Tagged: mangalorecity

ಐಟಿ ಓದಿದವರು ಸಿಗ್ತಾರೆ ತೆಂಗಿನ ಕಾಯಿ ಕೀಳುವರಿಲ್ಲ !

ಮಂಗಳೂರು ಮಾತ್ರವಲ್ಲ ಇದು ಎಲ್ಲ ನಗರ, ಗ್ರಾಮಾಂತರ ಪ್ರದೇಶಗಳಲ್ಲಿರುವ ಎಲ್ಲರೂ ಹೇಳುವ ಮಾತು. ಐಟಿ, ಬಿಟಿ ಓದಿ ಬಂದವರು ಎಲ್ಲ ಕಡೆಯಲ್ಲೂ ಸಿಗ್ತಾರೆ ಮಾರಾಯ್ರೆ. ಈ ಕಾಯಿ ಕೀಳುವ ಮಂದಿಯಂತೂ ಸಿಗ್ತಾ ಇಲ್ಲ. ಸಿಕ್ಕರೂ ಕೂಡ ಒಳ್ಳೆಯ ಮೊತ್ತವನ್ನು ಕೀಳುತ್ತಾರೆ ಎನ್ನುವ ಮಾತು ಕಾಮನ್ ಆಗಿ ಸಿಗುತ್ತದೆ.

ಪಾಕೆಟ್‌ಮನಿಯಿಂದ ‘ಹನಿ’ಯ ಪರಿಸರ ಹೋರಾಟ !

ಒಂದಲ್ಲ ಎರಡಲ್ಲ ಭರ್ತಿ 3 ವರ್ಷದಲ್ಲಿ 3೦೦ಕ್ಕೂ ಹೆಚ್ಚು ಗಿಡ ನೆಟ್ಟು ಪರಿಸರ ಕಾಳಜಿಯನ್ನು ಹುಟ್ಟುಹಾಕಿದ ವಿದ್ಯಾರ್ಥಿನಿ ಹನಿ ಎಚ್. ಆರ್ ಅವರು ಇಂತಹ ಕೆಲಸವನ್ನು ಬರೀ ಹೆತ್ತವರು ಕೊಟ್ಟ ಪಾಕೆಟ್ ಮನಿಯನ್ನು ಇಟ್ಟುಕೊಂಡು ರಜಾ ದಿನಗಳಲ್ಲಿ ಮಾಡುತ್ತಿದ್ದಾರೆ.

ಪರಿಸರದ ಮೇಲೆ ಪ್ರೀತಿ ಹುಟ್ಟಲು ಯಾವುದೇ ವಯಸ್ಸಿನ ಹಂಗಿಲ್ಲ. ಯಾರು ಕೂಡ ಪರಿಸರವನ್ನು ಪ್ರೀತಿಸಬಹುದು, ಕಾಳಜಿಯನ್ನು ತೋರಿಸಬಹುದು ಎನ್ನುವುದಕ್ಕೆ ಅವರೇ ಬೆಸ್ಟ್ ಉದಾಹರಣೆ. ಮುಡಿಪಿನ ಜವಾಹರ್ ನವೋದಯ ವಿದ್ಯಾಲಯದ 7 ನೇ ತರಗತಿಯಲ್ಲಿ ಓದುತ್ತಿರುವ ಹನಿಗೆ ಪರಿಸರದ ಮೇಲೆ ವಿಶೇಷ ವ್ಯಾವೋಹ.

ಇದೇ ಕಾರಣಕ್ಕೆ ಕಳೆದ ಮೂರು ವರ್ಷಗಳಿಂದ ಅವಳು ತನ್ನದೇ ಗ್ರೀನ್ ವಾರಿಯರ್ಸ್ ತಂಡ ಕಟ್ಟಿಕೊಂಡು ಜಪ್ಪಿನಮೊಗರು, ಕಡೆಕಾರು, ಚಿಕ್ಕಮಗಳೂರು, ಬಾಳೆಹೊನ್ನೂರು ಹೀಗೆ ಹತ್ತಾರು ಕಡೆಯಲ್ಲಿ 3೦೦ಕ್ಕೂ ಅಧಿಕ ಗಿಡಗಳನ್ನು ನೆಡುತ್ತಾ ಹಸಿರು ಉಳಿಸಿ ಎನ್ನುವ ಅಭಿಯಾನವನ್ನು ಯಾರಿಗೂ ಹೇಳದೇ ಹುಟ್ಟುಹಾಕಿದ್ದಾರೆ.

ಅದು ಕೂಡ ತನ್ನ ಶಾಲಾ ರಜಾ ದಿನಗಳಲ್ಲಿ ಎನ್ನುವುದು ವಿಶೇಷ. ಮಕ್ಕಳಿಗೆ ರಜೆ ಎಂದಾಕ್ಷಣ ಪ್ರವಾಸಕ್ಕೆ ಹೋಗುವುದು, ಆಟವಾಡುವುದು ಹೀಗೆ ಹತ್ತಾರು ಚಟುವಟಿಕೆಗಳಲ್ಲಿಯೇ ಮಗ್ನರಾಗುವುದು ಕಾಮನ್. ಆದರೆ ಹನಿ ಕೊಂಚ ಭಿನ್ನ ಹುಡುಗಿ ಅವಳಿಗೆ ರಜಾ ದಿನಗಳಲ್ಲಿ ಪರಿಸರದ ಬಗ್ಗೆಯೇ ಹೆಚ್ಚು ಕಾಳಜಿ ಬರುತ್ತದೆ.

ಕುಡ್ಲದ ಮೋಡಗಳು ಮಳೆ ಸುರಿಸೋದಿಲ್ಲ !

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲಮಳೆಯಾಗುವ ಸಾಧ್ಯತೆಗಳಿಲ್ಲ. ಜಿಲ್ಲೆಯ ಕೆಲವು ಕಡೆಗಳಲ್ಲಿ ಮಾತ್ರ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಸಂಜೆಯಾಗುತ್ತಿದ್ದಂತೆ ಭಾಗಶ: ಮೋಡ ಕವಿದ ವಾತಾವರಣ ನೆಲೆಸಿದರೂ ರಾತ್ರಿಯಾಗುತ್ತಿದ್ದಂತೆ ಮೋಡ ಚದುರಿ ಹೋಗುತ್ತಿದೆ. ಫೋನಿ ಚಂಡಮಾರುತದ ಮಳೆ ನಿರೀಕ್ಷೆ ಕೂಡ ಜಿಲ್ಲೆಯ ಮಟ್ಟಿಗೆ ಹುಸಿಯಾಗಿದೆ. ಈ ನಡುವೆ ಚಂಡಮಾರುತ ಬಳಿಕ ಇಳಿಕೆಯಾದ ತಾಪಮಾನ ಜಿಲ್ಲೆಯಲ್ಲಿ ಮತ್ತೆ ಏರುತ್ತಿದೆ.

ಮಂಗಳೂರಿಗೆ ಇನ್ನು ನಾಲ್ಕೇ ದಿನ ನೀರು !

ಜಲಕ್ಷಾಮದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಜಾರಿಗೊಳಿಸಿದ ನೀರು ರೇಶನಿಂಗ್ ಮೇ 16ರಿಂದ ಮತ್ತೆ ಪರಿಷ್ಕರಣೆಯಾಗಲಿದೆ.
ಇದೀಗ 4 ದಿನಗಳ ಕಾಲ ಸರಬರಾಜು ಮಾಡುತ್ತಿರುವ ನೀರನ್ನು ಯಾವುದೇ ಬದಲಾವಣೆಯಿಲ್ಲದೆ 4 ದಿನಗಳ ಕಾಲ ನೀಡಿ 2 ದಿನ ಸ್ಥಗಿತಗೊಳಿಸುವ ನೀರನ್ನು 4 ದಿನಗಳಿಗೆ ಏರಿಸಲಾಗಿದೆ.
ಮೇ 16 ರಂದು ಬೆಳಗ್ಗೆ 6 ಗಂಟೆಯಿಂದ ಮೇ 20 ರಂದು ಬೆಳಗ್ಗೆ 6 ಗಂಟೆ ವರೆಗೆ ನಿರಂತರ 96 ತಾಸು ನೀರು ಪೂರೈಕೆ ಇರುವುದು. ಮೇ 20 ರಂದು ಬೆಳಗ್ಗೆ 6 ಗಂಟೆಯಿಂದ ಮೇ 24 ರ ಬೆಳಗ್ಗೆ 6 ಗಂಟೆ ವರೆಗೆ ಸತತ 96 ತಾಸು ನೀರು ಸ್ಥಗಿತಗೊಳ್ಳಲಿದೆ. ಜೂನ್ 1ರ ವರೆಗೆ ಪರಿಷ್ಕೃತ ರೇಶನಿಂಗ್ ಮುಂದುವರಿಯಲಿದೆ.

ಕುಡ್ಲದವರು ಕೇಳುವ ಮೊದಲ ಮಾತು !

ಮಂಗಳೂರಿನ ಜನ ಎಲ್ಲಿ ಬೇಕಾದರೂ ನೋಡಿ ಎಳೆನೀರು ನೋಡಿದಾಕ್ಷಣ ಮೊದಲು ಕೇಳುವ ಮಾತು ಈ ಎಳೆನೀರು ಊರಿದ್ದ ( ಬೊಂಡ ಊರ್ದನಾ…?) ಅಲ್ಲ ಎಂದಾಗ ಇರ್ಲಿ ಒಂದು ಕೊಡಿ ಎನ್ನುತ್ತಾರೆ. ಹೌದು ಎಂದ್ರೆ ಬಹಳ ಖುಷಿಯಿಂದ ಕುಡಿದು ಒಳ್ಳೆಯ ನೀರಿತ್ತು ಎಂದು ಬಿಡುತ್ತಾರೆ.

ಎಳೆನೀರಿನಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು ಈ ರೀತಿ ಇವೆ: ಇದರಲ್ಲಿ ಆಂಟಿ ಏಜಿಂಗ್ ಮತ್ತು ಕ್ಯಾನ್ಸರ್ ವಿರೋಧಿ ಗುಣಗಳಿದ್ದು, ಚರ್ಮ ಸುಕ್ಕುಗಟ್ಟುವುದನ್ನು ಕಡಿಮೆ ಮಾಡುತ್ತದೆ. ಪ್ರತಿನಿತ್ಯ ಎಳೆನೀರು ಕುಡಿದರೆ ಚಯಾಪಚಯ ಪ್ರಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ದೇಹದ ಶುಗರ್ ಅಂಶವನ್ನು ಕರಗಿಸುತ್ತದೆ ಹಾಗೂ ಕೊಬ್ಬಿನಂಶವು ಕಡಿಮೆಯಾಗುತ್ತದೆ.

ಕಿಡ್ನಿ ಸ್ಟೋನ್ಸ್ ಅನ್ನು ಕರಗಿಸಲು ನೆರವಾಗುತ್ತದೆ. ಇದರಲ್ಲಿರುವ ಪೊಟಾಶಿಯಂ ಅಂಶವು ಮೂತ್ರದ ಕ್ಷಾರದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಮತ್ತು ಕಿಡ್ನಿ ಸ್ಟೋನ್ ಉತ್ಪಾದನೆಯನ್ನು ತಡೆಯುತ್ತದೆ.

ಜೀರ್ಣ ಕ್ರಿಯೆಯನ್ನು ಸುಲಭವಾಗಿಸುತ್ತದೆ. ನೀರಿನಲ್ಲಿ ಮಿನರಲ್ ಅಂಶಗಳಾದ ಕ್ಯಾಲ್ಷಿಯಂ, ಮ್ಯಾಂಗನೀಸ್ ಮತ್ತು ಸತು ಇದೆ. ಇವು ದೇಹವನ್ನು ಮರುಪೂರಣ ಮಾಡಲು ನೆರವಾಗುತ್ತದೆ. ಎಳೆನೀರಲ್ಲಿ ಸಕ್ಕರೆ ಮತ್ತು ಸೋಡಿಯಂ ಅಂಶ ಕಡಿಮೆ ಇದೆ ಮತ್ತು ಪೋಟಾಶಿಯಂ ಅಂಶ ಅಧಿಕವಾಗಿದೆ. ಕ್ಯಾಲ್ಷಿಯಂ ಮತ್ತು ಕ್ಲೋರೈಡ್ ನೀರಿನ ಅಂಶವನ್ನು ಹೆಚ್ಚಿಸಿ ದೇಹವನ್ನು ಪುನರ್ ಯೌನಗೊಳಿಸುತ್ತದೆ.

ಕ್ಯಾಲ್ಷಿಯಂ ಅಧಿಕವಾಗಿದೆ. ಆರೋಗ್ಯಕರ ಮೂಳೆ, ಮಾಂಸಖಂಡಗಳಿಗೆ ಇದು ಅಗತ್ಯವಾಗಿ ಬೇಕು. ಮಧುಮೇಹ ನಿಯಂತ್ರಸಲು ಸಹಾಯ ಮಾಡುತ್ತದೆ. ರಕ್ತ ಪರಿಚಲನೆಯನ್ನು ಸುಧಾರಿಸುವ ಸಾಮರ್ಥ್ಯ ಹೊಂದಿದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಕೂಡ ಇದು ನೆರವಾಗುತ್ತದೆ.