದರಿಯಲ್ಲಿ ಈ ಬೆಂಚು, ಕುರ್ಚಿ,ಮನೆ, ಆವರಣಗೋಡೆ ಕೂಡ ಉಳಿಯುತ್ತದೆ.

ಹೀರೋಯಿನ್‌ಗಳಂತೆ ಮಿಂಚಿದ ಹಳೆಯ ಸ್ಕೂಟರ್

ಹಳೆಯ ಸ್ಕೂಟರ್‌ಗಳು ಬಣ್ಣ ಬಳಿದುಕೊಂಡು ಹೀರೋಯಿನ್‌ಗಳಂತೆ ಲಕಲಕವಾಗಿ ಹೊಳೆಯುತ್ತಾ ರಸ್ತೆಗೆ ಇಳಿದರೆ ನೋಡುವ ಕಣ್ಣುಗಳಿಗೆ ಹಬ್ಬವೇ ಸರಿ. ಇಂದಿನ ಮುಂದುವರಿದ ತಾಂತ್ರಿಕವಾಗಿ ಅಪ್‌ಗ್ರೇಡ್ ಟೂ ವೀಲರ್‌ಗಳ ಮುಂದೆ ಹಳೆಯ ಸ್ಕೂಟರ್‌ಗಳ ಓಡುವ ಖದರೇ ಬೇರೆ ಇಂತಹ ಸ್ಕೂಟರ್‌ಗಳ ಪ್ರದರ್ಶನ ಮಂಗಳೂರಿನ ಕುದ್ರೋಳಿಯ ಸಮೀಪದ ಮೈದಾನದಲ್ಲಿ ಭಾನುವಾರ ನಡೆಯಿತು.
ಮಂಗಳೂರು ಕ್ಲಾಸಿಕ್ ಸ್ಕೂಟರ್ ಕ್ಲಬ್ ವತಿಯಿಂದ ಪ್ರಪ್ರಥಮ ಬಾರಿಗೆ ಈ ಪ್ರದರ್ಶನ ಆಯೋಜಿಸಲಾಗಿತ್ತು. ಎಂದೋ ಗುಜರಿ ಅಂಗಡಿ ಸೇರಬೇಕಿದ್ದ 2 ಸ್ಟ್ರೋಕ್ ಸ್ಕೂಟರ್‌ಗಳೆಲ್ಲ ಹೊಸ ಲುಕ್‌ನೊಂದಿಗೆ ಅಲ್ಲಿ ಕಂಗೊಳಿಸುತ್ತಿದ್ದವು. ಬರೋಬ್ಬರಿ 70 ವರ್ಷಗಳಷ್ಟು ಹಳೆಯ, 2-3 ತಲೆಮಾರುಗಳನ್ನು ದಾಟಿ ಬಂದ 1960 ರ ದಶಕದ ಲ್ಯಾಂಬ್ರೆಟ್ಟಾ ಸ್ಕೂಟರ್‌ಗಳು ನೋಡುಗರ ಆಕರ್ಷಣೆಗೆ ಕಾರಣವಾಯಿತು. ಮೂಲ ರಚನೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲದೆ, ಕೇವಲ ಹೊಸ ಬಣ್ಣ- ಟೈರ್‌ಗಳೊಂದಿಗೆ ಈ ಸ್ಕೂಟರ್‌ಗಳನ್ನು ಅವುಗಳ ಮಾಲೀಕರು ಕಾಪಿಟ್ಟುಕೊಂಡ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 10,11 ರಾಜ್ಯಗಳನ್ನು ದಾಟಿ ಬಂದ ಸ್ಕೂಟರ್‌ಗಳಿಂದ ಹಿಡಿದು 2000 ಇಸವಿವರೆಗಿನ ಬಜಾಜ್ ಚೇತಕ್‌ವರೆಗೆ ಸುಮಾರು 80 ಕ್ಕೂ ಅಧಿಕ ಸ್ಕೂಟರ್‌ಗಳು ತಮ್ಮ ‘ದೇಹ ಸಿರಿ’ಯ ಪ್ರದರ್ಶನ ಮಾಡಿದವು. ನೂರಾರು ಮಂದಿ ಕುತೂಹಲದಿಂದ ಬಂದು ನೋಡಿ ಹಳೆ ಸ್ಕೂಟರ್‌ಗಳೊಂದಿಗೆ ಸೆಲ್ಫಿ ತೆಗೆದುಕೊಂಡರು. ಅಜ್ಜನ ಕಾಲದ ಸ್ಕೂಟರ್‌ಗಳನ್ನು ನೋಡಿ ಮಕ್ಕಳು ರೋಮಾಂಚನಗೊಂಡರು.

ಭೂಮಿ ಉಳಿಸಲು ವಿಶಿಷ್ಟ ಪ್ರತಿಭಟನೆ

ಇಡೀ ವಿಶ್ವವೇ ಗ್ಲೋಬಲ್ ವಾರ್ಮಿಂಗ್ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳುತ್ತಿದೆ. ಭೂಮಿಯ ಮೇಲೆ ಮನುಷ್ಯ ನ ಉಪಟಳ ಜಾಸ್ತಿಯಾಗುತ್ತಿದೆ. ನೀರು,ವಾಯು, ಪರಿಸರದ ಎಲ್ಲ ಮೂಲ ಗಳು ಹಾಳಾಗುತ್ತಿದೆ. ಈ ವಿಚಾರದಲ್ಲಿ ಮಂಗಳೂರಿನ ಪ್ರಜ್ಣಾವಂತ ನಾಗರಿಕರು ಮಂಗಳೂರು ಮಹಾ ನಗರ ಪಾಲಿಕೆಯ ಮುಂದೆ ನಿಂತು ತಮ್ಮ ಪ್ರತಿಭಟನೆ ಯನ್ನು ವ್ಯಕ್ತಪಡಿಸಿದರು. ವಿಶೇಷ ಎಂದರೆ ಬರೀ ದೊಡ್ಡವರು ಮಾತ್ರವಲ್ಲ ಪುಟಾಣಿ ಮಕ್ಕಳು ಕೂಡ ಅವರಿಗೆ ಜತೆ ನೀಡಿದರು.