Tagged: BGS

ಧರ್ಮಪಾಲನಾಥ ಸ್ವಾಮೀಜಿ ಅವರ `ಚಿಂತನ ಗಂಗಾ’ ಕೃತಿ ಬಿಡುಗಡೆ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶನಿವಾರ ನಡೆದ ಪದ್ಮಭೂಷಣ ಪುರಸ್ಕøತ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 75ನೇ ಜಯಂತ್ಯುತ್ಸವದ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರ ವಿಜಯ ಕರ್ನಾಟಕದ ಬೋಧಿವೃಕ್ಷದಲ್ಲಿ ಬರೆದ ಅಂಕಣ ಬರಹಗಳನ್ನು ಒಳಗೊಂಡ `ಚಿಂತನ ಗಂಗಾ’ ಕೃತಿಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಸ್ವಾಮೀಜಿಗಳು, ಬೆಂಗಳೂರು ಬೇಲಿಮಠದ ಶ್ರೀ ಶಿವರುದ್ರ ಮಹಾ ಸ್ವಾಮೀಜಿ, ಪತ್ರಕರ್ತ ರವಿ ಹೆಗಡೆ, ಶಾಸಕರಾದ ಪುಟ್ಟರಾಜು, ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಜನರಿಗೆ ಬೆಳಕು ನೀಡುವ ಚಿಂತನ ಗಂಗಾ

ಮಂಗಳೂರಿನ ಕಾವೂರು ಗಾಂಧಿನಗರದಲ್ಲಿರುವ ಬಿಜಿಎಸ್ ಶಾಖಾ ಮಠದ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರ ಅಂಕಣ ಬರಹಗಳ ಕೃತಿ `ಚಿಂತನ ಗಂಗಾ’ ಜ.18ರಂದು ಶ್ರೀಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ಭೈರವೈಕ್ಯರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 75 ಅಮೃತ ಮಹೋತ್ಸವದ ಸಮಯದಲ್ಲಿ ಬಿಡುಗಡೆ ಕಾಣುತ್ತಿದೆ.
ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರ ಈ ಅಂಕಣ ಬರಹಗಳು ಈಗಾಗಲೇ ಮುದ್ರಣ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈಗ ಕೃತಿ ರೂಪದಲ್ಲೂ ಕಾಣಿಸಿಕೊಂಡಿದೆ.

ಬಿಜಿಎಸ್ ವಿದ್ಯಾರ್ಥಿಗಳೆಂದರೆ ಶಿಸ್ತಿನ ಸಿಪಾಯಿಗಳು

ಮಂಗಳೂರಿನ ಕಾವೂರಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಗುಣಮಟ್ಟ ಇಡೀ ಮಂಗಳೂರಿನ ಕಾಲೇಜುಗಳಲ್ಲಿ ವಿಭಿನ್ನ ಎನ್ನುವ ಮಾತಿದೆ. ಇದಕ್ಕೆ ಈ ಬಾರಿ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ವೈಸ್ ಪ್ರಿನ್ಸಿಪಾಲ್ ರೊನಾಲ್ಡ್ ಪಿಂಟೋ ಅವರು ಮತ್ತೆ ಸಾಕ್ಷಿ ನೀಡಿದ್ದಾರೆ.
ಬಿಜಿಎಸ್ ಪದವಿ ಕಾಲೇಜಿನಲ್ಲಿ ಅವರು ಸೋಮವಾರ ಬಿಕಾಂ ವಿದ್ಯಾರ್ಥಿಗಳಿಗೆ ಕೇರಿಯರ್ ಗೈಡೆನ್ಸ್ ಕುರಿತು ಉಪನ್ಯಾಸ ನೀಡಿದ್ದರು. ಈ ಸಮಯದಲ್ಲಿ ಅವರ ಉಪನ್ಯಾಸ ವನ್ನು ಬಹಳ ಶಿಸ್ತಿನಿಂದ ಕೇಳಿದರು ಇಂತಹ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಯೇ ಇಲ್ಲ ಎಂದು ಬಿಟ್ಟರು. ಬರೀ ಮಾತಿಗೆ ಮಾತ್ರ ಈ ಮಾತು ಬಂದಿಲ್ಲ ತಮ್ಮ ಭಾವನೆಗಳನ್ನು ಕೂಡ ಫೇಸ್ ಬುಕ್ ನಲ್ಲಿ ಹಾಕಿ ಸಂಭ್ರಮ ಪಟ್ಟಿದ್ದಾರೆ.

ಏಕಾಗ್ರತೆ ಸಾಧಿಸಲು ಯೋಗ ಅಗತ್ಯ

ಪ್ರಾಚೀನ ಕಾಲದಿಂದಲ್ಲೂ ಋಷಿಮುನಿಗಳು ಯೋಗದಿಂದ ಸತ್ಯದರ್ಶನವನ್ನು ಕಂಡುಕೊಂಡು ಬಂದಿದ್ದಾರೆ. ಆರೋಗ್ಯಕ್ಕೂ, ಯೋಗಕ್ಕೂ ಅವಿನಾಭಾವ ಸಂಬಂಧವಿದೆ. ಓಂಕಾರಕ್ಕೆ ಅಗಾಧವಾದ ಶಕ್ತಿಯಿದೆ. ಓಂಕಾರವನ್ನು ನಮ್ಮದಾಗಿಸಿಕೊಂಡರೆ ಏಕಾಗ್ರತೆ ಸಾಧಿಸಲು ಸಾಧ್ಯ. ಯೋಗ ನಿಜವಾದ ಬೆಳಕಿನೆಡೆಗೆ ಕೊಂಡೊಯ್ಯುತ್ತದೆ ಇದರಿಂದ ಬದುಕನ್ನು ಸುಂದರಗೊಳಿಸಲು ಸಾಧ್ಯ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬಿಜಿಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿ, ಯೋಗದ ಅಸ್ಮಿತೆಯನ್ನು ತಾಯಿಯ ಗರ್ಭದಿಂದಲೇ ಗುರುತಿಸಬಹುದು. ಯೋಗ ಎಂದರೆ ದೈಹಿಕ ಮಾನಸಿಕ ಆಚರಣೆಗಳ ಬೋಧನಾ ಶಾಲೆ ಎಂದು ಕರೆಯಬಹುದು. ವ್ಯಕ್ತಿಯು ತನ್ನನ್ನು ತಾನು ಅರ್ಥಮಾಡಿಕೊಂಡು ಅನುಭೂತಿಯನ್ನು ಪಡೆಯಲು ಯೋಗ ಅಗತ್ಯವಾಗಿದೆ. ಜೀವನದೊಂದಿಗೆ ಪರಮಾತ್ಮನನ್ನು ಲೀನವಾಗಿಸುವುದೇ ಯೋಗ, ಮಾನವ ಪ್ರತಿ ದಿನ ಮನೋಗ್ಲಾನಿಯಾಗಿ ಬದುಕುತ್ತಿದ್ದಾನೆ. ಅವನು ತಿನ್ನುವ ಆಹಾರ, ಬದುಕುವ ಪರಿಸರ ಶರೀರವನ್ನು ಜಾಡ್ಯವಾಗಿಸಿದೆ. ಈ ಶಾರೀರಿಕ ಬಾಧೆಯನ್ನು ಮೀರಲು ಯೋಗಸಾಧನಗಳು ಸಹಕಾರಿಯಾಗಿದೆ ಎಂದರು.

ಹೊಸ್ಮಾರು ಬಲ್ಯೊಟ್ಟು ಗುರುಕುಲ ಆಶ್ರಮದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಯೋಗವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದೆ. ಭಗವದ್ಗೀತೆಯ ೧೮ನೇ ಅಧ್ಯಾಯವು ಯೋಗದ ಬಗ್ಗೆ ಮಾತನಾಡುತ್ತದೆ ಎಂದರಲ್ಲದೇ ತಪಸ್ವಿಯಾಗಲು ಯೋಗ ಪ್ರಧಾನವಾದ ಅಸ್ತ್ರ ಎಂದರು. ಕಾರ್ಯಕ್ರಮದಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸುಬ್ಬಕಾರಡ್ಕ, ಬಿಜಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಲತಾ ರಾಜಾರಾಮ್, ಬಿಜಿಎಸ್ ಎಜುಕೇಷನ್ ಸೆಂಟರ್‌ನ ಪ್ರಾಂಶುಪಾಲರಾದ ರೇಷ್ಮಾ ಸಿ ನಾಯರ್, ಬಿಜಿಎಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಶ್ಮಿ ಉಪಸ್ಥಿತರಿದ್ದರು. ನರಸಿಂಹ ಕುಲಕರ್ಣಿ ಹಾಗೂ ಜಗದೀಶ ಮುರ ಅವರು ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರಂಭವನ್ನು ವಿದ್ಯಾರ್ಥಿಗಳಾದ ಸ್ನೇಹ ನಿರೂಪಿಸಿ, ಕಾವ್ಯ ಭಟ್ ಸ್ವಾಗತಿಸಿ ಪ್ರತೀಕ್ಷಾ ಕೆ ವಂದಿಸಿದರು.

ಏಕಾಗ್ರತೆ ಸಾಧಿಸಲು ಯೋಗ ಅಗತ್ಯ

ಪ್ರಾಚೀನ ಕಾಲದಿಂದಲ್ಲೂ ಋಷಿಮುನಿಗಳು ಯೋಗದಿಂದ ಸತ್ಯದರ್ಶನವನ್ನು ಕಂಡುಕೊಂಡು ಬಂದಿದ್ದಾರೆ. ಆರೋಗ್ಯಕ್ಕೂ, ಯೋಗಕ್ಕೂ ಅವಿನಾಭಾವ ಸಂಬಂಧವಿದೆ. ಓಂಕಾರಕ್ಕೆ ಅಗಾಧವಾದ ಶಕ್ತಿಯಿದೆ. ಓಂಕಾರವನ್ನು ನಮ್ಮದಾಗಿಸಿಕೊಂಡರೆ ಏಕಾಗ್ರತೆ ಸಾಧಿಸಲು ಸಾಧ್ಯ. ಯೋಗ ನಿಜವಾದ ಬೆಳಕಿನೆಡೆಗೆ ಕೊಂಡೊಯ್ಯುತ್ತದೆ ಇದರಿಂದ ಬದುಕನ್ನು ಸುಂದರಗೊಳಿಸಲು ಸಾಧ್ಯ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬಿಜಿಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿ, ಯೋಗದ ಅಸ್ಮಿತೆಯನ್ನು ತಾಯಿಯ ಗರ್ಭದಿಂದಲೇ ಗುರುತಿಸಬಹುದು. ಯೋಗ ಎಂದರೆ ದೈಹಿಕ ಮಾನಸಿಕ ಆಚರಣೆಗಳ ಬೋಧನಾ ಶಾಲೆ ಎಂದು ಕರೆಯಬಹುದು. ವ್ಯಕ್ತಿಯು ತನ್ನನ್ನು ತಾನು ಅರ್ಥಮಾಡಿಕೊಂಡು ಅನುಭೂತಿಯನ್ನು ಪಡೆಯಲು ಯೋಗ ಅಗತ್ಯವಾಗಿದೆ. ಜೀವನದೊಂದಿಗೆ ಪರಮಾತ್ಮನನ್ನು ಲೀನವಾಗಿಸುವುದೇ ಯೋಗ, ಮಾನವ ಪ್ರತಿ ದಿನ ಮನೋಗ್ಲಾನಿಯಾಗಿ ಬದುಕುತ್ತಿದ್ದಾನೆ. ಅವನು ತಿನ್ನುವ ಆಹಾರ, ಬದುಕುವ ಪರಿಸರ ಶರೀರವನ್ನು ಜಾಡ್ಯವಾಗಿಸಿದೆ. ಈ ಶಾರೀರಿಕ ಬಾಧೆಯನ್ನು ಮೀರಲು ಯೋಗಸಾಧನಗಳು ಸಹಕಾರಿಯಾಗಿದೆ ಎಂದರು.

ಹೊಸ್ಮಾರು ಬಲ್ಯೊಟ್ಟು ಗುರುಕುಲ ಆಶ್ರಮದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಯೋಗವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದೆ. ಭಗವದ್ಗೀತೆಯ ೧೮ನೇ ಅಧ್ಯಾಯವು ಯೋಗದ ಬಗ್ಗೆ ಮಾತನಾಡುತ್ತದೆ ಎಂದರಲ್ಲದೇ ತಪಸ್ವಿಯಾಗಲು ಯೋಗ ಪ್ರಧಾನವಾದ ಅಸ್ತ್ರ ಎಂದರು. ಕಾರ್ಯಕ್ರಮದಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸುಬ್ಬಕಾರಡ್ಕ, ಬಿಜಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಲತಾ ರಾಜಾರಾಮ್, ಬಿಜಿಎಸ್ ಎಜುಕೇಷನ್ ಸೆಂಟರ್‌ನ ಪ್ರಾಂಶುಪಾಲರಾದ ರೇಷ್ಮಾ ಸಿ ನಾಯರ್, ಬಿಜಿಎಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಶ್ಮಿ ಉಪಸ್ಥಿತರಿದ್ದರು. ನರಸಿಂಹ ಕುಲಕರ್ಣಿ ಹಾಗೂ ಜಗದೀಶ ಮುರ ಅವರು ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರಂಭವನ್ನು ವಿದ್ಯಾರ್ಥಿಗಳಾದ ಸ್ನೇಹ ನಿರೂಪಿಸಿ, ಕಾವ್ಯ ಭಟ್ ಸ್ವಾಗತಿಸಿ ಪ್ರತೀಕ್ಷಾ ಕೆ ವಂದಿಸಿದರು.