Tagged: children

ಅಷ್ಟಮಿಗೆ ಮಕ್ಕಳ ಪಾಲಿನ ದೇವರಾದ ರವಿಯಣ್ಣ

ಕಟಪಾಡಿಯ ಸಾಮಾನ್ಯ ಒಬ್ಬ ಗಾರೆ ಕೆಲಸದ ರವಿಯಣ್ಣ ಜಾಸ್ತಿ ಓದಿದವರಲ್ಲ ದೊಡ್ಡ ಹೇಳಿಕೊಳ್ಳುವ ಕೆಲಸನೂ ಇಲ್ಲ ಆದರೆ ಕಳೆದ ಐದು ವರ್ಷದಲ್ಲಿ ಅಷ್ಟಮಿಯಲ್ಲಿ ಭಿನ್ನವಾದ ವೇಷ ಹಾಕಿಕೊಂಡು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆ ಗೆ ನೆರವಾಗುವ ವಿಚಾರ ಇದೆಯಲ್ಲ ಅದು ಎಂದಿಗೂ ಸಣ್ಣ ಮಾತೇ ಅಲ್ಲ. ಈ ಬಾರಿ ದೀ ವ್ಯಾಂಪರ್ಸ್ ವೇಷದಲ್ಲಿ ಉಡುಪಿಯಲ್ಲಿ ಎರಡು ದಿನ ಕಾಣಿಸಿಕೊಳ್ಳಲಿದ್ದಾರೆ ಅವರಿಗೆ ಬೆನ್ನು ತಟ್ಟುವ ಕೆಲಸ ವಾಗಲಿ.

ಕಳೆದ ಐದು ವರ್ಷಗಳಲ್ಲಿ ಸಂಗ್ರಹಿಸಿದ ಒಟ್ಟು 35ಲಕ್ಷ ರೂ. ಹಣವನ್ನು 29 ಬಡ ಮಕ್ಕಳ ಚಿಕಿತ್ಸೆಗೆ ನೀಡಲಾಗಿದೆ. ಅದೇ ರೀತಿ ಈ ವರ್ಷವೂ ಕೂಡ ರವಿ ಮತ್ತು ಫ್ರೆಂಡ್ಸ್ ಕಟಪಾಡಿ ತಂಡ ಆ ಕಾರ್ಯ ಕ್ಕೆ ಮುಂದಾಗುತ್ತಿದೆ. ಲೀವರ್ ಕ್ಯಾನ್ಸರ್ನಿಂದ ಬಳಲುತ್ತಿರುವ ಮಂದರ್ತಿ ಮೂಡುಬಾರಳಿಯ ಕುಶಲ ಮತ್ತು ಉಷಾ ದಂಪತಿಯ ಮಗ ಶ್ರೀತನ್(3), ಬಳಿರಕ್ತ ಕಣ ಉತ್ಪತ್ತಿ ಯಾಗದ ಕಾಯಿಲೆಯಿಂದ ಬಳಲುತ್ತಿರುವ ಕುಂದಾಪುರ ವಕ್ವಾಡಿಯ ರವೀಂದ್ರ ಮತ್ತು ಯಶೋಧ ದಂಪತಿಯ ಮಗ ಪ್ರಥಮ್(5), ಮೆದಳಿನ ರಕ್ತಸ್ರಾವ ಕಾಯಿಲೆಗೆ ತುತ್ತಾಗಿರುವ ಹಿರಿಯಡಕ ಪಂಚನಬೆಟ್ಟು ಕೃಷ್ಣಮೂರ್ತಿ ಆಚಾರ್ಯ ಮತ್ತು ಕುಶಲ ದಂಪತಿಯ ಮಗ ಕಿರಣ್(18) ಸೇರಿದಂತೆ ಐದು ಮಕ್ಕಳ ಚಿಕಿತ್ಸೆ ಸಹಾಯ ಮಾಡಲಾಗುತ್ತದೆ. ಸಂಗ್ರಹವಾದ ಹಣವನ್ನು ಸೆ.3ರಂದು ಸಂಜೆ 5ಗಂಟೆಗೆ ಕಟಪಾಡಿ ಸಾರ್ವ ಜನಿಕ ಶ್ರೀಗಣೇಶೋತ್ಸವ ವೇದಿಕೆ ಯಲ್ಲಿ‌‌ ನೀಡಲಾಗುತ್ತದೆ.

ಕುಡ್ಲದ ಮಳೆಗೆ ಮತ್ತೆ ಶಾಲೆ,ಕಾಲೇಜಿಗೆ ರಜೆ

ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಆ.8ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಾಲೆ,ಕಾಲೇಜಿಗೆ ಮತ್ತೆ ಮಳೆಯ ರಜೆ ಆರಂಭ

ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಆ.7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಾಲೆ,ಕಾಲೇಜಿಗೆ ಮತ್ತೆ ಮಳೆಯ ರಜೆ ಆರಂಭ

ಕರ್ನಾಟಕ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಿ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.