Tagged: jaggery

ತುಳುನಾಡಿನ ಓಲೆ ಬೆಲ್ಲ ಸಿಹಿಯಲ್ಲೂ ಪೂರ್ಣ ಆರೋಗ್ಯ

ಜಗತ್ತಿನ ಬಹುತೇಕ ಹಣ್ಣುಗಳ ರಸ, ಸುವಾಸನೆ ಗಳನ್ನು ಕೃತಕವಾಗಿ ತಯಾರಿಸಬಹುದು. ಆದರೆ, ಓಲೆ ಬೆಲ್ಲ ಮಾತ್ರ ಯಾವುದೇ ಕೃತಕ ವಿಧಾನಗಳಿಂದಲೂ ಸೃಷ್ಟಿಸಲಾಗದ ಅಪ್ಪಟ ದೇಸೀ ಉತ್ಪನ್ನ. ಅಚ್ಚುಬೆಲ್ಲ ಮತ್ತು ನೀರು ನೀಡಿ ಅತಿಥಿಗಳನ್ನು ಸ್ವಾಗತಿಸುವುದು ತುಳುನಾಡಿನ ಜನರ ಸಂಪ್ರದಾಯದ ಒಂದು ಭಾಗವಾದರೆ ಓಲೆಬೆಲ್ಲ ಶಾರೀರಿಕ ಆರೋಗ್ಯದ ವಿಚಾರದಲ್ಲಿ ವಿಶೇಷ ಮಹತ್ವ, ಸ್ಥಾನಮಾನ ಪಡೆದುಕೊಂಡಿದೆ. ಹೆರಿಗೆಯ ಬಳಿಕ ನಡೆಸಬೇಕಾದ ಬಾಣಂತನದಲ್ಲಂತೂ ಓಲೆ ಬೆಲ್ಲವೇ ಪ್ರಧಾನ.
ಅದೂ ಆಧುನಿಕತೆಯ ಈ ಕಾಲದಲ್ಲಯೂ ಸಹ ಉಳಿದುಕೊಂಡಿದೆ. ಕ್ಯಾಲ್ಸಿಯಂ ಹೇರಳವಾಗಿರುವ ಓಲೆಬೆಲ್ಲ ದೇಹದ ಹಲವಾರು ಸಮಸ್ಯೆಗಳಿಗೆ ನಾಟಿ ಹಾಗೂ ಆಯುರ್ವೇದ ಔಷಧಿಯ ರೂಪದಲ್ಲಿ ಬಳಸಲ್ಪಡುತ್ತದೆ. ಬಾಯಿ ಸಿಹಿ ಮಾಡಿಕೊಂಡೇ ಆರೋಗ್ಯ ನೀಡುವ ಓಲೆಬೆಲ್ಲ ನಮಗೆ ಅವಶ್ಯಕವೆನಿಸಿದೆ.

ಡೆಂಗೆ ರೋಗಿಗೆ ಬೆಲ್ಲ, ಈರುಳ್ಳಿ ಮದ್ದಿನ ಪ್ರಯೋಗ

ಕರಾವಳಿಯ ಡೆಂಗೆಯ ಅಬ್ಬರ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಕುಡ್ಲದಲ್ಲಿ ಡೆಂಗೆ ಜ್ವರದಿಂದ ಬಳಲುವ ಸಂಖ್ಯೆ 450 ಕ್ಕೆ ಮೀರಿ ನಿಂತಿದೆ. ಐವರು ಈಗಾಗಲೇ ಸಾವನ್ನು ಅಪ್ಪಿದ್ದಾರೆ. ಆದರೂ ಡೆಂಗೆ ಜ್ವರದ ಪ್ರಮಾಣ ತಗ್ಗುತ್ತಿಲ್ಲ.

ಖಾಸಗಿ, ಸರಕಾರಿ ಎರಡರಲ್ಲೂ ರೋಗಿಗಳು ಮಲಗುತ್ತಿದ್ದಾರೆ. ಡೆಂಗೆ ಜ್ವರದ ಬಳಿಕ ರೋಗಿಯ ರಕ್ತದ ಕಿರುಬಿಲ್ಲೆ(ಪ್ಲೇಟ್ಲೆಟ್)ಗಳ ಸಂಖ್ಯೆ ಕುಸಿತ ಕಾಣುತ್ತದೆ. ಇದಕ್ಕೆ ಔಷಧದ ಜತೆಯಲ್ಲಿ ಬೆಲ್ಲ ಹಾಗೂ ಹಸಿ ಈರುಳ್ಳಿಯನ್ನು ತಿನ್ನಬೇಕು. ಇದು ರಕ್ತದ ಕಿರುಬಿಲ್ಲೆಯ ಪ್ರಮಾಣವನ್ನು ಜಾಸ್ತಿ ಮಾಡುತ್ತದೆ. ಜತೆಗೆ ರೋಗ ನಿರೊಧಕ ಶಕ್ತಿ ಕೂಡ ಗಟ್ಟಿಯಾಗುತ್ತದೆ. ಆರ್ಯುವೇದದಲ್ಲೂ ಈ ಕುರಿತು ಉಲ್ಲೇಖವಿದೆ.