Tagged: dengue

ಡೆಂಗೆ ರೋಗಿಗೆ ಬೆಲ್ಲ, ಈರುಳ್ಳಿ ಮದ್ದಿನ ಪ್ರಯೋಗ

ಕರಾವಳಿಯ ಡೆಂಗೆಯ ಅಬ್ಬರ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಕುಡ್ಲದಲ್ಲಿ ಡೆಂಗೆ ಜ್ವರದಿಂದ ಬಳಲುವ ಸಂಖ್ಯೆ 450 ಕ್ಕೆ ಮೀರಿ ನಿಂತಿದೆ. ಐವರು ಈಗಾಗಲೇ ಸಾವನ್ನು ಅಪ್ಪಿದ್ದಾರೆ. ಆದರೂ ಡೆಂಗೆ ಜ್ವರದ ಪ್ರಮಾಣ ತಗ್ಗುತ್ತಿಲ್ಲ.

ಖಾಸಗಿ, ಸರಕಾರಿ ಎರಡರಲ್ಲೂ ರೋಗಿಗಳು ಮಲಗುತ್ತಿದ್ದಾರೆ. ಡೆಂಗೆ ಜ್ವರದ ಬಳಿಕ ರೋಗಿಯ ರಕ್ತದ ಕಿರುಬಿಲ್ಲೆ(ಪ್ಲೇಟ್ಲೆಟ್)ಗಳ ಸಂಖ್ಯೆ ಕುಸಿತ ಕಾಣುತ್ತದೆ. ಇದಕ್ಕೆ ಔಷಧದ ಜತೆಯಲ್ಲಿ ಬೆಲ್ಲ ಹಾಗೂ ಹಸಿ ಈರುಳ್ಳಿಯನ್ನು ತಿನ್ನಬೇಕು. ಇದು ರಕ್ತದ ಕಿರುಬಿಲ್ಲೆಯ ಪ್ರಮಾಣವನ್ನು ಜಾಸ್ತಿ ಮಾಡುತ್ತದೆ. ಜತೆಗೆ ರೋಗ ನಿರೊಧಕ ಶಕ್ತಿ ಕೂಡ ಗಟ್ಟಿಯಾಗುತ್ತದೆ. ಆರ್ಯುವೇದದಲ್ಲೂ ಈ ಕುರಿತು ಉಲ್ಲೇಖವಿದೆ.

ಡೆಂಗೆಗೆ ಅಡುಗೆ ಮನೆಯಲ್ಲಿದೆ ಮದ್ದು !

ಕುಡ್ಲದಲ್ಲಿ ಡೆಂಗೆಯಿಂದ ಈಗಾಗಲೇ ಐವರು ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಮಂದಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದಾರೆ ಆದರೆ ಬಹಳಷ್ಟು ಮಂದಿಗೆ ಈ ರೋಗ ಬರುವುದಕ್ಕಿಂತ ಮೊದಲೇ ಎಚ್ಚರವಾದರೆ ಇದೆಲ್ಲವೂ ನಡೆಯುತ್ತಿರಲಿಲ್ಲ.

ಹೌದು. ಡೆಂಗೆಯ ಸೊಳ್ಳೆ ಯಿಂದ ಪಾರಾಗಲು ಅಡುಗೆಮನೆಯಲ್ಲಿ ಇರುವ ತೆಂಗಿನ ಎಣ್ಣೆ, ಕಹಿಬೇವಿನ ಆಯಿಲ್, ನೀಮ್ ಗ್ರಾಸ್ ಆಯಿಲ್ ಸೇರಿದಂತೆ ಮಾರ್ಕೆಟ್ ನಲ್ಲಿ ಸಿಗುವ ಕ್ರೀಮ್ ಗಳನ್ನು ಕೈ ಕಾಲುಗಳಿಗೆ ಉಜ್ಜಿಕೊಂಡು ನಂತರ ಹೊರಗಡೆ ಹೋದರೆ ಯಾವುದೇ ಸೊಳ್ಳೆ ಕೂಡ ಹತ್ತಿರಕ್ಕೆ ಸುಳಿಯಲಾರದು.

ಕುಡ್ಲದಲ್ಲಿ ಡೆಂಗೆ ಜ್ವರಕ್ಕೆ ಇಬ್ಬರು ವಿದ್ಯಾರ್ಥಿಗಳು ಬಲಿ

ಕುಡ್ಲದಲ್ಲಿ ಡೆಂಗೆಯ ಡಂಗುರ ಜೋರಾಗಿದೆ. ಕಳೆದ ಒಂದು ತಿಂಗಳ ಒಳಗಡೆ 320 ಕ್ಕೂ ಡೆಂಗೆ ಪಾಸಿಟಿವ್ ಪ್ರಕರಣ ಬರೀ ಕುಡ್ಲದಲ್ಲಿ ಕಾಣಿಸಿಕೊಂಡಿದೆ. ಇದರ ಜತೆಯಲ್ಲಿ ಕುಡ್ಲದಲ್ಲಿ ಯೇ ಈಗಾಗಲೇ ಮೂರು ಮಂದಿಯನ್ನು ಬಲಿ ಪಡೆದಿರುವ ಡೆಂಗೆ ಈ ಬಾರಿ ರಾಜ್ಯದಲ್ಲಿ ಯೇ ಅತೀ ಹೆಚ್ಚು ಪ್ರಕರಣ ಗಳು ಬರೀ ದಕ್ಷಿಣ ಕನ್ನಡ ಮಂಗಳೂರಿನಲ್ಲಿ ಕಾಣಿಸಿಕೊಂಡಿದೆ.
ವಿಶೇಷವಾಗಿ ಮಂಗಳೂರಿನ ಶಾಲೆಯೊಂದರಲ್ಲಿ ಮೂರನೇ ತರಗತಿ ಓದುವ ವಿದ್ಯಾರ್ಥಿ ಯೊಬ್ಬರು ಬುಧವಾರ ಮೃತಪಟ್ಟರೆ ಗುರುವಾರ ಏಳನೇ ತರಗತಿ ಓದುವ ವಿದ್ಯಾರ್ಥಿನಿ ಯೊಬ್ಬರು ಮೃತ ರಾಗಿದ್ದಾರೆ. ಆರೋಗ್ಯ ಇಲಾಖೆ ಪೂರ್ಣ ಪ್ರಮಾಣದಲ್ಲಿ ಕೆಲಸಕ್ಕೆ ಇಳಿಯದೇ ಇರುವುದರ ಜತೆಗೆ ಜನರಲ್ಲಿ ಆರೋಗ್ಯ ಕಾಳಜಿ ಇಲ್ಲದೇ ಇರುವುದು ಇದಕ್ಕೆ ಬಹುಮುಖ್ಯ ಕಾರಣವಾಗಿದೆ.