Tagged: Dakshina Kannada

ಮಹಾಲಿಂಗೇಶ್ವರ ದೇವರಿಗೆ ಪ್ರೀತಿ, ಭಕ್ತಿ ತೋರಿಸುವ ಕಂಬಳ ಕೋಣಗಳು

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಪ್ರತಿ ವರ್ಷ ನಡೆಯುವ ಕಂಬಳದ ವಿಶೇಷತೆ ಎಂದರೆ ಕಂಬಳದ ಕೆರೆಗೆ ಇಳಿಯುವ ಮೊದಲು ಕಂಬಳದ ಕೋಣಗಳು ದೇವಸ್ಥಾನದ ಮುಂಭಾಗದಲ್ಲಿ ತಮ್ಮ ಪ್ರೀತಿ, ಭಕ್ತಿ ವಿಶ್ವಾಸವನ್ನು ತೋರಿಸುತ್ತದೆ.

ಕಳೆದ 27 ವರ್ಷಗಳಿಂದ ಇಲ್ಲಿ ಕೋಟಿ ಚೆನ್ನಯ ಕಂಬಳ ನಡೆಯುತ್ತಿದೆ. ಕರಾವಳಿ ಕಂಬಳದಲ್ಲಿಯೇ ಅತೀ ಹೆಚ್ಚು ಜನ ಸೇರುವ ಕಂಬಳ ಎಂದೇ ಈ ಕಂಬಳವನ್ನು ಹೇಳಲಾಗುತ್ತದೆ. ಅದರಲ್ಲೂ ಮುಖ್ಯವಾಗಿ ದೇವರ ಗದ್ದೆಯಲ್ಲಿ ನಡೆಯುವ ಕಂಬಳದಲ್ಲಿ ಹೆಚ್ಚು ಕಡಿಮೆ 150ಕ್ಕೂ ಅಧಿಕ ಕೋಣದ ಜೋಡಿಗಳು ಕಾಣಿಸಿಕೊಳ್ಳುತ್ತದೆ.

ನವ ಮಂಗಳೂರಿನ ರೂವಾರಿ ಉಳ್ಳಾಲ ಶ್ರೀನಿವಾಸ್ ಮಲ್ಯರು

ಉಳ್ಳಾಲ ಶ್ರೀನಿವಾಸ್ ಮಲ್ಯ ಆಧುನಿಕ ದಕ್ಷಿಣ ಕನ್ನಡ ಜಿಲ್ಲೆಯ ನಿರ್ಮಾಣದ ರೂವಾರಿ. 18 ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ಮೂರು ಬಾರಿ ಸಂಸದರಾಗಿದ್ದರು. 1951,1957 ಹಾಗೂ 1962 ಸಂಸದರಾಗಿ ಅವರು ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಮಾಡಿದ ಕೆಲಸವಂತೂ ಶ್ಲಾಘನೀಯ.

ಎನ್‍ಐಟಿಕೆ, ನವಮಂಗಳೂರು ಬಂದರು, ಮಂಗಳೂರು ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ 66, ಉಳ್ಳಾಲ ಸೇತುವೆ ಅವರ ಕಾಲದಲ್ಲಿ ಮಾಡಿದ ಕಾರ್ಯಗಳನ್ನು ಇಂದಿನ ದಕ್ಷಿಣ ಕನ್ನಡ ಜಿಲ್ಲೆ ಜನರು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಇಂದು( ನ.21)ರಂದು ಅವರ 117ನೇ ಹುಟ್ಟುಹಬ್ಬ. ಮಂಗಳೂರಿನ ನಂಬರ್ ವನ್ ಸಂಸದ ಉಳ್ಳಾಲ ಶ್ರೀನಿವಾಸ್ ಮಲ್ಯ ಎನ್ನುವುದರಲ್ಲಿ ಯಾವುದೇ ಸಂದೇಹ ಮಂಗಳೂರಿನ ಜನತೆಗೆ ಇಲ್ಲ.

ಕರಾವಳಿಯ ನೆರೆಗೆ ಸಮರ್ಥ ಉತ್ತರ ನೀಡಿದ ಡಿಸಿ ಸೆಂಥಿಲ್

ಕರಾವಳಿಯಲ್ಲಿ ಸುರಿದ ಮಳೆ ಇಡೀ ಜಿಲ್ಲೆಯ ಜನತೆಗೆ ಭಯ ಹುಟ್ಟಿಸಿದ್ದು ನಿಜ. ಆದರೆ ಇಷ್ಟೆಲ್ಲ ಮಳೆ ಬರುತ್ತದೆ ಅದಕ್ಕೆ ಮೊದಲೇ ಎಚ್ಚರಗೊಳ್ಳಬೇಕು ಎನ್ನುವ ಕುರಿತು ಯೋಜನೆ ರೂಪಿಸಿದ ಕೀರ್ತಿ ಪೂರ್ತಿಯಾಗಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಾಹೇಬ್ರಿಗೆ ಸಲ್ಲಬೇಕು.

ಕಾರಣ ಕಳೆದ ವರ್ಷದ ಮಳೆಯಿಂದ ಯಾರು ಪಾಠ ಕಲಿಯದೇ ಇದ್ದರೂ ಕೂಡ ಡಿಸಿ ಸೆಂಥಿಲ್ ಪೂರ್ಣ ಪಾಠ ಕಲಿಯುವ ಜತೆಗೆ ಅದಕ್ಕೆ ಬೇಕಾದ ಯೋಜನೆಯನ್ನು ಮಾಡುವ ಮೂಲಕ ಇಂಥ ಸಂಭಾವ್ಯ ದುರ್ಘಟನೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲೆ ಎಲ್ಲ ಸಿದ್ಧತೆ ಮಾಡಿತ್ತು ಎನ್ನುವುದು ಯಾರಿಗೂ ಗೊತ್ತಿರಲು ಸಾಧ್ಯವಿಲ್ಲ. ಪ್ರಕೃತಿ ವಿಕೋಪ, ಆಸ್ತಿಪಾಸ್ತಿಗೆ ಹಾನಿಯಾಗುವ ಸಾಧ್ಯತೆಗಳ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲೇ ಆಧುನಿಕ ಉಪಕರಣಗಳನ್ನು ಖರೀದಿಸಿ, ಅಗ್ನಿಶಾಮಕ ದಳಕ್ಕೆ ಒಪ್ಪಿಸಲಾಗಿತ್ತು.

ಮೇ ತಿಂಗಳಲ್ಲೇ ಅಧಿಕಾರಿಗಳ ಸಭೆ ಕರೆದು, ಭಾರಿ ಮಳೆಯಿಂದ ನದಿಗಳು ಉಕ್ಕುವ, ಕಡಲ್ಕೊರೆತ, ಕೈಗಾರಿಕೆಗಳಿಂದ ದುರಂತ, ಗ್ಯಾಸ್ ಟ್ಯಾಂಕರ್‌ಗಳ ಅವಘಡ, ಘಾಟಿ ರಸ್ತೆಗಳು ಕುಸಿಯುವ ಭೀತಿ ಮೊದಲಾದ ಅಪಾಯದ ಬಗ್ಗೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿ, ಪೂರಕ ಉಪಕರಣಗಳಿಂದ ಸಜ್ಜುಗೊಳಿಸಿದ್ದರು. ಎಲ್ಲರ ಫೋನ್ ನಂಬರ್‌ಗಳ ಪಟ್ಟಿ ಮಾಡಲಾಗಿತ್ತು.
ಜಿಲ್ಲಾಧಿಕಾರಿ ನಿಧಿಯಿಂದ ಆರು ಬೋಟ್, ನಾಲ್ಕು ಔಟ್ ಬೋರ್ಡ್ ಬೋಟ್‌ಗಳನ್ನು ಖರೀದಿಸಿದ್ದು, ಮುಳುಗಿದವರ ರಕ್ಷಣೆಗೆ ಮೂರು ಅಂಡರ್ ವಾಟರ್ ಡೈವಿಂಗ್ ಸೆಟ್, ಸೆಫ್ಟಿ ಬೆಲ್ಟ್, ನೈಲಾನ್ ಹಗ್ಗ, ಪೆಟ್ರೋಲ್ ಚಾಲಿತ ಮರ ಕಡಿಯುವ ಯಂತ್ರಗಳ ಸಹಿತ ಸಾಕಷ್ಟು ಸಲಕರಣೆಗಳ ಖರೀದಿಸಲಾಗಿತ್ತು.

ಕರಾವಳಿಯ ನಾಗರಾಧನೆ ವಿಶ್ವಕ್ಕೆ ಮಾದರಿ

ಇಡೀ ಜಗತ್ತಿನ ಯಾವುದೇ ಮೂಲೆಗೆ ಹೋದರೂ ಕೂಡ ಕರಾವಳಿಯಲ್ಲಿರುವಷ್ಟು ನಾಗನ ಆರಾಧಿಸುವ ಜನ ಬೇರೆ ಎಲ್ಲೂ ಕಾಣ ಸಿಗೋದಿಲ್ಲ.
ಇಡೀ ವಿಶ್ವದ ಜನವೇ ನಾಗನ ನಿಜವಾದ ಆರಾಧನೆ ಮಾಡಬೇಕಾದರೆ ಕರಾವಳಿಗೆ ಬರಲೇಬೇಕು. ಇಲ್ಲಿನ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ, ಕುಡುಪು ದೇವಸ್ಥಾನ ಹೀಗೆ ಉಡುಪಿ, ಕಾಸರಗೋಡಿನಲ್ಲಿ ಇಂತಹ ನಾಗನ ಆರಾಧನೆ ಸಿಮೀತವಾದ ದೇವಸ್ಥಾನಗಳು ಬೇಕಾದಷ್ಟು ಸಂಖ್ಯೆಯಲ್ಲಿ ಕಾಣಸಿಗುತ್ತದೆ.
ನಾಗಮಂಡಲ, ಡಕ್ಕೆಬಲಿ, ಸರ್ಪಂಕಳ ಹಾಗೂ ಕಾಡ್ಯನಾಟ ಎಂಬ ಆಚರಣೆಗಳು ನಾಗಾರಾಧನೆಯ ವೈವಿಧ್ಯತೆಯನ್ನು ಪರಿಚಯಿಸುತ್ತದೆ ಎನ್ನುವುದು ವಿಶೇಷ.

ಬಿಜಿಎಸ್ ಶಿಕ್ಷಣ ಸಂಸ್ಥೆ ಪರಿಸರ ಸ್ನೇಹಿ

ಕಾವೂರಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯ ವಿಶೇಷ ಎಂದರೆ ಅಲ್ಲಿ ಶಿಕ್ಷಣ, ಮಾನವೀಯ ಮೌಲ್ಯಗಳನ್ನು ಕಲಿಸುವ ಕೆಲಸವನ್ನು ಮಾತ್ರ ಮಾಡುತ್ತಿಲ್ಲ. ಬದಲಾಗಿ ಇಡೀ ಬಿಜಿಎಸ್ ಶಿಕ್ಷಣ ಸಂಸ್ಥೆ ಪರಿಸರದ ಕುರಿತು ಕಾಳಜಿಯನ್ನು ಇಟ್ಟುಕೊಂಡಿದೆ. ಮರ, ಗಿಡಗಳ ಜತೆಗೆ ಪರಿಸರ ಪೂರಕ ವಾತಾವರಣ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಪೂರಕವಾಗಿದೆ.

ವಿಶೇಷವಾಗಿ ಬಿಜಿಎಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಹೇಳುವಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ಗಿಡ- ಮರ ಬೆಳೆಸುವ ಕಾರ್ಯ ಪ್ರತಿಯೊಬ್ಬರ ಮನೆಯಂಗಳದಿಂದ ಪ್ರಾರಂಭವಾಗಬೇಕು. ಪ್ರಕೃತಿಯು ದೇವರಿಗೆ ಸಮಾನ, ಇದನ್ನು ಕಾಪಾಡಿದರೆ ದೇವರ ಅನುಗ್ರಹ ಲಭಿಸುತ್ತದೆ. ಹೇಗೆ ಮರ, ನದಿ, ಪ್ರಾಣಿ ಪಕ್ಷಿಗಳು ಪರರಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಳ್ಳುತ್ತವೆಯೋ ಹಾಗೆ ಮನುಷ್ಯನಾಗಿ ಹುಟ್ಟಿದ ಮೇಲೆ ಸ್ವಾರ್ಥವನ್ನು ಬಿಟ್ಟು ಮರಗಿಡಗಳನ್ನು ಬೆಳೆಸಬೇಕು.

ಜಗತ್ತಿನಾದ್ಯಂತ ಪರಿಸರ ಮಲೀನವಾಗುತ್ತಿದೆ. ಇದರ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಮಕ್ಕಳ ಹುಟ್ಟುಹಬ್ಬದ ದಿನದಂದು ಒಂದೊಂದು ಗಿಡ ನೆಟ್ಟು ಬೆಳಸಬೇಕು ಎನ್ನುವುದು ಅವರ ಮಾತು. ವಿಶೇಷವಾಗಿ ಪರಿಸರದ ದಿನಾಚರಣೆಯ ಅಂಗವಾಗಿ ಈಗಾಗಲೇ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಪರಿಸರ ಜಾಗೃತಿ, ಮಾಹಿತಿ ನೀಡುವ ಕಾರ‍್ಯ ಸಾಗುತ್ತಿದೆ.