Tagged: independence day

ಕುಡ್ಲದ ವಿದ್ಯಾರ್ಥಿಗಳ ಮನಸ್ಸು ಗೆದ್ದ ಡಿಸಿ ಸೆಂಥಿಲ್ !

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಈ ಬಾರಿ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ಮಾಡುವ ಜತೆಯಲ್ಲಿ ಸಂದೇಶ ನೀಡುವ ವಿಶೇಷ ಅವಕಾಶ ಒದಗಿ ಬಂದಿತ್ತು.
ವಿಶೇಷವಾಗಿ ಸಂದೇಶದ ತುಂಬಾ ಕರಾವಳಿಯಲ್ಲಿ ಕಾಣಿಸಿಕೊಂಡ ನೆರೆಗೆ ಜನರು ಸ್ಪಂಧಿಸಿದ ರೀತಿ ಎಲ್ಲವನ್ನು ಮುಕ್ತವಾಗಿ ಹಂಚಿಕೊಳ್ಳುವ ಜತೆಯಲ್ಲಿ ಕರಾವಳಿಯ ಜನರು ಭಯಬೀಳುವ ಅಗತ್ಯವಿಲ್ಲ ಜಿಲ್ಲಾಡಳಿತ ನಿಮ್ಮ ಜತೆಯಲ್ಲಿ ಇದೆ ಎನ್ನುವ ಭರವಸೆ ತುಂಬುವ ಮಾತುಗಳು ಇಡೀ ಜಿಲ್ಲೆಯ ಜನರಿಗೆ ಹೊಸ ವಿಶ್ವಾಸವನ್ನು ತಂದುಕೊಟ್ಟಿದೆ.
ಅವರ ಮಾತಿನಲ್ಲಿ ಹೇಳುವುದಾದರೆ ಒಂದು ಪೀಳಿಗೆ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿ ಇತಿಹಾಸ ಸೃಷ್ಟಿಸಿತು. ಈಗ ನಾವೆಲ್ಲ ಭಾರತವನ್ನು ವಿಶ್ವತ ಅತ್ಯುನ್ನತ ಸ್ಥಾನಕ್ಕೆ ಏರಿಸಲು ನಮ್ಮ ಜೀವನವನ್ನು ತೊಡಗಿಸಿಕೊಂಡು ಇತಿಹಾಸ ಸೃಷ್ಟಿಸೋಣ. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಶಾಂತಿಯಿಂದ ಬಾಳು ಕಟ್ಟಿಕೊಳ್ಳಲು ಶ್ರಮಿಸೋಣ ಎನ್ನುವುದು ಇಡೀ ಸಂದೇಶದ ಸಾರ.
ಅಂದಹಾಗೆ ಡಿಸಿ ಸೆಂಥಿಲ್ ಬರೀ ಕರಾವಳಿಯ ಜನರಿಗೆ ಮಾತ್ರವಲ್ಲ ಇಲ್ಲಿ ಶೈಕ್ಷಣಿಕ ಬದುಕು ಕಟ್ಟಲು ಬಂದವರಿಗೂ ಅವರೆಂದರೆ ಬಹಳ ಇಷ್ಟ. ಮಳೆ ಬಂದಾಗ ಅವರು ಮಕ್ಕಳು ಕುರಿತು ವಹಿಸುವ ಕಾಳಜಿಯಿಂದ ಮಕ್ಕಳ ಪ್ರೀತಿಯ ಡಿಸಿ ಆಗಿದ್ದಾರೆ ಎನ್ನುವುದಕ್ಕೆ ಇಂದಿನ ಕಾರ‍್ಯಕ್ರಮದಲ್ಲಿ ಸೆಲ್ಫಿ ತೆಗೆದ ವಿದ್ಯಾರ್ಥಿಗಳೇ ಸಾಕ್ಷಿ.

ಡಿಸಿಗಳಿಗೆ ಒಳಿಯಿತು ಧ್ವಜಾರೋಹಣದ ಚಾನ್ಸ್

ರಾಜ್ಯದಲ್ಲಿ ಸರಕಾರ ಅಸ್ತಿತ್ವದ ಲ್ಲಿದ್ದರೂ ಇದೇ ಮೊದಲ ಬಾರಿಗೆ ಸ್ವಾತಂತ್ರ್ಯೋ ತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ನಿಭಾಯಿಸಲಿದ್ದಾರೆ.
ಈ ಹಿಂದೆ ರಾಜ್ಯ ಪಾಲರ ಆಡಳಿತವಿದ್ದ ಸಂದರ್ಭದಲ್ಲಿ ಮಾತ್ರ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನಡೆಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಿಎಂ ಯಡಿಯೂರಪ್ಪ ಧ್ವಜ ವಂದನೆ ಸಲ್ಲಿಸಲಿದ್ದಾರೆ.
ಉಳಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು, ಉಪವಿಭಾಗಗಳಲ್ಲಿ ಉಪ ವಿಭಾಗಾಧಿಕಾರಿಗಳು, ತಾಲೂಕು ಕೇಂದ್ರಗಳಲ್ಲಿತಹಶೀಲ್ದಾರರು ಈ ಪ್ರಕ್ರಿಯೆ ನಡೆಸಲಿದ್ದು, ನೆರೆಯ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಲಾಗಿದೆ.
ಈ ಹಿಂದೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವಿತ್ತು. ಈ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮಾತ್ರ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನಡೆಸಿದ್ದಾರೆ.

ಪರಿಸರದೊಂದಿಗೆ ಪ್ರೀತಿಯ ಸ್ವಾತಂತ್ರ್ಯ ಆಚರಿಸಿ

ಪರಿಸರ ಹಾಗೂ ಸ್ವಾತಂತ್ರ್ಯಕ್ಕೆ ಎಲ್ಲಿಂದ ಎಲ್ಲಿ ಸಂಬಂಧ ಅಂದುಕೊಳ್ಳಬೇಡಿ. ಮಕ್ಕಳು ಕೈಯಲ್ಲಿ ಪ್ಲಾಸ್ಟಿಕ್ ಬಾವುಟ ಹಿಡಿದುಕೊಂಡು ಪರಿಸರಕ್ಕೆ ಹಾನಿ ಮಾಡುವುದು ಪ್ರತಿ ವರ್ಷನೂ ನಡೆದುಕೊಂಡು ಬರುವ ವಿಚಾರ. ಆದರೆ ಈ ಬಾರಿಯಂತೂ ಪರಿಸರದ ಜತೆಯಲ್ಲಿ ಸ್ವಾತಂತ್ರ್ಯವನ್ನು ಆಚರಿಸಲು ಪಕ್ಷಿಕರೆಯ ನಿತಿನ್ ವಾಸ್ ಸೂಪರ್ ಐಡಿಯಾ ನೀಡಿದ್ದಾರೆ ಅದನ್ನು ಫಾಲೋ ಮಾಡಿಕೊಂಡು ಹೋದರೆ ಬಾವುಟದಲ್ಲೂ ಗಿಡ ಬೆಳೆಸಬಹುದು.
ಹಳೆಯ ರದ್ದಿ ಪೇಪರ್‌ಗಳನ್ನು ಸಂಗ್ರಹಿಸಿ ಹಳೆಯ ವಿಧಾನಗಳನ್ನು ಬಳಸಿ ಹೊಸದಾಗಿ ಪೇಪರ್ ತಯಾರಿಸಿ ಇದರಿಂದ ಆಮಂತ್ರಣ ಪತ್ರಿಕೆ, ಬುಕ್ ಪ್ಯಾಡ್, ಜುವೆಲ್ಲರಿ ಬಾಕ್ಸ್, ಡಿಸೈನ್ ಬೌಲ್, ವಿಗ್ರಹಗಳು, ಪೆನ್‌ಸ್ಟ್ಯಾಂಡ್, ಪೆನ್ಸಿಲ್, ಪೆನ್ ಮತ್ತಿತರ ವಸ್ತುಗಳನ್ನು ತಯಾರಿಸುತ್ತಾರೆ. ಬಳಕೆಯ ನಂತರ ಪೇಪರ್ ತಯಾರಿಸುವಾಗ ಅದಕ್ಕೆ ನಾನಾ ಜಾತಿಯ ಹೂವಿನ ಗಿಡಗಳ ಹಾಗೂ ತರಕಾರಿ ಬೀಜಗಳನ್ನು ಅಳವಡಿಸುತ್ತಾರೆ. ಇವುಗಳನ್ನು ಮಣ್ಣಲ್ಲಿ ಹಾಕಿದರೆ ಮೊಳಕೆ ಒಡೆದು ನಾನಾ ಜಾತಿಯ ಹೂ, ತರಕಾರಿ ಗಿಡಗಳಾಗಿ ಬೆಳೆಯುತ್ತದೆ.