Tagged: Bgs Education Centre

ಏಕಾಗ್ರತೆ ಸಾಧಿಸಲು ಯೋಗ ಅಗತ್ಯ

ಪ್ರಾಚೀನ ಕಾಲದಿಂದಲ್ಲೂ ಋಷಿಮುನಿಗಳು ಯೋಗದಿಂದ ಸತ್ಯದರ್ಶನವನ್ನು ಕಂಡುಕೊಂಡು ಬಂದಿದ್ದಾರೆ. ಆರೋಗ್ಯಕ್ಕೂ, ಯೋಗಕ್ಕೂ ಅವಿನಾಭಾವ ಸಂಬಂಧವಿದೆ. ಓಂಕಾರಕ್ಕೆ ಅಗಾಧವಾದ ಶಕ್ತಿಯಿದೆ. ಓಂಕಾರವನ್ನು ನಮ್ಮದಾಗಿಸಿಕೊಂಡರೆ ಏಕಾಗ್ರತೆ ಸಾಧಿಸಲು ಸಾಧ್ಯ. ಯೋಗ ನಿಜವಾದ ಬೆಳಕಿನೆಡೆಗೆ ಕೊಂಡೊಯ್ಯುತ್ತದೆ ಇದರಿಂದ ಬದುಕನ್ನು ಸುಂದರಗೊಳಿಸಲು ಸಾಧ್ಯ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬಿಜಿಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿ, ಯೋಗದ ಅಸ್ಮಿತೆಯನ್ನು ತಾಯಿಯ ಗರ್ಭದಿಂದಲೇ ಗುರುತಿಸಬಹುದು. ಯೋಗ ಎಂದರೆ ದೈಹಿಕ ಮಾನಸಿಕ ಆಚರಣೆಗಳ ಬೋಧನಾ ಶಾಲೆ ಎಂದು ಕರೆಯಬಹುದು. ವ್ಯಕ್ತಿಯು ತನ್ನನ್ನು ತಾನು ಅರ್ಥಮಾಡಿಕೊಂಡು ಅನುಭೂತಿಯನ್ನು ಪಡೆಯಲು ಯೋಗ ಅಗತ್ಯವಾಗಿದೆ. ಜೀವನದೊಂದಿಗೆ ಪರಮಾತ್ಮನನ್ನು ಲೀನವಾಗಿಸುವುದೇ ಯೋಗ, ಮಾನವ ಪ್ರತಿ ದಿನ ಮನೋಗ್ಲಾನಿಯಾಗಿ ಬದುಕುತ್ತಿದ್ದಾನೆ. ಅವನು ತಿನ್ನುವ ಆಹಾರ, ಬದುಕುವ ಪರಿಸರ ಶರೀರವನ್ನು ಜಾಡ್ಯವಾಗಿಸಿದೆ. ಈ ಶಾರೀರಿಕ ಬಾಧೆಯನ್ನು ಮೀರಲು ಯೋಗಸಾಧನಗಳು ಸಹಕಾರಿಯಾಗಿದೆ ಎಂದರು.

ಹೊಸ್ಮಾರು ಬಲ್ಯೊಟ್ಟು ಗುರುಕುಲ ಆಶ್ರಮದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಯೋಗವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದೆ. ಭಗವದ್ಗೀತೆಯ ೧೮ನೇ ಅಧ್ಯಾಯವು ಯೋಗದ ಬಗ್ಗೆ ಮಾತನಾಡುತ್ತದೆ ಎಂದರಲ್ಲದೇ ತಪಸ್ವಿಯಾಗಲು ಯೋಗ ಪ್ರಧಾನವಾದ ಅಸ್ತ್ರ ಎಂದರು. ಕಾರ್ಯಕ್ರಮದಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸುಬ್ಬಕಾರಡ್ಕ, ಬಿಜಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಲತಾ ರಾಜಾರಾಮ್, ಬಿಜಿಎಸ್ ಎಜುಕೇಷನ್ ಸೆಂಟರ್‌ನ ಪ್ರಾಂಶುಪಾಲರಾದ ರೇಷ್ಮಾ ಸಿ ನಾಯರ್, ಬಿಜಿಎಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಶ್ಮಿ ಉಪಸ್ಥಿತರಿದ್ದರು. ನರಸಿಂಹ ಕುಲಕರ್ಣಿ ಹಾಗೂ ಜಗದೀಶ ಮುರ ಅವರು ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರಂಭವನ್ನು ವಿದ್ಯಾರ್ಥಿಗಳಾದ ಸ್ನೇಹ ನಿರೂಪಿಸಿ, ಕಾವ್ಯ ಭಟ್ ಸ್ವಾಗತಿಸಿ ಪ್ರತೀಕ್ಷಾ ಕೆ ವಂದಿಸಿದರು.

ಏಕಾಗ್ರತೆ ಸಾಧಿಸಲು ಯೋಗ ಅಗತ್ಯ

ಪ್ರಾಚೀನ ಕಾಲದಿಂದಲ್ಲೂ ಋಷಿಮುನಿಗಳು ಯೋಗದಿಂದ ಸತ್ಯದರ್ಶನವನ್ನು ಕಂಡುಕೊಂಡು ಬಂದಿದ್ದಾರೆ. ಆರೋಗ್ಯಕ್ಕೂ, ಯೋಗಕ್ಕೂ ಅವಿನಾಭಾವ ಸಂಬಂಧವಿದೆ. ಓಂಕಾರಕ್ಕೆ ಅಗಾಧವಾದ ಶಕ್ತಿಯಿದೆ. ಓಂಕಾರವನ್ನು ನಮ್ಮದಾಗಿಸಿಕೊಂಡರೆ ಏಕಾಗ್ರತೆ ಸಾಧಿಸಲು ಸಾಧ್ಯ. ಯೋಗ ನಿಜವಾದ ಬೆಳಕಿನೆಡೆಗೆ ಕೊಂಡೊಯ್ಯುತ್ತದೆ ಇದರಿಂದ ಬದುಕನ್ನು ಸುಂದರಗೊಳಿಸಲು ಸಾಧ್ಯ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬಿಜಿಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿ, ಯೋಗದ ಅಸ್ಮಿತೆಯನ್ನು ತಾಯಿಯ ಗರ್ಭದಿಂದಲೇ ಗುರುತಿಸಬಹುದು. ಯೋಗ ಎಂದರೆ ದೈಹಿಕ ಮಾನಸಿಕ ಆಚರಣೆಗಳ ಬೋಧನಾ ಶಾಲೆ ಎಂದು ಕರೆಯಬಹುದು. ವ್ಯಕ್ತಿಯು ತನ್ನನ್ನು ತಾನು ಅರ್ಥಮಾಡಿಕೊಂಡು ಅನುಭೂತಿಯನ್ನು ಪಡೆಯಲು ಯೋಗ ಅಗತ್ಯವಾಗಿದೆ. ಜೀವನದೊಂದಿಗೆ ಪರಮಾತ್ಮನನ್ನು ಲೀನವಾಗಿಸುವುದೇ ಯೋಗ, ಮಾನವ ಪ್ರತಿ ದಿನ ಮನೋಗ್ಲಾನಿಯಾಗಿ ಬದುಕುತ್ತಿದ್ದಾನೆ. ಅವನು ತಿನ್ನುವ ಆಹಾರ, ಬದುಕುವ ಪರಿಸರ ಶರೀರವನ್ನು ಜಾಡ್ಯವಾಗಿಸಿದೆ. ಈ ಶಾರೀರಿಕ ಬಾಧೆಯನ್ನು ಮೀರಲು ಯೋಗಸಾಧನಗಳು ಸಹಕಾರಿಯಾಗಿದೆ ಎಂದರು.

ಹೊಸ್ಮಾರು ಬಲ್ಯೊಟ್ಟು ಗುರುಕುಲ ಆಶ್ರಮದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಯೋಗವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಿದೆ. ಭಗವದ್ಗೀತೆಯ ೧೮ನೇ ಅಧ್ಯಾಯವು ಯೋಗದ ಬಗ್ಗೆ ಮಾತನಾಡುತ್ತದೆ ಎಂದರಲ್ಲದೇ ತಪಸ್ವಿಯಾಗಲು ಯೋಗ ಪ್ರಧಾನವಾದ ಅಸ್ತ್ರ ಎಂದರು. ಕಾರ್ಯಕ್ರಮದಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಸುಬ್ಬಕಾರಡ್ಕ, ಬಿಜಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಲತಾ ರಾಜಾರಾಮ್, ಬಿಜಿಎಸ್ ಎಜುಕೇಷನ್ ಸೆಂಟರ್‌ನ ಪ್ರಾಂಶುಪಾಲರಾದ ರೇಷ್ಮಾ ಸಿ ನಾಯರ್, ಬಿಜಿಎಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಶ್ಮಿ ಉಪಸ್ಥಿತರಿದ್ದರು. ನರಸಿಂಹ ಕುಲಕರ್ಣಿ ಹಾಗೂ ಜಗದೀಶ ಮುರ ಅವರು ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರಂಭವನ್ನು ವಿದ್ಯಾರ್ಥಿಗಳಾದ ಸ್ನೇಹ ನಿರೂಪಿಸಿ, ಕಾವ್ಯ ಭಟ್ ಸ್ವಾಗತಿಸಿ ಪ್ರತೀಕ್ಷಾ ಕೆ ವಂದಿಸಿದರು.

ಬಿಜಿಎಸ್ ಶಿಕ್ಷಣ ಸಂಸ್ಥೆ ಪರಿಸರ ಸ್ನೇಹಿ

ಕಾವೂರಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯ ವಿಶೇಷ ಎಂದರೆ ಅಲ್ಲಿ ಶಿಕ್ಷಣ, ಮಾನವೀಯ ಮೌಲ್ಯಗಳನ್ನು ಕಲಿಸುವ ಕೆಲಸವನ್ನು ಮಾತ್ರ ಮಾಡುತ್ತಿಲ್ಲ. ಬದಲಾಗಿ ಇಡೀ ಬಿಜಿಎಸ್ ಶಿಕ್ಷಣ ಸಂಸ್ಥೆ ಪರಿಸರದ ಕುರಿತು ಕಾಳಜಿಯನ್ನು ಇಟ್ಟುಕೊಂಡಿದೆ. ಮರ, ಗಿಡಗಳ ಜತೆಗೆ ಪರಿಸರ ಪೂರಕ ವಾತಾವರಣ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಪೂರಕವಾಗಿದೆ.

ವಿಶೇಷವಾಗಿ ಬಿಜಿಎಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಹೇಳುವಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಗಿಡ- ಮರ ಬೆಳೆಸುವ ಕಾರ್ಯ ಪ್ರತಿಯೊಬ್ಬರ ಮನೆಯಂಗಳದಿಂದ ಪ್ರಾರಂಭವಾಗಬೇಕು. ಪ್ರಕೃತಿಯು ದೇವರಿಗೆ ಸಮಾನ, ಇದನ್ನು ಕಾಪಾಡಿದರೆ ದೇವರ ಅನುಗ್ರಹ ಲಭಿಸುತ್ತದೆ. ಹೇಗೆ ಮರ, ನದಿ, ಪ್ರಾಣಿ ಪಕ್ಷಿಗಳು ಪರರಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಳ್ಳುತ್ತವೆಯೋ ಹಾಗೆ ಮನುಷ್ಯನಾಗಿ ಹುಟ್ಟಿದ ಮೇಲೆ ಸ್ವಾರ್ಥವನ್ನು ಬಿಟ್ಟು ಮರಗಿಡಗಳನ್ನು ಬೆಳೆಸಬೇಕು.

ಜಗತ್ತಿನಾದ್ಯಂತ ಪರಿಸರ ಮಲೀನವಾಗುತ್ತಿದೆ. ಇದರ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಮಕ್ಕಳ ಹುಟ್ಟುಹಬ್ಬದ ದಿನದಂದು ಒಂದೊಂದು ಗಿಡ ನೆಟ್ಟು ಬೆಳಸಬೇಕು ಎನ್ನುವುದು ಅವರ ಮಾತು. ವಿಶೇಷವಾಗಿ ಪರಿಸರದ ದಿನಾಚರಣೆಯ ಅಂಗವಾಗಿ ಈಗಾಗಲೇ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಪರಿಸರ ಜಾಗೃತಿ, ಮಾಹಿತಿ ನೀಡುವ ಕಾರ‍್ಯ ಸಾಗುತ್ತಿದೆ.