Tagged: CET

ಸಿಇಟಿಯಲ್ಲಿ ಕುಡ್ಲದ ವಿದ್ಯಾರ್ಥಿಗಳು ಹೇಗೆ ರ‍್ಯಾಂಕ್ ಪಡೆಯುತ್ತಾರೆ?

ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಟಾಪ್ 10 ನಲ್ಲಿ ಒಟ್ಟು 9 ರ‍್ಯಾಂಕ್‌ಗಳು ಬಂದಿವೆ. ಇದರಲ್ಲಿ ಮಂಗಳೂರಿನ ಎಕ್ಸ್‌ಫರ್ಟ್ ಕಾಲೇಜಿಗೆ 8 ರ‍್ಯಾಂಕ್ ಮತ್ತು ಮೂಡುಬಿದರೆ ಆಳ್ವಾಸ್ ಕಾಲೇಜಿಗೆ ಒಂದು ರ‍್ಯಾಂಕ್ ಬಂದಿದೆ.

ಎಕ್ಸ್‌ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳಾದ ಆರ್.ಚಿನ್ಮಯ್ ಎಂಜಿನಿಯರಿಂಗ್ 2ನೇ ಮತ್ತು ಫಾರ್ಮಸಿಯಲ್ಲಿ 3ನೇ ರ‍್ಯಾಂಕ್ ಗಳಿಸಿದ್ದಾರೆ. ಭುವನ್ ವಿ.ಬಿ. ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 3ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ನಲ್ಲಿ 6ನೇ ರ‍್ಯಾಂಕ್ ಪಡೆದಿದ್ದಾರೆ.

ಸಮರ್ಥ್ ಮಯ್ಯ ಎಂಜಿನಿಯರಿಂಗ್‌ನಲ್ಲಿ 5ನೇ ರ‍್ಯಾಂಕ್, ಆಶಯ್ ಜೈನ್ ಸಿ.ಎ. ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‌ನಲ್ಲಿ 7ನೇ ರ‍್ಯಾಂಕ್, ಸುದೇಶ್ ಗೌಡ ಜೆ. ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 7ನೇ ರ‍್ಯಾಂಕ್, ಯಶ್ ಬನ್ನೂರು ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 9ನೇ ರ‍್ಯಾಂಕ್ ಪಡೆದಿದ್ದಾರೆ. ಆಳ್ವಾಸ್ ಪಿಯು ಕಾಲೇಜಿನ ಎಸ್.ದರ್ಶನ್ ಸಮರ್ಥ ಬಿಎಸ್ಸಿ (ಅಗ್ರಿಕಲ್ಚರ್)ನಲ್ಲಿ 10ನೇ ರ‍್ಯಾಂಕ್ ಗಳಿಸಿದ್ದಾರೆ.

ಸಿಇಟಿ ಪರೀಕ್ಷಾ ಸೆಂಟರ್ ದ.ಕವೇ ರಾಜ್ಯಕ್ಕೆ ಸೆಕೆಂಡ್ !

ಇಂದು ರಾಜ್ಯವ್ಯಾಪಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ. ರಾಜ್ಯದ ಬೆಂಗಳೂರಿನಲ್ಲಿ ಈ ಬಾರಿ 84 ಸಿಇಟಿ ಪರೀಕ್ಷಾ ಸೆಂಟರ್‌ಗಳಿದ್ದರೆ ಅದರ ನಂತರದ ಸ್ಥಾನ ಮಂಗಳೂರಿನಲ್ಲಿ 26 ಸಿಇಟಿ ಪರೀಕ್ಷಾ ಸೆಂಟರ್‌ಗಳನ್ನು ಹೊಂದುವ ಮೂಲಕ ರಾಜ್ಯದಲ್ಲಿ ಎರಡನೇ ಅತೀ ದೊಡ್ಡ ಪರೀಕ್ಷಾ ಸೆಂಟರ್‌ಗಳನ್ನು ಹೊಂದಿರುವ ಜಿಲ್ಲೆ ಎನ್ನುವ ಖ್ಯಾತಿಗೆ ಭಾಜನವಾಗಿದೆ.
ಅದರಲ್ಲೂ ಮುಖ್ಯವಾಗಿ ಮಂಗಳೂರು ತಾಲೂಕು ವ್ಯಾಪ್ತಿಯಲ್ಲೇ ಭರ್ತಿ 13 ಪರೀಕ್ಷಾ ಕೇಂದ್ರಗಳು ಇವೆ. ಮೂಡುಬಿದಿರೆಯಲ್ಲಿ 8, ಬೆಳ್ತಂಗಡಿಯಲ್ಲಿ 2, ಪುತ್ತೂರಿನ 3 ಕೇಂದ್ರಗಳು ಸೇರಿದಂತೆ ಒಟ್ಟು 26 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಸರಿಸುಮಾರು 13,290ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ 771 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಜಿಲ್ಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸೆಂಟರ್ ಆಗಿ ಗುರುತಿಸಿಕೊಂಡಿದೆ.